Homeಮುಖಪುಟಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?: ನೆಹರೂ ಫೋಟೊ ಕೈಬಿಟ್ಟ ಬೊಮ್ಮಾಯಿಗೆ ಸಿದ್ದರಾಮಯ್ಯ ಪ್ರಶ್ನೆ

ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?: ನೆಹರೂ ಫೋಟೊ ಕೈಬಿಟ್ಟ ಬೊಮ್ಮಾಯಿಗೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಪಂಡಿತ್ ಜವಹರಲಾಲ್‌ ನೆಹರೂ ಅವರ ಫೋಟೊ ಮತ್ತು ಪರಿಚಯ ಕೈಬಿಟ್ಟಿರುವುದಕ್ಕೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ಸನ್ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿಯವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ. ಆರ್ ಎಸ್ ಎಸ್ ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರೂ ಅವರ ಬಗ್ಗೆ ಆರ್ ಎಸ್ ಎಸ್ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ. ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ.ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. ‘ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ಪಂಡಿತ ಜವಾಹರಲಾಲ ನೆಹರೂ ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ಮೊದಲು ರಾಜ್ಯದ ಜನತೆಯ ಕ್ಷಮೆ ಕೇಳಿ ಎಂದು ಆಗ್ರಹಿಸಿದ್ದಾರೆ.

ಸಂಸದರು ಮತ್ತು ಕಾಂಗ್ರೆಸ್ ಕಾರ್ಯದರ್ಶಿಗಳಾದ ಜೈರಾಂ ರಮೇಶ್ ಕೂಡ ಬೊಮ್ಮಾಯಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. “ಇಂತಹ ಸಣ್ಣತನಗಳ ಹೊರತಾಗಿಯೂ ನೆಹರು ನಮ್ಮೆಲ್ಲರ ಮನದಲ್ಲಿ ಉಳಿಯುತ್ತಾರೆ. ತಮ್ಮ ಕುರ್ಚಿ ಉಳಿಸಿಕೊಳ್ಳಲು ಹತಾಶರಾಗಿರುವ ಸಿಎಂ ಬೊಮ್ಮಾಯಿಯವರು ಅವರ ತಂದೆ ಎಸ್.ಆರ್. ಬೊಮ್ಮಾಯಿ ಮತ್ತು ಅವರ ತಂದೆಯ ಮೊದಲನೆ ರಾಜಕೀಯ ಗುರು ಎಂ.ಎನ್. ರಾಯ್‌ರಿಗೆ ಅವಮಾನವೆಸಗಿದ್ದಾರೆ. ಏಕೆಂದರೆ ಆ ಇಬ್ಬರೂ ಮಹಾನ್ ನೆಹರೂ ಅಭಿಮಾನಿಗಳು, ನಂತರ ಸ್ನೇಹಿತರೂ ಆಗಿದ್ದರು. ಕರುಣಾಜನಕ ಸ್ಥಿತಿ ಇದು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಬಾವುಟ ರಾಜಕೀಯ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಾಯಕರ ವಿಷಯದಲ್ಲಿ ಕೂಡಾ ತಾರತಮ್ಯ ಮಾಡುವ ಕುತ್ಸಿತ ಮಟ್ಟಕ್ಕೆ ಹೋಗಬಹುದು ಎಂಬ ಅನುಮಾನ ಇಂದಿನ ಪ್ರಜಾವಾಣಿ ಮುಖಪುಟ ನೋಡಿದಾಗ ನಿಜಾವಾಯ್ತು. ಇದು ಅತ್ಯಂತ ದುಃಖದ ಮತ್ತು ತಲೆ ತಗ್ಗಿಸುವ ಕ್ರಿಯೆ!

  2. 75 ne swatantrana sambramadalli ee BJP galu ee deshada modala pradaniyennu maretu rajakiya madiruvudakke deshada janara dikkara vide, avarige nachike aagabeku

  3. ಈ ರೀತಿಯ ಮನಸ್ಥಿತಿ ನಮ್ಮ ರಾಜಕೀಯ ನಾಯಕರ ವ್ಯಕ್ತಿತ್ವದ ಅಂಧ ಪತನಕ್ಕೆ ಸಾಕ್ಷಿಯಾಗಿದೆ.
    ಖುರ್ಚಿಯ ಆಸೆಗಾಗಿ ಬೊಮ್ಮಯಿಯವರು ತೋರುತ್ತಿರುವ ಭಂಗಿ ಅಚ್ಚರಿಯುತ್ತಿಸುತ್ತದೆ.
    ರಾಜಕೀಯ ಜೀವನದ ನಂತರದ ದಿನಗಳಲ್ಲಿ ಬೊ ಮ್ಮಾಯಿಯವರು ಪಶ್ಚಾತ್ತಾಪ ಪಡುವ ಅನಿವಾರ್ಯತೆ ಸೃಷ್ಟಿಯಾಗಿದೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...