Homeಮುಖಪುಟರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪ್ರಮಾಣವಚನ; ನಂತರ ಅವರು ಹೇಳಿದ್ದೇನು?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪ್ರಮಾಣವಚನ; ನಂತರ ಅವರು ಹೇಳಿದ್ದೇನು?

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ!

- Advertisement -
- Advertisement -

ರಾಜಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಎಸ್.ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಅವರಿಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್‌ ಪ್ರತಿಜ್ಞಾ ವಿಧಿ ಬೋಧಿಸಿದರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಾರಂಭದಲ್ಲಿದ್ದು, ನೂತನ ಮುಖ್ಯಮಂತ್ರಿಗೆ ಶುಭಕೋರಿದರು.

ಪ್ರತಿಜ್ಞಾ ವಿಧಿಗೂ ಮೊದಲು ಬೆಂಗಳೂರಿನ ದೇವಾಲಯವೊಂದಕ್ಕೆ ತೆರಳಿ ಪೂಜೆ ಸಲ್ಲಿಸಿದ ಅವರು, ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೆ ತೆರಳಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿ ಅವರ ಬೆನ್ನು ತಟ್ಟಿ ಶುಭ ಹಾರೈಸಿದರು.

ಇದನ್ನೂ ಓದಿ: ‘ಯಡಿಯೂರಪ್ಪ ಕಿಂಗ್ ಮೇಕರ್‌’ ಎಂದ ರೇಣುಕಾಚಾರ್ಯ!

ಪ್ರಮಾಣ ವಚನ ಸ್ವೀಕರಿಸಿ ಕಡತಗಳಿಗೆ ಸಹಿ ಮಾಡಿದ ನಂತರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌‌ ಹೂಗುಚ್ಛ ನೀಡಿ ಅವರನ್ನು ಅಭಿನಂದಿಸಿದರು. ಇದರ ನಂತರ ಸಭೆಯಲ್ಲಿ ಉಪಸ್ಥಿತರಿದ್ದ ಹಲವಾರು ಗಣ್ಯರು ಅವರನ್ನು ಅಭಿನಂದಿಸಿದರು.

ಸಮಾರಂಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಒಕ್ಕೂಟ ಸರ್ಕಾರದ ಸಚಿವ ಧರ್ಮೇಂದ್ರ ಪ್ರಧಾನ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೋಟ‌ ಶ್ರೀನಿವಾಸ ಪೂಜಾರಿ, ಎಸ್.ಟಿ. ಸೋಮಶೇಖರ್, ಶಿವರಾಂ ಹೆಬ್ಬಾರ್, ಡಾ.ಕೆ. ಸುಧಾಕರ್, ಬೈರತಿ ಬಸವರಾಜ,‌ ಎಸ್. ಸುರೇಶ್ ಕುಮಾರ್, ವಿ. ಸೋಮಣ್ಣ, ಕೆ.ಸಿ. ನಾರಾಯಣ ಗೌಡ, ಎಂ.ಟಿ.ಬಿ. ನಾಗರಾಜ್ ಸೇರಿದಂತೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಹಲವರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಬೊಮ್ಮಾಯಿ ಅವರ ಕುಟುಂಬ ಸದಸ್ಯರು ಕೂಡಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, “ಸವಾಲುಗಳು ನನ್ನ ಮುಂದಿವೆ, ಎಲ್ಲ ಸಹೋದ್ಯೋಗಿಗಳ, ಪಕ್ಷದ ಹಿರಿಯರ ಸಹಕಾರದಿಂದ ಸವಾಲುಗಳನ್ನು ಮೆಟ್ಟಿಲುಗಳಾಗಿ ಮಾಡಿ ಎದುರಿಸುವ ಆತ್ಮ ವಿಶ್ವಾಸವಿದೆ. ದಕ್ಷ , ಪ್ರಾಮಾಣಿಕ, ಜನಪರ ಆಡಳಿತವನ್ನು ಸರ್ಕಾರ ಕೊಡುತ್ತದೆ. ಬಡವರ, ದೀನ ದಲಿತರ, ಹಿಂದುಳಿದ ವರ್ಗದವರ ಕಣ್ಣೀರು ಒರೆಸುವ ಕೆಲಸವನ್ನು ಸರ್ಕಾರ ಮಾಡಲಿದ್ದು, ಪ್ರಾದೇಶಿಕ ಅಸಮತೋಲನವನ್ನು ನೀಗಿಸಲು ಪ್ರಯತ್ನಿಸುತ್ತೇನೆ” ಎಂದು ಹೇಳಿದ್ದಾರೆ.

ನೂತನ ಮುಖ್ಯಮಂತ್ರಿಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ, “ಕರ್ನಾಟಕದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಅವರು ತಮ್ಮ ಶ್ರೀಮಂತ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ತಮ್ಮೊಂದಿಗೆ ತರಲಿದ್ದಾರೆ. ನಮ್ಮ ಸರ್ಕಾರವು ರಾಜ್ಯದಲ್ಲಿ ಮಾಡಿದ ಅಸಾಧಾರಣ ಕಾರ್ಯಗಳನ್ನು ಅವರು ನಿರ್ಮಿಸಲಿದ್ದಾರೆ ಎಂದು ನನಗೆ ವಿಶ್ವಾಸವಿದೆ. ಫಲಪ್ರದ ಅಧಿಕಾರಾವಧಿಗೆ ಶುಭಾಶಯಗಳು” ಎಂದು ಹೇಳಿದ್ದಾರೆ.

ಇದರ ಜೊತೆಗೆ ಯಡಿಯೂರಪ್ಪ ಅವರನ್ನು ಕೂಡಾ ಪ್ರಧಾನಿ ಮೋದಿ ಹಾಡಿ ಹೊಗಳಿದ್ದಾರೆ. ಅವರು ತಮ್ಮ ಟ್ವೀಟ್‌‌ನಲ್ಲಿ, “ನಮ್ಮ ಪಕ್ಷಕ್ಕೆ ಮತ್ತು ಕರ್ನಾಟಕದ ಬೆಳವಣಿಗೆಗೆ ಯಡಿಯೂರಪ್ಪ ಅವರ ಮಹತ್ವದ ಕೊಡುಗೆಯನ್ನು ಬಣ್ಣಿಸಲು ಯಾವುದೇ ಪದಗಳಿಲ್ಲ. ದಶಕಗಳ ಕಾಲ ಅವರು ಕಷ್ಟಪಟ್ಟು ದುಡಿದು, ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಸಂಚರಿಸಿ ಜನರನ್ನು ಸಂಘಟಿಸಿದರು. ಸಾಮಾಜ ಕಲ್ಯಾಣಕ್ಕೆ ನೀಡಿದ ಅವರ ಬದ್ಧತೆಗಾಗಿ ಅವರು ಮೆಚ್ಚುಗೆ ಪಡೆದಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆ‌‌ರ್‌‌. ಅಶೋಕ್, ಶ್ರೀರಾಮುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....