Homeಮುಖಪುಟಬೊಮ್ಮಾಯಿಯವರು ಬಯಸುವ ಯುಪಿ ಮಾದರಿಯ ಆಳ-ಅಗಲ ಬಲ್ಲಿರೇನು!?

ಬೊಮ್ಮಾಯಿಯವರು ಬಯಸುವ ಯುಪಿ ಮಾದರಿಯ ಆಳ-ಅಗಲ ಬಲ್ಲಿರೇನು!?

2020 ರಲ್ಲಿ ಅತಿ ಹೆಚ್ಚು ಅಪಹರಣ ಮತ್ತು ಕೊಲೆ ನಡೆದ ರಾಜ್ಯ ಉತ್ತರ ಪ್ರದೇಶವಾಗಿದೆ.

- Advertisement -
- Advertisement -

ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಕಳೆದ ಒಂದು ವಾರದಲ್ಲಿ ಮೂವರು ಯುವಜನರನ್ನು ಕೊಲೆ ಮಾಡಲಾಗಿದೆ. ಮತಾಂಧರ ರಕ್ತದಾಹಕ್ಕೆ ಮಸೂದ್, ಪ್ರವೀಣ್ ನೆಟ್ಟಾರ್ ಮತ್ತು ಫಾಝಿಲ್ ಎಂಬ ಹರೆಯದ ಯುವಕರು ಪ್ರಾಣ ತೆತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ, ಶಾಂತಿ ಸ್ಥಾಪಿಸಬೇಕಾದ ಜವಾಬ್ದಾರಿ ಸಿಎಂ ಬಸವರಾಜ ಬೊಮ್ಮಾಯಿಯವರದಾಗಿದೆ.

ಪ್ರವೀಣ್ ನೆಟ್ಟಾರು ಕೊಲೆ ಹಿನ್ನೆಲೆಯಲ್ಲಿ ಏನು ಕ್ರಮ ಕೈಗೊಳ್ಳುತ್ತೀರಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು, “ಉತ್ತರ ಪ್ರದೇಶದ ಮಾದರಿ ಅನುಸರಿಸಬೇಕು ಎನ್ನುತ್ತಿದ್ದಾರೆ. ಅಗತ್ಯ ಬಿದ್ದರೆ ಯುಪಿ ಮಾಡೆಲ್, ಯೋಗಿ ಮಾಡೆಲ್ ಅನುಸರಿಸಲಾಗುವುದು” ಎಂದು ಹೇಳಿದ್ದಾರೆ. ಹಾಗಾದರೆ ಯುಪಿ ಮಾಡೆಲ್ ಎಂದರೇನು? ಯಾರು ಯಾರಿಗೆ ಮಾದರಿಯಾಗಬೇಕು ಎಂಬುದನ್ನು ನೋಡೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇನ್ನೋವೇಷನ್ ಇಂಡೆಕ್ಸ್‌

ಕಳೆದ ವಾರ ಬಿಡುಗಡೆಯಾದ ನೀತಿ ಆಯೋಗದ ನಾವೀನ್ಯತೆ ಸೂಚ್ಯಂಕ (ಇನ್ನೋವೇಷನ್ ಇಂಡೆಕ್ಸ್‌) ವರದಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ ಉತ್ತರ ಪ್ರದೇಶ 7ನೇ ಸ್ಥಾನದಲ್ಲಿದೆ. ಮಾನವ ಸಂಪನ್ಮೂಲದ ಬಳಕೆ, ಹೂಡಿಕೆಯ ಆಕರ್ಷಣೆ, ಆರೋಗ್ಯ-ಶಿಕ್ಷಣ-ಕೃಷಿ-ಕಾನೂನು ವಲಯಗಳಲ್ಲಿನ ಸಾಧನೆ ಸೇರಿದಂತೆ ಇತ್ಯಾದಿ ಅಂಶಗಳ ಆಧಾರದಲ್ಲಿ ಇದನ್ನು ಅಳೆಯಲಾಗುತ್ತದೆ. ಈ ಸೂಚ್ಯಂಕದಲ್ಲಿ ಕರ್ನಾಟಕ ರಾಜ್ಯವು ಸತತ ಎರಡನೇ ಭಾರಿಗೆ ಮೊದಲ ಸ್ಥಾನ ಕಾಯ್ದುಕೊಂಡಿದೆ.

ಉತ್ತಮ ಆಡಳಿತ ಸೂಚ್ಯಂಕ

ಗುಡ್ ಗರ್ವನೆನ್ಸ್ ಇಂಡೆಕ್ಸ್ ಎಂದು ಕರೆಯಲಾಗುವು ಉತ್ತಮ ಆಡಳಿತದ ಸೂಚ್ಯಂಕದಲ್ಲಿ ಕೇರಳ ರಾಜ್ಯವು ಮೊದಲ ಸ್ಥಾನ ಪಡೆದರೆ, ಕರ್ನಾಟಕ 06 ನೇ ಸ್ಥಾನದಲ್ಲಿದೆ. ಗಮನಿಸಬೇಕಾದ ಅಂಶವೆಂದರೆ ಉತ್ತರ ಪ್ರದೇಶ ರಾಜ್ಯವು ಕೊನೆಯ ಸ್ಥಾನದಲ್ಲಿದ್ದು, ಕಳಪೆ ಆಡಳಿತಕ್ಕೆ ಕುಖ್ಯಾತಿಯಾಗಿದೆ.

ಉದ್ಯೋಗ ಸೃಷ್ಟಿ:

ಸಿಎಂಐಇ ವರದಿ ಪ್ರಕಾರ ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ರಾಜ್ಯವು 05ನೇ ಸ್ಥಾನದಲ್ಲಿದ್ದರೆ ಉತ್ತರ ಪ್ರದೇಶ 15 ನೇ ಸ್ಥಾನದಲ್ಲಿದೆ.

ಬಡತನ:

ಉತ್ತರ ಪ್ರದೇಶದ ಮೂರು ಜಿಲ್ಲೆಗಳು ಸುಮಾರು 70% ಮತ್ತು ಅದಕ್ಕಿಂತ ಹೆಚ್ಚಿನ ಬಡತನದ ಅನುಪಾತವನ್ನು ಹೊಂದಿವೆ. ಶ್ರಾವಸ್ತಿ (74.38%), ಬಹ್ರೈಚ್ (71.88%), ಮತ್ತು ಬಲರಾಂಪುರ (69.45%). ಆದರೆ ಕರ್ನಾಟಕದಲ್ಲಿ ಬಡತನದ ಪ್ರಮಾಣ ತೀರಾ ಕಡಿಮೆ ಇದೆ.

ವಾಸ ಯೋಗ್ಯ ನಗರಗಳ ಪಟ್ಟಿ:

ದೇಶದಲ್ಲಿಯೇ ಅತ್ಯುನ್ನತ ಮೂಲಸೌಕರ್ಯ ಹೊಂದಿರುವ, ಉತ್ತಮ ಪರಿಸರ ಹೊಂದಿರುವ ವಾಸಯೋಗ್ಯ ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಬೆಂಗಳೂರು, ಮೈಸೂರು ಸ್ಥಾನ ಪಡೆದಿವೆಯೆ ಹೊರತು ಉತ್ತರ ಪ್ರದೇಶದ ಲಕ್ನೋ, ಕಾನ್ಪುರ ಅಲ್ಲ ಎಂಬುದನ್ನು ಗಮನಿಸಬಹುದಾಗಿದೆ.

ಜಿಎಸ್‌ಟಿ ಸಂಗ್ರಹ:

20 ಕೋಟಿಗೂ ಅಧಿಕ ಜನಸಂಖ್ಯೆ ಇರುವ ಯುಪಿ 2022ರ ಏಪ್ರಿಲ್ ತಿಂಗಳಲ್ಲಿ 8,534 ಕೋಟಿ ರೂ ಜಿಎಸ್‌ಟಿ ಪಾವತಿಸಿದೆ. ಆದರೆ ಅದೇ ತಿಂಗಳಿನಲ್ಲಿ ಕೇವಲ 6.5 ಕೋಟಿ ಜನಸಂಖ್ಯೆ ಇರುವ ಕರ್ನಾಟಕ 11,820 ಕೋಟಿ ರೂ ಜಿಎಸ್‌ಟಿ ಪಾವತಿಸಿದೆ. 

ಅಪರಾಧಗಳ ಸೂಚ್ಯಂಕ

NCRB ಪ್ರಕಟಿಸುವ ವರದಿ ಪ್ರಕಾರ ಕ್ರೈಮ್ ರೇಟ್‌ ನಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಕರ್ನಾಟಕ 20ರ ನಂತರದ ಸ್ಥಾನದಲ್ಲಿದೆ. 2020 ರಲ್ಲಿ ಅತಿ ಹೆಚ್ಚು ಅಪಹರಣ ಮತ್ತು ಕೊಲೆ ನಡೆದ ರಾಜ್ಯ ಉತ್ತರ ಪ್ರದೇಶವಾಗಿದೆ.

ಸಾಕ್ಷರತೆ:

ಸಾಕ್ಷರತೆಯಲ್ಲಿ ಕರ್ನಾಟಕ 17ನೇ ಸ್ಥಾನ ಪಡೆದರೆ ಉತ್ತರ ಪ್ರದೇಶ 19ನೇ ಸ್ಥಾನ ಪಡೆದಿದೆ. ಎಂದಿನಂತೆ ಕೇರಳ ಮೊದಲ ಸ್ಥಾನದಲ್ಲಿದೆ.

ಹ್ಯುಮನ್ ಇಂಡೆಕ್ಸ್:

ಜನರ ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟವನ್ನು ಆಧರಿಸಿ ಹ್ಯುಮನ್ ಇಂಡೆಕ್ಸ್ ಅನ್ನು ಅಳೆಯಲಾಗುತ್ತದೆ. ಅದರಲ್ಲಿ ಕೇರಳ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ 19ನೇ ಸ್ಥಾನದಲ್ಲಿದೆ ಮತ್ತು ಉತ್ತರ ಪ್ರದೇಶ 35 ಅಂದರೆ ಕೊನೆಯ ಸ್ಥಾನದಲ್ಲಿದೆ. ಅಲ್ಲದೆ

ಮಹಿಳಾ ಸುರಕ್ಷತೆಯ ವಿಚಾರದಲ್ಲಿ – ಕೆಟ್ಟ ರಾಜ್ಯ ಉತ್ತರ ಪ್ರದೇಶ

ಅತಿ ಹೆಚ್ಚು ಅತ್ಯಾಚಾರಗಳು ನಡೆಯುವ ರಾಜ್ಯ ಉತ್ತರ ಪ್ರದೇಶ

ಆರೋಗ್ಯ ಸೂಚ್ಯಂಕದಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ವಾಯು ಮಾಲಿನ್ಯದಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ಶಿಕ್ಷಣ ಗುಣಮಟ್ಟ ಸೂಚ್ಯಂಕದಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ಕೋವಿಡ್ ಸಮಯದಲ್ಲಿ ಗಂಗೆಯಲ್ಲಿ ಹೆಣಗಳು ತೇಲಿಬಂದ ರಾಜ್ಯ ಉತ್ತರ ಪ್ರದೇಶ

ಕರ್ನಾಟಕಕ್ಕೆ ಹೆಚ್ಚು ಉದ್ಯೋಗ ಅರಸಿ ಬರುವವರು, ಸೆಕ್ಯುರಿಟಿ ಕೆಲಸ ಮತ್ತು ಗೋಲ್‌ಗಪ್ಪ, ಪಾನೀಪುರಿ ಮಾರುವ ಹೆಚ್ಚಿನವರು ಉತ್ತರ ಪ್ರದೇಶದವರು

ಇಂತಹ ಕೆಳಮಟ್ಟದಲ್ಲಿರುವ ಉತ್ತರ ಪ್ರದೇಶ ರಾಜ್ಯವು ಕರ್ನಾಟಕಕ್ಕೆ ಮಾದರಿಯಾಗಬಲ್ಲದೆ? ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವ ಗೂಂಡಾ ರಾಜ್ಯ ಎಂದು ಕರೆಸಿಕೊಳ್ಳುವ ಉತ್ತರ ಪ್ರದೇಶವನ್ನು ಯಾವ ಆಧಾರದಲ್ಲಿ ಮಾದರಿಯಾಗಿ ತೆಗೆದುಕೊಳ್ಳಬಹುದು ಎಂಬುದನ್ನು ಸಿಎಂ ಬೊಮ್ಮಾಯಿಯವರು ವಿವರಿಸಬೇಕಿದೆ.

ಸರ್ಕಾರ ನೀತಿ ನಿರ್ಧಾರಗಳನ್ನು ಪ್ರಶ್ನಿಸುವವರ, ಹೋರಾಟಗಾರರ ಮನೆ ಮೇಲೆ ಅಸಾಂವಿಧಾನಿಕವಾಗಿ ಬುಲ್ಡೋಜರ್ ಹರಿಸುವುದಕ್ಕೆ ಉತ್ತರ ಪ್ರದೇಶ ಕುಖ್ಯಾತಿಯಾಗಿದೆ. ಇದು ದೇಶದ ಸಂವಿಧಾನ, ಕಾನೂನು ಮತ್ತು ನ್ಯಾಯವ್ಯವಸ್ಥೆ ಮೇಲೆ ನಂಬಿಕೆ ಇಲ್ಲದವರು ಮಾಡುವ ಕೆಲಸ. ಅದಕ್ಕಾಗಿಯೇ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರನ್ನು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳು ತರಾಟೆಗೆ ತೆಗೆದುಕೊಂಡಿವೆ. ಅವರು ನಮಗೆ ಖಂಡಿತ ಮಾದರಿಯಾಗುವುದಿಲ್ಲ.

ಈ ಮೊದಲೇ ಹೇಳಿದಂತೆ ಹ್ಯುಮನ್ ಇಂಡೆಕ್ಸ್, ಶಿಕ್ಷಣ, ಉದ್ಯೋಗ ಸೃಷ್ಟಿ ಇತ್ಯಾದಿ ವಿಚಾರಗಳನ್ನು ಪರಿಗಣಿಸಿದರೆ ನಮಗೆ ನೆರೆಯ ಕೇರಳ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳು ಮಾದರಿಯಾಗುತ್ತವೆಯೇ ಹೊರತು ಉತ್ತರ ಪ್ರದೇಶವಲ್ಲ.

ಇನ್ನು ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿರುವುದಕ್ಕೆ ನೇರ ಕಾರಣ ಇದೇ ಬಸವರಾಜ ಬೊಮ್ಮಾಯಿಯವರೆ ಆಗಿದ್ದಾರೆ. ಅಧಿಕಾರಕ್ಕೆ ಬಂದ ತಕ್ಷಣ ರಾಜ್ಯದಲ್ಲಿ ನಡೆಯುತ್ತಿದ್ದ ಮತೀಯ ಗೂಂಡಾಗಿರಿ ಪ್ರಕರಣಗಳನ್ನು ತಡೆಯುವ ಬದಲು ಕ್ರಿಯೆಗೆ ಪ್ರತಿಕ್ರಿಯೆ ಇದ್ದೆ ಇರುತ್ತದೆ ಎಂದು ಹೇಳುವ ಮೂಲಕ ಅವುಗಳನ್ನು ಸಮರ್ಥಿಸಿಕೊಂಡರು. ತಮ್ಮ ಪ್ರತಿ ನಡೆಯಲ್ಲಿಯೂ ಕೋಮವಾದವನ್ನು ಉದ್ದೀಪನಗೊಳಿಸಿದರು. ಅದರ ಫಲವಾಗಿ ಇಂದು ಕ್ರಿಯೆಗೆ ಪ್ರತಿಕ್ರಿಯೆ, ಪ್ರತಿಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಸಾಲು ಸಾಲು ಹೆಣಗಳು ಬೀಳುತ್ತಿವೆ. ಕರ್ನಾಟಕದ ಗೌರವ ರಾಷ್ಟ್ರಮಟ್ಟದಲ್ಲಿ ಮಣ್ಣು ಪಾಲಾಗುತ್ತಿದೆ. ಸಿಎಂ ಬೊಮ್ಮಾಯಿಯವರೆ ದ್ವೇಷದಿಂದ, ಮತಾಂಧತೆಯಿಂದ ರಾಜ್ಯವನ್ನು, ದೇಶವನ್ನು ಮುನ್ನಡೆಸಲಾಗದು ಎಂದು ಈಗಲಾದರೂ ಅರಿಯಿರಿ. ಶಾಂತಿ, ಪ್ರೀತಿ, ಸರ್ವಧರ್ಮ ಸಮಾನತೆ, ಸೌಹಾರ್ದತೆ ಮಾತ್ರವೇ ನಮ್ಮನ್ನು ಉಳಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನರರಾಕ್ಷ SDPI,PFI ಬಗ್ಗೆ ವರದಿಮಾಡಲು ಆಗದ ನಾಮಾರ್ಧ ಶಂಡರ ಪತ್ರಿಕೆ ಎಂದರೆ ಇದೇ ಅನಿಸುತ್ತೇ

  2. Up ಮಾಡೆಲ್ ಮಾಡಿ ರಾಜ್ಯದ ಮರ್ಯಾದೆ ವಿದೇಶಗಳಲ್ಲೂ ಹರಾಜು ಮಾಡಬೇಕು ಅನ್ನೋದು ಇವರ ತುಷ್ಟ ಮನಸ್ಥಿತಿ, ದೇಶಕ್ಕೆ ಒಂದು ಒಳ್ಳೆ ಕಾರ್ಯ ಮಾಡದಿದ್ರೂ ಕೂಡ ಇಂತಹ ರಾಜಕಾರಣಿಗಳಿಗೆ ಅಭಿಮಾನಿಗಳು ಇದಾರೆ ಅಂದ್ರೆ ಅವು ಎಂಥ ಹೇಸಿಗೆ ಮನಸ್ಥಿತಿ ಹೊಂದಿರಬೇಕು ಥೂ.. ಇವರನ್ನು ಅಭಿನಂದಿಸೋ ನರಹೇಡಿಗಳಿಗೆ 😡😡😡

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...