Homeಚಳವಳಿಹಸಿರು ಹಾದಿಯ ಕಥನ: ರೈತ ಹೋರಾಟಗಾರ ಹೆಚ್.ಆರ್ ಬಸವರಾಜಪ್ಪನವರ ಕುರಿತ ಪುಸ್ತಕ ಬಿಡುಗಡೆ

ಹಸಿರು ಹಾದಿಯ ಕಥನ: ರೈತ ಹೋರಾಟಗಾರ ಹೆಚ್.ಆರ್ ಬಸವರಾಜಪ್ಪನವರ ಕುರಿತ ಪುಸ್ತಕ ಬಿಡುಗಡೆ

- Advertisement -
- Advertisement -

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರಾದ ಹೆಚ್.ಆರ್ ಬಸವರಾಜಪ್ಪನವರ ಐದು ದಶಕಗಳ ರೈತ ಹೋರಾಟದ ಕುರಿತ ‘ಹಸಿರು ಹಾದಿಯ ಕಥನ’ ಪುಸ್ತಕ ಮತ್ತು ಸಾಕ್ಷ್ಯ ಚಿತ್ರ ಬಿಡುಗಡೆ ಕಾರ್ಯಕ್ರಮ ಮೇ 25ರ ಬುಧವಾರ ಶಿವಮೊಗ್ಗದಲ್ಲಿ ನಡೆಯಲಿದೆ.

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್‌ರವರು ಚಾಲನೆ ನೀಡಲಿದ್ದಾರೆ. ರೈತ ಹೋರಾಟಗಾರರಾದ ಕೋಡಿಹಳ್ಳಿ ಚಂದ್ರಶೇಖರ್‌ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ತರಬಾಳು ಜಗದ್ಗುರುಗಳಾದ ಶ್ರೀ 1108 ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಕೃತಿ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಾದ ಜಸ್ಟೀಸ್ ನಾಗಮೋಹನ್ ದಾಸ್‌ರವರು ಕೃತಿ ಪರಿಚಯ ಮಾಡಲಿದ್ದು, ಇದೇ ಕಾರ್ಯಕ್ರಮದಲ್ಲಿ ರೈತ ಹೋರಾಟದಲ್ಲಿ ತಮ್ಮ ಬದುಕನ್ನು ಸವೆಸಿದ ಕಡಿದಾಳು ಶಾಮಣ್ಣ ಮತ್ತು ಡಾ.ಬಿ.ಎಂ ಚಿಕ್ಕಸ್ವಾಮಿರವರಿಗೆ ವಿಶೇ‍ಷ ಸನ್ಮಾನ ಹಮ್ಮಿಕೊಳ್ಳಲಾಗಿದೆ.

ಹಿರಿಯ ರೈತ ಹೋರಾಟಗಾರ್ತಿ ಅನಸೂಯಮ್ಮ, ಪ್ರಜಾನುಡಿ ಪತ್ರಿಕೆಯ ಸಂಪಾದಕರಾದ ವೀರಭದ್ರಪ್ಪ ಬಿಸ್ಲಳ್ಳಿ, ದಲಿತ ಸಂಘರ್ಷ ಸಮಿತಿಯ ಟಿ.ಎಚ್ ಹಾಲೇಶಪ್ಪ, ಕರ್ನಾಟಕ ಜನಶಕ್ತಿಯ ಕೆ.ಎಲ್ ಅಶೋಕ್ ಮತ್ತು ಪತ್ರಕರ್ತರಾದ ಗಿರೀಶ್ ತಾಳಿಕಟ್ಟೆಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

80ರ ದಶಕದಲ್ಲಿ ಆರಂಭವಾದ ರೈತ ಚಳವಳಿಯಲ್ಲಿ ಮುಂಚೂಣಿ ನಾಯಕತ್ವ ವಹಿಸಿರುವ ಬಸವರಾಜಪ್ಪನವರು ಇಂದಿಗೂ ಅಷ್ಟೇ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ರೈತರ ಮನೆ ಜಪ್ತಿಗೆ ಪ್ರತಿಯಾಗಿ ಬಸವರಾಜಪ್ಪನವರ ನೇತೃತ್ವದಲ್ಲಿ ಭದ್ರಾವತಿಯ ತಹಶೀಲ್ದಾರ್ ಮನೆ ಜಪ್ತಿ ಮಾಡುವ ಹೋರಾಟ ನಡೆದಿತ್ತು. ಅಲ್ಲಿಂದ ಆರಂಭವಾಗಿ ದೆಹಲಿಯಲ್ಲಿ ವಿಶ್ವ ವಾಣಿಜ್ಯ ಸಂಸ್ಥೆ ನಿರ್ದೇಶಕರ ವಿರುದ್ಧ ದಿಢೀರ್ ಪ್ರತಿಭಟನೆ ನಡೆಸಿದ್ದರು. ನಾಗಸಮುದ್ರ ಗೋಲಿಬಾರ್ ವಿರುದ್ಧ ಹಲವು ವರ್ಷಗಳ ಕಾಲ ರೈತ ಹೋರಾಟ ಮುನ್ನಡೆಸಿದ್ದ ಎಚ್.ಆರ್. ಬಸವರಾಜಪ್ಪನವರ ಐದು ದಶಕದ ಸುದೀರ್ಘ ಹೋರಾಟದ ಕಥನವನ್ನು ಪತ್ರಕರ್ತರಾದ ಗಿರೀಶ್ ತಾಳಿಕಟ್ಟೆ ಮತ್ತು ಹೋರಾಟಗಾರರಾದ ಕೆ.ಎಲ್ ಅಶೋಕ್ ದಾಖಲು ಮಾಡಿದ್ದಾರೆ. ಈ ಕೃತಿಯನ್ನು ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...