Homeಚಳವಳಿಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

ಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಯುದ್ಧ ಎಂಬುದು ವ್ಯಾಪಾರೀಕರಣವಾಗಿದ್ದು, ಬೃಹತ್ ರಾಷ್ಟ್ರಗಳಿಗೆ ಒಂದು ಉದ್ಯಮವಾಗಿದೆ. ಹಾಗಾಗಿ ಸೈನಿಕನ ಬಲಿದಾನಕ್ಕೆ ಬೆಲೆಯೇ ಇಲ್ಲದಂತಾಗಿ, ಬಲಿದಾನ ಮತ್ತು ಮತದಾನ ಒಂದೇ ರೀತಿಯಂತಾಗುವ ಸಂಕಟದ ಕಾಲದಲ್ಲಿ ಹಾದು ಹೋಗುತ್ತಿದ್ದೇವೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಪ್ರೆಸ್‍ಕ್ಲಬ್‍ನಲ್ಲಿ ಚಿಂತನ ಚಿಲುಮೆ ವತಿಯಿಮದ ಆಯೋಜಿಸಿದ್ದ ಲೇಖಕ ಯಡೂರ ಮಹಾಬಲರವರ ಪುಸ್ತಕಗಳ ಬಿಡುಗಡೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜಪ್ರಭುತ್ವದಲ್ಲಾಗುತ್ತಿದ್ದ ಯುದ್ಧಗಳಲ್ಲಿ ರಾಜರು ಭಾಗವಹಿಸುವವರು. ಆದರೆ ಇಂದಿನ ಯುದ್ಧಗಳಲ್ಲಿ ಯಾವ ಆಡಳಿತಗಾರನೂ ಯುದ್ಧ ಭೂಮಿಗೆ ಹೋಗದೆ ಕೂತಲ್ಲೇ ತಮಗೆ ಅನುಕೂಲವಾಗುವ ರೀತಿಯಲ್ಲಿ ಸೂತ್ರವಾಡಿಸುತ್ತಾರೆ ಎಂದಿದ್ದಾರೆ.

ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವ ಕಾಲದಲ್ಲೂ ಯುದ್ಧಗಳು ನಡೆಯುತ್ತಿವೆ. ಆದರೆ ಯುದ್ಧಗಳನ್ನು ನಡೆಸುತ್ತಲೇ ಶಾಂತಿಮಂತ್ರವನ್ನು ಪಠನೆ ಮಾಡುವಂತಹ ವೈರುಧ್ಯದ ಮತ್ತು ವಿಪರ್ಯಾಸದ ನಡುವೆ ನಮ್ಮ ರಾಜಕಾರಣ ಹಾದು ಹೋಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚೆಗೆ ಬೃಹತ್ ರಾಷ್ಟ್ರಗಳು ಶಾಂತಿಯ ಮಾತನ್ನು ಆಡುತ್ತಲೇ ಯುದ್ಧವನ್ನು ಪ್ರಚೋದಿಸುವ ಬೃಹತ್ ರಾಷ್ಟ್ರಗಳು ನಮ್ಮೊಂದಿಗಿವೆ. ಜೊತೆಗೆ ನಾವು ಯುದ್ಧವನ್ನು ದೇಶ ಪ್ರೇಮ ಎಂದು ಹೇಳುತ್ತಿದ್ದೇವೆ. ಆದರೆ ಯುದ್ಧಗಳಿಗಿರುವ ವಿವಿಧ ಆಯಾಮಗಳ ನೆಲೆಯನ್ನು ಗ್ರಹಿಸಿ ಯುದ್ಧಗಳನ್ನು ವಿಶ್ಲೇಷಣೆ ಮಾಡಬೇಕು ಎಂದರು.

ಕನ್ನಡದಲ್ಲಿ ಯುದ್ಧಕ್ಕೆ ಸಂಬಂಧಿಸಿದ ಕೃತಿಗಳು ತೀರಾ ಕಡಿಮೆ. ಇರುವ ಕೆಲವೊಂದು ಕೃತಿಗಳು ಸಹ ಅತಿರಂಜನೀಯವಾಗಿ ಯುದ್ಧವನ್ನು ವಿಜೃಂಭಿಸುತ್ತಲೇ ಅಂದಿನ ಸರ್ವಾಧಿಕಾರ ಮನೋಧರ್ಮವನ್ನು ಎತ್ತಿಹಿಡಿದಿವೆ. ಆದರೆ ಲೇಖಕ ಯಡೂರ ಮಹಾಬಲ ಅವರು ವಾಸ್ತವಿಕ ನೆಲೆಗಟ್ಟಿನಲ್ಲಿ, ಅಪಾರ ಓದು ಮತ್ತು ಸಂಶೋಧನೆಯೊಂದಿಗೆ ಕನ್ನಡದಲ್ಲಿ ಯುದ್ಧದ ಬಗ್ಗೆ ಕೃತಿ ರಚಿಸಿರುವುದು ಅಭಿನಂದನಾರ್ಹ ಎಂದರು.

ಒಬ್ಬ ಸಂಶೋಧಕನಿಗೆ ಅಧ್ಯಯನಶೀಲತೆ, ಪದಬಳಕೆ, ಭಾಷಾ ಪ್ರಬುದ್ಧತೆ ಅಗತ್ಯ. ಆದರೆ ಇತ್ತೀಚೆಗೆ ಸಂಶೋಧನೆ ಎಂಬುದು ಕೇವಲ ಪಿಎಚ್‍ಡಿಗೆ ಮಾತ್ರ ಸೀಮಿತವಾಗಿರುವುದು ವಿಪರ್ಯಾಸ. ಲೇಖಕನು ಸೂಕ್ಷ್ಮ ಸಂವೇದನೆಶೀಲತೆಯೊಂದಿಗೆ ಕೃತಿಗಳನ್ನು ರಚಿಸಿಬೇಕು. ಜೊತೆಗೆ ಭೂತ, ವರ್ತಮಾನ ಕಾಲದ ನಡುವಿನ ಅನುಸಂಧಾನ ಚರಿತ್ರೆಯನ್ನು ಮರುಚಿಂತನೆಗೆ ಒಳಪಡಿಸಿ ಕೃತಿ ರಚಿಸಿದರೆ ಅದಕ್ಕೆ ಒಂದು ಅರ್ಥಪೂರ್ಣ ಗೌರವ ಸಲ್ಲುತ್ತದೆ ಎಂದರು.

ರೈತ ಮುಖಂಡ ಜೆ.ಎಂ.ವೀರಸಂಗಯ್ಯ ಮಾತನಾಡಿ, ರಾಜರು ನಡೆಸಿದ ಯುದ್ಧಗಳು ಸಾಮ್ರಾಜ್ಯ ವಿಸ್ತರಣೆಗೆ ಮಾಡಿದರೆ, ಪ್ರಜಾಪ್ರಭುತ್ವದಲ್ಲಿ ಗಡಿ ವಿವಾದ, ವ್ಯಾಪಾರಕ್ಕಾಗಿ ನಡೆಯುತ್ತಿವೆ. ಈ ಬಗ್ಗೆ ಭಾರತ ಮತ್ತು ಚೀನಾ ನಡುವಿನ ಯುದ್ಧವನ್ನು ಯಡೂರ ಮಹಾಬಲ ಅವರು ಸವಿಸ್ತಾರವಾಗಿ ಉಲ್ಲೇಖಿಸಿದ್ದಾರೆ. ಯುದ್ಧ ಬೇಡ ಎಂಬುವವರನ್ನು ದೇಶದ್ರೋಹಿಗಳು ಎಂಬ ಪಟ್ಟಿಗೆ ಸೇರಿಸುವ ಕಾಲದಲ್ಲಿ ಇಂತಹ ಪುಸ್ತಕಗಳ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಯಡೂರು ಮಹಾಬಲ ಬರೆದಿರುವ ಯುದ್ಧ ಪೂರ್ವ ಕಾಂಡ (1962ರ ಭಾರತ- ಚೀನಾ ಯುದ್ಧದ ಹಿಂದಿನ ಬೆಳವಣಿಗೆಗಳು), ಯುದ್ಧ ಕಾಂಡ (1962ರ ಭಾರತ- ಚೀನಾ ಯುದ್ಧದ ವಿವರಗಳು) ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಲೇಖಕರಾದ ಯಡೂರು ಮಹಾಬಲ, ಹೊಸತು ಮಾಸ ಪತ್ರಿಕೆ ಸಂಪಾದಕರಾದ ಸಿದ್ಧನಗೌಡ ಪಾಟೀಲ, ಬರಹಗಾರ ಬಿ.ಆರ್.ಮಂಜುನಾಥ್ ಮತ್ತಿತರರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...