Homeಚಳವಳಿಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

ಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಯುದ್ಧ ಎಂಬುದು ವ್ಯಾಪಾರೀಕರಣವಾಗಿದ್ದು, ಬೃಹತ್ ರಾಷ್ಟ್ರಗಳಿಗೆ ಒಂದು ಉದ್ಯಮವಾಗಿದೆ. ಹಾಗಾಗಿ ಸೈನಿಕನ ಬಲಿದಾನಕ್ಕೆ ಬೆಲೆಯೇ ಇಲ್ಲದಂತಾಗಿ, ಬಲಿದಾನ ಮತ್ತು ಮತದಾನ ಒಂದೇ ರೀತಿಯಂತಾಗುವ ಸಂಕಟದ ಕಾಲದಲ್ಲಿ ಹಾದು ಹೋಗುತ್ತಿದ್ದೇವೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಪ್ರೆಸ್‍ಕ್ಲಬ್‍ನಲ್ಲಿ ಚಿಂತನ ಚಿಲುಮೆ ವತಿಯಿಮದ ಆಯೋಜಿಸಿದ್ದ ಲೇಖಕ ಯಡೂರ ಮಹಾಬಲರವರ ಪುಸ್ತಕಗಳ ಬಿಡುಗಡೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜಪ್ರಭುತ್ವದಲ್ಲಾಗುತ್ತಿದ್ದ ಯುದ್ಧಗಳಲ್ಲಿ ರಾಜರು ಭಾಗವಹಿಸುವವರು. ಆದರೆ ಇಂದಿನ ಯುದ್ಧಗಳಲ್ಲಿ ಯಾವ ಆಡಳಿತಗಾರನೂ ಯುದ್ಧ ಭೂಮಿಗೆ ಹೋಗದೆ ಕೂತಲ್ಲೇ ತಮಗೆ ಅನುಕೂಲವಾಗುವ ರೀತಿಯಲ್ಲಿ ಸೂತ್ರವಾಡಿಸುತ್ತಾರೆ ಎಂದಿದ್ದಾರೆ.

ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವ ಕಾಲದಲ್ಲೂ ಯುದ್ಧಗಳು ನಡೆಯುತ್ತಿವೆ. ಆದರೆ ಯುದ್ಧಗಳನ್ನು ನಡೆಸುತ್ತಲೇ ಶಾಂತಿಮಂತ್ರವನ್ನು ಪಠನೆ ಮಾಡುವಂತಹ ವೈರುಧ್ಯದ ಮತ್ತು ವಿಪರ್ಯಾಸದ ನಡುವೆ ನಮ್ಮ ರಾಜಕಾರಣ ಹಾದು ಹೋಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚೆಗೆ ಬೃಹತ್ ರಾಷ್ಟ್ರಗಳು ಶಾಂತಿಯ ಮಾತನ್ನು ಆಡುತ್ತಲೇ ಯುದ್ಧವನ್ನು ಪ್ರಚೋದಿಸುವ ಬೃಹತ್ ರಾಷ್ಟ್ರಗಳು ನಮ್ಮೊಂದಿಗಿವೆ. ಜೊತೆಗೆ ನಾವು ಯುದ್ಧವನ್ನು ದೇಶ ಪ್ರೇಮ ಎಂದು ಹೇಳುತ್ತಿದ್ದೇವೆ. ಆದರೆ ಯುದ್ಧಗಳಿಗಿರುವ ವಿವಿಧ ಆಯಾಮಗಳ ನೆಲೆಯನ್ನು ಗ್ರಹಿಸಿ ಯುದ್ಧಗಳನ್ನು ವಿಶ್ಲೇಷಣೆ ಮಾಡಬೇಕು ಎಂದರು.

ಕನ್ನಡದಲ್ಲಿ ಯುದ್ಧಕ್ಕೆ ಸಂಬಂಧಿಸಿದ ಕೃತಿಗಳು ತೀರಾ ಕಡಿಮೆ. ಇರುವ ಕೆಲವೊಂದು ಕೃತಿಗಳು ಸಹ ಅತಿರಂಜನೀಯವಾಗಿ ಯುದ್ಧವನ್ನು ವಿಜೃಂಭಿಸುತ್ತಲೇ ಅಂದಿನ ಸರ್ವಾಧಿಕಾರ ಮನೋಧರ್ಮವನ್ನು ಎತ್ತಿಹಿಡಿದಿವೆ. ಆದರೆ ಲೇಖಕ ಯಡೂರ ಮಹಾಬಲ ಅವರು ವಾಸ್ತವಿಕ ನೆಲೆಗಟ್ಟಿನಲ್ಲಿ, ಅಪಾರ ಓದು ಮತ್ತು ಸಂಶೋಧನೆಯೊಂದಿಗೆ ಕನ್ನಡದಲ್ಲಿ ಯುದ್ಧದ ಬಗ್ಗೆ ಕೃತಿ ರಚಿಸಿರುವುದು ಅಭಿನಂದನಾರ್ಹ ಎಂದರು.

ಒಬ್ಬ ಸಂಶೋಧಕನಿಗೆ ಅಧ್ಯಯನಶೀಲತೆ, ಪದಬಳಕೆ, ಭಾಷಾ ಪ್ರಬುದ್ಧತೆ ಅಗತ್ಯ. ಆದರೆ ಇತ್ತೀಚೆಗೆ ಸಂಶೋಧನೆ ಎಂಬುದು ಕೇವಲ ಪಿಎಚ್‍ಡಿಗೆ ಮಾತ್ರ ಸೀಮಿತವಾಗಿರುವುದು ವಿಪರ್ಯಾಸ. ಲೇಖಕನು ಸೂಕ್ಷ್ಮ ಸಂವೇದನೆಶೀಲತೆಯೊಂದಿಗೆ ಕೃತಿಗಳನ್ನು ರಚಿಸಿಬೇಕು. ಜೊತೆಗೆ ಭೂತ, ವರ್ತಮಾನ ಕಾಲದ ನಡುವಿನ ಅನುಸಂಧಾನ ಚರಿತ್ರೆಯನ್ನು ಮರುಚಿಂತನೆಗೆ ಒಳಪಡಿಸಿ ಕೃತಿ ರಚಿಸಿದರೆ ಅದಕ್ಕೆ ಒಂದು ಅರ್ಥಪೂರ್ಣ ಗೌರವ ಸಲ್ಲುತ್ತದೆ ಎಂದರು.

ರೈತ ಮುಖಂಡ ಜೆ.ಎಂ.ವೀರಸಂಗಯ್ಯ ಮಾತನಾಡಿ, ರಾಜರು ನಡೆಸಿದ ಯುದ್ಧಗಳು ಸಾಮ್ರಾಜ್ಯ ವಿಸ್ತರಣೆಗೆ ಮಾಡಿದರೆ, ಪ್ರಜಾಪ್ರಭುತ್ವದಲ್ಲಿ ಗಡಿ ವಿವಾದ, ವ್ಯಾಪಾರಕ್ಕಾಗಿ ನಡೆಯುತ್ತಿವೆ. ಈ ಬಗ್ಗೆ ಭಾರತ ಮತ್ತು ಚೀನಾ ನಡುವಿನ ಯುದ್ಧವನ್ನು ಯಡೂರ ಮಹಾಬಲ ಅವರು ಸವಿಸ್ತಾರವಾಗಿ ಉಲ್ಲೇಖಿಸಿದ್ದಾರೆ. ಯುದ್ಧ ಬೇಡ ಎಂಬುವವರನ್ನು ದೇಶದ್ರೋಹಿಗಳು ಎಂಬ ಪಟ್ಟಿಗೆ ಸೇರಿಸುವ ಕಾಲದಲ್ಲಿ ಇಂತಹ ಪುಸ್ತಕಗಳ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಯಡೂರು ಮಹಾಬಲ ಬರೆದಿರುವ ಯುದ್ಧ ಪೂರ್ವ ಕಾಂಡ (1962ರ ಭಾರತ- ಚೀನಾ ಯುದ್ಧದ ಹಿಂದಿನ ಬೆಳವಣಿಗೆಗಳು), ಯುದ್ಧ ಕಾಂಡ (1962ರ ಭಾರತ- ಚೀನಾ ಯುದ್ಧದ ವಿವರಗಳು) ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಲೇಖಕರಾದ ಯಡೂರು ಮಹಾಬಲ, ಹೊಸತು ಮಾಸ ಪತ್ರಿಕೆ ಸಂಪಾದಕರಾದ ಸಿದ್ಧನಗೌಡ ಪಾಟೀಲ, ಬರಹಗಾರ ಬಿ.ಆರ್.ಮಂಜುನಾಥ್ ಮತ್ತಿತರರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...