Homeಚಳವಳಿಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

ಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಯುದ್ಧ ಎಂಬುದು ವ್ಯಾಪಾರೀಕರಣವಾಗಿದ್ದು, ಬೃಹತ್ ರಾಷ್ಟ್ರಗಳಿಗೆ ಒಂದು ಉದ್ಯಮವಾಗಿದೆ. ಹಾಗಾಗಿ ಸೈನಿಕನ ಬಲಿದಾನಕ್ಕೆ ಬೆಲೆಯೇ ಇಲ್ಲದಂತಾಗಿ, ಬಲಿದಾನ ಮತ್ತು ಮತದಾನ ಒಂದೇ ರೀತಿಯಂತಾಗುವ ಸಂಕಟದ ಕಾಲದಲ್ಲಿ ಹಾದು ಹೋಗುತ್ತಿದ್ದೇವೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಪ್ರೆಸ್‍ಕ್ಲಬ್‍ನಲ್ಲಿ ಚಿಂತನ ಚಿಲುಮೆ ವತಿಯಿಮದ ಆಯೋಜಿಸಿದ್ದ ಲೇಖಕ ಯಡೂರ ಮಹಾಬಲರವರ ಪುಸ್ತಕಗಳ ಬಿಡುಗಡೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜಪ್ರಭುತ್ವದಲ್ಲಾಗುತ್ತಿದ್ದ ಯುದ್ಧಗಳಲ್ಲಿ ರಾಜರು ಭಾಗವಹಿಸುವವರು. ಆದರೆ ಇಂದಿನ ಯುದ್ಧಗಳಲ್ಲಿ ಯಾವ ಆಡಳಿತಗಾರನೂ ಯುದ್ಧ ಭೂಮಿಗೆ ಹೋಗದೆ ಕೂತಲ್ಲೇ ತಮಗೆ ಅನುಕೂಲವಾಗುವ ರೀತಿಯಲ್ಲಿ ಸೂತ್ರವಾಡಿಸುತ್ತಾರೆ ಎಂದಿದ್ದಾರೆ.

ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವ ಕಾಲದಲ್ಲೂ ಯುದ್ಧಗಳು ನಡೆಯುತ್ತಿವೆ. ಆದರೆ ಯುದ್ಧಗಳನ್ನು ನಡೆಸುತ್ತಲೇ ಶಾಂತಿಮಂತ್ರವನ್ನು ಪಠನೆ ಮಾಡುವಂತಹ ವೈರುಧ್ಯದ ಮತ್ತು ವಿಪರ್ಯಾಸದ ನಡುವೆ ನಮ್ಮ ರಾಜಕಾರಣ ಹಾದು ಹೋಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚೆಗೆ ಬೃಹತ್ ರಾಷ್ಟ್ರಗಳು ಶಾಂತಿಯ ಮಾತನ್ನು ಆಡುತ್ತಲೇ ಯುದ್ಧವನ್ನು ಪ್ರಚೋದಿಸುವ ಬೃಹತ್ ರಾಷ್ಟ್ರಗಳು ನಮ್ಮೊಂದಿಗಿವೆ. ಜೊತೆಗೆ ನಾವು ಯುದ್ಧವನ್ನು ದೇಶ ಪ್ರೇಮ ಎಂದು ಹೇಳುತ್ತಿದ್ದೇವೆ. ಆದರೆ ಯುದ್ಧಗಳಿಗಿರುವ ವಿವಿಧ ಆಯಾಮಗಳ ನೆಲೆಯನ್ನು ಗ್ರಹಿಸಿ ಯುದ್ಧಗಳನ್ನು ವಿಶ್ಲೇಷಣೆ ಮಾಡಬೇಕು ಎಂದರು.

ಕನ್ನಡದಲ್ಲಿ ಯುದ್ಧಕ್ಕೆ ಸಂಬಂಧಿಸಿದ ಕೃತಿಗಳು ತೀರಾ ಕಡಿಮೆ. ಇರುವ ಕೆಲವೊಂದು ಕೃತಿಗಳು ಸಹ ಅತಿರಂಜನೀಯವಾಗಿ ಯುದ್ಧವನ್ನು ವಿಜೃಂಭಿಸುತ್ತಲೇ ಅಂದಿನ ಸರ್ವಾಧಿಕಾರ ಮನೋಧರ್ಮವನ್ನು ಎತ್ತಿಹಿಡಿದಿವೆ. ಆದರೆ ಲೇಖಕ ಯಡೂರ ಮಹಾಬಲ ಅವರು ವಾಸ್ತವಿಕ ನೆಲೆಗಟ್ಟಿನಲ್ಲಿ, ಅಪಾರ ಓದು ಮತ್ತು ಸಂಶೋಧನೆಯೊಂದಿಗೆ ಕನ್ನಡದಲ್ಲಿ ಯುದ್ಧದ ಬಗ್ಗೆ ಕೃತಿ ರಚಿಸಿರುವುದು ಅಭಿನಂದನಾರ್ಹ ಎಂದರು.

ಒಬ್ಬ ಸಂಶೋಧಕನಿಗೆ ಅಧ್ಯಯನಶೀಲತೆ, ಪದಬಳಕೆ, ಭಾಷಾ ಪ್ರಬುದ್ಧತೆ ಅಗತ್ಯ. ಆದರೆ ಇತ್ತೀಚೆಗೆ ಸಂಶೋಧನೆ ಎಂಬುದು ಕೇವಲ ಪಿಎಚ್‍ಡಿಗೆ ಮಾತ್ರ ಸೀಮಿತವಾಗಿರುವುದು ವಿಪರ್ಯಾಸ. ಲೇಖಕನು ಸೂಕ್ಷ್ಮ ಸಂವೇದನೆಶೀಲತೆಯೊಂದಿಗೆ ಕೃತಿಗಳನ್ನು ರಚಿಸಿಬೇಕು. ಜೊತೆಗೆ ಭೂತ, ವರ್ತಮಾನ ಕಾಲದ ನಡುವಿನ ಅನುಸಂಧಾನ ಚರಿತ್ರೆಯನ್ನು ಮರುಚಿಂತನೆಗೆ ಒಳಪಡಿಸಿ ಕೃತಿ ರಚಿಸಿದರೆ ಅದಕ್ಕೆ ಒಂದು ಅರ್ಥಪೂರ್ಣ ಗೌರವ ಸಲ್ಲುತ್ತದೆ ಎಂದರು.

ರೈತ ಮುಖಂಡ ಜೆ.ಎಂ.ವೀರಸಂಗಯ್ಯ ಮಾತನಾಡಿ, ರಾಜರು ನಡೆಸಿದ ಯುದ್ಧಗಳು ಸಾಮ್ರಾಜ್ಯ ವಿಸ್ತರಣೆಗೆ ಮಾಡಿದರೆ, ಪ್ರಜಾಪ್ರಭುತ್ವದಲ್ಲಿ ಗಡಿ ವಿವಾದ, ವ್ಯಾಪಾರಕ್ಕಾಗಿ ನಡೆಯುತ್ತಿವೆ. ಈ ಬಗ್ಗೆ ಭಾರತ ಮತ್ತು ಚೀನಾ ನಡುವಿನ ಯುದ್ಧವನ್ನು ಯಡೂರ ಮಹಾಬಲ ಅವರು ಸವಿಸ್ತಾರವಾಗಿ ಉಲ್ಲೇಖಿಸಿದ್ದಾರೆ. ಯುದ್ಧ ಬೇಡ ಎಂಬುವವರನ್ನು ದೇಶದ್ರೋಹಿಗಳು ಎಂಬ ಪಟ್ಟಿಗೆ ಸೇರಿಸುವ ಕಾಲದಲ್ಲಿ ಇಂತಹ ಪುಸ್ತಕಗಳ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಯಡೂರು ಮಹಾಬಲ ಬರೆದಿರುವ ಯುದ್ಧ ಪೂರ್ವ ಕಾಂಡ (1962ರ ಭಾರತ- ಚೀನಾ ಯುದ್ಧದ ಹಿಂದಿನ ಬೆಳವಣಿಗೆಗಳು), ಯುದ್ಧ ಕಾಂಡ (1962ರ ಭಾರತ- ಚೀನಾ ಯುದ್ಧದ ವಿವರಗಳು) ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಲೇಖಕರಾದ ಯಡೂರು ಮಹಾಬಲ, ಹೊಸತು ಮಾಸ ಪತ್ರಿಕೆ ಸಂಪಾದಕರಾದ ಸಿದ್ಧನಗೌಡ ಪಾಟೀಲ, ಬರಹಗಾರ ಬಿ.ಆರ್.ಮಂಜುನಾಥ್ ಮತ್ತಿತರರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...