Homeಚಳವಳಿಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

ಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಯುದ್ಧ ಎಂಬುದು ವ್ಯಾಪಾರೀಕರಣವಾಗಿದ್ದು, ಬೃಹತ್ ರಾಷ್ಟ್ರಗಳಿಗೆ ಒಂದು ಉದ್ಯಮವಾಗಿದೆ. ಹಾಗಾಗಿ ಸೈನಿಕನ ಬಲಿದಾನಕ್ಕೆ ಬೆಲೆಯೇ ಇಲ್ಲದಂತಾಗಿ, ಬಲಿದಾನ ಮತ್ತು ಮತದಾನ ಒಂದೇ ರೀತಿಯಂತಾಗುವ ಸಂಕಟದ ಕಾಲದಲ್ಲಿ ಹಾದು ಹೋಗುತ್ತಿದ್ದೇವೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಪ್ರೆಸ್‍ಕ್ಲಬ್‍ನಲ್ಲಿ ಚಿಂತನ ಚಿಲುಮೆ ವತಿಯಿಮದ ಆಯೋಜಿಸಿದ್ದ ಲೇಖಕ ಯಡೂರ ಮಹಾಬಲರವರ ಪುಸ್ತಕಗಳ ಬಿಡುಗಡೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜಪ್ರಭುತ್ವದಲ್ಲಾಗುತ್ತಿದ್ದ ಯುದ್ಧಗಳಲ್ಲಿ ರಾಜರು ಭಾಗವಹಿಸುವವರು. ಆದರೆ ಇಂದಿನ ಯುದ್ಧಗಳಲ್ಲಿ ಯಾವ ಆಡಳಿತಗಾರನೂ ಯುದ್ಧ ಭೂಮಿಗೆ ಹೋಗದೆ ಕೂತಲ್ಲೇ ತಮಗೆ ಅನುಕೂಲವಾಗುವ ರೀತಿಯಲ್ಲಿ ಸೂತ್ರವಾಡಿಸುತ್ತಾರೆ ಎಂದಿದ್ದಾರೆ.

ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವ ಕಾಲದಲ್ಲೂ ಯುದ್ಧಗಳು ನಡೆಯುತ್ತಿವೆ. ಆದರೆ ಯುದ್ಧಗಳನ್ನು ನಡೆಸುತ್ತಲೇ ಶಾಂತಿಮಂತ್ರವನ್ನು ಪಠನೆ ಮಾಡುವಂತಹ ವೈರುಧ್ಯದ ಮತ್ತು ವಿಪರ್ಯಾಸದ ನಡುವೆ ನಮ್ಮ ರಾಜಕಾರಣ ಹಾದು ಹೋಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚೆಗೆ ಬೃಹತ್ ರಾಷ್ಟ್ರಗಳು ಶಾಂತಿಯ ಮಾತನ್ನು ಆಡುತ್ತಲೇ ಯುದ್ಧವನ್ನು ಪ್ರಚೋದಿಸುವ ಬೃಹತ್ ರಾಷ್ಟ್ರಗಳು ನಮ್ಮೊಂದಿಗಿವೆ. ಜೊತೆಗೆ ನಾವು ಯುದ್ಧವನ್ನು ದೇಶ ಪ್ರೇಮ ಎಂದು ಹೇಳುತ್ತಿದ್ದೇವೆ. ಆದರೆ ಯುದ್ಧಗಳಿಗಿರುವ ವಿವಿಧ ಆಯಾಮಗಳ ನೆಲೆಯನ್ನು ಗ್ರಹಿಸಿ ಯುದ್ಧಗಳನ್ನು ವಿಶ್ಲೇಷಣೆ ಮಾಡಬೇಕು ಎಂದರು.

ಕನ್ನಡದಲ್ಲಿ ಯುದ್ಧಕ್ಕೆ ಸಂಬಂಧಿಸಿದ ಕೃತಿಗಳು ತೀರಾ ಕಡಿಮೆ. ಇರುವ ಕೆಲವೊಂದು ಕೃತಿಗಳು ಸಹ ಅತಿರಂಜನೀಯವಾಗಿ ಯುದ್ಧವನ್ನು ವಿಜೃಂಭಿಸುತ್ತಲೇ ಅಂದಿನ ಸರ್ವಾಧಿಕಾರ ಮನೋಧರ್ಮವನ್ನು ಎತ್ತಿಹಿಡಿದಿವೆ. ಆದರೆ ಲೇಖಕ ಯಡೂರ ಮಹಾಬಲ ಅವರು ವಾಸ್ತವಿಕ ನೆಲೆಗಟ್ಟಿನಲ್ಲಿ, ಅಪಾರ ಓದು ಮತ್ತು ಸಂಶೋಧನೆಯೊಂದಿಗೆ ಕನ್ನಡದಲ್ಲಿ ಯುದ್ಧದ ಬಗ್ಗೆ ಕೃತಿ ರಚಿಸಿರುವುದು ಅಭಿನಂದನಾರ್ಹ ಎಂದರು.

ಒಬ್ಬ ಸಂಶೋಧಕನಿಗೆ ಅಧ್ಯಯನಶೀಲತೆ, ಪದಬಳಕೆ, ಭಾಷಾ ಪ್ರಬುದ್ಧತೆ ಅಗತ್ಯ. ಆದರೆ ಇತ್ತೀಚೆಗೆ ಸಂಶೋಧನೆ ಎಂಬುದು ಕೇವಲ ಪಿಎಚ್‍ಡಿಗೆ ಮಾತ್ರ ಸೀಮಿತವಾಗಿರುವುದು ವಿಪರ್ಯಾಸ. ಲೇಖಕನು ಸೂಕ್ಷ್ಮ ಸಂವೇದನೆಶೀಲತೆಯೊಂದಿಗೆ ಕೃತಿಗಳನ್ನು ರಚಿಸಿಬೇಕು. ಜೊತೆಗೆ ಭೂತ, ವರ್ತಮಾನ ಕಾಲದ ನಡುವಿನ ಅನುಸಂಧಾನ ಚರಿತ್ರೆಯನ್ನು ಮರುಚಿಂತನೆಗೆ ಒಳಪಡಿಸಿ ಕೃತಿ ರಚಿಸಿದರೆ ಅದಕ್ಕೆ ಒಂದು ಅರ್ಥಪೂರ್ಣ ಗೌರವ ಸಲ್ಲುತ್ತದೆ ಎಂದರು.

ರೈತ ಮುಖಂಡ ಜೆ.ಎಂ.ವೀರಸಂಗಯ್ಯ ಮಾತನಾಡಿ, ರಾಜರು ನಡೆಸಿದ ಯುದ್ಧಗಳು ಸಾಮ್ರಾಜ್ಯ ವಿಸ್ತರಣೆಗೆ ಮಾಡಿದರೆ, ಪ್ರಜಾಪ್ರಭುತ್ವದಲ್ಲಿ ಗಡಿ ವಿವಾದ, ವ್ಯಾಪಾರಕ್ಕಾಗಿ ನಡೆಯುತ್ತಿವೆ. ಈ ಬಗ್ಗೆ ಭಾರತ ಮತ್ತು ಚೀನಾ ನಡುವಿನ ಯುದ್ಧವನ್ನು ಯಡೂರ ಮಹಾಬಲ ಅವರು ಸವಿಸ್ತಾರವಾಗಿ ಉಲ್ಲೇಖಿಸಿದ್ದಾರೆ. ಯುದ್ಧ ಬೇಡ ಎಂಬುವವರನ್ನು ದೇಶದ್ರೋಹಿಗಳು ಎಂಬ ಪಟ್ಟಿಗೆ ಸೇರಿಸುವ ಕಾಲದಲ್ಲಿ ಇಂತಹ ಪುಸ್ತಕಗಳ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಯಡೂರು ಮಹಾಬಲ ಬರೆದಿರುವ ಯುದ್ಧ ಪೂರ್ವ ಕಾಂಡ (1962ರ ಭಾರತ- ಚೀನಾ ಯುದ್ಧದ ಹಿಂದಿನ ಬೆಳವಣಿಗೆಗಳು), ಯುದ್ಧ ಕಾಂಡ (1962ರ ಭಾರತ- ಚೀನಾ ಯುದ್ಧದ ವಿವರಗಳು) ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಲೇಖಕರಾದ ಯಡೂರು ಮಹಾಬಲ, ಹೊಸತು ಮಾಸ ಪತ್ರಿಕೆ ಸಂಪಾದಕರಾದ ಸಿದ್ಧನಗೌಡ ಪಾಟೀಲ, ಬರಹಗಾರ ಬಿ.ಆರ್.ಮಂಜುನಾಥ್ ಮತ್ತಿತರರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...