Homeಚಳವಳಿಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

ಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಯುದ್ಧ ಎಂಬುದು ವ್ಯಾಪಾರೀಕರಣವಾಗಿದ್ದು, ಬೃಹತ್ ರಾಷ್ಟ್ರಗಳಿಗೆ ಒಂದು ಉದ್ಯಮವಾಗಿದೆ. ಹಾಗಾಗಿ ಸೈನಿಕನ ಬಲಿದಾನಕ್ಕೆ ಬೆಲೆಯೇ ಇಲ್ಲದಂತಾಗಿ, ಬಲಿದಾನ ಮತ್ತು ಮತದಾನ ಒಂದೇ ರೀತಿಯಂತಾಗುವ ಸಂಕಟದ ಕಾಲದಲ್ಲಿ ಹಾದು ಹೋಗುತ್ತಿದ್ದೇವೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಪ್ರೆಸ್‍ಕ್ಲಬ್‍ನಲ್ಲಿ ಚಿಂತನ ಚಿಲುಮೆ ವತಿಯಿಮದ ಆಯೋಜಿಸಿದ್ದ ಲೇಖಕ ಯಡೂರ ಮಹಾಬಲರವರ ಪುಸ್ತಕಗಳ ಬಿಡುಗಡೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜಪ್ರಭುತ್ವದಲ್ಲಾಗುತ್ತಿದ್ದ ಯುದ್ಧಗಳಲ್ಲಿ ರಾಜರು ಭಾಗವಹಿಸುವವರು. ಆದರೆ ಇಂದಿನ ಯುದ್ಧಗಳಲ್ಲಿ ಯಾವ ಆಡಳಿತಗಾರನೂ ಯುದ್ಧ ಭೂಮಿಗೆ ಹೋಗದೆ ಕೂತಲ್ಲೇ ತಮಗೆ ಅನುಕೂಲವಾಗುವ ರೀತಿಯಲ್ಲಿ ಸೂತ್ರವಾಡಿಸುತ್ತಾರೆ ಎಂದಿದ್ದಾರೆ.

ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವ ಕಾಲದಲ್ಲೂ ಯುದ್ಧಗಳು ನಡೆಯುತ್ತಿವೆ. ಆದರೆ ಯುದ್ಧಗಳನ್ನು ನಡೆಸುತ್ತಲೇ ಶಾಂತಿಮಂತ್ರವನ್ನು ಪಠನೆ ಮಾಡುವಂತಹ ವೈರುಧ್ಯದ ಮತ್ತು ವಿಪರ್ಯಾಸದ ನಡುವೆ ನಮ್ಮ ರಾಜಕಾರಣ ಹಾದು ಹೋಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚೆಗೆ ಬೃಹತ್ ರಾಷ್ಟ್ರಗಳು ಶಾಂತಿಯ ಮಾತನ್ನು ಆಡುತ್ತಲೇ ಯುದ್ಧವನ್ನು ಪ್ರಚೋದಿಸುವ ಬೃಹತ್ ರಾಷ್ಟ್ರಗಳು ನಮ್ಮೊಂದಿಗಿವೆ. ಜೊತೆಗೆ ನಾವು ಯುದ್ಧವನ್ನು ದೇಶ ಪ್ರೇಮ ಎಂದು ಹೇಳುತ್ತಿದ್ದೇವೆ. ಆದರೆ ಯುದ್ಧಗಳಿಗಿರುವ ವಿವಿಧ ಆಯಾಮಗಳ ನೆಲೆಯನ್ನು ಗ್ರಹಿಸಿ ಯುದ್ಧಗಳನ್ನು ವಿಶ್ಲೇಷಣೆ ಮಾಡಬೇಕು ಎಂದರು.

ಕನ್ನಡದಲ್ಲಿ ಯುದ್ಧಕ್ಕೆ ಸಂಬಂಧಿಸಿದ ಕೃತಿಗಳು ತೀರಾ ಕಡಿಮೆ. ಇರುವ ಕೆಲವೊಂದು ಕೃತಿಗಳು ಸಹ ಅತಿರಂಜನೀಯವಾಗಿ ಯುದ್ಧವನ್ನು ವಿಜೃಂಭಿಸುತ್ತಲೇ ಅಂದಿನ ಸರ್ವಾಧಿಕಾರ ಮನೋಧರ್ಮವನ್ನು ಎತ್ತಿಹಿಡಿದಿವೆ. ಆದರೆ ಲೇಖಕ ಯಡೂರ ಮಹಾಬಲ ಅವರು ವಾಸ್ತವಿಕ ನೆಲೆಗಟ್ಟಿನಲ್ಲಿ, ಅಪಾರ ಓದು ಮತ್ತು ಸಂಶೋಧನೆಯೊಂದಿಗೆ ಕನ್ನಡದಲ್ಲಿ ಯುದ್ಧದ ಬಗ್ಗೆ ಕೃತಿ ರಚಿಸಿರುವುದು ಅಭಿನಂದನಾರ್ಹ ಎಂದರು.

ಒಬ್ಬ ಸಂಶೋಧಕನಿಗೆ ಅಧ್ಯಯನಶೀಲತೆ, ಪದಬಳಕೆ, ಭಾಷಾ ಪ್ರಬುದ್ಧತೆ ಅಗತ್ಯ. ಆದರೆ ಇತ್ತೀಚೆಗೆ ಸಂಶೋಧನೆ ಎಂಬುದು ಕೇವಲ ಪಿಎಚ್‍ಡಿಗೆ ಮಾತ್ರ ಸೀಮಿತವಾಗಿರುವುದು ವಿಪರ್ಯಾಸ. ಲೇಖಕನು ಸೂಕ್ಷ್ಮ ಸಂವೇದನೆಶೀಲತೆಯೊಂದಿಗೆ ಕೃತಿಗಳನ್ನು ರಚಿಸಿಬೇಕು. ಜೊತೆಗೆ ಭೂತ, ವರ್ತಮಾನ ಕಾಲದ ನಡುವಿನ ಅನುಸಂಧಾನ ಚರಿತ್ರೆಯನ್ನು ಮರುಚಿಂತನೆಗೆ ಒಳಪಡಿಸಿ ಕೃತಿ ರಚಿಸಿದರೆ ಅದಕ್ಕೆ ಒಂದು ಅರ್ಥಪೂರ್ಣ ಗೌರವ ಸಲ್ಲುತ್ತದೆ ಎಂದರು.

ರೈತ ಮುಖಂಡ ಜೆ.ಎಂ.ವೀರಸಂಗಯ್ಯ ಮಾತನಾಡಿ, ರಾಜರು ನಡೆಸಿದ ಯುದ್ಧಗಳು ಸಾಮ್ರಾಜ್ಯ ವಿಸ್ತರಣೆಗೆ ಮಾಡಿದರೆ, ಪ್ರಜಾಪ್ರಭುತ್ವದಲ್ಲಿ ಗಡಿ ವಿವಾದ, ವ್ಯಾಪಾರಕ್ಕಾಗಿ ನಡೆಯುತ್ತಿವೆ. ಈ ಬಗ್ಗೆ ಭಾರತ ಮತ್ತು ಚೀನಾ ನಡುವಿನ ಯುದ್ಧವನ್ನು ಯಡೂರ ಮಹಾಬಲ ಅವರು ಸವಿಸ್ತಾರವಾಗಿ ಉಲ್ಲೇಖಿಸಿದ್ದಾರೆ. ಯುದ್ಧ ಬೇಡ ಎಂಬುವವರನ್ನು ದೇಶದ್ರೋಹಿಗಳು ಎಂಬ ಪಟ್ಟಿಗೆ ಸೇರಿಸುವ ಕಾಲದಲ್ಲಿ ಇಂತಹ ಪುಸ್ತಕಗಳ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಯಡೂರು ಮಹಾಬಲ ಬರೆದಿರುವ ಯುದ್ಧ ಪೂರ್ವ ಕಾಂಡ (1962ರ ಭಾರತ- ಚೀನಾ ಯುದ್ಧದ ಹಿಂದಿನ ಬೆಳವಣಿಗೆಗಳು), ಯುದ್ಧ ಕಾಂಡ (1962ರ ಭಾರತ- ಚೀನಾ ಯುದ್ಧದ ವಿವರಗಳು) ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಲೇಖಕರಾದ ಯಡೂರು ಮಹಾಬಲ, ಹೊಸತು ಮಾಸ ಪತ್ರಿಕೆ ಸಂಪಾದಕರಾದ ಸಿದ್ಧನಗೌಡ ಪಾಟೀಲ, ಬರಹಗಾರ ಬಿ.ಆರ್.ಮಂಜುನಾಥ್ ಮತ್ತಿತರರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...