Homeಚಳವಳಿಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

ಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಯುದ್ಧ ಎಂಬುದು ವ್ಯಾಪಾರೀಕರಣವಾಗಿದ್ದು, ಬೃಹತ್ ರಾಷ್ಟ್ರಗಳಿಗೆ ಒಂದು ಉದ್ಯಮವಾಗಿದೆ. ಹಾಗಾಗಿ ಸೈನಿಕನ ಬಲಿದಾನಕ್ಕೆ ಬೆಲೆಯೇ ಇಲ್ಲದಂತಾಗಿ, ಬಲಿದಾನ ಮತ್ತು ಮತದಾನ ಒಂದೇ ರೀತಿಯಂತಾಗುವ ಸಂಕಟದ ಕಾಲದಲ್ಲಿ ಹಾದು ಹೋಗುತ್ತಿದ್ದೇವೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಪ್ರೆಸ್‍ಕ್ಲಬ್‍ನಲ್ಲಿ ಚಿಂತನ ಚಿಲುಮೆ ವತಿಯಿಮದ ಆಯೋಜಿಸಿದ್ದ ಲೇಖಕ ಯಡೂರ ಮಹಾಬಲರವರ ಪುಸ್ತಕಗಳ ಬಿಡುಗಡೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜಪ್ರಭುತ್ವದಲ್ಲಾಗುತ್ತಿದ್ದ ಯುದ್ಧಗಳಲ್ಲಿ ರಾಜರು ಭಾಗವಹಿಸುವವರು. ಆದರೆ ಇಂದಿನ ಯುದ್ಧಗಳಲ್ಲಿ ಯಾವ ಆಡಳಿತಗಾರನೂ ಯುದ್ಧ ಭೂಮಿಗೆ ಹೋಗದೆ ಕೂತಲ್ಲೇ ತಮಗೆ ಅನುಕೂಲವಾಗುವ ರೀತಿಯಲ್ಲಿ ಸೂತ್ರವಾಡಿಸುತ್ತಾರೆ ಎಂದಿದ್ದಾರೆ.

ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವ ಕಾಲದಲ್ಲೂ ಯುದ್ಧಗಳು ನಡೆಯುತ್ತಿವೆ. ಆದರೆ ಯುದ್ಧಗಳನ್ನು ನಡೆಸುತ್ತಲೇ ಶಾಂತಿಮಂತ್ರವನ್ನು ಪಠನೆ ಮಾಡುವಂತಹ ವೈರುಧ್ಯದ ಮತ್ತು ವಿಪರ್ಯಾಸದ ನಡುವೆ ನಮ್ಮ ರಾಜಕಾರಣ ಹಾದು ಹೋಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚೆಗೆ ಬೃಹತ್ ರಾಷ್ಟ್ರಗಳು ಶಾಂತಿಯ ಮಾತನ್ನು ಆಡುತ್ತಲೇ ಯುದ್ಧವನ್ನು ಪ್ರಚೋದಿಸುವ ಬೃಹತ್ ರಾಷ್ಟ್ರಗಳು ನಮ್ಮೊಂದಿಗಿವೆ. ಜೊತೆಗೆ ನಾವು ಯುದ್ಧವನ್ನು ದೇಶ ಪ್ರೇಮ ಎಂದು ಹೇಳುತ್ತಿದ್ದೇವೆ. ಆದರೆ ಯುದ್ಧಗಳಿಗಿರುವ ವಿವಿಧ ಆಯಾಮಗಳ ನೆಲೆಯನ್ನು ಗ್ರಹಿಸಿ ಯುದ್ಧಗಳನ್ನು ವಿಶ್ಲೇಷಣೆ ಮಾಡಬೇಕು ಎಂದರು.

ಕನ್ನಡದಲ್ಲಿ ಯುದ್ಧಕ್ಕೆ ಸಂಬಂಧಿಸಿದ ಕೃತಿಗಳು ತೀರಾ ಕಡಿಮೆ. ಇರುವ ಕೆಲವೊಂದು ಕೃತಿಗಳು ಸಹ ಅತಿರಂಜನೀಯವಾಗಿ ಯುದ್ಧವನ್ನು ವಿಜೃಂಭಿಸುತ್ತಲೇ ಅಂದಿನ ಸರ್ವಾಧಿಕಾರ ಮನೋಧರ್ಮವನ್ನು ಎತ್ತಿಹಿಡಿದಿವೆ. ಆದರೆ ಲೇಖಕ ಯಡೂರ ಮಹಾಬಲ ಅವರು ವಾಸ್ತವಿಕ ನೆಲೆಗಟ್ಟಿನಲ್ಲಿ, ಅಪಾರ ಓದು ಮತ್ತು ಸಂಶೋಧನೆಯೊಂದಿಗೆ ಕನ್ನಡದಲ್ಲಿ ಯುದ್ಧದ ಬಗ್ಗೆ ಕೃತಿ ರಚಿಸಿರುವುದು ಅಭಿನಂದನಾರ್ಹ ಎಂದರು.

ಒಬ್ಬ ಸಂಶೋಧಕನಿಗೆ ಅಧ್ಯಯನಶೀಲತೆ, ಪದಬಳಕೆ, ಭಾಷಾ ಪ್ರಬುದ್ಧತೆ ಅಗತ್ಯ. ಆದರೆ ಇತ್ತೀಚೆಗೆ ಸಂಶೋಧನೆ ಎಂಬುದು ಕೇವಲ ಪಿಎಚ್‍ಡಿಗೆ ಮಾತ್ರ ಸೀಮಿತವಾಗಿರುವುದು ವಿಪರ್ಯಾಸ. ಲೇಖಕನು ಸೂಕ್ಷ್ಮ ಸಂವೇದನೆಶೀಲತೆಯೊಂದಿಗೆ ಕೃತಿಗಳನ್ನು ರಚಿಸಿಬೇಕು. ಜೊತೆಗೆ ಭೂತ, ವರ್ತಮಾನ ಕಾಲದ ನಡುವಿನ ಅನುಸಂಧಾನ ಚರಿತ್ರೆಯನ್ನು ಮರುಚಿಂತನೆಗೆ ಒಳಪಡಿಸಿ ಕೃತಿ ರಚಿಸಿದರೆ ಅದಕ್ಕೆ ಒಂದು ಅರ್ಥಪೂರ್ಣ ಗೌರವ ಸಲ್ಲುತ್ತದೆ ಎಂದರು.

ರೈತ ಮುಖಂಡ ಜೆ.ಎಂ.ವೀರಸಂಗಯ್ಯ ಮಾತನಾಡಿ, ರಾಜರು ನಡೆಸಿದ ಯುದ್ಧಗಳು ಸಾಮ್ರಾಜ್ಯ ವಿಸ್ತರಣೆಗೆ ಮಾಡಿದರೆ, ಪ್ರಜಾಪ್ರಭುತ್ವದಲ್ಲಿ ಗಡಿ ವಿವಾದ, ವ್ಯಾಪಾರಕ್ಕಾಗಿ ನಡೆಯುತ್ತಿವೆ. ಈ ಬಗ್ಗೆ ಭಾರತ ಮತ್ತು ಚೀನಾ ನಡುವಿನ ಯುದ್ಧವನ್ನು ಯಡೂರ ಮಹಾಬಲ ಅವರು ಸವಿಸ್ತಾರವಾಗಿ ಉಲ್ಲೇಖಿಸಿದ್ದಾರೆ. ಯುದ್ಧ ಬೇಡ ಎಂಬುವವರನ್ನು ದೇಶದ್ರೋಹಿಗಳು ಎಂಬ ಪಟ್ಟಿಗೆ ಸೇರಿಸುವ ಕಾಲದಲ್ಲಿ ಇಂತಹ ಪುಸ್ತಕಗಳ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಯಡೂರು ಮಹಾಬಲ ಬರೆದಿರುವ ಯುದ್ಧ ಪೂರ್ವ ಕಾಂಡ (1962ರ ಭಾರತ- ಚೀನಾ ಯುದ್ಧದ ಹಿಂದಿನ ಬೆಳವಣಿಗೆಗಳು), ಯುದ್ಧ ಕಾಂಡ (1962ರ ಭಾರತ- ಚೀನಾ ಯುದ್ಧದ ವಿವರಗಳು) ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಲೇಖಕರಾದ ಯಡೂರು ಮಹಾಬಲ, ಹೊಸತು ಮಾಸ ಪತ್ರಿಕೆ ಸಂಪಾದಕರಾದ ಸಿದ್ಧನಗೌಡ ಪಾಟೀಲ, ಬರಹಗಾರ ಬಿ.ಆರ್.ಮಂಜುನಾಥ್ ಮತ್ತಿತರರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...