Homeಚಳವಳಿಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

ಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಯುದ್ಧ ಎಂಬುದು ವ್ಯಾಪಾರೀಕರಣವಾಗಿದ್ದು, ಬೃಹತ್ ರಾಷ್ಟ್ರಗಳಿಗೆ ಒಂದು ಉದ್ಯಮವಾಗಿದೆ. ಹಾಗಾಗಿ ಸೈನಿಕನ ಬಲಿದಾನಕ್ಕೆ ಬೆಲೆಯೇ ಇಲ್ಲದಂತಾಗಿ, ಬಲಿದಾನ ಮತ್ತು ಮತದಾನ ಒಂದೇ ರೀತಿಯಂತಾಗುವ ಸಂಕಟದ ಕಾಲದಲ್ಲಿ ಹಾದು ಹೋಗುತ್ತಿದ್ದೇವೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಪ್ರೆಸ್‍ಕ್ಲಬ್‍ನಲ್ಲಿ ಚಿಂತನ ಚಿಲುಮೆ ವತಿಯಿಮದ ಆಯೋಜಿಸಿದ್ದ ಲೇಖಕ ಯಡೂರ ಮಹಾಬಲರವರ ಪುಸ್ತಕಗಳ ಬಿಡುಗಡೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜಪ್ರಭುತ್ವದಲ್ಲಾಗುತ್ತಿದ್ದ ಯುದ್ಧಗಳಲ್ಲಿ ರಾಜರು ಭಾಗವಹಿಸುವವರು. ಆದರೆ ಇಂದಿನ ಯುದ್ಧಗಳಲ್ಲಿ ಯಾವ ಆಡಳಿತಗಾರನೂ ಯುದ್ಧ ಭೂಮಿಗೆ ಹೋಗದೆ ಕೂತಲ್ಲೇ ತಮಗೆ ಅನುಕೂಲವಾಗುವ ರೀತಿಯಲ್ಲಿ ಸೂತ್ರವಾಡಿಸುತ್ತಾರೆ ಎಂದಿದ್ದಾರೆ.

ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವ ಕಾಲದಲ್ಲೂ ಯುದ್ಧಗಳು ನಡೆಯುತ್ತಿವೆ. ಆದರೆ ಯುದ್ಧಗಳನ್ನು ನಡೆಸುತ್ತಲೇ ಶಾಂತಿಮಂತ್ರವನ್ನು ಪಠನೆ ಮಾಡುವಂತಹ ವೈರುಧ್ಯದ ಮತ್ತು ವಿಪರ್ಯಾಸದ ನಡುವೆ ನಮ್ಮ ರಾಜಕಾರಣ ಹಾದು ಹೋಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚೆಗೆ ಬೃಹತ್ ರಾಷ್ಟ್ರಗಳು ಶಾಂತಿಯ ಮಾತನ್ನು ಆಡುತ್ತಲೇ ಯುದ್ಧವನ್ನು ಪ್ರಚೋದಿಸುವ ಬೃಹತ್ ರಾಷ್ಟ್ರಗಳು ನಮ್ಮೊಂದಿಗಿವೆ. ಜೊತೆಗೆ ನಾವು ಯುದ್ಧವನ್ನು ದೇಶ ಪ್ರೇಮ ಎಂದು ಹೇಳುತ್ತಿದ್ದೇವೆ. ಆದರೆ ಯುದ್ಧಗಳಿಗಿರುವ ವಿವಿಧ ಆಯಾಮಗಳ ನೆಲೆಯನ್ನು ಗ್ರಹಿಸಿ ಯುದ್ಧಗಳನ್ನು ವಿಶ್ಲೇಷಣೆ ಮಾಡಬೇಕು ಎಂದರು.

ಕನ್ನಡದಲ್ಲಿ ಯುದ್ಧಕ್ಕೆ ಸಂಬಂಧಿಸಿದ ಕೃತಿಗಳು ತೀರಾ ಕಡಿಮೆ. ಇರುವ ಕೆಲವೊಂದು ಕೃತಿಗಳು ಸಹ ಅತಿರಂಜನೀಯವಾಗಿ ಯುದ್ಧವನ್ನು ವಿಜೃಂಭಿಸುತ್ತಲೇ ಅಂದಿನ ಸರ್ವಾಧಿಕಾರ ಮನೋಧರ್ಮವನ್ನು ಎತ್ತಿಹಿಡಿದಿವೆ. ಆದರೆ ಲೇಖಕ ಯಡೂರ ಮಹಾಬಲ ಅವರು ವಾಸ್ತವಿಕ ನೆಲೆಗಟ್ಟಿನಲ್ಲಿ, ಅಪಾರ ಓದು ಮತ್ತು ಸಂಶೋಧನೆಯೊಂದಿಗೆ ಕನ್ನಡದಲ್ಲಿ ಯುದ್ಧದ ಬಗ್ಗೆ ಕೃತಿ ರಚಿಸಿರುವುದು ಅಭಿನಂದನಾರ್ಹ ಎಂದರು.

ಒಬ್ಬ ಸಂಶೋಧಕನಿಗೆ ಅಧ್ಯಯನಶೀಲತೆ, ಪದಬಳಕೆ, ಭಾಷಾ ಪ್ರಬುದ್ಧತೆ ಅಗತ್ಯ. ಆದರೆ ಇತ್ತೀಚೆಗೆ ಸಂಶೋಧನೆ ಎಂಬುದು ಕೇವಲ ಪಿಎಚ್‍ಡಿಗೆ ಮಾತ್ರ ಸೀಮಿತವಾಗಿರುವುದು ವಿಪರ್ಯಾಸ. ಲೇಖಕನು ಸೂಕ್ಷ್ಮ ಸಂವೇದನೆಶೀಲತೆಯೊಂದಿಗೆ ಕೃತಿಗಳನ್ನು ರಚಿಸಿಬೇಕು. ಜೊತೆಗೆ ಭೂತ, ವರ್ತಮಾನ ಕಾಲದ ನಡುವಿನ ಅನುಸಂಧಾನ ಚರಿತ್ರೆಯನ್ನು ಮರುಚಿಂತನೆಗೆ ಒಳಪಡಿಸಿ ಕೃತಿ ರಚಿಸಿದರೆ ಅದಕ್ಕೆ ಒಂದು ಅರ್ಥಪೂರ್ಣ ಗೌರವ ಸಲ್ಲುತ್ತದೆ ಎಂದರು.

ರೈತ ಮುಖಂಡ ಜೆ.ಎಂ.ವೀರಸಂಗಯ್ಯ ಮಾತನಾಡಿ, ರಾಜರು ನಡೆಸಿದ ಯುದ್ಧಗಳು ಸಾಮ್ರಾಜ್ಯ ವಿಸ್ತರಣೆಗೆ ಮಾಡಿದರೆ, ಪ್ರಜಾಪ್ರಭುತ್ವದಲ್ಲಿ ಗಡಿ ವಿವಾದ, ವ್ಯಾಪಾರಕ್ಕಾಗಿ ನಡೆಯುತ್ತಿವೆ. ಈ ಬಗ್ಗೆ ಭಾರತ ಮತ್ತು ಚೀನಾ ನಡುವಿನ ಯುದ್ಧವನ್ನು ಯಡೂರ ಮಹಾಬಲ ಅವರು ಸವಿಸ್ತಾರವಾಗಿ ಉಲ್ಲೇಖಿಸಿದ್ದಾರೆ. ಯುದ್ಧ ಬೇಡ ಎಂಬುವವರನ್ನು ದೇಶದ್ರೋಹಿಗಳು ಎಂಬ ಪಟ್ಟಿಗೆ ಸೇರಿಸುವ ಕಾಲದಲ್ಲಿ ಇಂತಹ ಪುಸ್ತಕಗಳ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಯಡೂರು ಮಹಾಬಲ ಬರೆದಿರುವ ಯುದ್ಧ ಪೂರ್ವ ಕಾಂಡ (1962ರ ಭಾರತ- ಚೀನಾ ಯುದ್ಧದ ಹಿಂದಿನ ಬೆಳವಣಿಗೆಗಳು), ಯುದ್ಧ ಕಾಂಡ (1962ರ ಭಾರತ- ಚೀನಾ ಯುದ್ಧದ ವಿವರಗಳು) ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಲೇಖಕರಾದ ಯಡೂರು ಮಹಾಬಲ, ಹೊಸತು ಮಾಸ ಪತ್ರಿಕೆ ಸಂಪಾದಕರಾದ ಸಿದ್ಧನಗೌಡ ಪಾಟೀಲ, ಬರಹಗಾರ ಬಿ.ಆರ್.ಮಂಜುನಾಥ್ ಮತ್ತಿತರರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...