Homeಚಳವಳಿಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

ಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಯುದ್ಧ ಎಂಬುದು ವ್ಯಾಪಾರೀಕರಣವಾಗಿದ್ದು, ಬೃಹತ್ ರಾಷ್ಟ್ರಗಳಿಗೆ ಒಂದು ಉದ್ಯಮವಾಗಿದೆ. ಹಾಗಾಗಿ ಸೈನಿಕನ ಬಲಿದಾನಕ್ಕೆ ಬೆಲೆಯೇ ಇಲ್ಲದಂತಾಗಿ, ಬಲಿದಾನ ಮತ್ತು ಮತದಾನ ಒಂದೇ ರೀತಿಯಂತಾಗುವ ಸಂಕಟದ ಕಾಲದಲ್ಲಿ ಹಾದು ಹೋಗುತ್ತಿದ್ದೇವೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಪ್ರೆಸ್‍ಕ್ಲಬ್‍ನಲ್ಲಿ ಚಿಂತನ ಚಿಲುಮೆ ವತಿಯಿಮದ ಆಯೋಜಿಸಿದ್ದ ಲೇಖಕ ಯಡೂರ ಮಹಾಬಲರವರ ಪುಸ್ತಕಗಳ ಬಿಡುಗಡೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜಪ್ರಭುತ್ವದಲ್ಲಾಗುತ್ತಿದ್ದ ಯುದ್ಧಗಳಲ್ಲಿ ರಾಜರು ಭಾಗವಹಿಸುವವರು. ಆದರೆ ಇಂದಿನ ಯುದ್ಧಗಳಲ್ಲಿ ಯಾವ ಆಡಳಿತಗಾರನೂ ಯುದ್ಧ ಭೂಮಿಗೆ ಹೋಗದೆ ಕೂತಲ್ಲೇ ತಮಗೆ ಅನುಕೂಲವಾಗುವ ರೀತಿಯಲ್ಲಿ ಸೂತ್ರವಾಡಿಸುತ್ತಾರೆ ಎಂದಿದ್ದಾರೆ.

ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವ ಕಾಲದಲ್ಲೂ ಯುದ್ಧಗಳು ನಡೆಯುತ್ತಿವೆ. ಆದರೆ ಯುದ್ಧಗಳನ್ನು ನಡೆಸುತ್ತಲೇ ಶಾಂತಿಮಂತ್ರವನ್ನು ಪಠನೆ ಮಾಡುವಂತಹ ವೈರುಧ್ಯದ ಮತ್ತು ವಿಪರ್ಯಾಸದ ನಡುವೆ ನಮ್ಮ ರಾಜಕಾರಣ ಹಾದು ಹೋಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚೆಗೆ ಬೃಹತ್ ರಾಷ್ಟ್ರಗಳು ಶಾಂತಿಯ ಮಾತನ್ನು ಆಡುತ್ತಲೇ ಯುದ್ಧವನ್ನು ಪ್ರಚೋದಿಸುವ ಬೃಹತ್ ರಾಷ್ಟ್ರಗಳು ನಮ್ಮೊಂದಿಗಿವೆ. ಜೊತೆಗೆ ನಾವು ಯುದ್ಧವನ್ನು ದೇಶ ಪ್ರೇಮ ಎಂದು ಹೇಳುತ್ತಿದ್ದೇವೆ. ಆದರೆ ಯುದ್ಧಗಳಿಗಿರುವ ವಿವಿಧ ಆಯಾಮಗಳ ನೆಲೆಯನ್ನು ಗ್ರಹಿಸಿ ಯುದ್ಧಗಳನ್ನು ವಿಶ್ಲೇಷಣೆ ಮಾಡಬೇಕು ಎಂದರು.

ಕನ್ನಡದಲ್ಲಿ ಯುದ್ಧಕ್ಕೆ ಸಂಬಂಧಿಸಿದ ಕೃತಿಗಳು ತೀರಾ ಕಡಿಮೆ. ಇರುವ ಕೆಲವೊಂದು ಕೃತಿಗಳು ಸಹ ಅತಿರಂಜನೀಯವಾಗಿ ಯುದ್ಧವನ್ನು ವಿಜೃಂಭಿಸುತ್ತಲೇ ಅಂದಿನ ಸರ್ವಾಧಿಕಾರ ಮನೋಧರ್ಮವನ್ನು ಎತ್ತಿಹಿಡಿದಿವೆ. ಆದರೆ ಲೇಖಕ ಯಡೂರ ಮಹಾಬಲ ಅವರು ವಾಸ್ತವಿಕ ನೆಲೆಗಟ್ಟಿನಲ್ಲಿ, ಅಪಾರ ಓದು ಮತ್ತು ಸಂಶೋಧನೆಯೊಂದಿಗೆ ಕನ್ನಡದಲ್ಲಿ ಯುದ್ಧದ ಬಗ್ಗೆ ಕೃತಿ ರಚಿಸಿರುವುದು ಅಭಿನಂದನಾರ್ಹ ಎಂದರು.

ಒಬ್ಬ ಸಂಶೋಧಕನಿಗೆ ಅಧ್ಯಯನಶೀಲತೆ, ಪದಬಳಕೆ, ಭಾಷಾ ಪ್ರಬುದ್ಧತೆ ಅಗತ್ಯ. ಆದರೆ ಇತ್ತೀಚೆಗೆ ಸಂಶೋಧನೆ ಎಂಬುದು ಕೇವಲ ಪಿಎಚ್‍ಡಿಗೆ ಮಾತ್ರ ಸೀಮಿತವಾಗಿರುವುದು ವಿಪರ್ಯಾಸ. ಲೇಖಕನು ಸೂಕ್ಷ್ಮ ಸಂವೇದನೆಶೀಲತೆಯೊಂದಿಗೆ ಕೃತಿಗಳನ್ನು ರಚಿಸಿಬೇಕು. ಜೊತೆಗೆ ಭೂತ, ವರ್ತಮಾನ ಕಾಲದ ನಡುವಿನ ಅನುಸಂಧಾನ ಚರಿತ್ರೆಯನ್ನು ಮರುಚಿಂತನೆಗೆ ಒಳಪಡಿಸಿ ಕೃತಿ ರಚಿಸಿದರೆ ಅದಕ್ಕೆ ಒಂದು ಅರ್ಥಪೂರ್ಣ ಗೌರವ ಸಲ್ಲುತ್ತದೆ ಎಂದರು.

ರೈತ ಮುಖಂಡ ಜೆ.ಎಂ.ವೀರಸಂಗಯ್ಯ ಮಾತನಾಡಿ, ರಾಜರು ನಡೆಸಿದ ಯುದ್ಧಗಳು ಸಾಮ್ರಾಜ್ಯ ವಿಸ್ತರಣೆಗೆ ಮಾಡಿದರೆ, ಪ್ರಜಾಪ್ರಭುತ್ವದಲ್ಲಿ ಗಡಿ ವಿವಾದ, ವ್ಯಾಪಾರಕ್ಕಾಗಿ ನಡೆಯುತ್ತಿವೆ. ಈ ಬಗ್ಗೆ ಭಾರತ ಮತ್ತು ಚೀನಾ ನಡುವಿನ ಯುದ್ಧವನ್ನು ಯಡೂರ ಮಹಾಬಲ ಅವರು ಸವಿಸ್ತಾರವಾಗಿ ಉಲ್ಲೇಖಿಸಿದ್ದಾರೆ. ಯುದ್ಧ ಬೇಡ ಎಂಬುವವರನ್ನು ದೇಶದ್ರೋಹಿಗಳು ಎಂಬ ಪಟ್ಟಿಗೆ ಸೇರಿಸುವ ಕಾಲದಲ್ಲಿ ಇಂತಹ ಪುಸ್ತಕಗಳ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಯಡೂರು ಮಹಾಬಲ ಬರೆದಿರುವ ಯುದ್ಧ ಪೂರ್ವ ಕಾಂಡ (1962ರ ಭಾರತ- ಚೀನಾ ಯುದ್ಧದ ಹಿಂದಿನ ಬೆಳವಣಿಗೆಗಳು), ಯುದ್ಧ ಕಾಂಡ (1962ರ ಭಾರತ- ಚೀನಾ ಯುದ್ಧದ ವಿವರಗಳು) ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಲೇಖಕರಾದ ಯಡೂರು ಮಹಾಬಲ, ಹೊಸತು ಮಾಸ ಪತ್ರಿಕೆ ಸಂಪಾದಕರಾದ ಸಿದ್ಧನಗೌಡ ಪಾಟೀಲ, ಬರಹಗಾರ ಬಿ.ಆರ್.ಮಂಜುನಾಥ್ ಮತ್ತಿತರರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...