Homeಅಂಕಣಗಳುತಲ್ಲಣದ ಜೀವನಾನುಭವಗಳ ಅನಾವರಣ

ತಲ್ಲಣದ ಜೀವನಾನುಭವಗಳ ಅನಾವರಣ

- Advertisement -
ಇತ್ತೀಚಿನ ದಿನಗಳಲ್ಲಿ ವರ್ತಮಾನದ ಸಾಮಾಜಿಕ ಆಗುಹೋಗುಗಳ ಬಗ್ಗೆ ನಿರಂತರವಾಗಿ ಬರೆಯುತ್ತಿರುವ ವಿಕಾಸ್ ಮೌರ್ಯ, ಹೊಸತಲೆಮಾರಿನ ಪ್ರಖರ ಚಿಂತಕರಲ್ಲೊಬ್ಬರು. ಇದಕ್ಕೆ ಪುರಾವೆಯೆಂದರೆ ಕಳೆದ ಐದಾರು ವರ್ಷಗಳಿಂದ ಅವರು ಬರೆದ ಇಲ್ಲಿನ ಲೇಖನಗಳು. ಎಲ್ಲವೂ ಪುಟ್ಟ ಪುಟ್ಟ ಲೇಖನಗಳು; ಸರಳವೂ ನೇರವೂ ಸಂವಹನಶೀಲವೂ ಆದ ಭಾಷೆ; ಸಮಾಜ ಬದಲಾವಣೆಯ ದಿಕ್ಕಿನಲ್ಲಿ ಚಿಂತಿಸಲು ಮತ್ತು ಕ್ರಿಯಾಶೀಲರಾಗಲು ಕರೆಗೊಡುವ ಸಂಕಲ್ಪ ತುಂಬಿದ ವಾಕ್ಯಗಳು; ಪ್ರಾಮಾಣಿಕವಾದ ವೇದನೆಯನ್ನೂ ಆಕ್ರೋಶವನ್ನು ಚಿಂತನೆಯಾಗಿ ಮಾರ್ಪಡಿಸುವ ಸಂಯಮದ ಶೈಲಿ; ಎಚ್ಚರ ಮತ್ತು ಕನಸುಗಾರಿಕೆಯಿಂದ ಕೂಡಿದ ತರುಣ ಮನಸ್ಸು; ವರ್ತಮಾನದ ಇಂಡಿಯಾ ದಲಿತರನ್ನು ನಡೆಸಿಕೊಳ್ಳುತ್ತಿರುವ ಭೀಷಣ ವಾಸ್ತವವನ್ನು ಕಾಣಿಸುವಿಕೆ-ಇವು ಲೇಖನಗಳ ಹಿಂದಿರುವ ಮುಖ್ಯ ಚಹರೆಗಳು. ಈ ಲೇಖನಗಳಲ್ಲಿ ಕನ್ನಡ ಪ್ರಗತಿಪರ ಚಿಂತನೆ ಈಗಾಗಲೇ ಚರ್ಚಿಸಿರುವ ಎಳೆಗಳೇ ಇವೆ. ಆದರೆ ಇವುಗಳ ಹಿಂದಿನ ಬದ್ಧತೆ ಕಳಕಳಿ ತಲ್ಲಣ ಪ್ರಾಮಾಣಿಕತೆಗಳು ಲೇಖನಗಳಿಗೆ ಹೊಸ ಜೀವಂತಿಕೆಯನ್ನು ಹಾಯಿಸಿವೆ. ದಮನಿತ ಸಮುದಾಯದ ಪ್ರಾತಿನಿಧ್ಯ ಅವಾಹಿಸಿಕೊಂಡು ಹುಟ್ಟುವ ಆಕ್ಟಿವಿಸ್ಟ್ ಬರಹಗಳಲ್ಲಿ ಎದುರಾಳಿಯನ್ನು ಕಟಕಟೆಯಲ್ಲಿ ನಿಲ್ಲಿಸುವ ನಿಲುಮೆ ಸಾಮಾನ್ಯ. ವಿಶೇಷವೆಂದರೆ ಇಲ್ಲಿನ ಬರಹಗಳಲ್ಲಿ ಸ್ವವಿಮರ್ಶೆಯ ದನಿಯೂ ಸೇರಿರುವುದು. ಮೊದಲ ಲೇಖನವೇ ದಲಿತ ಮಧ್ಯಮವರ್ಗ ಮತ್ತು ದಲಿತ ಚಳವಳಿಗಳನ್ನು ಕುರಿತ ನಿಷ್ಠೂರವಾದ ಆತ್ಮವಿಮರ್ಶೆಯಿಂದ ಕೂಡಿದೆ. ಅಂಬೇಡ್ಕರರನ್ನು ದೈವವಾಗಿಸಿ ಅವರ ಚಿಂತನೆ ಮತ್ತು ಕ್ರಿಯಾಶೀಲತೆಗಳನ್ನು ಮರೆತಿರುವ ದಲಿತರ ಬಗ್ಗೆ ಇಲ್ಲಿ ಕೋಪವಿದೆ. ತಲ್ಲಣ ಮತ್ತು ಭಾವನಾತ್ಮಕತೆ ಪ್ರಧಾನವಾಗಿರುವ ಇಲ್ಲಿನ ಚಿಂತನೆ, ಅಧ್ಯಯನಶೀಲತೆ ಮತ್ತು ಅಂಕಿಅಂಶಗಳ ಬಲವನ್ನೂ ಪಡೆದುಕೊಂಡಿದೆ. ಕೆಲವು ದಲಿತ ಚಿಂತಕರನ್ನು ಆವರಿಸಿಕೊಂಡಿರುವ ಸೈದ್ಧಾಂತಿಕ ಜಡತೆ, ಪಾಂಥಿಕ ಸಂಕುಚಿತತೆ ಮತ್ತು ನಿರಾಳತೆಗಳು ಇಲ್ಲಿಲ್ಲ. ಬದಲಿಗೆ ಸಿದ್ಧಾಂತಗಳಿಗೆ ಕಟ್ಟುಗೊಳ್ಳದೆ ಅವುಗಳ ಮೂಲಕ ಹೊಸಕಾಲಕ್ಕೆ ಬೇಕಾದ ಚೌಕಟ್ಟು ರೂಪಿಸಿಕೊಳ್ಳುವ ಚಲನಶೀಲತೆ ಮತ್ತು ತೆರೆದಮನಸ್ಸಿದೆ; ಸಂಗಾತಿ ಚಿಂತನೆಗಳ ಅಥವಾ ಚಳುವಳಿಗಳ ಮುಂದೆ ತಾತ್ವಿಕ ಭಿನ್ನಮತವನ್ನು ಪ್ರಶ್ನೆರೂಪದಲ್ಲಿ ಮುಂದಿಟ್ಟು ಸಂವಾದ ಮಾಡಬಯಸುವ ಧಾಟಿಯಿದೆ. ಇದು ಸದ್ಯ ಜರೂರಾಗಿರುವ ಪ್ರಜಾತಂತ್ರವಾದಿ ಕ್ರಮ ಕೂಡ. ಕರ್ನಾಟಕದಲ್ಲಿ ಪ್ರಜಾತಂತ್ರವಾದಿ ಮತ್ತು ಪ್ರಗತಿಪರ ಶಕ್ತಿಗಳು ಸಾಕಷ್ಟಿವೆ. ಆದರೆ ಅವು ಸೈದ್ಧಾಂತಿಕ ಭಿನ್ನತೆ ಮತ್ತು ಪಾಂಥಿಕವಾದ ಬಣರಾಜಕಾರಣದಲ್ಲಿ ಮುಳುಗಿ ಕೂಡಿಕಟ್ಟುವ ಬಂಧುತ್ವದ ಪರಿಭಾಷೆಯನ್ನೇ ಮರೆತುಬಿಟ್ಟಿವೆ. ಭಾರತದಲ್ಲಿ ಮಾರುಕಟ್ಟೆ ಸಂಸ್ಕøತಿಯ ಭಾಗವಾಗಿ ನವಫ್ಯಾಸಿಸಂ ಮೈದಳೆಯುತ್ತಿರುವ ಈ ಕಾಲದಲ್ಲಿ, ಜನಪರ ಸಿದ್ಧಾಂತ ಮತ್ತು ಚಳವಳಿಗಳು ಒಗ್ಗೂಡುವ ವಿಶಾಲ ರಾಜಕಾರಣ ರೂಪುಗೊಳ್ಳಬೇಕಿದೆ. ಇಂತಹ ಚಾರಿತ್ರಿಕ ಮತ್ತು ಸಂಕ್ರಮಣದ ಕಾಲಘಟ್ಟದಲ್ಲಿ ಈ ಕೃತಿ ಪ್ರಕಟವಾಗುತ್ತಿದ್ದು, ಇದು ಒಡಕಲು ಬಿಂ¨ಗಳಾಗಿರುವ ಚಳವಳಿ ಮತ್ತು ನಾಯಕತ್ವಗಳನ್ನು ಸಮಾನ ಆಶಯಕ್ಕಾಗಿ ಒಂದು ಹಾದಿಯ ಮೇಲೆ ತರುವ ಇರಾದೆಯನ್ನೂ ಹೊಂದಿದೆ.
ಅಂಬೇಡ್ಕರ್‍ವಾದದ ಹಿನ್ನೆಲೆಯಿಂದ ಹುಟ್ಟಿರುವ ಇಲ್ಲಿನ ಲೇಖನಗಳಲ್ಲಿ, ಭಾರತದ ದಲಿತರ ಕಷ್ಟಗಳು ಪ್ರಧಾನವಾಗಿ ಚರ್ಚಿತವಾಗಿರುವುದು ಸಹಜವೇ. ವಿಶೇಷವೆಂದರೆ, ಈ ಚರ್ಚೆಯು ಸಮಾಜದ ಎಲ್ಲಾ ದಮನಿತರ ನೋವಿಗೆ ಮಿಡಿಯುವಂತೆ ತನ್ನನ್ನು ವಿಸ್ತರಿಸಿಕೊಳ್ಳುವುದು. ಕೋಮುವಾದವು ದಲಿತರ ಸಮಸ್ಯೆಯಲ್ಲ, ಮಾರುಕಟ್ಟೆ ಪ್ರಣೀತ ಅಭಿವೃದ್ಧಿ ಪರಿಕಲ್ಪನೆಯ ಬಲಿಪಶುಗಳಾಗಿರುವ ಆದಿವಾಸಿಗಳ ಕಷ್ಟ ನಮ್ಮದಲ್ಲ, ಪುರುಷವಾದವು ಮಹಿಳೆಯರ ಸಮಸ್ಯೆ- ಎಂದೆಲ್ಲ ಭಾವಿಸುವ ಬಿಡಿತನದ ಆಲೋಚನೆ ನಮ್ಮ ನಡುವಿದೆ. ನಮಗೆ ರಾಜಕೀಯ ಅಧಿಕಾರ ಸಿಗುವುದಾದರೆ ರಾಜಕೀಯ ಪಕ್ಷಗಳಲ್ಲಿ ಅಸ್ಪøಶ್ಯತೆ ಆಚರಿಸಬೇಕಿಲ್ಲ ಎಂಬ ಅವಕಾಶವಾದವೂ ಇದೆ. ಈ ಹಿನ್ನೆಲೆಯಲ್ಲಿ ದಲಿತರು ಬಡವರು ಮಹಿಳೆಯರು ಕಾರ್ಮಿಕರು ಹಾಗೂ ಮುಸ್ಲಿಮರನ್ನು ಒಳಗೊಂಡಂತೆ ಸಮಸ್ತ ದಮನಿತರನ್ನು ತನ್ನವರೆಂದು ಭಾವಿಸುವ ಇಡಿತನದ  ವಿಶಾಲವಾದ ಗ್ರಹಿಕೆ ಈ ಕೃತಿಯಲ್ಲಿದೆ. ಇದನ್ನು ಅಂಬೇಡ್ಕರ್‍ವಾದ ಮತ್ತು ದಲಿತ ಚಿಂತನೆಯ ಹೊಸ ರೂಪಾಂತರ ಮತ್ತು ಸಮಕಾಲೀನ ವಿಸ್ತರಣೆ ಎನ್ನಬಹುದು. ಇಂತಹ ವಿಸ್ತರಣೆ ಮತ್ತು ರೂಪಾಂತರ ಮೊದಲಿಂದಲೂ ದೇವನೂರರ ಬರಹಗಳಲ್ಲಿದೆ. ಚಳುವಳಿಯ ಹೊಸ ಪ್ರತಿಭೆಗಳಾದ ಜಿಗ್ನೇಶ್, ಕನ್ಹಯ್ಯ ಕುಮಾರ್ ಹಾಗೂ ರೋಹಿತ್ ವೇಮುಲಾ ಅವರಲ್ಲೂ ಇದೆ. ಸ್ವವಿಮರ್ಷೆ ಮತ್ತು ಸಮಕಾಲೀನ ಆಶೋತ್ತರಗಳಿಗಾಗಿ ಪಡೆಯುವ ಈ ಮರುಹುಟ್ಟು ಮತ್ತು ವಿಸ್ತರಣೆಯ ರೂಪಾರಂತವು, ಕರ್ನಾಟಕದ ಚಳವಳಿಗಳಿಗೂ ದಮನಿತ ಸಮುದಾಯಗಳಿಗೂ ಅಗತ್ಯವಾಗಿದೆ. ನಿರ್ದಿಷ್ಟ ಸಿದ್ಧಾಂತದ ಹಿನ್ನೆಲೆಯುಳ್ಳ ಯಾವುದೇ ಒಂದು ಚಳುವಳಿ ಈಗ ಸಾಲುತ್ತಿಲ್ಲ. ಬದಲಿಗೆ ಸ್ವವಿಮರ್ಶೆ ಮತ್ತು ಸಮಾನ ಆಶಯದಲ್ಲಿ ಒಗ್ಗೂಡುವ ಸಹಮತದ ಚಳುವಳಿ ರಾಜಕಾರಣ, ನಮ್ಮ ಕಾಲದ ಪರ್ಯಾಯ ಹಾದಿಯಾಗುವಂತೆ ತೋರುತ್ತಿದೆ. ನೀಲಿ ಮತ್ತು ಕೆಂಪುಗಳು ತಮ್ಮ ಹಳೇ ವ್ಯಾಜ್ಯಗಳನ್ನು ಬದಿಗಿಟ್ಟು, ಒಗ್ಗೂಡಿ ಹೊಸ ಭಾರತ ಕಟ್ಟಬಲ್ಲವು ಎಂದು ಆಸೆ ಹುಟ್ಟಿಸುತ್ತಿವೆ. ಇವುಗಳೊಟ್ಟಿಗೆ ಭಾರತದ ಸಮಸ್ತ ಜಾತಿ-ಮತ-ಧರ್ಮಗಳಲ್ಲಿರುವ ಮಹಿಳೆಯರ ನಸುಗೆಂಪು ಸೇರಿಕೊಳ್ಳಬೇಕಾದ ಮೂರನೇ ಬಣ್ಣವಾಗಿದೆ. ಇದಕ್ಕೆ ಪೂರಕವೆಂಬಂತೆ ಈ ಕೃತಿಯಲ್ಲಿ ಸ್ತ್ರೀವಿಮೋಚನೆಯ ಪ್ರಸ್ತಾಪಗಳಿವೆ. ಚರಿತ್ರೆಯಿಂದ ಪಾಠ ಕಲಿಯುವ ಮಾತು ಸಾಕಷ್ಟು ಸವೆದುಹೋಗಿದೆ; ಚಳುವಳಿಗಳಿಗೆ ಅನೇಕ ಸಲ ಚಲನಶೀಲ ದೃಷ್ಟಿಕೋನದಲ್ಲಿ ಮರುವ್ಯಾಖ್ಯಾನ ಪಡೆಯದ ಚರಿತ್ರೆಯೇ ಕಾಲ್ತೊಡಕಾಗುವಷ್ಟು ಭಾರವಾಗಿದೆ. ಈ ದೃಷ್ಟಿಯಿಂದ ಚರಿತ್ರೆಯ ಹ್ಯಾಂಗೋವರುಗಳಿಂದ ಬಿಡಿಸಿಕೊಂಡು ಮುನ್ನಡೆಯುವ ಚಲನಶೀಲತೆಯನ್ನು ಈ ಕೃತಿ ತೋರುತ್ತಿದೆ.
– ರಹಮತ್ ತರೀಕೆರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...