Homeಅಂಕಣಗಳುತಲ್ಲಣದ ಜೀವನಾನುಭವಗಳ ಅನಾವರಣ

ತಲ್ಲಣದ ಜೀವನಾನುಭವಗಳ ಅನಾವರಣ

- Advertisement -
ಇತ್ತೀಚಿನ ದಿನಗಳಲ್ಲಿ ವರ್ತಮಾನದ ಸಾಮಾಜಿಕ ಆಗುಹೋಗುಗಳ ಬಗ್ಗೆ ನಿರಂತರವಾಗಿ ಬರೆಯುತ್ತಿರುವ ವಿಕಾಸ್ ಮೌರ್ಯ, ಹೊಸತಲೆಮಾರಿನ ಪ್ರಖರ ಚಿಂತಕರಲ್ಲೊಬ್ಬರು. ಇದಕ್ಕೆ ಪುರಾವೆಯೆಂದರೆ ಕಳೆದ ಐದಾರು ವರ್ಷಗಳಿಂದ ಅವರು ಬರೆದ ಇಲ್ಲಿನ ಲೇಖನಗಳು. ಎಲ್ಲವೂ ಪುಟ್ಟ ಪುಟ್ಟ ಲೇಖನಗಳು; ಸರಳವೂ ನೇರವೂ ಸಂವಹನಶೀಲವೂ ಆದ ಭಾಷೆ; ಸಮಾಜ ಬದಲಾವಣೆಯ ದಿಕ್ಕಿನಲ್ಲಿ ಚಿಂತಿಸಲು ಮತ್ತು ಕ್ರಿಯಾಶೀಲರಾಗಲು ಕರೆಗೊಡುವ ಸಂಕಲ್ಪ ತುಂಬಿದ ವಾಕ್ಯಗಳು; ಪ್ರಾಮಾಣಿಕವಾದ ವೇದನೆಯನ್ನೂ ಆಕ್ರೋಶವನ್ನು ಚಿಂತನೆಯಾಗಿ ಮಾರ್ಪಡಿಸುವ ಸಂಯಮದ ಶೈಲಿ; ಎಚ್ಚರ ಮತ್ತು ಕನಸುಗಾರಿಕೆಯಿಂದ ಕೂಡಿದ ತರುಣ ಮನಸ್ಸು; ವರ್ತಮಾನದ ಇಂಡಿಯಾ ದಲಿತರನ್ನು ನಡೆಸಿಕೊಳ್ಳುತ್ತಿರುವ ಭೀಷಣ ವಾಸ್ತವವನ್ನು ಕಾಣಿಸುವಿಕೆ-ಇವು ಲೇಖನಗಳ ಹಿಂದಿರುವ ಮುಖ್ಯ ಚಹರೆಗಳು. ಈ ಲೇಖನಗಳಲ್ಲಿ ಕನ್ನಡ ಪ್ರಗತಿಪರ ಚಿಂತನೆ ಈಗಾಗಲೇ ಚರ್ಚಿಸಿರುವ ಎಳೆಗಳೇ ಇವೆ. ಆದರೆ ಇವುಗಳ ಹಿಂದಿನ ಬದ್ಧತೆ ಕಳಕಳಿ ತಲ್ಲಣ ಪ್ರಾಮಾಣಿಕತೆಗಳು ಲೇಖನಗಳಿಗೆ ಹೊಸ ಜೀವಂತಿಕೆಯನ್ನು ಹಾಯಿಸಿವೆ. ದಮನಿತ ಸಮುದಾಯದ ಪ್ರಾತಿನಿಧ್ಯ ಅವಾಹಿಸಿಕೊಂಡು ಹುಟ್ಟುವ ಆಕ್ಟಿವಿಸ್ಟ್ ಬರಹಗಳಲ್ಲಿ ಎದುರಾಳಿಯನ್ನು ಕಟಕಟೆಯಲ್ಲಿ ನಿಲ್ಲಿಸುವ ನಿಲುಮೆ ಸಾಮಾನ್ಯ. ವಿಶೇಷವೆಂದರೆ ಇಲ್ಲಿನ ಬರಹಗಳಲ್ಲಿ ಸ್ವವಿಮರ್ಶೆಯ ದನಿಯೂ ಸೇರಿರುವುದು. ಮೊದಲ ಲೇಖನವೇ ದಲಿತ ಮಧ್ಯಮವರ್ಗ ಮತ್ತು ದಲಿತ ಚಳವಳಿಗಳನ್ನು ಕುರಿತ ನಿಷ್ಠೂರವಾದ ಆತ್ಮವಿಮರ್ಶೆಯಿಂದ ಕೂಡಿದೆ. ಅಂಬೇಡ್ಕರರನ್ನು ದೈವವಾಗಿಸಿ ಅವರ ಚಿಂತನೆ ಮತ್ತು ಕ್ರಿಯಾಶೀಲತೆಗಳನ್ನು ಮರೆತಿರುವ ದಲಿತರ ಬಗ್ಗೆ ಇಲ್ಲಿ ಕೋಪವಿದೆ. ತಲ್ಲಣ ಮತ್ತು ಭಾವನಾತ್ಮಕತೆ ಪ್ರಧಾನವಾಗಿರುವ ಇಲ್ಲಿನ ಚಿಂತನೆ, ಅಧ್ಯಯನಶೀಲತೆ ಮತ್ತು ಅಂಕಿಅಂಶಗಳ ಬಲವನ್ನೂ ಪಡೆದುಕೊಂಡಿದೆ. ಕೆಲವು ದಲಿತ ಚಿಂತಕರನ್ನು ಆವರಿಸಿಕೊಂಡಿರುವ ಸೈದ್ಧಾಂತಿಕ ಜಡತೆ, ಪಾಂಥಿಕ ಸಂಕುಚಿತತೆ ಮತ್ತು ನಿರಾಳತೆಗಳು ಇಲ್ಲಿಲ್ಲ. ಬದಲಿಗೆ ಸಿದ್ಧಾಂತಗಳಿಗೆ ಕಟ್ಟುಗೊಳ್ಳದೆ ಅವುಗಳ ಮೂಲಕ ಹೊಸಕಾಲಕ್ಕೆ ಬೇಕಾದ ಚೌಕಟ್ಟು ರೂಪಿಸಿಕೊಳ್ಳುವ ಚಲನಶೀಲತೆ ಮತ್ತು ತೆರೆದಮನಸ್ಸಿದೆ; ಸಂಗಾತಿ ಚಿಂತನೆಗಳ ಅಥವಾ ಚಳುವಳಿಗಳ ಮುಂದೆ ತಾತ್ವಿಕ ಭಿನ್ನಮತವನ್ನು ಪ್ರಶ್ನೆರೂಪದಲ್ಲಿ ಮುಂದಿಟ್ಟು ಸಂವಾದ ಮಾಡಬಯಸುವ ಧಾಟಿಯಿದೆ. ಇದು ಸದ್ಯ ಜರೂರಾಗಿರುವ ಪ್ರಜಾತಂತ್ರವಾದಿ ಕ್ರಮ ಕೂಡ. ಕರ್ನಾಟಕದಲ್ಲಿ ಪ್ರಜಾತಂತ್ರವಾದಿ ಮತ್ತು ಪ್ರಗತಿಪರ ಶಕ್ತಿಗಳು ಸಾಕಷ್ಟಿವೆ. ಆದರೆ ಅವು ಸೈದ್ಧಾಂತಿಕ ಭಿನ್ನತೆ ಮತ್ತು ಪಾಂಥಿಕವಾದ ಬಣರಾಜಕಾರಣದಲ್ಲಿ ಮುಳುಗಿ ಕೂಡಿಕಟ್ಟುವ ಬಂಧುತ್ವದ ಪರಿಭಾಷೆಯನ್ನೇ ಮರೆತುಬಿಟ್ಟಿವೆ. ಭಾರತದಲ್ಲಿ ಮಾರುಕಟ್ಟೆ ಸಂಸ್ಕøತಿಯ ಭಾಗವಾಗಿ ನವಫ್ಯಾಸಿಸಂ ಮೈದಳೆಯುತ್ತಿರುವ ಈ ಕಾಲದಲ್ಲಿ, ಜನಪರ ಸಿದ್ಧಾಂತ ಮತ್ತು ಚಳವಳಿಗಳು ಒಗ್ಗೂಡುವ ವಿಶಾಲ ರಾಜಕಾರಣ ರೂಪುಗೊಳ್ಳಬೇಕಿದೆ. ಇಂತಹ ಚಾರಿತ್ರಿಕ ಮತ್ತು ಸಂಕ್ರಮಣದ ಕಾಲಘಟ್ಟದಲ್ಲಿ ಈ ಕೃತಿ ಪ್ರಕಟವಾಗುತ್ತಿದ್ದು, ಇದು ಒಡಕಲು ಬಿಂ¨ಗಳಾಗಿರುವ ಚಳವಳಿ ಮತ್ತು ನಾಯಕತ್ವಗಳನ್ನು ಸಮಾನ ಆಶಯಕ್ಕಾಗಿ ಒಂದು ಹಾದಿಯ ಮೇಲೆ ತರುವ ಇರಾದೆಯನ್ನೂ ಹೊಂದಿದೆ.
ಅಂಬೇಡ್ಕರ್‍ವಾದದ ಹಿನ್ನೆಲೆಯಿಂದ ಹುಟ್ಟಿರುವ ಇಲ್ಲಿನ ಲೇಖನಗಳಲ್ಲಿ, ಭಾರತದ ದಲಿತರ ಕಷ್ಟಗಳು ಪ್ರಧಾನವಾಗಿ ಚರ್ಚಿತವಾಗಿರುವುದು ಸಹಜವೇ. ವಿಶೇಷವೆಂದರೆ, ಈ ಚರ್ಚೆಯು ಸಮಾಜದ ಎಲ್ಲಾ ದಮನಿತರ ನೋವಿಗೆ ಮಿಡಿಯುವಂತೆ ತನ್ನನ್ನು ವಿಸ್ತರಿಸಿಕೊಳ್ಳುವುದು. ಕೋಮುವಾದವು ದಲಿತರ ಸಮಸ್ಯೆಯಲ್ಲ, ಮಾರುಕಟ್ಟೆ ಪ್ರಣೀತ ಅಭಿವೃದ್ಧಿ ಪರಿಕಲ್ಪನೆಯ ಬಲಿಪಶುಗಳಾಗಿರುವ ಆದಿವಾಸಿಗಳ ಕಷ್ಟ ನಮ್ಮದಲ್ಲ, ಪುರುಷವಾದವು ಮಹಿಳೆಯರ ಸಮಸ್ಯೆ- ಎಂದೆಲ್ಲ ಭಾವಿಸುವ ಬಿಡಿತನದ ಆಲೋಚನೆ ನಮ್ಮ ನಡುವಿದೆ. ನಮಗೆ ರಾಜಕೀಯ ಅಧಿಕಾರ ಸಿಗುವುದಾದರೆ ರಾಜಕೀಯ ಪಕ್ಷಗಳಲ್ಲಿ ಅಸ್ಪøಶ್ಯತೆ ಆಚರಿಸಬೇಕಿಲ್ಲ ಎಂಬ ಅವಕಾಶವಾದವೂ ಇದೆ. ಈ ಹಿನ್ನೆಲೆಯಲ್ಲಿ ದಲಿತರು ಬಡವರು ಮಹಿಳೆಯರು ಕಾರ್ಮಿಕರು ಹಾಗೂ ಮುಸ್ಲಿಮರನ್ನು ಒಳಗೊಂಡಂತೆ ಸಮಸ್ತ ದಮನಿತರನ್ನು ತನ್ನವರೆಂದು ಭಾವಿಸುವ ಇಡಿತನದ  ವಿಶಾಲವಾದ ಗ್ರಹಿಕೆ ಈ ಕೃತಿಯಲ್ಲಿದೆ. ಇದನ್ನು ಅಂಬೇಡ್ಕರ್‍ವಾದ ಮತ್ತು ದಲಿತ ಚಿಂತನೆಯ ಹೊಸ ರೂಪಾಂತರ ಮತ್ತು ಸಮಕಾಲೀನ ವಿಸ್ತರಣೆ ಎನ್ನಬಹುದು. ಇಂತಹ ವಿಸ್ತರಣೆ ಮತ್ತು ರೂಪಾಂತರ ಮೊದಲಿಂದಲೂ ದೇವನೂರರ ಬರಹಗಳಲ್ಲಿದೆ. ಚಳುವಳಿಯ ಹೊಸ ಪ್ರತಿಭೆಗಳಾದ ಜಿಗ್ನೇಶ್, ಕನ್ಹಯ್ಯ ಕುಮಾರ್ ಹಾಗೂ ರೋಹಿತ್ ವೇಮುಲಾ ಅವರಲ್ಲೂ ಇದೆ. ಸ್ವವಿಮರ್ಷೆ ಮತ್ತು ಸಮಕಾಲೀನ ಆಶೋತ್ತರಗಳಿಗಾಗಿ ಪಡೆಯುವ ಈ ಮರುಹುಟ್ಟು ಮತ್ತು ವಿಸ್ತರಣೆಯ ರೂಪಾರಂತವು, ಕರ್ನಾಟಕದ ಚಳವಳಿಗಳಿಗೂ ದಮನಿತ ಸಮುದಾಯಗಳಿಗೂ ಅಗತ್ಯವಾಗಿದೆ. ನಿರ್ದಿಷ್ಟ ಸಿದ್ಧಾಂತದ ಹಿನ್ನೆಲೆಯುಳ್ಳ ಯಾವುದೇ ಒಂದು ಚಳುವಳಿ ಈಗ ಸಾಲುತ್ತಿಲ್ಲ. ಬದಲಿಗೆ ಸ್ವವಿಮರ್ಶೆ ಮತ್ತು ಸಮಾನ ಆಶಯದಲ್ಲಿ ಒಗ್ಗೂಡುವ ಸಹಮತದ ಚಳುವಳಿ ರಾಜಕಾರಣ, ನಮ್ಮ ಕಾಲದ ಪರ್ಯಾಯ ಹಾದಿಯಾಗುವಂತೆ ತೋರುತ್ತಿದೆ. ನೀಲಿ ಮತ್ತು ಕೆಂಪುಗಳು ತಮ್ಮ ಹಳೇ ವ್ಯಾಜ್ಯಗಳನ್ನು ಬದಿಗಿಟ್ಟು, ಒಗ್ಗೂಡಿ ಹೊಸ ಭಾರತ ಕಟ್ಟಬಲ್ಲವು ಎಂದು ಆಸೆ ಹುಟ್ಟಿಸುತ್ತಿವೆ. ಇವುಗಳೊಟ್ಟಿಗೆ ಭಾರತದ ಸಮಸ್ತ ಜಾತಿ-ಮತ-ಧರ್ಮಗಳಲ್ಲಿರುವ ಮಹಿಳೆಯರ ನಸುಗೆಂಪು ಸೇರಿಕೊಳ್ಳಬೇಕಾದ ಮೂರನೇ ಬಣ್ಣವಾಗಿದೆ. ಇದಕ್ಕೆ ಪೂರಕವೆಂಬಂತೆ ಈ ಕೃತಿಯಲ್ಲಿ ಸ್ತ್ರೀವಿಮೋಚನೆಯ ಪ್ರಸ್ತಾಪಗಳಿವೆ. ಚರಿತ್ರೆಯಿಂದ ಪಾಠ ಕಲಿಯುವ ಮಾತು ಸಾಕಷ್ಟು ಸವೆದುಹೋಗಿದೆ; ಚಳುವಳಿಗಳಿಗೆ ಅನೇಕ ಸಲ ಚಲನಶೀಲ ದೃಷ್ಟಿಕೋನದಲ್ಲಿ ಮರುವ್ಯಾಖ್ಯಾನ ಪಡೆಯದ ಚರಿತ್ರೆಯೇ ಕಾಲ್ತೊಡಕಾಗುವಷ್ಟು ಭಾರವಾಗಿದೆ. ಈ ದೃಷ್ಟಿಯಿಂದ ಚರಿತ್ರೆಯ ಹ್ಯಾಂಗೋವರುಗಳಿಂದ ಬಿಡಿಸಿಕೊಂಡು ಮುನ್ನಡೆಯುವ ಚಲನಶೀಲತೆಯನ್ನು ಈ ಕೃತಿ ತೋರುತ್ತಿದೆ.
– ರಹಮತ್ ತರೀಕೆರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...