Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ; ಭೌತಶಾಸ್ತ್ರದ ಪ್ರೊಫೆಸರ್‌ರ ಹೋರಾಟದ ಹಾದಿ

ಪುಸ್ತಕ ಪರಿಚಯ; ಭೌತಶಾಸ್ತ್ರದ ಪ್ರೊಫೆಸರ್‌ರ ಹೋರಾಟದ ಹಾದಿ

- Advertisement -
- Advertisement -

ಎಚ್.ಆರ್. ರಾಮಕೃಷ್ಣ ರಾವ್ ಬೆಂಗಳೂರಿನ ಮಾವಳ್ಳಿಯಲ್ಲಿ ಹುಟ್ಟಿ, ಹೊಳಲ್ಕೆರೆಯಲ್ಲಿ ಬೆಳೆದು ಬೆಂಗಳೂರಿನ ವೈಜ್ಞಾನಿಕ ಮನೋಭಾವದ ಯುವ ಚೇತನಗಳಿಗೆ ದಾರಿದೀಪವಾದವರು.

ತಂದೆ ಎಚ್.ವಿ. ರಂಗರಾವ್, ತಾಯಿ ರಾಧಮ್ಮ ಅವರಿಂದ ಬಂದ ಜೀವನಶಿಸ್ತು, ಕನ್ನಡ ಮತ್ತು ಆಂಗ್ಲಭಾಷಾ ಪ್ರೌಢಿಮೆ, ಕಷ್ಟಸಹಿಷ್ಣು ಜೀವನ ಶ್ರದ್ಧೆ, ತಾಯಿಯ ಅಂತಃಕರಣ ಅರಿತ ಮಾತೃಸೇವಾ ನಿಷ್ಠತೆ, ತನ್ನ ಅರಿವನ್ನು ವಿಕಸಿಸಿಕೊಳ್ಳುವ ಜಾಗೃತ ಮನಸ್ಸಿನಿಂದ ರೂಪುಗೊಂಡವರು ಎಚ್.ಆರ್.ಆರ್. ಅವರು ಹೊಳಲ್ಕೆರೆಯಲ್ಲಿ ಬಾಲ್ಯಕಳೆದು, ಚಿತ್ರದುರ್ಗದಲ್ಲಿ ವಾರಾನ್ನದ ಹುಡುಗನಾಗಿ ಓದುವಾಗಲೇ ಗಣಿತ, ವಿಜ್ಞಾನ ಶಿಕ್ಷಕರಾದವರು. ಅವರ ವಿದ್ಯಾ ಶ್ರದ್ಧೆಯ ಮನೋಸ್ಥೈರ್ಯ ವಿದ್ಯಾರ್ಥಿಗಳಿಗೆ ಒಂದು ಆದರ್ಶ.

ಇಂಟರ್ ಮೀಡಿಯಟ್ ವಿದ್ಯಾಭ್ಯಾಸಕ್ಕೆ ನ್ಯಾಷನಲ್ ಕಾಲೇಜು ಸೇರಲು ಕಾರಣವಾಗಿ, ಭೌತಶಾಸ್ತ್ರದ ಬಗ್ಗೆ ಆಸಕ್ತಿಯನ್ನುಂಟು ಮಾಡಿದವರು ಹೆಚ್. ನರಸಿಂಹಯ್ಯ. ಅವರ ಬಗ್ಗೆ ಎಚ್.ಆರ್.ಆರ್‌ಗೆ ಅಪಾರ ಗೌರವ. ಬೇಂದ್ರೆಯವರು ಹೇಳುವ ’ಶುದ್ಧನಿದ್ದವ ಗೆದ್ದ’ ಎಂಬ ನುಡಿಯಂತೆ ಸತ್ಯ, ಧರ್ಮ, ನೈತಿಕ ನಿಲುವುಗಳಿಂದ ಜೀವನ ಪಯಣದಲ್ಲಿ ಗೆದ್ದ ಎಚ್.ಆರ್.ಆರ್. ಜನಸಾಮಾನ್ಯರಿಗೆ ಒಂದು ಮಾದರಿ.

ಅವರು ಬಿ.ಎಸ್.ಸಿ ಓದುವಾಗ ಸ್ಕೌಟ್ಸ್‌ಗೆ ಸೇರಿಕೊಂಡರು. ಅಲ್ಲಿ ನೀಡಿದ ಹ್ಯಾಮ್‌ರೇಡಿಯೊ ಪ್ರಾತ್ಯಕ್ಷಿಕೆಯನ್ನು ಆಸಕ್ತಿಯಿಂದ ತಿಳಿದುಕೊಂಡರು. ಸಂಪರ್ಕ ಮಾಧ್ಯಮಕ್ಕೆ ಮೋರ್‍ಸ್‌ಕೋಡ್ ಬಳಸುವುದರಲ್ಲಿ ಆಸಕ್ತಿ ಹೊಂದಿದರು. ಸೆಂಟ್ರಲ್ ಟೆಲಿಗ್ರಾಫ್ ಆಫೀಸಿಗೆ ಹೋಗಿ ಪರಿಚಯ ಮಾಡಿಕೊಂಡು ಮೋರ್‍ಸ್‌ಕೋಡ್ ಬಳಸಿ ಸಂದೇಶ ಕಳುಹಿಸುವುದನ್ನು ಹಾಗೂ ಸ್ವೀಕರಿಸುವುದನ್ನು ಕಲಿತುಕೊಂಡರು. ಬೇಸಿಗೆ ರಜೆಯಲ್ಲಿ ಸೆಂಟ್ರಲ್ ಟೆಲಿಗ್ರಾಫ್ ಆಫೀಸಿಗೆ ಹೋಗಿ ಅಲ್ಲಿ ಸಂದೇಶ ಸ್ವೀಕರಿಸುವ ಕೆಲಸ ಮಾಡಿ ವಾರಕ್ಕೆ ಹತ್ತು ರೂಪಾಯಿ ಸಂಪಾದಿಸುತ್ತಿದ್ದರು. ವಿದ್ಯಾರ್ಥಿದೆಸೆಯಲ್ಲಿ ತನ್ನ ಬೌದ್ಧಿಕ ಪರಿಣತಿಯಿಂದ ಹಣ ಸಂಪಾದಿಸುತ್ತಿದ್ದ ಅವರ ಕ್ರಿಯಾಶೀಲ ಬೌದ್ಧಿಕ ಚತುರತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ ಬೆಳಕು.

ತಂದೆಯ ಮರಣದ ನಂತರ ಓದು ಮುಂದುವರಿಸಲಾಗಲಿಲ್ಲ. ಆಗ ಪೋಸ್ಟ್‌ಮಾಸ್ಟರ್ ಜನರಲ್‌ಗೆ ಪತ್ರ ಬರೆದು, ತನ್ನ ಟೆಲಿಗ್ರಾಫ್ ಅನುಭವ ತಿಳಿಸಿ ಪೋಸ್ಟ್‌ಮ್ಯಾನ್ ಕೆಲಸ ಪಡೆದರು. ಅದು ನಿರುದ್ಯೋಗಿ ಯುವಕರಿಗೆ ಅವರಿಂದ ದೊರೆಯುವ ಅನುಕರಣೀಯ ಸಾಹಸ. ಅದು ಚೆನ್ನಾಗಿ ಗ್ರಂಥದಲ್ಲಿ ನಿರೂಪಿತವಾಗಿದೆ.

ಎಚ್.ಆರ್.ಆರ್. ಅವರು ತಾನು ಭೌತವಿಜ್ಞಾನದಲ್ಲಿ ಎಂ.ಎಸ್ಸಿ ಮಾಡಬೇಕೆಂಬ ಹಿರಿಯ ಬಯಕೆ ಹೊಂದಿದ್ದರು. ಕೆಲಸ ಮಾಡುತ್ತ ಭೌತವಿಜ್ಞಾನದ ಅತ್ಯುತ್ತಮ ಸಂಶೋಧನಾ ಪುಸ್ತಕಗಳನ್ನು ಕೊಂಡು ಅಧ್ಯಯನ ಮಾಡುತ್ತ ತಮ್ಮ ಮನದ ಗುರಿಯತ್ತ ದಾಪುಗಾಲು ಹಾಕುತ್ತಿದ್ದರು. ಅವರಿಗೆ ಮದುವೆ ಆಗಿ ಮಕ್ಕಳಿದ್ದರೂ ವಿದ್ಯಾದಾಹದಿಂದ ಖಾಯಂ ಸರ್ಕಾರಿ ಪೋಸ್ಟ್‌ಮ್ಯಾನ್ ಕೆಲಸ ಬಿಟ್ಟರು. ತಮಗೆ ಪ್ರೋತ್ಸಾಹ, ಪತ್ನಿಯ ಸಹಕಾರದಿಂದ ಎಂ.ಎಸ್ಸಿ ವಿದ್ಯಾರ್ಥಿಯಾದರು. ತನ್ನ ಭೌತವಿಜ್ಞಾನದ ಪರಿಣತ ಜ್ಞಾನವನ್ನು ಪ್ರಾಧ್ಯಾಪಕರ ಸಮಿತಿ ಮುಂದೆ ಸಮರ್ಥವಾಗಿ ಮಂಡಿಸಿ ಸೀಟ್ ಪಡೆದರು.

ಭೌತವಿಜ್ಞಾನದ ಪ್ರಾಧ್ಯಾಪಕರಾಗಿ ಸಂತ ಜೋಸೆಫ್‌ರ ಕಾಲೇಜಿನಲ್ಲಿ, ಆಚಾರ್ಯ ಪಾಠಶಾಲೆಯಲ್ಲಿ ಕೆಲಸ ಮಾಡಿ ಆತ್ಮಾನಂದದ ಸಾರ್ಥಕ ಶಿಕ್ಷಕರಾದರು. ಅನಂತರ ಕ್ರೈಸ್ಟ್ ಕಾಲೇಜಿಗೆ ಸೇರಿ, ಆ ಸಂಸ್ಥೆಯನ್ನು ಕಟ್ಟಿ ಬೆಳೆಸಲು ಸಹಾಯ ಮಾಡಿದರು. ಅಲ್ಲಿ ಚಿ. ಶ್ರೀನಿವಾಸರಾಜು ಅವರ ಜೊತೆಗೂಡಿ ’ಕನ್ನಡ ಸಂಘ’ದ ಮುಖಾಂತರ ಕನ್ನಡ ವಾತಾವರಣ ಸೃಷ್ಟಿಸಿದರು. ಆ ಕಾಲೇಜಿನ ರೆಕ್ಟರ್ ಅವರಿಗೆ ಕಾಲೇಜಿನ ಲೋಗೋದಲ್ಲಿ ಕನ್ನಡದಲ್ಲಿ ’ಕ್ರೈಸ್ಟ್’ ಕಾಲೇಜ್ ಎಂದು ಸೇರಿಸಲು ಧೈರ್ಯವಾಗಿ ಹೇಳಿ, ಅದು ಆಗುವಂತೆ ಮಾಡಿದರು. ಅದು ಅವರಲ್ಲಿಯ ಕನ್ನಡ ಉಳಿಸಿ ಬೆಳೆಸುವ ಕ್ರಿಯಾಶೀಲ ನಡೆಯ ಕನ್ನಡತನದ ಪ್ರತೀಕ.

ಅವರು ಸಂಚಾರಿ ಟೆಲಿಸ್ಕೋಪ್‌ನಿಂದ ವಿದ್ಯಾರ್ಥಿಗಳಿಗೆ, ಜನಸಾಮಾನ್ಯರಿಗೆ ಆಕಾಶದ ವೀಕ್ಷಣೆಯ ಅದ್ಭುತ ನೋಟ ಮನಗಾಣಿಸಿದರು. ಎಚ್.ಆರ್.ಆರ್. ಅವರು ಕ್ರೈಸ್ಟ್ ಕಾಲೇಜಿನಿಂದ ನಿವೃತ್ತರಾದ ಮೇಲೆ ಇಂಟರ್ ಮೀಡಿಯಟ್ ಕಾಲೇಜ್ ಸಹಪಾಟಿ ಪಾಂಡು ಕೋರಿಕೆಯಂತೆ, ಅವರು ನಡೆಸುತ್ತಿದ್ದ ಆರ್.ವಿ. ಕಾಲೇಜಿನ ಹದಗೆಟ್ಟ ಪಾಠ ಪ್ರವಚನ, ವಿದ್ಯಾರ್ಥಿ ಶಿಕ್ಷಕರ ನಡೆಯನ್ನು ಶಿಸ್ತಿಗೆ ಒಳಪಡಿಸಿದರು. ಆ ಕೆಲಸವನ್ನು ನಿಸ್ವಾರ್ಥ ಮನೋಭಾವದಿಂದ ಮಾಡಿ ಆ ಕಾಲೇಜು ನಿಜ ಶಿಕ್ಷಣ ನೆಲೆಯಾಗುವಂತೆ ಮಾಡಿದರು. ಆ ಜ್ಞಾನದಾಹ, ವಿದ್ಯಾರ್ಥಿ ಮತ್ತು ಶಿಕ್ಷಕರ ಬಗೆಗಿನ ವಿಶ್ವಾಸ, ಆತ್ಮೀಯ ಕ್ರಿಯಾಶೀಲ ನಡೆ ವಿವರಿಸಿದರೆ ಅದರ ರುಚಿ ಕೆಡುತ್ತದೆ. ಅದನ್ನು ಕಲ್ಗುಂಡಿ ನವೀನ್ ಅವರ ನಿರೂಪಣೆಯಲ್ಲಿಯೇ ಓದಿ ಸವಿಯಬೇಕು. ಅದು ಇಂದಿನ ಹಾಗೂ ಮುಂದಿನ ವಿದ್ಯಾಸಂಸ್ಥೆಗಳು, ಎಲ್ಲ ಶಿಕ್ಷಕರು ಅನುಸರಿಸಬೇಕಾದ ನಡೆಯಾಗಿದೆ. ಹಾಗಾಗಿ ಈ ಆತ್ಮಕಥೆ ಸತ್ಯದ ದಾಖಲೆಯಾಗಿ ’ತನ್ನ ಬಣ್ಣಿಸ ಬೇಡ, ಇದಿರ ಹಳಿಯಲು ಬೇಡ,’ ಎಂಬ ಬಸವಣ್ಣನ ನುಡಿಯಂತೆ, ಎಚ್ಚರದಿಂದ ಅಲುಗಿನ ಮೇಲೆ ನಡೆದು ಸಾಗಿದಂತಿದೆ. ಇಂತಹ ಜೀವನ ಪಥ ಅನುಕರಣೀಯ. ಇಂತಹ ಆತ್ಮಕತೆಗಳು ಕನ್ನಡದಲ್ಲಿ ಅಪರೂಪ.

ರಾಮಕೃಷ್ಣರಾವ್ ಅವರ ’ರಾಮನ್, ದ ನ್ಯಾಚುರಲ್ ಫಿಲಾಸಪರ್’ ಸಾಕ್ಷಚಿತ್ರ., ಸರ್ ಸಿ.ವಿ.ರಾಮನ್‌ರನ್ನು ಕಂಡು ಅನುಭವಿಸಿದ ಸುಖ, ಅವರ ಪ್ರಯೋಗಾಲಯದ ಅನುಭವಗಳು ಭೌತಶಾಸ್ತ್ರ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ. ಅವರ ರನ್ನಿಂಗ್ ಥ್ರೂ ದ ಸಿಸ್ಟಮ್ – ಪಠ್ಯೇತರ ಇಂಗ್ಲೀಷ್ ಪುಸ್ತಕ, ’ಕಲಾಂ ಮೇಷ್ಟು’ ಕನ್ನಡ ಪುಸ್ತಕ ಹಾಗೂ ಎಚ್.ಆರ್.ಆರ್.ಆರ್. ಅವರ ವಂಶಸ್ಥರಾದ ರಾಮಣ್ಣಯ್ಯ ತಾಳೆ ಲಿಪಿ ಮಾಡಿದ್ದ ’ಕರ್ಣಾಟಕ ಭಾಗವತ’, ಕೃತಿಗಳು ಉತ್ತಮ ಸಾಹಿತ್ಯ ಕೊಡುಗೆಗಳಾಗಿವೆ.

ಈ ಆತ್ಮಕತೆಯಲ್ಲಿ ಅವರ ಸಂದರ್ಶನ, ಅಪರೂಪದ ಪೋಟೋಗಳು ಇದ್ದು ಅವರ ನಡೆಯ ಖಚಿತತೆಗೆ ಸಾಕ್ಷಿಯಾತಿಗಿವೆ. ಕನ್ನಡ ಜನರ ಮನಸ್ಸಿನಿಂದ ಸುಲಭವಾಗಿ ಮರೆತು ಹೋಗಬಹುದಾಗಿದ್ದ ಎಚ್.ಆರ್.ಆರ್. ಎಂಬ ಓರ್ವ ಬೌದ್ಧಿಕ ಪರಿಣತನ, ಸಾಹಸಿಯುವಕನ, ಮಾಗಿದ ಪ್ರಾಧ್ಯಾಪಕನ ಜೀವನಾನುಭವ ಸಾರವನ್ನು ಪ್ರಕಟಿಸಿ ಉದಯಭಾನು ಕಲಾಸಂಘ ತುಂಬಾ ಉಪಯುಕ್ತ ಕೆಲಸ ಮಾಡಿದೆ.

ಈ ಆತ್ಮಕಥೆಯನ್ನು ತುಂಬಾ ನವಿರಾದ ಭಾಷೆಯಲ್ಲಿ ನಿರೂಪಿಸಿರುವ ಕಲ್ಗುಂಡಿ ನವೀನ್ ಕೂಡ ಅಭಿನಂದನೀಯ.

ಕೃತಿ : ಅಂಬಿಗಾ! ದಡ ಹಾಯಿಸು….
(ಭೌತ ವಿಜ್ಞಾನದ ಪಾಧ್ಯಾಪಕರಾದ ಎಚ್.ಆರ್. ರಾಮಕೃಷ್ಣ ರಾವ್ ಅವರ ಆತ್ಮಕಥೆ)
ನಿರೂಪಣೆ : ಕಲ್ಗುಂಡಿ ನವೀನ್
ಪುಟಗಳು : 216
ಬೆಲೆ : ರೂ.200/-
ಪ್ರಕಟಣೆ : ಉದಯಭಾನು ಕಲಾಸಂಘ, ಬೆಂಗಳೂರು.

ಡಾ. ಜಿ. ಕೃಷ್ಣಪ್ಪ

ಡಾ. ಜಿ. ಕೃಷ್ಣಪ್ಪ
’ಬೇಂದ್ರೆ’ ಕೃಷ್ಣಪ್ಪ ಎಂದೇ ಜನಪ್ರಿಯರಾಗಿ, ಬೇಂದ್ರೆ ಮತ್ತು ಕುವೆಂಪು ಸಾಹಿತ್ಯದ ಪರಿಚಾರಕಾರಾಗಿ, ವಿಮರ್ಶಕರಾಗಿ ಗುರುತಿಸಿಕೊಂಡಿದ್ದಾರೆ. ’ಹಾಡು ಹಕ್ಕಿ ಅಂಬಿಕಾತನಯದತ್ತ’, ’ನಾಕುತಂತಿ-ಒಂದು ಟಿಪ್ಪಣಿ’, ’ಹಸಿರು ಹಚ್ಚಿ ಚುಚ್ಚಿ’, ’ಶ್ರೀ ರಾಮಾಯಣದರ್ಶನಂ ಪಾತ್ರಗಳ ಕಥಾವಳಿ’, ’ಬೇಂದ್ರೆ ಕಾವ್ಯ: ಪದನಿರುಕ್ತ’ ಕೃಷ್ಣಪ್ಪನವರ ಪ್ರಕಟಿತ ಪುಸ್ತಕಗಳಲ್ಲಿ ಕೆಲವು


ಇದನ್ನೂ ಓದಿ: ವೈರಮುತ್ತು ಅವರ ’ಕಳ್ಳಿಗಾಡಿನ ಇತಿಹಾಸ’ ಇದು ರಾಮಾಯಣವಲ್ಲ ಗ್ರಾಮಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...