Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ; ಭೌತಶಾಸ್ತ್ರದ ಪ್ರೊಫೆಸರ್‌ರ ಹೋರಾಟದ ಹಾದಿ

ಪುಸ್ತಕ ಪರಿಚಯ; ಭೌತಶಾಸ್ತ್ರದ ಪ್ರೊಫೆಸರ್‌ರ ಹೋರಾಟದ ಹಾದಿ

- Advertisement -
- Advertisement -

ಎಚ್.ಆರ್. ರಾಮಕೃಷ್ಣ ರಾವ್ ಬೆಂಗಳೂರಿನ ಮಾವಳ್ಳಿಯಲ್ಲಿ ಹುಟ್ಟಿ, ಹೊಳಲ್ಕೆರೆಯಲ್ಲಿ ಬೆಳೆದು ಬೆಂಗಳೂರಿನ ವೈಜ್ಞಾನಿಕ ಮನೋಭಾವದ ಯುವ ಚೇತನಗಳಿಗೆ ದಾರಿದೀಪವಾದವರು.

ತಂದೆ ಎಚ್.ವಿ. ರಂಗರಾವ್, ತಾಯಿ ರಾಧಮ್ಮ ಅವರಿಂದ ಬಂದ ಜೀವನಶಿಸ್ತು, ಕನ್ನಡ ಮತ್ತು ಆಂಗ್ಲಭಾಷಾ ಪ್ರೌಢಿಮೆ, ಕಷ್ಟಸಹಿಷ್ಣು ಜೀವನ ಶ್ರದ್ಧೆ, ತಾಯಿಯ ಅಂತಃಕರಣ ಅರಿತ ಮಾತೃಸೇವಾ ನಿಷ್ಠತೆ, ತನ್ನ ಅರಿವನ್ನು ವಿಕಸಿಸಿಕೊಳ್ಳುವ ಜಾಗೃತ ಮನಸ್ಸಿನಿಂದ ರೂಪುಗೊಂಡವರು ಎಚ್.ಆರ್.ಆರ್. ಅವರು ಹೊಳಲ್ಕೆರೆಯಲ್ಲಿ ಬಾಲ್ಯಕಳೆದು, ಚಿತ್ರದುರ್ಗದಲ್ಲಿ ವಾರಾನ್ನದ ಹುಡುಗನಾಗಿ ಓದುವಾಗಲೇ ಗಣಿತ, ವಿಜ್ಞಾನ ಶಿಕ್ಷಕರಾದವರು. ಅವರ ವಿದ್ಯಾ ಶ್ರದ್ಧೆಯ ಮನೋಸ್ಥೈರ್ಯ ವಿದ್ಯಾರ್ಥಿಗಳಿಗೆ ಒಂದು ಆದರ್ಶ.

ಇಂಟರ್ ಮೀಡಿಯಟ್ ವಿದ್ಯಾಭ್ಯಾಸಕ್ಕೆ ನ್ಯಾಷನಲ್ ಕಾಲೇಜು ಸೇರಲು ಕಾರಣವಾಗಿ, ಭೌತಶಾಸ್ತ್ರದ ಬಗ್ಗೆ ಆಸಕ್ತಿಯನ್ನುಂಟು ಮಾಡಿದವರು ಹೆಚ್. ನರಸಿಂಹಯ್ಯ. ಅವರ ಬಗ್ಗೆ ಎಚ್.ಆರ್.ಆರ್‌ಗೆ ಅಪಾರ ಗೌರವ. ಬೇಂದ್ರೆಯವರು ಹೇಳುವ ’ಶುದ್ಧನಿದ್ದವ ಗೆದ್ದ’ ಎಂಬ ನುಡಿಯಂತೆ ಸತ್ಯ, ಧರ್ಮ, ನೈತಿಕ ನಿಲುವುಗಳಿಂದ ಜೀವನ ಪಯಣದಲ್ಲಿ ಗೆದ್ದ ಎಚ್.ಆರ್.ಆರ್. ಜನಸಾಮಾನ್ಯರಿಗೆ ಒಂದು ಮಾದರಿ.

ಅವರು ಬಿ.ಎಸ್.ಸಿ ಓದುವಾಗ ಸ್ಕೌಟ್ಸ್‌ಗೆ ಸೇರಿಕೊಂಡರು. ಅಲ್ಲಿ ನೀಡಿದ ಹ್ಯಾಮ್‌ರೇಡಿಯೊ ಪ್ರಾತ್ಯಕ್ಷಿಕೆಯನ್ನು ಆಸಕ್ತಿಯಿಂದ ತಿಳಿದುಕೊಂಡರು. ಸಂಪರ್ಕ ಮಾಧ್ಯಮಕ್ಕೆ ಮೋರ್‍ಸ್‌ಕೋಡ್ ಬಳಸುವುದರಲ್ಲಿ ಆಸಕ್ತಿ ಹೊಂದಿದರು. ಸೆಂಟ್ರಲ್ ಟೆಲಿಗ್ರಾಫ್ ಆಫೀಸಿಗೆ ಹೋಗಿ ಪರಿಚಯ ಮಾಡಿಕೊಂಡು ಮೋರ್‍ಸ್‌ಕೋಡ್ ಬಳಸಿ ಸಂದೇಶ ಕಳುಹಿಸುವುದನ್ನು ಹಾಗೂ ಸ್ವೀಕರಿಸುವುದನ್ನು ಕಲಿತುಕೊಂಡರು. ಬೇಸಿಗೆ ರಜೆಯಲ್ಲಿ ಸೆಂಟ್ರಲ್ ಟೆಲಿಗ್ರಾಫ್ ಆಫೀಸಿಗೆ ಹೋಗಿ ಅಲ್ಲಿ ಸಂದೇಶ ಸ್ವೀಕರಿಸುವ ಕೆಲಸ ಮಾಡಿ ವಾರಕ್ಕೆ ಹತ್ತು ರೂಪಾಯಿ ಸಂಪಾದಿಸುತ್ತಿದ್ದರು. ವಿದ್ಯಾರ್ಥಿದೆಸೆಯಲ್ಲಿ ತನ್ನ ಬೌದ್ಧಿಕ ಪರಿಣತಿಯಿಂದ ಹಣ ಸಂಪಾದಿಸುತ್ತಿದ್ದ ಅವರ ಕ್ರಿಯಾಶೀಲ ಬೌದ್ಧಿಕ ಚತುರತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ ಬೆಳಕು.

ತಂದೆಯ ಮರಣದ ನಂತರ ಓದು ಮುಂದುವರಿಸಲಾಗಲಿಲ್ಲ. ಆಗ ಪೋಸ್ಟ್‌ಮಾಸ್ಟರ್ ಜನರಲ್‌ಗೆ ಪತ್ರ ಬರೆದು, ತನ್ನ ಟೆಲಿಗ್ರಾಫ್ ಅನುಭವ ತಿಳಿಸಿ ಪೋಸ್ಟ್‌ಮ್ಯಾನ್ ಕೆಲಸ ಪಡೆದರು. ಅದು ನಿರುದ್ಯೋಗಿ ಯುವಕರಿಗೆ ಅವರಿಂದ ದೊರೆಯುವ ಅನುಕರಣೀಯ ಸಾಹಸ. ಅದು ಚೆನ್ನಾಗಿ ಗ್ರಂಥದಲ್ಲಿ ನಿರೂಪಿತವಾಗಿದೆ.

ಎಚ್.ಆರ್.ಆರ್. ಅವರು ತಾನು ಭೌತವಿಜ್ಞಾನದಲ್ಲಿ ಎಂ.ಎಸ್ಸಿ ಮಾಡಬೇಕೆಂಬ ಹಿರಿಯ ಬಯಕೆ ಹೊಂದಿದ್ದರು. ಕೆಲಸ ಮಾಡುತ್ತ ಭೌತವಿಜ್ಞಾನದ ಅತ್ಯುತ್ತಮ ಸಂಶೋಧನಾ ಪುಸ್ತಕಗಳನ್ನು ಕೊಂಡು ಅಧ್ಯಯನ ಮಾಡುತ್ತ ತಮ್ಮ ಮನದ ಗುರಿಯತ್ತ ದಾಪುಗಾಲು ಹಾಕುತ್ತಿದ್ದರು. ಅವರಿಗೆ ಮದುವೆ ಆಗಿ ಮಕ್ಕಳಿದ್ದರೂ ವಿದ್ಯಾದಾಹದಿಂದ ಖಾಯಂ ಸರ್ಕಾರಿ ಪೋಸ್ಟ್‌ಮ್ಯಾನ್ ಕೆಲಸ ಬಿಟ್ಟರು. ತಮಗೆ ಪ್ರೋತ್ಸಾಹ, ಪತ್ನಿಯ ಸಹಕಾರದಿಂದ ಎಂ.ಎಸ್ಸಿ ವಿದ್ಯಾರ್ಥಿಯಾದರು. ತನ್ನ ಭೌತವಿಜ್ಞಾನದ ಪರಿಣತ ಜ್ಞಾನವನ್ನು ಪ್ರಾಧ್ಯಾಪಕರ ಸಮಿತಿ ಮುಂದೆ ಸಮರ್ಥವಾಗಿ ಮಂಡಿಸಿ ಸೀಟ್ ಪಡೆದರು.

ಭೌತವಿಜ್ಞಾನದ ಪ್ರಾಧ್ಯಾಪಕರಾಗಿ ಸಂತ ಜೋಸೆಫ್‌ರ ಕಾಲೇಜಿನಲ್ಲಿ, ಆಚಾರ್ಯ ಪಾಠಶಾಲೆಯಲ್ಲಿ ಕೆಲಸ ಮಾಡಿ ಆತ್ಮಾನಂದದ ಸಾರ್ಥಕ ಶಿಕ್ಷಕರಾದರು. ಅನಂತರ ಕ್ರೈಸ್ಟ್ ಕಾಲೇಜಿಗೆ ಸೇರಿ, ಆ ಸಂಸ್ಥೆಯನ್ನು ಕಟ್ಟಿ ಬೆಳೆಸಲು ಸಹಾಯ ಮಾಡಿದರು. ಅಲ್ಲಿ ಚಿ. ಶ್ರೀನಿವಾಸರಾಜು ಅವರ ಜೊತೆಗೂಡಿ ’ಕನ್ನಡ ಸಂಘ’ದ ಮುಖಾಂತರ ಕನ್ನಡ ವಾತಾವರಣ ಸೃಷ್ಟಿಸಿದರು. ಆ ಕಾಲೇಜಿನ ರೆಕ್ಟರ್ ಅವರಿಗೆ ಕಾಲೇಜಿನ ಲೋಗೋದಲ್ಲಿ ಕನ್ನಡದಲ್ಲಿ ’ಕ್ರೈಸ್ಟ್’ ಕಾಲೇಜ್ ಎಂದು ಸೇರಿಸಲು ಧೈರ್ಯವಾಗಿ ಹೇಳಿ, ಅದು ಆಗುವಂತೆ ಮಾಡಿದರು. ಅದು ಅವರಲ್ಲಿಯ ಕನ್ನಡ ಉಳಿಸಿ ಬೆಳೆಸುವ ಕ್ರಿಯಾಶೀಲ ನಡೆಯ ಕನ್ನಡತನದ ಪ್ರತೀಕ.

ಅವರು ಸಂಚಾರಿ ಟೆಲಿಸ್ಕೋಪ್‌ನಿಂದ ವಿದ್ಯಾರ್ಥಿಗಳಿಗೆ, ಜನಸಾಮಾನ್ಯರಿಗೆ ಆಕಾಶದ ವೀಕ್ಷಣೆಯ ಅದ್ಭುತ ನೋಟ ಮನಗಾಣಿಸಿದರು. ಎಚ್.ಆರ್.ಆರ್. ಅವರು ಕ್ರೈಸ್ಟ್ ಕಾಲೇಜಿನಿಂದ ನಿವೃತ್ತರಾದ ಮೇಲೆ ಇಂಟರ್ ಮೀಡಿಯಟ್ ಕಾಲೇಜ್ ಸಹಪಾಟಿ ಪಾಂಡು ಕೋರಿಕೆಯಂತೆ, ಅವರು ನಡೆಸುತ್ತಿದ್ದ ಆರ್.ವಿ. ಕಾಲೇಜಿನ ಹದಗೆಟ್ಟ ಪಾಠ ಪ್ರವಚನ, ವಿದ್ಯಾರ್ಥಿ ಶಿಕ್ಷಕರ ನಡೆಯನ್ನು ಶಿಸ್ತಿಗೆ ಒಳಪಡಿಸಿದರು. ಆ ಕೆಲಸವನ್ನು ನಿಸ್ವಾರ್ಥ ಮನೋಭಾವದಿಂದ ಮಾಡಿ ಆ ಕಾಲೇಜು ನಿಜ ಶಿಕ್ಷಣ ನೆಲೆಯಾಗುವಂತೆ ಮಾಡಿದರು. ಆ ಜ್ಞಾನದಾಹ, ವಿದ್ಯಾರ್ಥಿ ಮತ್ತು ಶಿಕ್ಷಕರ ಬಗೆಗಿನ ವಿಶ್ವಾಸ, ಆತ್ಮೀಯ ಕ್ರಿಯಾಶೀಲ ನಡೆ ವಿವರಿಸಿದರೆ ಅದರ ರುಚಿ ಕೆಡುತ್ತದೆ. ಅದನ್ನು ಕಲ್ಗುಂಡಿ ನವೀನ್ ಅವರ ನಿರೂಪಣೆಯಲ್ಲಿಯೇ ಓದಿ ಸವಿಯಬೇಕು. ಅದು ಇಂದಿನ ಹಾಗೂ ಮುಂದಿನ ವಿದ್ಯಾಸಂಸ್ಥೆಗಳು, ಎಲ್ಲ ಶಿಕ್ಷಕರು ಅನುಸರಿಸಬೇಕಾದ ನಡೆಯಾಗಿದೆ. ಹಾಗಾಗಿ ಈ ಆತ್ಮಕಥೆ ಸತ್ಯದ ದಾಖಲೆಯಾಗಿ ’ತನ್ನ ಬಣ್ಣಿಸ ಬೇಡ, ಇದಿರ ಹಳಿಯಲು ಬೇಡ,’ ಎಂಬ ಬಸವಣ್ಣನ ನುಡಿಯಂತೆ, ಎಚ್ಚರದಿಂದ ಅಲುಗಿನ ಮೇಲೆ ನಡೆದು ಸಾಗಿದಂತಿದೆ. ಇಂತಹ ಜೀವನ ಪಥ ಅನುಕರಣೀಯ. ಇಂತಹ ಆತ್ಮಕತೆಗಳು ಕನ್ನಡದಲ್ಲಿ ಅಪರೂಪ.

ರಾಮಕೃಷ್ಣರಾವ್ ಅವರ ’ರಾಮನ್, ದ ನ್ಯಾಚುರಲ್ ಫಿಲಾಸಪರ್’ ಸಾಕ್ಷಚಿತ್ರ., ಸರ್ ಸಿ.ವಿ.ರಾಮನ್‌ರನ್ನು ಕಂಡು ಅನುಭವಿಸಿದ ಸುಖ, ಅವರ ಪ್ರಯೋಗಾಲಯದ ಅನುಭವಗಳು ಭೌತಶಾಸ್ತ್ರ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ. ಅವರ ರನ್ನಿಂಗ್ ಥ್ರೂ ದ ಸಿಸ್ಟಮ್ – ಪಠ್ಯೇತರ ಇಂಗ್ಲೀಷ್ ಪುಸ್ತಕ, ’ಕಲಾಂ ಮೇಷ್ಟು’ ಕನ್ನಡ ಪುಸ್ತಕ ಹಾಗೂ ಎಚ್.ಆರ್.ಆರ್.ಆರ್. ಅವರ ವಂಶಸ್ಥರಾದ ರಾಮಣ್ಣಯ್ಯ ತಾಳೆ ಲಿಪಿ ಮಾಡಿದ್ದ ’ಕರ್ಣಾಟಕ ಭಾಗವತ’, ಕೃತಿಗಳು ಉತ್ತಮ ಸಾಹಿತ್ಯ ಕೊಡುಗೆಗಳಾಗಿವೆ.

ಈ ಆತ್ಮಕತೆಯಲ್ಲಿ ಅವರ ಸಂದರ್ಶನ, ಅಪರೂಪದ ಪೋಟೋಗಳು ಇದ್ದು ಅವರ ನಡೆಯ ಖಚಿತತೆಗೆ ಸಾಕ್ಷಿಯಾತಿಗಿವೆ. ಕನ್ನಡ ಜನರ ಮನಸ್ಸಿನಿಂದ ಸುಲಭವಾಗಿ ಮರೆತು ಹೋಗಬಹುದಾಗಿದ್ದ ಎಚ್.ಆರ್.ಆರ್. ಎಂಬ ಓರ್ವ ಬೌದ್ಧಿಕ ಪರಿಣತನ, ಸಾಹಸಿಯುವಕನ, ಮಾಗಿದ ಪ್ರಾಧ್ಯಾಪಕನ ಜೀವನಾನುಭವ ಸಾರವನ್ನು ಪ್ರಕಟಿಸಿ ಉದಯಭಾನು ಕಲಾಸಂಘ ತುಂಬಾ ಉಪಯುಕ್ತ ಕೆಲಸ ಮಾಡಿದೆ.

ಈ ಆತ್ಮಕಥೆಯನ್ನು ತುಂಬಾ ನವಿರಾದ ಭಾಷೆಯಲ್ಲಿ ನಿರೂಪಿಸಿರುವ ಕಲ್ಗುಂಡಿ ನವೀನ್ ಕೂಡ ಅಭಿನಂದನೀಯ.

ಕೃತಿ : ಅಂಬಿಗಾ! ದಡ ಹಾಯಿಸು….
(ಭೌತ ವಿಜ್ಞಾನದ ಪಾಧ್ಯಾಪಕರಾದ ಎಚ್.ಆರ್. ರಾಮಕೃಷ್ಣ ರಾವ್ ಅವರ ಆತ್ಮಕಥೆ)
ನಿರೂಪಣೆ : ಕಲ್ಗುಂಡಿ ನವೀನ್
ಪುಟಗಳು : 216
ಬೆಲೆ : ರೂ.200/-
ಪ್ರಕಟಣೆ : ಉದಯಭಾನು ಕಲಾಸಂಘ, ಬೆಂಗಳೂರು.

ಡಾ. ಜಿ. ಕೃಷ್ಣಪ್ಪ

ಡಾ. ಜಿ. ಕೃಷ್ಣಪ್ಪ
’ಬೇಂದ್ರೆ’ ಕೃಷ್ಣಪ್ಪ ಎಂದೇ ಜನಪ್ರಿಯರಾಗಿ, ಬೇಂದ್ರೆ ಮತ್ತು ಕುವೆಂಪು ಸಾಹಿತ್ಯದ ಪರಿಚಾರಕಾರಾಗಿ, ವಿಮರ್ಶಕರಾಗಿ ಗುರುತಿಸಿಕೊಂಡಿದ್ದಾರೆ. ’ಹಾಡು ಹಕ್ಕಿ ಅಂಬಿಕಾತನಯದತ್ತ’, ’ನಾಕುತಂತಿ-ಒಂದು ಟಿಪ್ಪಣಿ’, ’ಹಸಿರು ಹಚ್ಚಿ ಚುಚ್ಚಿ’, ’ಶ್ರೀ ರಾಮಾಯಣದರ್ಶನಂ ಪಾತ್ರಗಳ ಕಥಾವಳಿ’, ’ಬೇಂದ್ರೆ ಕಾವ್ಯ: ಪದನಿರುಕ್ತ’ ಕೃಷ್ಣಪ್ಪನವರ ಪ್ರಕಟಿತ ಪುಸ್ತಕಗಳಲ್ಲಿ ಕೆಲವು


ಇದನ್ನೂ ಓದಿ: ವೈರಮುತ್ತು ಅವರ ’ಕಳ್ಳಿಗಾಡಿನ ಇತಿಹಾಸ’ ಇದು ರಾಮಾಯಣವಲ್ಲ ಗ್ರಾಮಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...