Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ; ಭೌತಶಾಸ್ತ್ರದ ಪ್ರೊಫೆಸರ್‌ರ ಹೋರಾಟದ ಹಾದಿ

ಪುಸ್ತಕ ಪರಿಚಯ; ಭೌತಶಾಸ್ತ್ರದ ಪ್ರೊಫೆಸರ್‌ರ ಹೋರಾಟದ ಹಾದಿ

- Advertisement -
- Advertisement -

ಎಚ್.ಆರ್. ರಾಮಕೃಷ್ಣ ರಾವ್ ಬೆಂಗಳೂರಿನ ಮಾವಳ್ಳಿಯಲ್ಲಿ ಹುಟ್ಟಿ, ಹೊಳಲ್ಕೆರೆಯಲ್ಲಿ ಬೆಳೆದು ಬೆಂಗಳೂರಿನ ವೈಜ್ಞಾನಿಕ ಮನೋಭಾವದ ಯುವ ಚೇತನಗಳಿಗೆ ದಾರಿದೀಪವಾದವರು.

ತಂದೆ ಎಚ್.ವಿ. ರಂಗರಾವ್, ತಾಯಿ ರಾಧಮ್ಮ ಅವರಿಂದ ಬಂದ ಜೀವನಶಿಸ್ತು, ಕನ್ನಡ ಮತ್ತು ಆಂಗ್ಲಭಾಷಾ ಪ್ರೌಢಿಮೆ, ಕಷ್ಟಸಹಿಷ್ಣು ಜೀವನ ಶ್ರದ್ಧೆ, ತಾಯಿಯ ಅಂತಃಕರಣ ಅರಿತ ಮಾತೃಸೇವಾ ನಿಷ್ಠತೆ, ತನ್ನ ಅರಿವನ್ನು ವಿಕಸಿಸಿಕೊಳ್ಳುವ ಜಾಗೃತ ಮನಸ್ಸಿನಿಂದ ರೂಪುಗೊಂಡವರು ಎಚ್.ಆರ್.ಆರ್. ಅವರು ಹೊಳಲ್ಕೆರೆಯಲ್ಲಿ ಬಾಲ್ಯಕಳೆದು, ಚಿತ್ರದುರ್ಗದಲ್ಲಿ ವಾರಾನ್ನದ ಹುಡುಗನಾಗಿ ಓದುವಾಗಲೇ ಗಣಿತ, ವಿಜ್ಞಾನ ಶಿಕ್ಷಕರಾದವರು. ಅವರ ವಿದ್ಯಾ ಶ್ರದ್ಧೆಯ ಮನೋಸ್ಥೈರ್ಯ ವಿದ್ಯಾರ್ಥಿಗಳಿಗೆ ಒಂದು ಆದರ್ಶ.

ಇಂಟರ್ ಮೀಡಿಯಟ್ ವಿದ್ಯಾಭ್ಯಾಸಕ್ಕೆ ನ್ಯಾಷನಲ್ ಕಾಲೇಜು ಸೇರಲು ಕಾರಣವಾಗಿ, ಭೌತಶಾಸ್ತ್ರದ ಬಗ್ಗೆ ಆಸಕ್ತಿಯನ್ನುಂಟು ಮಾಡಿದವರು ಹೆಚ್. ನರಸಿಂಹಯ್ಯ. ಅವರ ಬಗ್ಗೆ ಎಚ್.ಆರ್.ಆರ್‌ಗೆ ಅಪಾರ ಗೌರವ. ಬೇಂದ್ರೆಯವರು ಹೇಳುವ ’ಶುದ್ಧನಿದ್ದವ ಗೆದ್ದ’ ಎಂಬ ನುಡಿಯಂತೆ ಸತ್ಯ, ಧರ್ಮ, ನೈತಿಕ ನಿಲುವುಗಳಿಂದ ಜೀವನ ಪಯಣದಲ್ಲಿ ಗೆದ್ದ ಎಚ್.ಆರ್.ಆರ್. ಜನಸಾಮಾನ್ಯರಿಗೆ ಒಂದು ಮಾದರಿ.

ಅವರು ಬಿ.ಎಸ್.ಸಿ ಓದುವಾಗ ಸ್ಕೌಟ್ಸ್‌ಗೆ ಸೇರಿಕೊಂಡರು. ಅಲ್ಲಿ ನೀಡಿದ ಹ್ಯಾಮ್‌ರೇಡಿಯೊ ಪ್ರಾತ್ಯಕ್ಷಿಕೆಯನ್ನು ಆಸಕ್ತಿಯಿಂದ ತಿಳಿದುಕೊಂಡರು. ಸಂಪರ್ಕ ಮಾಧ್ಯಮಕ್ಕೆ ಮೋರ್‍ಸ್‌ಕೋಡ್ ಬಳಸುವುದರಲ್ಲಿ ಆಸಕ್ತಿ ಹೊಂದಿದರು. ಸೆಂಟ್ರಲ್ ಟೆಲಿಗ್ರಾಫ್ ಆಫೀಸಿಗೆ ಹೋಗಿ ಪರಿಚಯ ಮಾಡಿಕೊಂಡು ಮೋರ್‍ಸ್‌ಕೋಡ್ ಬಳಸಿ ಸಂದೇಶ ಕಳುಹಿಸುವುದನ್ನು ಹಾಗೂ ಸ್ವೀಕರಿಸುವುದನ್ನು ಕಲಿತುಕೊಂಡರು. ಬೇಸಿಗೆ ರಜೆಯಲ್ಲಿ ಸೆಂಟ್ರಲ್ ಟೆಲಿಗ್ರಾಫ್ ಆಫೀಸಿಗೆ ಹೋಗಿ ಅಲ್ಲಿ ಸಂದೇಶ ಸ್ವೀಕರಿಸುವ ಕೆಲಸ ಮಾಡಿ ವಾರಕ್ಕೆ ಹತ್ತು ರೂಪಾಯಿ ಸಂಪಾದಿಸುತ್ತಿದ್ದರು. ವಿದ್ಯಾರ್ಥಿದೆಸೆಯಲ್ಲಿ ತನ್ನ ಬೌದ್ಧಿಕ ಪರಿಣತಿಯಿಂದ ಹಣ ಸಂಪಾದಿಸುತ್ತಿದ್ದ ಅವರ ಕ್ರಿಯಾಶೀಲ ಬೌದ್ಧಿಕ ಚತುರತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ ಬೆಳಕು.

ತಂದೆಯ ಮರಣದ ನಂತರ ಓದು ಮುಂದುವರಿಸಲಾಗಲಿಲ್ಲ. ಆಗ ಪೋಸ್ಟ್‌ಮಾಸ್ಟರ್ ಜನರಲ್‌ಗೆ ಪತ್ರ ಬರೆದು, ತನ್ನ ಟೆಲಿಗ್ರಾಫ್ ಅನುಭವ ತಿಳಿಸಿ ಪೋಸ್ಟ್‌ಮ್ಯಾನ್ ಕೆಲಸ ಪಡೆದರು. ಅದು ನಿರುದ್ಯೋಗಿ ಯುವಕರಿಗೆ ಅವರಿಂದ ದೊರೆಯುವ ಅನುಕರಣೀಯ ಸಾಹಸ. ಅದು ಚೆನ್ನಾಗಿ ಗ್ರಂಥದಲ್ಲಿ ನಿರೂಪಿತವಾಗಿದೆ.

ಎಚ್.ಆರ್.ಆರ್. ಅವರು ತಾನು ಭೌತವಿಜ್ಞಾನದಲ್ಲಿ ಎಂ.ಎಸ್ಸಿ ಮಾಡಬೇಕೆಂಬ ಹಿರಿಯ ಬಯಕೆ ಹೊಂದಿದ್ದರು. ಕೆಲಸ ಮಾಡುತ್ತ ಭೌತವಿಜ್ಞಾನದ ಅತ್ಯುತ್ತಮ ಸಂಶೋಧನಾ ಪುಸ್ತಕಗಳನ್ನು ಕೊಂಡು ಅಧ್ಯಯನ ಮಾಡುತ್ತ ತಮ್ಮ ಮನದ ಗುರಿಯತ್ತ ದಾಪುಗಾಲು ಹಾಕುತ್ತಿದ್ದರು. ಅವರಿಗೆ ಮದುವೆ ಆಗಿ ಮಕ್ಕಳಿದ್ದರೂ ವಿದ್ಯಾದಾಹದಿಂದ ಖಾಯಂ ಸರ್ಕಾರಿ ಪೋಸ್ಟ್‌ಮ್ಯಾನ್ ಕೆಲಸ ಬಿಟ್ಟರು. ತಮಗೆ ಪ್ರೋತ್ಸಾಹ, ಪತ್ನಿಯ ಸಹಕಾರದಿಂದ ಎಂ.ಎಸ್ಸಿ ವಿದ್ಯಾರ್ಥಿಯಾದರು. ತನ್ನ ಭೌತವಿಜ್ಞಾನದ ಪರಿಣತ ಜ್ಞಾನವನ್ನು ಪ್ರಾಧ್ಯಾಪಕರ ಸಮಿತಿ ಮುಂದೆ ಸಮರ್ಥವಾಗಿ ಮಂಡಿಸಿ ಸೀಟ್ ಪಡೆದರು.

ಭೌತವಿಜ್ಞಾನದ ಪ್ರಾಧ್ಯಾಪಕರಾಗಿ ಸಂತ ಜೋಸೆಫ್‌ರ ಕಾಲೇಜಿನಲ್ಲಿ, ಆಚಾರ್ಯ ಪಾಠಶಾಲೆಯಲ್ಲಿ ಕೆಲಸ ಮಾಡಿ ಆತ್ಮಾನಂದದ ಸಾರ್ಥಕ ಶಿಕ್ಷಕರಾದರು. ಅನಂತರ ಕ್ರೈಸ್ಟ್ ಕಾಲೇಜಿಗೆ ಸೇರಿ, ಆ ಸಂಸ್ಥೆಯನ್ನು ಕಟ್ಟಿ ಬೆಳೆಸಲು ಸಹಾಯ ಮಾಡಿದರು. ಅಲ್ಲಿ ಚಿ. ಶ್ರೀನಿವಾಸರಾಜು ಅವರ ಜೊತೆಗೂಡಿ ’ಕನ್ನಡ ಸಂಘ’ದ ಮುಖಾಂತರ ಕನ್ನಡ ವಾತಾವರಣ ಸೃಷ್ಟಿಸಿದರು. ಆ ಕಾಲೇಜಿನ ರೆಕ್ಟರ್ ಅವರಿಗೆ ಕಾಲೇಜಿನ ಲೋಗೋದಲ್ಲಿ ಕನ್ನಡದಲ್ಲಿ ’ಕ್ರೈಸ್ಟ್’ ಕಾಲೇಜ್ ಎಂದು ಸೇರಿಸಲು ಧೈರ್ಯವಾಗಿ ಹೇಳಿ, ಅದು ಆಗುವಂತೆ ಮಾಡಿದರು. ಅದು ಅವರಲ್ಲಿಯ ಕನ್ನಡ ಉಳಿಸಿ ಬೆಳೆಸುವ ಕ್ರಿಯಾಶೀಲ ನಡೆಯ ಕನ್ನಡತನದ ಪ್ರತೀಕ.

ಅವರು ಸಂಚಾರಿ ಟೆಲಿಸ್ಕೋಪ್‌ನಿಂದ ವಿದ್ಯಾರ್ಥಿಗಳಿಗೆ, ಜನಸಾಮಾನ್ಯರಿಗೆ ಆಕಾಶದ ವೀಕ್ಷಣೆಯ ಅದ್ಭುತ ನೋಟ ಮನಗಾಣಿಸಿದರು. ಎಚ್.ಆರ್.ಆರ್. ಅವರು ಕ್ರೈಸ್ಟ್ ಕಾಲೇಜಿನಿಂದ ನಿವೃತ್ತರಾದ ಮೇಲೆ ಇಂಟರ್ ಮೀಡಿಯಟ್ ಕಾಲೇಜ್ ಸಹಪಾಟಿ ಪಾಂಡು ಕೋರಿಕೆಯಂತೆ, ಅವರು ನಡೆಸುತ್ತಿದ್ದ ಆರ್.ವಿ. ಕಾಲೇಜಿನ ಹದಗೆಟ್ಟ ಪಾಠ ಪ್ರವಚನ, ವಿದ್ಯಾರ್ಥಿ ಶಿಕ್ಷಕರ ನಡೆಯನ್ನು ಶಿಸ್ತಿಗೆ ಒಳಪಡಿಸಿದರು. ಆ ಕೆಲಸವನ್ನು ನಿಸ್ವಾರ್ಥ ಮನೋಭಾವದಿಂದ ಮಾಡಿ ಆ ಕಾಲೇಜು ನಿಜ ಶಿಕ್ಷಣ ನೆಲೆಯಾಗುವಂತೆ ಮಾಡಿದರು. ಆ ಜ್ಞಾನದಾಹ, ವಿದ್ಯಾರ್ಥಿ ಮತ್ತು ಶಿಕ್ಷಕರ ಬಗೆಗಿನ ವಿಶ್ವಾಸ, ಆತ್ಮೀಯ ಕ್ರಿಯಾಶೀಲ ನಡೆ ವಿವರಿಸಿದರೆ ಅದರ ರುಚಿ ಕೆಡುತ್ತದೆ. ಅದನ್ನು ಕಲ್ಗುಂಡಿ ನವೀನ್ ಅವರ ನಿರೂಪಣೆಯಲ್ಲಿಯೇ ಓದಿ ಸವಿಯಬೇಕು. ಅದು ಇಂದಿನ ಹಾಗೂ ಮುಂದಿನ ವಿದ್ಯಾಸಂಸ್ಥೆಗಳು, ಎಲ್ಲ ಶಿಕ್ಷಕರು ಅನುಸರಿಸಬೇಕಾದ ನಡೆಯಾಗಿದೆ. ಹಾಗಾಗಿ ಈ ಆತ್ಮಕಥೆ ಸತ್ಯದ ದಾಖಲೆಯಾಗಿ ’ತನ್ನ ಬಣ್ಣಿಸ ಬೇಡ, ಇದಿರ ಹಳಿಯಲು ಬೇಡ,’ ಎಂಬ ಬಸವಣ್ಣನ ನುಡಿಯಂತೆ, ಎಚ್ಚರದಿಂದ ಅಲುಗಿನ ಮೇಲೆ ನಡೆದು ಸಾಗಿದಂತಿದೆ. ಇಂತಹ ಜೀವನ ಪಥ ಅನುಕರಣೀಯ. ಇಂತಹ ಆತ್ಮಕತೆಗಳು ಕನ್ನಡದಲ್ಲಿ ಅಪರೂಪ.

ರಾಮಕೃಷ್ಣರಾವ್ ಅವರ ’ರಾಮನ್, ದ ನ್ಯಾಚುರಲ್ ಫಿಲಾಸಪರ್’ ಸಾಕ್ಷಚಿತ್ರ., ಸರ್ ಸಿ.ವಿ.ರಾಮನ್‌ರನ್ನು ಕಂಡು ಅನುಭವಿಸಿದ ಸುಖ, ಅವರ ಪ್ರಯೋಗಾಲಯದ ಅನುಭವಗಳು ಭೌತಶಾಸ್ತ್ರ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ. ಅವರ ರನ್ನಿಂಗ್ ಥ್ರೂ ದ ಸಿಸ್ಟಮ್ – ಪಠ್ಯೇತರ ಇಂಗ್ಲೀಷ್ ಪುಸ್ತಕ, ’ಕಲಾಂ ಮೇಷ್ಟು’ ಕನ್ನಡ ಪುಸ್ತಕ ಹಾಗೂ ಎಚ್.ಆರ್.ಆರ್.ಆರ್. ಅವರ ವಂಶಸ್ಥರಾದ ರಾಮಣ್ಣಯ್ಯ ತಾಳೆ ಲಿಪಿ ಮಾಡಿದ್ದ ’ಕರ್ಣಾಟಕ ಭಾಗವತ’, ಕೃತಿಗಳು ಉತ್ತಮ ಸಾಹಿತ್ಯ ಕೊಡುಗೆಗಳಾಗಿವೆ.

ಈ ಆತ್ಮಕತೆಯಲ್ಲಿ ಅವರ ಸಂದರ್ಶನ, ಅಪರೂಪದ ಪೋಟೋಗಳು ಇದ್ದು ಅವರ ನಡೆಯ ಖಚಿತತೆಗೆ ಸಾಕ್ಷಿಯಾತಿಗಿವೆ. ಕನ್ನಡ ಜನರ ಮನಸ್ಸಿನಿಂದ ಸುಲಭವಾಗಿ ಮರೆತು ಹೋಗಬಹುದಾಗಿದ್ದ ಎಚ್.ಆರ್.ಆರ್. ಎಂಬ ಓರ್ವ ಬೌದ್ಧಿಕ ಪರಿಣತನ, ಸಾಹಸಿಯುವಕನ, ಮಾಗಿದ ಪ್ರಾಧ್ಯಾಪಕನ ಜೀವನಾನುಭವ ಸಾರವನ್ನು ಪ್ರಕಟಿಸಿ ಉದಯಭಾನು ಕಲಾಸಂಘ ತುಂಬಾ ಉಪಯುಕ್ತ ಕೆಲಸ ಮಾಡಿದೆ.

ಈ ಆತ್ಮಕಥೆಯನ್ನು ತುಂಬಾ ನವಿರಾದ ಭಾಷೆಯಲ್ಲಿ ನಿರೂಪಿಸಿರುವ ಕಲ್ಗುಂಡಿ ನವೀನ್ ಕೂಡ ಅಭಿನಂದನೀಯ.

ಕೃತಿ : ಅಂಬಿಗಾ! ದಡ ಹಾಯಿಸು….
(ಭೌತ ವಿಜ್ಞಾನದ ಪಾಧ್ಯಾಪಕರಾದ ಎಚ್.ಆರ್. ರಾಮಕೃಷ್ಣ ರಾವ್ ಅವರ ಆತ್ಮಕಥೆ)
ನಿರೂಪಣೆ : ಕಲ್ಗುಂಡಿ ನವೀನ್
ಪುಟಗಳು : 216
ಬೆಲೆ : ರೂ.200/-
ಪ್ರಕಟಣೆ : ಉದಯಭಾನು ಕಲಾಸಂಘ, ಬೆಂಗಳೂರು.

ಡಾ. ಜಿ. ಕೃಷ್ಣಪ್ಪ

ಡಾ. ಜಿ. ಕೃಷ್ಣಪ್ಪ
’ಬೇಂದ್ರೆ’ ಕೃಷ್ಣಪ್ಪ ಎಂದೇ ಜನಪ್ರಿಯರಾಗಿ, ಬೇಂದ್ರೆ ಮತ್ತು ಕುವೆಂಪು ಸಾಹಿತ್ಯದ ಪರಿಚಾರಕಾರಾಗಿ, ವಿಮರ್ಶಕರಾಗಿ ಗುರುತಿಸಿಕೊಂಡಿದ್ದಾರೆ. ’ಹಾಡು ಹಕ್ಕಿ ಅಂಬಿಕಾತನಯದತ್ತ’, ’ನಾಕುತಂತಿ-ಒಂದು ಟಿಪ್ಪಣಿ’, ’ಹಸಿರು ಹಚ್ಚಿ ಚುಚ್ಚಿ’, ’ಶ್ರೀ ರಾಮಾಯಣದರ್ಶನಂ ಪಾತ್ರಗಳ ಕಥಾವಳಿ’, ’ಬೇಂದ್ರೆ ಕಾವ್ಯ: ಪದನಿರುಕ್ತ’ ಕೃಷ್ಣಪ್ಪನವರ ಪ್ರಕಟಿತ ಪುಸ್ತಕಗಳಲ್ಲಿ ಕೆಲವು


ಇದನ್ನೂ ಓದಿ: ವೈರಮುತ್ತು ಅವರ ’ಕಳ್ಳಿಗಾಡಿನ ಇತಿಹಾಸ’ ಇದು ರಾಮಾಯಣವಲ್ಲ ಗ್ರಾಮಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...