Homeನ್ಯಾಯ ಪಥಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

ಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

- Advertisement -
- Advertisement -

ಉರಿಪಾದದ ನೆರಳಲ್ಲಿ
ತೊಡೆಯ ತೊಗಲ ಸುಲಿದು
ಮೆಟ್ಟಲೆಂದೇ ಅಟ್ಟೆಕಟ್ಟಿದ್ದ ಮಾದರ
ಕುಡಿ ಮಕ್ಕಳ ಚರ್ಮವ ಸುಲಿದು
ನಟ್ಟ ನಡುಬೀದಿಯಲ್ಲಿ ಕೆಡವಿ
ಕ್ಯಾಕರಿಸುವವರ ಉಘೇ ಉಘೇಯ
ಜೊಲ್ಲು ಸುರಿದು ನಾರುತ್ತಿದೆ ನಾಡು..

ಒಂದು ಕ್ಷಣ ಮೈಕೊಡವಿ ಕಣ್ಣು ಅಗಲಿಸಿ, ಎದೆ ಉರಿಯುವಂತೆ ಮಾಡುವ ಸಾಲುಗಳಿವು. ಅವಡುಗಚ್ಚಿ ಸಹಿಸಿಕೊಳ್ಳುತ್ತಿದ್ದರೂ, ಕಣ್ಣಲ್ಲಿ ಕಣ್ಣೀರ ಜೊತೆ ಕಿಡಿಯೂ ಸಿಡಿಯುತ್ತಿರುವಂತಿವೆ ಈ ಸಾಲುಗಳು. ‘ಕಾರುಣ್ಯದ ಮೋಹಕ ನವಿಲುಗಳೆ’ ಎಂಬ ರಮ್ಯವೆನಿಸುವ ಶೀರ್ಷೀಕೆಯೊಳಗೆ ಸುಡು ಕೆಂಡಗಳನ್ನೇ ಇಟ್ಟಿದ್ದಾರೆ ಕವಿ ಆರನಕಟ್ಟೆ ರಂಗನಾಥ. ಶತಮಾನಗಳ ಶೋಷಣೆಯಲ್ಲಿ ಬೆಂದ ಕತೆಗಳನ್ನು ನಮ್ಮ ಅಂಗೈಯಲ್ಲಿ ಸುಡುಸುಡುವಂತೆಯೇ ಇಟ್ಟ ಹಾಗೆನಿಸುತ್ತದೆ. ಈ ಕವಿತೆಗಳನ್ನು ಓದಿ ಮರುಗಬೇಕೆನಿಸುವಷ್ಟರಲ್ಲಿ, ಬೆಚ್ಚಿ ಬೀಳಿಸಿ ಜೀವದ ಘನತೆಯನ್ನೇ ಮರೆತ ನಮ್ಮ ಸಮಾಜದ ಶತಮಾನಗಳ ಶೋಷಣೆಯ ಚಿತ್ರಗಳನ್ನು ಕಟ್ಟಿಕೊಡುತ್ತಾ ಎಚ್ಚರಿಸುತ್ತದೆ.

ಮೂವತ್ತೆಂಟು ಕವಿತೆಗಳ ಈ ಸಂಕಲನದಲ್ಲಿ ಕವಿ ರಂಗನಾಥ ಒಂದು ಮಹಾಪಯಣದ ಕತೆಯನ್ನು ಬಿಡಿಬಿಡಿಯಾಗಿ ವಿವರಿಸಿದ್ದಾರೆ. ತನ್ನ ಅಜ್ಜ, ಅಜ್ಜಿ, ಅಪ್ಪ, ತಾನು ಬೆಳೆದ ಊರು, ದಲಿತ ಹೆಣ್ಣು ಜೀವಗಳ ಮೇಲೆ ನಡೆದ ದೌರ್ಜನ್ಯ, ಶೋಷಣೆಯ ವಿರುದ್ಧದ ಸೆಡವು ಎಲ್ಲವೂ ತೀವ್ರವಾದ ರೂಪಕಗಳೊಂದಿಗೆ ಬಿಚ್ಚಿಕೊಳ್ಳುತ್ತವೆ. ಹೀಗೆ ಬಿಚ್ಚಿಕೊಳ್ಳುವ ಚಿತ್ರಗಳು ನಮ್ಮೊಳಗೆ ಮರುಕ ಹುಟ್ಟಿಸುವಷ್ಟು ತೀವ್ರವಾಗಿದ್ದರೂ, ಉರಿಯ ರೂಪಕಗಳ ಆ ಮರುಕವನ್ನು ಸುಟ್ಟುಹಾಕುತ್ತಾ, ಪ್ರತಿರೋಧ ಮತ್ತು ಹೊಸ ಕಾಲದ ಎಚ್ಚರದವನ್ನು ದಾಖಲಿಸುತ್ತವೆ.

ಹಕ್ಕು, ಹೋರಾಟ, ಶೋಷಣೆಯ ವಿರುದ್ಧದ ಘೋಷಣೆಯ ಸಾಲುಗಳಾಗಿ ಬಿಡುತ್ತವೇನೊ ಅನ್ನಿಸುವಷ್ಟರಲ್ಲೇ ನಮ್ಮನ್ನು ತನ್ನ ಕಾವ್ಯ ತೀವ್ರತೆಯಲ್ಲಿ ತಲ್ಲಣಿಸುವಂತೆ ಮಾಡಿಬಿಡುತ್ತವೆ ಇಲ್ಲಿರುವ ಕವನಗಳ ಸಾಲುಗಳು. ಶತಮಾನಗಳಿಂದ ಜಾತಿ ಹೆಸರಿನಲ್ಲಿ ಮನುಷ್ಯ ಸಹಜ ಘನತೆ, ಸಂವೇದನೆಗಳನ್ನು ಮೀರಿದ ಶೋಷಣೆಯನ್ನು ಪ್ರತಿಯೊಬ್ಬನಲ್ಲೂ ಪಾಪಪ್ರಜ್ಞೆಯಾಗಿಸುವಂತೆ ಕಾಡುತ್ತವೆ. ಊರಿನ ಎಲ್ಲ ಕೆಲಸಗಳನ್ನು ಮಾಡಿ ಊರಿನಂಚಿಗೆ ಬದುಕುವಂತೆ ಮಾಡುವ ಕ್ರೌರ್ಯವಿದೆಯಲ್ಲ ಅದು ಅರಗಿಸಿಕೊಳ್ಳಲಾಗದ್ದು. ಅದನ್ನೇ ಕವಿ,

ಊರು ಕಟ್ಟಿದವರಿಗೆ ಕೇರಿಯವರೆಂದು
ಕಾಲೋನಿಗಳ ಪಟ್ಟವ ಕಟ್ಟಿದ ಪ್ರತಿಷ್ಠೆಗೆ
ಊರು ಸಾರಿದವರ ಸಾವು ಕೋರಿ
ಸಂತಾನಗಳಿಗೆ ಶವ ಕೂಡಿಟ್ಟು ಉಣಿಸಿದಿರಿ
ಎನ್ನುತ್ತಾರೆ,

ದೂರದ ತಂಜಾವೂರಿನಿಂದು ಬಂದು ಆರನಕಟ್ಟೆಯಲ್ಲಿ ಬದುಕು ಕಟ್ಟಿಕೊಂಡ ಅಜ್ಜ ಸುಬ್ಬನ್, ಬೀಡಿಯ ಉರಿಯಲ್ಲಿ ತನ್ನೆಲ್ಲಾ ಕೋಪವನ್ನು ಸುಟ್ಟ ಅಯ್ಯನ್, ತಂಬೂರಿ ರಾಜಮ್ಮ ಇಲ್ಲಿ ಆತ್ಮಾಭಿಮಾನದ ಸಂಕೇತಗಳಾಗಿ, ಹೆಮ್ಮೆಯಾಗಿ ಮೆರೆಯುತ್ತವೆ. ಶೋಷಣೆಯ ನೋವು, ಸಂಕಟ ಕಣ್ಣೀರು ಉಕ್ಕಿಸಿದರೂ ತಡೆದುಕೊಳ್ಳುವುದನ್ನು ಹೇಳುವ ಇಲ್ಲಿನ ಸಾಲುಗಳು ಎದೆಯ ಉರಿಯನ್ನು ನಂದಿಸದೇ ಇಟ್ಟುಕೊಳ್ಳುವ ಹಠವನ್ನು ಪ್ರತಿಧ್ವನಿಸುತ್ತವೆ.

ಪೂರ್ವಿಕರ ಅನುಭವಗಳೊಂದಿಗೆ ತನ್ನ ಅನುಭವವನ್ನು ಬೆರೆಸಿ ನೋಡುವ ಕವಿ, ಈ ಎರಡೂ ನೆಲೆಗಳ ಅಸ್ಮಿತೆಯ ಹಿನ್ನೆಲೆಯಲ್ಲಿ, ಎರಡೂ ನೆಲೆಗಳ ಪುರಾಣ, ಚರಿತ್ರೆ, ಸಂಸ್ಕೃತಿ ಮತ್ತು ಭಾಷೆಗಳನ್ನು ತಮ್ಮ ಕಾವ್ಯದಲ್ಲಿ ತಂದಿದ್ದಾರೆ. ಹಾಗಾಗಿ ಇಲ್ಲಿನ ಕವಿತೆಗಳಲ್ಲಿ ವಿಭಿನ್ನ ಪ್ರತಿಮೆ-ರೂಪಕಗಳು, ನುಡಿಗಟ್ಟುಗಳು ತೀವ್ರವಾಗಿ ಮೂಡಿ ಬಂದಿವೆ. ವಚನ ಚಳುವಳಿಯ ಪಿತಾಮಹ, ಆದಿ ವಚನಕಾರ ಚನ್ನಯ್ಯ, ಜಾಂಬವಮುನಿ, ಹೆಪ್ಪುಮುನಿ, ಬೆಪ್ಪುಮುನಿ, ನಂದನ, ರವಿದಾಸ, ಗಲ್ಲೇಬಾನಿ, ಚಮ್ಮಾವುಗೆಯಂತಹ ಪ್ರತಿಮಾ ಸಂಕೇತಗಳು ಸಂಕಲನದುದ್ದಕ್ಕೂ ಕಾಣಿಸುತ್ತವೆ. ಮಾದರ ಚನ್ನಯ್ಯನ ವಚನದ ಅಂಕಿತವನ್ನು ಕವಿ ಕವಿತೆಯೊಂದರ ಸಾಲನ್ನಾಗಿಸಿದ್ದಾರೆ. ಇಲ್ಲಿನ ಕವಿತೆಗಳಲ್ಲಿ ಮತ್ತೆ ಮತ್ತೆ ಕಾಣಿಸುವ ಮೆಟ್ಟಿನ ಸಂಕೇತ ಪರಂಪರೆಗೂ ಸಮುದಾಯಕ್ಕೂ ಇರುವ ಅಂತಃಕರಣವನ್ನು ಹೇಳುತ್ತದೆ.

ಕವಿ ತನ್ನ, ತನ್ನವರ ಒಡಲ ಸಂಕಟವನ್ನು ಬಿಚ್ಚಿಡುವ ಈ ಕವಿತೆಗಳು ಅಷ್ಟಕ್ಕೆ ಸೀಮಿತವಾಗಿದ್ದರೆ, ಕಾವ್ಯ ಸಾರ್ಥಕತೆಯೂ ಸೀಮಿತವಾಗುತ್ತಿತ್ತೆನೊ! ಸಮುದಾಯದ ಶತಮಾನಗಳ ಸಂಕಟವನ್ನು ಕಿಡಿಯಾಗಿ ಸಿಡಿಸುವುದಷ್ಟೇ ಅಲ್ಲ, ಅದನ್ನು ಮೀರುವ ಬೆಳಕಿನ ದಾರಿಯ ಬಗ್ಗೆಯೂ ಮಾತಾಡಿದ್ದಾರೆ. ಸಂಕಲನದ ಮೊದಲ ಕವಿತೆಯೇ ಬಹಳ ಆಪ್ತ ಹಾಗೂ ಬುದ್ಧ ಬೆಳಕಿನ ಸ್ಪರ್ಶದ ಅನುಭವ ನೀಡುತ್ತದೆ. ಅವ್ವನೆದೆಯ ಅಜ್ಜನ ಅರಿವು ಶೀರ್ಷಿಕೆಯ ಈ ಕವಿತೆಯಲ್ಲಿ, ಅವ್ವ, ಕವಿಗೆ ಅಂಬೇಡ್ಕರ್ ಅವರನ್ನು ಅಜ್ಜನೆಂದು ಪರಿಚಯಿಸುತ್ತಾರೆ.

ಮೈಸವರಿದ ಅವ್ವ
ಮನಸ್ಸಿಗೆ ಬಸಿದ ಮಾತು
ಕೈತೋರಿ ಸದಾ ಪುಸ್ತಕ ಹೊತ್ತಿರುವ
ನಿನ್ನಜ್ಜ ಅಂಬೇಡ್ಕರ್ ಓದಿದ್ದು
ಬೀದಿ ಬಲ್ಪಿನ ಕೆಳಗೆ ಎಂದು
ಒಂದೊಂದೇ ಪದವ ಎದೆಗಿಟ್ಟು…

ಶಿಕ್ಷಣ ಸ್ವಾಭಿಮಾನ, ಮಾನವೀಯತೆಯ ಮೌಲ್ಯ ಕವಿಯ ಎಳೆಯ ಎದೆಗೆ ಎರೆಯುವ ತಾಯಿಯನ್ನು ಈ ಕವಿತೆ ಕಟ್ಟಿಕೊಡುತ್ತದೆ. ತಮ್ಮೆಲ್ಲ ಸಂಕಟಗಳ ಬಿಡುಗಡೆಯ ಬೆಳಕಾಗಿ ಹೊಮ್ಮುತ್ತದೆ. ಇದೇ ಪರಂಪರೆಯುದ್ದಕ್ಕೂ ಕಾಡಿದ ಶೋಷಣೆಗೆ ಇದೇ ಪರಿಹಾರ ಮಾರ್ಗವೆಂದು ದಾಖಲಿಸುತ್ತದೆ.

ಗಂಡು ಒಂದು ರೀತಿಯ ಶೋಷಣೆಗೆ ಒಳಗಾಗುತ್ತಿದ್ದರೆ, ಹೆಣ್ಣಿನ ಮೇಲೆ ನಡೆವ ದೌರ್ಜನ್ಯದ ಭೀಕರತೆಯನ್ನು ಕವಿ ರೂಪಕಗಳಲ್ಲಿ ಅಲುಗಾಡಿಸಿಬಿಡುತ್ತಾರೆ. ಅಸಹಾಯಕತೆ ಒಂದೆಡೆ, ಅಂತಹ ಸಂದರ್ಭ ಸೃಷ್ಟಿಸಿ ಶೋಷಿಸುವ ಮನಸ್ಸುಗಳನ್ನು ಇನ್ನೊಂದೆಡೆ. ಅನ್ನಕ್ಕಾಗಿ ಅಂಗಲಾಚುವ ಹೆಣ್ಣಿನ ಮುಂದೆ ಕಾಮತೃಷೆ ತೀರಿಸುವ ಕೋರಿಕೆ ಇಡುವುದು, ಬದುಕು ಕಟ್ಟಿಕೊಳ್ಳುವುದಕ್ಕಾಗಿ ತನ್ನ ದೇಹವನ್ನು ಮಾರಿಕೊಳ್ಳಬೇಕಾದ ಸ್ಥಿತಿ ತಲುಪಿದ ಹೆಣ್ಣು ಎದುರಿಸುವ ಕ್ರೌರ್ಯವನ್ನು ಕವಿತೆಗಳು ಮಾತಾಡುತ್ತವೆ. ಅತ್ಯಾಚಾರ, ಕೊಲೆಗೆ ಗುರಿಯಾದ ಮುಗ್ದ ಜೀವಗಳನ್ನು ಕವಿ ನಮಗೆ ಎದುರಾಗಿಸುವ ರೀತಿ ಹೃದಯವನ್ನು ಕರಗಿಸುತ್ತದೆ, ಕೆಲವೊಮ್ಮೆ ನಡುಗಿಸುತ್ತದೆ ಕೂಡ. ಮನುಷ್ಯ ಘನತೆ, ಮಾನವೀಯತೆಯ ಹಂಬಲವನ್ನು ಧ್ಯಾನಿಸುತ್ತಾ ಅದನ್ನು ಕಾಲದ ಎಲ್ಲ ಶೋಷಣೆಗಳಿಗೆ ಮುಖಾಮುಖಿಯಾಗಿಸುತ್ತಾರೆ ಕವಿ ರಂಗನಾಥ್.

ಪ್ರೀತಿ, ವಿರಹಗಳನ್ನು ಧ್ಯಾನಿಸುವ ರಂಗನಾಥ್ ರಾಜಕೀಯ ಬೆಳವಣಿಗೆಗಳನ್ನೂ ಕಾವ್ಯದ ವಸ್ತುವಾಗಿಸಿಕೊಂಡಿದ್ದಾರೆ. ಜಲದ ಪಾದುಕೆಯ ಹಾಡು, ಈ ಸುದ್ದಿ ಇಂದಿನ ವರದಿಯಾಗಿಯೇ ಉಳಿಯಬೇಕಿಲ್ಲ, ದಲಿತರಾಗುವುದೆಂದರೆ ಎಷ್ಟು ಸಡಗರ, ಅಲೆದಷ್ಟು ಅನಾಥಗೊಂಡ ಪಾದಗಳು, ಅವ್ವನೆದೆಯ ಅಜ್ಜನ ಅರಿವು, ಕರಿಯಜ್ಜನ ಯಶೋಗಾಥೆ, ಉರಿಪಾದದ ನೆರಳಲ್ಲಿ, ಕರಿ ಮೈಯ್ಯ ಕಸುವು ಬಹಳ ಮುಖ್ಯವಾದ ಕವಿತೆಗಳು.

ಪರಂಪರೆಯ ಎಲ್ಲ ನೆನಪುಗಳನ್ನು ಕೆದಕುತ್ತಾ, ತಮ್ಮ ಅಸ್ಮಿತೆಯನ್ನು ಅನಾವರಣ ಮಾಡುತ್ತಲೇ ಅದನ್ನು ಒಡೆದು ನಿಲ್ಲಲು ಯತ್ನಿಸುವ ಇಲ್ಲಿನ ಕವಿತೆಗಳು, ಈ ಮಹಾಪಯಣದಲ್ಲಿ ಎಂದೂ ಹಂಗಿನಲಿ ಬಾಳದ ಉದಾಹರಣೆಗಳನ್ನು ಧ್ಯಾನಿಸುತ್ತಾ, ತನ್ನ ಕಾಲದ ದನಿಯನ್ನು ತೀಕ್ಷ್ಣವಾಗಿಯೂ ತೀವ್ರವಾಗಿಯೂ ಕವಿ ರಂಗನಾಥ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬದಿಕಿರುವುದೇ ಕಥೆ ಹೇಳಲಿಕ್ಕೆ ಎಂದು ಬರೆದು ಬದುಕಿದ ಲ್ಯಾಟಿನ್ ಅಮೆರಿಕನ್ ಲೇಖಕ ಮಾರ್ಕ್ವೆಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವಿಮರ್ಶೆ ಅದ್ಬುತ ವಾಗಿದೆ ಸರ್
    ಕವಿಯ ಅಂತರಾಳವ ಹೊಕ್ಕು ಪರಿಚಯಿಸಿದಿರಿ ಸರ್

  2. ಕವಿಯ ಹಿನ್ನೆಲೆಯ ಕ್ಯಾನ್ವಾಸಿನಲ್ಲಿ ಕವನದ ಸೊಗಸಾದ ಚಿತ್ರವನ್ನು ಹೇಗೆ ಕವಿ ಅಭಿವ್ಯಕ್ತಿಸಿದ್ದಾರೆಂದು ಸೊಗಸಿನ ವಿಮರ್ಶೆ ಮಾಡಿರುವುದು ಮುದ ನೀಡಿದೆ. ಪ್ರತಿಮೆಯಾದ ಮೆಟ್ಟು ಮೆಟ್ಟುವ ಜನ ಮೆಟ್ಟಸೃಷ್ಟಿಶಿದವರ ಮುಟ್ಟದಿರುವುದು ಈ ಸಮಾಜದ ಕೊಳೆತ ಮನಸಿನ ಘಾಟು ರಾಚಬೇಕಿತ್ತು‌ ಇನ್ನೂ.

    ವಿಮರ್ಶಕರಿಗೆ ಮತ್ತು ಕವಿವರ್ಯರಿಗೆ ಅಭಿನಂದನೆಗಳು

    ಜಯರಾಮ.ಸಿ.ವಿ. ನಾಗಮಂಗಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...