Homeನ್ಯಾಯ ಪಥಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

ಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

- Advertisement -
- Advertisement -

ಉರಿಪಾದದ ನೆರಳಲ್ಲಿ
ತೊಡೆಯ ತೊಗಲ ಸುಲಿದು
ಮೆಟ್ಟಲೆಂದೇ ಅಟ್ಟೆಕಟ್ಟಿದ್ದ ಮಾದರ
ಕುಡಿ ಮಕ್ಕಳ ಚರ್ಮವ ಸುಲಿದು
ನಟ್ಟ ನಡುಬೀದಿಯಲ್ಲಿ ಕೆಡವಿ
ಕ್ಯಾಕರಿಸುವವರ ಉಘೇ ಉಘೇಯ
ಜೊಲ್ಲು ಸುರಿದು ನಾರುತ್ತಿದೆ ನಾಡು..

ಒಂದು ಕ್ಷಣ ಮೈಕೊಡವಿ ಕಣ್ಣು ಅಗಲಿಸಿ, ಎದೆ ಉರಿಯುವಂತೆ ಮಾಡುವ ಸಾಲುಗಳಿವು. ಅವಡುಗಚ್ಚಿ ಸಹಿಸಿಕೊಳ್ಳುತ್ತಿದ್ದರೂ, ಕಣ್ಣಲ್ಲಿ ಕಣ್ಣೀರ ಜೊತೆ ಕಿಡಿಯೂ ಸಿಡಿಯುತ್ತಿರುವಂತಿವೆ ಈ ಸಾಲುಗಳು. ‘ಕಾರುಣ್ಯದ ಮೋಹಕ ನವಿಲುಗಳೆ’ ಎಂಬ ರಮ್ಯವೆನಿಸುವ ಶೀರ್ಷೀಕೆಯೊಳಗೆ ಸುಡು ಕೆಂಡಗಳನ್ನೇ ಇಟ್ಟಿದ್ದಾರೆ ಕವಿ ಆರನಕಟ್ಟೆ ರಂಗನಾಥ. ಶತಮಾನಗಳ ಶೋಷಣೆಯಲ್ಲಿ ಬೆಂದ ಕತೆಗಳನ್ನು ನಮ್ಮ ಅಂಗೈಯಲ್ಲಿ ಸುಡುಸುಡುವಂತೆಯೇ ಇಟ್ಟ ಹಾಗೆನಿಸುತ್ತದೆ. ಈ ಕವಿತೆಗಳನ್ನು ಓದಿ ಮರುಗಬೇಕೆನಿಸುವಷ್ಟರಲ್ಲಿ, ಬೆಚ್ಚಿ ಬೀಳಿಸಿ ಜೀವದ ಘನತೆಯನ್ನೇ ಮರೆತ ನಮ್ಮ ಸಮಾಜದ ಶತಮಾನಗಳ ಶೋಷಣೆಯ ಚಿತ್ರಗಳನ್ನು ಕಟ್ಟಿಕೊಡುತ್ತಾ ಎಚ್ಚರಿಸುತ್ತದೆ.

ಮೂವತ್ತೆಂಟು ಕವಿತೆಗಳ ಈ ಸಂಕಲನದಲ್ಲಿ ಕವಿ ರಂಗನಾಥ ಒಂದು ಮಹಾಪಯಣದ ಕತೆಯನ್ನು ಬಿಡಿಬಿಡಿಯಾಗಿ ವಿವರಿಸಿದ್ದಾರೆ. ತನ್ನ ಅಜ್ಜ, ಅಜ್ಜಿ, ಅಪ್ಪ, ತಾನು ಬೆಳೆದ ಊರು, ದಲಿತ ಹೆಣ್ಣು ಜೀವಗಳ ಮೇಲೆ ನಡೆದ ದೌರ್ಜನ್ಯ, ಶೋಷಣೆಯ ವಿರುದ್ಧದ ಸೆಡವು ಎಲ್ಲವೂ ತೀವ್ರವಾದ ರೂಪಕಗಳೊಂದಿಗೆ ಬಿಚ್ಚಿಕೊಳ್ಳುತ್ತವೆ. ಹೀಗೆ ಬಿಚ್ಚಿಕೊಳ್ಳುವ ಚಿತ್ರಗಳು ನಮ್ಮೊಳಗೆ ಮರುಕ ಹುಟ್ಟಿಸುವಷ್ಟು ತೀವ್ರವಾಗಿದ್ದರೂ, ಉರಿಯ ರೂಪಕಗಳ ಆ ಮರುಕವನ್ನು ಸುಟ್ಟುಹಾಕುತ್ತಾ, ಪ್ರತಿರೋಧ ಮತ್ತು ಹೊಸ ಕಾಲದ ಎಚ್ಚರದವನ್ನು ದಾಖಲಿಸುತ್ತವೆ.

ಹಕ್ಕು, ಹೋರಾಟ, ಶೋಷಣೆಯ ವಿರುದ್ಧದ ಘೋಷಣೆಯ ಸಾಲುಗಳಾಗಿ ಬಿಡುತ್ತವೇನೊ ಅನ್ನಿಸುವಷ್ಟರಲ್ಲೇ ನಮ್ಮನ್ನು ತನ್ನ ಕಾವ್ಯ ತೀವ್ರತೆಯಲ್ಲಿ ತಲ್ಲಣಿಸುವಂತೆ ಮಾಡಿಬಿಡುತ್ತವೆ ಇಲ್ಲಿರುವ ಕವನಗಳ ಸಾಲುಗಳು. ಶತಮಾನಗಳಿಂದ ಜಾತಿ ಹೆಸರಿನಲ್ಲಿ ಮನುಷ್ಯ ಸಹಜ ಘನತೆ, ಸಂವೇದನೆಗಳನ್ನು ಮೀರಿದ ಶೋಷಣೆಯನ್ನು ಪ್ರತಿಯೊಬ್ಬನಲ್ಲೂ ಪಾಪಪ್ರಜ್ಞೆಯಾಗಿಸುವಂತೆ ಕಾಡುತ್ತವೆ. ಊರಿನ ಎಲ್ಲ ಕೆಲಸಗಳನ್ನು ಮಾಡಿ ಊರಿನಂಚಿಗೆ ಬದುಕುವಂತೆ ಮಾಡುವ ಕ್ರೌರ್ಯವಿದೆಯಲ್ಲ ಅದು ಅರಗಿಸಿಕೊಳ್ಳಲಾಗದ್ದು. ಅದನ್ನೇ ಕವಿ,

ಊರು ಕಟ್ಟಿದವರಿಗೆ ಕೇರಿಯವರೆಂದು
ಕಾಲೋನಿಗಳ ಪಟ್ಟವ ಕಟ್ಟಿದ ಪ್ರತಿಷ್ಠೆಗೆ
ಊರು ಸಾರಿದವರ ಸಾವು ಕೋರಿ
ಸಂತಾನಗಳಿಗೆ ಶವ ಕೂಡಿಟ್ಟು ಉಣಿಸಿದಿರಿ
ಎನ್ನುತ್ತಾರೆ,

ದೂರದ ತಂಜಾವೂರಿನಿಂದು ಬಂದು ಆರನಕಟ್ಟೆಯಲ್ಲಿ ಬದುಕು ಕಟ್ಟಿಕೊಂಡ ಅಜ್ಜ ಸುಬ್ಬನ್, ಬೀಡಿಯ ಉರಿಯಲ್ಲಿ ತನ್ನೆಲ್ಲಾ ಕೋಪವನ್ನು ಸುಟ್ಟ ಅಯ್ಯನ್, ತಂಬೂರಿ ರಾಜಮ್ಮ ಇಲ್ಲಿ ಆತ್ಮಾಭಿಮಾನದ ಸಂಕೇತಗಳಾಗಿ, ಹೆಮ್ಮೆಯಾಗಿ ಮೆರೆಯುತ್ತವೆ. ಶೋಷಣೆಯ ನೋವು, ಸಂಕಟ ಕಣ್ಣೀರು ಉಕ್ಕಿಸಿದರೂ ತಡೆದುಕೊಳ್ಳುವುದನ್ನು ಹೇಳುವ ಇಲ್ಲಿನ ಸಾಲುಗಳು ಎದೆಯ ಉರಿಯನ್ನು ನಂದಿಸದೇ ಇಟ್ಟುಕೊಳ್ಳುವ ಹಠವನ್ನು ಪ್ರತಿಧ್ವನಿಸುತ್ತವೆ.

ಪೂರ್ವಿಕರ ಅನುಭವಗಳೊಂದಿಗೆ ತನ್ನ ಅನುಭವವನ್ನು ಬೆರೆಸಿ ನೋಡುವ ಕವಿ, ಈ ಎರಡೂ ನೆಲೆಗಳ ಅಸ್ಮಿತೆಯ ಹಿನ್ನೆಲೆಯಲ್ಲಿ, ಎರಡೂ ನೆಲೆಗಳ ಪುರಾಣ, ಚರಿತ್ರೆ, ಸಂಸ್ಕೃತಿ ಮತ್ತು ಭಾಷೆಗಳನ್ನು ತಮ್ಮ ಕಾವ್ಯದಲ್ಲಿ ತಂದಿದ್ದಾರೆ. ಹಾಗಾಗಿ ಇಲ್ಲಿನ ಕವಿತೆಗಳಲ್ಲಿ ವಿಭಿನ್ನ ಪ್ರತಿಮೆ-ರೂಪಕಗಳು, ನುಡಿಗಟ್ಟುಗಳು ತೀವ್ರವಾಗಿ ಮೂಡಿ ಬಂದಿವೆ. ವಚನ ಚಳುವಳಿಯ ಪಿತಾಮಹ, ಆದಿ ವಚನಕಾರ ಚನ್ನಯ್ಯ, ಜಾಂಬವಮುನಿ, ಹೆಪ್ಪುಮುನಿ, ಬೆಪ್ಪುಮುನಿ, ನಂದನ, ರವಿದಾಸ, ಗಲ್ಲೇಬಾನಿ, ಚಮ್ಮಾವುಗೆಯಂತಹ ಪ್ರತಿಮಾ ಸಂಕೇತಗಳು ಸಂಕಲನದುದ್ದಕ್ಕೂ ಕಾಣಿಸುತ್ತವೆ. ಮಾದರ ಚನ್ನಯ್ಯನ ವಚನದ ಅಂಕಿತವನ್ನು ಕವಿ ಕವಿತೆಯೊಂದರ ಸಾಲನ್ನಾಗಿಸಿದ್ದಾರೆ. ಇಲ್ಲಿನ ಕವಿತೆಗಳಲ್ಲಿ ಮತ್ತೆ ಮತ್ತೆ ಕಾಣಿಸುವ ಮೆಟ್ಟಿನ ಸಂಕೇತ ಪರಂಪರೆಗೂ ಸಮುದಾಯಕ್ಕೂ ಇರುವ ಅಂತಃಕರಣವನ್ನು ಹೇಳುತ್ತದೆ.

ಕವಿ ತನ್ನ, ತನ್ನವರ ಒಡಲ ಸಂಕಟವನ್ನು ಬಿಚ್ಚಿಡುವ ಈ ಕವಿತೆಗಳು ಅಷ್ಟಕ್ಕೆ ಸೀಮಿತವಾಗಿದ್ದರೆ, ಕಾವ್ಯ ಸಾರ್ಥಕತೆಯೂ ಸೀಮಿತವಾಗುತ್ತಿತ್ತೆನೊ! ಸಮುದಾಯದ ಶತಮಾನಗಳ ಸಂಕಟವನ್ನು ಕಿಡಿಯಾಗಿ ಸಿಡಿಸುವುದಷ್ಟೇ ಅಲ್ಲ, ಅದನ್ನು ಮೀರುವ ಬೆಳಕಿನ ದಾರಿಯ ಬಗ್ಗೆಯೂ ಮಾತಾಡಿದ್ದಾರೆ. ಸಂಕಲನದ ಮೊದಲ ಕವಿತೆಯೇ ಬಹಳ ಆಪ್ತ ಹಾಗೂ ಬುದ್ಧ ಬೆಳಕಿನ ಸ್ಪರ್ಶದ ಅನುಭವ ನೀಡುತ್ತದೆ. ಅವ್ವನೆದೆಯ ಅಜ್ಜನ ಅರಿವು ಶೀರ್ಷಿಕೆಯ ಈ ಕವಿತೆಯಲ್ಲಿ, ಅವ್ವ, ಕವಿಗೆ ಅಂಬೇಡ್ಕರ್ ಅವರನ್ನು ಅಜ್ಜನೆಂದು ಪರಿಚಯಿಸುತ್ತಾರೆ.

ಮೈಸವರಿದ ಅವ್ವ
ಮನಸ್ಸಿಗೆ ಬಸಿದ ಮಾತು
ಕೈತೋರಿ ಸದಾ ಪುಸ್ತಕ ಹೊತ್ತಿರುವ
ನಿನ್ನಜ್ಜ ಅಂಬೇಡ್ಕರ್ ಓದಿದ್ದು
ಬೀದಿ ಬಲ್ಪಿನ ಕೆಳಗೆ ಎಂದು
ಒಂದೊಂದೇ ಪದವ ಎದೆಗಿಟ್ಟು…

ಶಿಕ್ಷಣ ಸ್ವಾಭಿಮಾನ, ಮಾನವೀಯತೆಯ ಮೌಲ್ಯ ಕವಿಯ ಎಳೆಯ ಎದೆಗೆ ಎರೆಯುವ ತಾಯಿಯನ್ನು ಈ ಕವಿತೆ ಕಟ್ಟಿಕೊಡುತ್ತದೆ. ತಮ್ಮೆಲ್ಲ ಸಂಕಟಗಳ ಬಿಡುಗಡೆಯ ಬೆಳಕಾಗಿ ಹೊಮ್ಮುತ್ತದೆ. ಇದೇ ಪರಂಪರೆಯುದ್ದಕ್ಕೂ ಕಾಡಿದ ಶೋಷಣೆಗೆ ಇದೇ ಪರಿಹಾರ ಮಾರ್ಗವೆಂದು ದಾಖಲಿಸುತ್ತದೆ.

ಗಂಡು ಒಂದು ರೀತಿಯ ಶೋಷಣೆಗೆ ಒಳಗಾಗುತ್ತಿದ್ದರೆ, ಹೆಣ್ಣಿನ ಮೇಲೆ ನಡೆವ ದೌರ್ಜನ್ಯದ ಭೀಕರತೆಯನ್ನು ಕವಿ ರೂಪಕಗಳಲ್ಲಿ ಅಲುಗಾಡಿಸಿಬಿಡುತ್ತಾರೆ. ಅಸಹಾಯಕತೆ ಒಂದೆಡೆ, ಅಂತಹ ಸಂದರ್ಭ ಸೃಷ್ಟಿಸಿ ಶೋಷಿಸುವ ಮನಸ್ಸುಗಳನ್ನು ಇನ್ನೊಂದೆಡೆ. ಅನ್ನಕ್ಕಾಗಿ ಅಂಗಲಾಚುವ ಹೆಣ್ಣಿನ ಮುಂದೆ ಕಾಮತೃಷೆ ತೀರಿಸುವ ಕೋರಿಕೆ ಇಡುವುದು, ಬದುಕು ಕಟ್ಟಿಕೊಳ್ಳುವುದಕ್ಕಾಗಿ ತನ್ನ ದೇಹವನ್ನು ಮಾರಿಕೊಳ್ಳಬೇಕಾದ ಸ್ಥಿತಿ ತಲುಪಿದ ಹೆಣ್ಣು ಎದುರಿಸುವ ಕ್ರೌರ್ಯವನ್ನು ಕವಿತೆಗಳು ಮಾತಾಡುತ್ತವೆ. ಅತ್ಯಾಚಾರ, ಕೊಲೆಗೆ ಗುರಿಯಾದ ಮುಗ್ದ ಜೀವಗಳನ್ನು ಕವಿ ನಮಗೆ ಎದುರಾಗಿಸುವ ರೀತಿ ಹೃದಯವನ್ನು ಕರಗಿಸುತ್ತದೆ, ಕೆಲವೊಮ್ಮೆ ನಡುಗಿಸುತ್ತದೆ ಕೂಡ. ಮನುಷ್ಯ ಘನತೆ, ಮಾನವೀಯತೆಯ ಹಂಬಲವನ್ನು ಧ್ಯಾನಿಸುತ್ತಾ ಅದನ್ನು ಕಾಲದ ಎಲ್ಲ ಶೋಷಣೆಗಳಿಗೆ ಮುಖಾಮುಖಿಯಾಗಿಸುತ್ತಾರೆ ಕವಿ ರಂಗನಾಥ್.

ಪ್ರೀತಿ, ವಿರಹಗಳನ್ನು ಧ್ಯಾನಿಸುವ ರಂಗನಾಥ್ ರಾಜಕೀಯ ಬೆಳವಣಿಗೆಗಳನ್ನೂ ಕಾವ್ಯದ ವಸ್ತುವಾಗಿಸಿಕೊಂಡಿದ್ದಾರೆ. ಜಲದ ಪಾದುಕೆಯ ಹಾಡು, ಈ ಸುದ್ದಿ ಇಂದಿನ ವರದಿಯಾಗಿಯೇ ಉಳಿಯಬೇಕಿಲ್ಲ, ದಲಿತರಾಗುವುದೆಂದರೆ ಎಷ್ಟು ಸಡಗರ, ಅಲೆದಷ್ಟು ಅನಾಥಗೊಂಡ ಪಾದಗಳು, ಅವ್ವನೆದೆಯ ಅಜ್ಜನ ಅರಿವು, ಕರಿಯಜ್ಜನ ಯಶೋಗಾಥೆ, ಉರಿಪಾದದ ನೆರಳಲ್ಲಿ, ಕರಿ ಮೈಯ್ಯ ಕಸುವು ಬಹಳ ಮುಖ್ಯವಾದ ಕವಿತೆಗಳು.

ಪರಂಪರೆಯ ಎಲ್ಲ ನೆನಪುಗಳನ್ನು ಕೆದಕುತ್ತಾ, ತಮ್ಮ ಅಸ್ಮಿತೆಯನ್ನು ಅನಾವರಣ ಮಾಡುತ್ತಲೇ ಅದನ್ನು ಒಡೆದು ನಿಲ್ಲಲು ಯತ್ನಿಸುವ ಇಲ್ಲಿನ ಕವಿತೆಗಳು, ಈ ಮಹಾಪಯಣದಲ್ಲಿ ಎಂದೂ ಹಂಗಿನಲಿ ಬಾಳದ ಉದಾಹರಣೆಗಳನ್ನು ಧ್ಯಾನಿಸುತ್ತಾ, ತನ್ನ ಕಾಲದ ದನಿಯನ್ನು ತೀಕ್ಷ್ಣವಾಗಿಯೂ ತೀವ್ರವಾಗಿಯೂ ಕವಿ ರಂಗನಾಥ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬದಿಕಿರುವುದೇ ಕಥೆ ಹೇಳಲಿಕ್ಕೆ ಎಂದು ಬರೆದು ಬದುಕಿದ ಲ್ಯಾಟಿನ್ ಅಮೆರಿಕನ್ ಲೇಖಕ ಮಾರ್ಕ್ವೆಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವಿಮರ್ಶೆ ಅದ್ಬುತ ವಾಗಿದೆ ಸರ್
    ಕವಿಯ ಅಂತರಾಳವ ಹೊಕ್ಕು ಪರಿಚಯಿಸಿದಿರಿ ಸರ್

  2. ಕವಿಯ ಹಿನ್ನೆಲೆಯ ಕ್ಯಾನ್ವಾಸಿನಲ್ಲಿ ಕವನದ ಸೊಗಸಾದ ಚಿತ್ರವನ್ನು ಹೇಗೆ ಕವಿ ಅಭಿವ್ಯಕ್ತಿಸಿದ್ದಾರೆಂದು ಸೊಗಸಿನ ವಿಮರ್ಶೆ ಮಾಡಿರುವುದು ಮುದ ನೀಡಿದೆ. ಪ್ರತಿಮೆಯಾದ ಮೆಟ್ಟು ಮೆಟ್ಟುವ ಜನ ಮೆಟ್ಟಸೃಷ್ಟಿಶಿದವರ ಮುಟ್ಟದಿರುವುದು ಈ ಸಮಾಜದ ಕೊಳೆತ ಮನಸಿನ ಘಾಟು ರಾಚಬೇಕಿತ್ತು‌ ಇನ್ನೂ.

    ವಿಮರ್ಶಕರಿಗೆ ಮತ್ತು ಕವಿವರ್ಯರಿಗೆ ಅಭಿನಂದನೆಗಳು

    ಜಯರಾಮ.ಸಿ.ವಿ. ನಾಗಮಂಗಲ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...