Homeನ್ಯಾಯ ಪಥಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

ಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

- Advertisement -
- Advertisement -

ಉರಿಪಾದದ ನೆರಳಲ್ಲಿ
ತೊಡೆಯ ತೊಗಲ ಸುಲಿದು
ಮೆಟ್ಟಲೆಂದೇ ಅಟ್ಟೆಕಟ್ಟಿದ್ದ ಮಾದರ
ಕುಡಿ ಮಕ್ಕಳ ಚರ್ಮವ ಸುಲಿದು
ನಟ್ಟ ನಡುಬೀದಿಯಲ್ಲಿ ಕೆಡವಿ
ಕ್ಯಾಕರಿಸುವವರ ಉಘೇ ಉಘೇಯ
ಜೊಲ್ಲು ಸುರಿದು ನಾರುತ್ತಿದೆ ನಾಡು..

ಒಂದು ಕ್ಷಣ ಮೈಕೊಡವಿ ಕಣ್ಣು ಅಗಲಿಸಿ, ಎದೆ ಉರಿಯುವಂತೆ ಮಾಡುವ ಸಾಲುಗಳಿವು. ಅವಡುಗಚ್ಚಿ ಸಹಿಸಿಕೊಳ್ಳುತ್ತಿದ್ದರೂ, ಕಣ್ಣಲ್ಲಿ ಕಣ್ಣೀರ ಜೊತೆ ಕಿಡಿಯೂ ಸಿಡಿಯುತ್ತಿರುವಂತಿವೆ ಈ ಸಾಲುಗಳು. ‘ಕಾರುಣ್ಯದ ಮೋಹಕ ನವಿಲುಗಳೆ’ ಎಂಬ ರಮ್ಯವೆನಿಸುವ ಶೀರ್ಷೀಕೆಯೊಳಗೆ ಸುಡು ಕೆಂಡಗಳನ್ನೇ ಇಟ್ಟಿದ್ದಾರೆ ಕವಿ ಆರನಕಟ್ಟೆ ರಂಗನಾಥ. ಶತಮಾನಗಳ ಶೋಷಣೆಯಲ್ಲಿ ಬೆಂದ ಕತೆಗಳನ್ನು ನಮ್ಮ ಅಂಗೈಯಲ್ಲಿ ಸುಡುಸುಡುವಂತೆಯೇ ಇಟ್ಟ ಹಾಗೆನಿಸುತ್ತದೆ. ಈ ಕವಿತೆಗಳನ್ನು ಓದಿ ಮರುಗಬೇಕೆನಿಸುವಷ್ಟರಲ್ಲಿ, ಬೆಚ್ಚಿ ಬೀಳಿಸಿ ಜೀವದ ಘನತೆಯನ್ನೇ ಮರೆತ ನಮ್ಮ ಸಮಾಜದ ಶತಮಾನಗಳ ಶೋಷಣೆಯ ಚಿತ್ರಗಳನ್ನು ಕಟ್ಟಿಕೊಡುತ್ತಾ ಎಚ್ಚರಿಸುತ್ತದೆ.

ಮೂವತ್ತೆಂಟು ಕವಿತೆಗಳ ಈ ಸಂಕಲನದಲ್ಲಿ ಕವಿ ರಂಗನಾಥ ಒಂದು ಮಹಾಪಯಣದ ಕತೆಯನ್ನು ಬಿಡಿಬಿಡಿಯಾಗಿ ವಿವರಿಸಿದ್ದಾರೆ. ತನ್ನ ಅಜ್ಜ, ಅಜ್ಜಿ, ಅಪ್ಪ, ತಾನು ಬೆಳೆದ ಊರು, ದಲಿತ ಹೆಣ್ಣು ಜೀವಗಳ ಮೇಲೆ ನಡೆದ ದೌರ್ಜನ್ಯ, ಶೋಷಣೆಯ ವಿರುದ್ಧದ ಸೆಡವು ಎಲ್ಲವೂ ತೀವ್ರವಾದ ರೂಪಕಗಳೊಂದಿಗೆ ಬಿಚ್ಚಿಕೊಳ್ಳುತ್ತವೆ. ಹೀಗೆ ಬಿಚ್ಚಿಕೊಳ್ಳುವ ಚಿತ್ರಗಳು ನಮ್ಮೊಳಗೆ ಮರುಕ ಹುಟ್ಟಿಸುವಷ್ಟು ತೀವ್ರವಾಗಿದ್ದರೂ, ಉರಿಯ ರೂಪಕಗಳ ಆ ಮರುಕವನ್ನು ಸುಟ್ಟುಹಾಕುತ್ತಾ, ಪ್ರತಿರೋಧ ಮತ್ತು ಹೊಸ ಕಾಲದ ಎಚ್ಚರದವನ್ನು ದಾಖಲಿಸುತ್ತವೆ.

ಹಕ್ಕು, ಹೋರಾಟ, ಶೋಷಣೆಯ ವಿರುದ್ಧದ ಘೋಷಣೆಯ ಸಾಲುಗಳಾಗಿ ಬಿಡುತ್ತವೇನೊ ಅನ್ನಿಸುವಷ್ಟರಲ್ಲೇ ನಮ್ಮನ್ನು ತನ್ನ ಕಾವ್ಯ ತೀವ್ರತೆಯಲ್ಲಿ ತಲ್ಲಣಿಸುವಂತೆ ಮಾಡಿಬಿಡುತ್ತವೆ ಇಲ್ಲಿರುವ ಕವನಗಳ ಸಾಲುಗಳು. ಶತಮಾನಗಳಿಂದ ಜಾತಿ ಹೆಸರಿನಲ್ಲಿ ಮನುಷ್ಯ ಸಹಜ ಘನತೆ, ಸಂವೇದನೆಗಳನ್ನು ಮೀರಿದ ಶೋಷಣೆಯನ್ನು ಪ್ರತಿಯೊಬ್ಬನಲ್ಲೂ ಪಾಪಪ್ರಜ್ಞೆಯಾಗಿಸುವಂತೆ ಕಾಡುತ್ತವೆ. ಊರಿನ ಎಲ್ಲ ಕೆಲಸಗಳನ್ನು ಮಾಡಿ ಊರಿನಂಚಿಗೆ ಬದುಕುವಂತೆ ಮಾಡುವ ಕ್ರೌರ್ಯವಿದೆಯಲ್ಲ ಅದು ಅರಗಿಸಿಕೊಳ್ಳಲಾಗದ್ದು. ಅದನ್ನೇ ಕವಿ,

ಊರು ಕಟ್ಟಿದವರಿಗೆ ಕೇರಿಯವರೆಂದು
ಕಾಲೋನಿಗಳ ಪಟ್ಟವ ಕಟ್ಟಿದ ಪ್ರತಿಷ್ಠೆಗೆ
ಊರು ಸಾರಿದವರ ಸಾವು ಕೋರಿ
ಸಂತಾನಗಳಿಗೆ ಶವ ಕೂಡಿಟ್ಟು ಉಣಿಸಿದಿರಿ
ಎನ್ನುತ್ತಾರೆ,

ದೂರದ ತಂಜಾವೂರಿನಿಂದು ಬಂದು ಆರನಕಟ್ಟೆಯಲ್ಲಿ ಬದುಕು ಕಟ್ಟಿಕೊಂಡ ಅಜ್ಜ ಸುಬ್ಬನ್, ಬೀಡಿಯ ಉರಿಯಲ್ಲಿ ತನ್ನೆಲ್ಲಾ ಕೋಪವನ್ನು ಸುಟ್ಟ ಅಯ್ಯನ್, ತಂಬೂರಿ ರಾಜಮ್ಮ ಇಲ್ಲಿ ಆತ್ಮಾಭಿಮಾನದ ಸಂಕೇತಗಳಾಗಿ, ಹೆಮ್ಮೆಯಾಗಿ ಮೆರೆಯುತ್ತವೆ. ಶೋಷಣೆಯ ನೋವು, ಸಂಕಟ ಕಣ್ಣೀರು ಉಕ್ಕಿಸಿದರೂ ತಡೆದುಕೊಳ್ಳುವುದನ್ನು ಹೇಳುವ ಇಲ್ಲಿನ ಸಾಲುಗಳು ಎದೆಯ ಉರಿಯನ್ನು ನಂದಿಸದೇ ಇಟ್ಟುಕೊಳ್ಳುವ ಹಠವನ್ನು ಪ್ರತಿಧ್ವನಿಸುತ್ತವೆ.

ಪೂರ್ವಿಕರ ಅನುಭವಗಳೊಂದಿಗೆ ತನ್ನ ಅನುಭವವನ್ನು ಬೆರೆಸಿ ನೋಡುವ ಕವಿ, ಈ ಎರಡೂ ನೆಲೆಗಳ ಅಸ್ಮಿತೆಯ ಹಿನ್ನೆಲೆಯಲ್ಲಿ, ಎರಡೂ ನೆಲೆಗಳ ಪುರಾಣ, ಚರಿತ್ರೆ, ಸಂಸ್ಕೃತಿ ಮತ್ತು ಭಾಷೆಗಳನ್ನು ತಮ್ಮ ಕಾವ್ಯದಲ್ಲಿ ತಂದಿದ್ದಾರೆ. ಹಾಗಾಗಿ ಇಲ್ಲಿನ ಕವಿತೆಗಳಲ್ಲಿ ವಿಭಿನ್ನ ಪ್ರತಿಮೆ-ರೂಪಕಗಳು, ನುಡಿಗಟ್ಟುಗಳು ತೀವ್ರವಾಗಿ ಮೂಡಿ ಬಂದಿವೆ. ವಚನ ಚಳುವಳಿಯ ಪಿತಾಮಹ, ಆದಿ ವಚನಕಾರ ಚನ್ನಯ್ಯ, ಜಾಂಬವಮುನಿ, ಹೆಪ್ಪುಮುನಿ, ಬೆಪ್ಪುಮುನಿ, ನಂದನ, ರವಿದಾಸ, ಗಲ್ಲೇಬಾನಿ, ಚಮ್ಮಾವುಗೆಯಂತಹ ಪ್ರತಿಮಾ ಸಂಕೇತಗಳು ಸಂಕಲನದುದ್ದಕ್ಕೂ ಕಾಣಿಸುತ್ತವೆ. ಮಾದರ ಚನ್ನಯ್ಯನ ವಚನದ ಅಂಕಿತವನ್ನು ಕವಿ ಕವಿತೆಯೊಂದರ ಸಾಲನ್ನಾಗಿಸಿದ್ದಾರೆ. ಇಲ್ಲಿನ ಕವಿತೆಗಳಲ್ಲಿ ಮತ್ತೆ ಮತ್ತೆ ಕಾಣಿಸುವ ಮೆಟ್ಟಿನ ಸಂಕೇತ ಪರಂಪರೆಗೂ ಸಮುದಾಯಕ್ಕೂ ಇರುವ ಅಂತಃಕರಣವನ್ನು ಹೇಳುತ್ತದೆ.

ಕವಿ ತನ್ನ, ತನ್ನವರ ಒಡಲ ಸಂಕಟವನ್ನು ಬಿಚ್ಚಿಡುವ ಈ ಕವಿತೆಗಳು ಅಷ್ಟಕ್ಕೆ ಸೀಮಿತವಾಗಿದ್ದರೆ, ಕಾವ್ಯ ಸಾರ್ಥಕತೆಯೂ ಸೀಮಿತವಾಗುತ್ತಿತ್ತೆನೊ! ಸಮುದಾಯದ ಶತಮಾನಗಳ ಸಂಕಟವನ್ನು ಕಿಡಿಯಾಗಿ ಸಿಡಿಸುವುದಷ್ಟೇ ಅಲ್ಲ, ಅದನ್ನು ಮೀರುವ ಬೆಳಕಿನ ದಾರಿಯ ಬಗ್ಗೆಯೂ ಮಾತಾಡಿದ್ದಾರೆ. ಸಂಕಲನದ ಮೊದಲ ಕವಿತೆಯೇ ಬಹಳ ಆಪ್ತ ಹಾಗೂ ಬುದ್ಧ ಬೆಳಕಿನ ಸ್ಪರ್ಶದ ಅನುಭವ ನೀಡುತ್ತದೆ. ಅವ್ವನೆದೆಯ ಅಜ್ಜನ ಅರಿವು ಶೀರ್ಷಿಕೆಯ ಈ ಕವಿತೆಯಲ್ಲಿ, ಅವ್ವ, ಕವಿಗೆ ಅಂಬೇಡ್ಕರ್ ಅವರನ್ನು ಅಜ್ಜನೆಂದು ಪರಿಚಯಿಸುತ್ತಾರೆ.

ಮೈಸವರಿದ ಅವ್ವ
ಮನಸ್ಸಿಗೆ ಬಸಿದ ಮಾತು
ಕೈತೋರಿ ಸದಾ ಪುಸ್ತಕ ಹೊತ್ತಿರುವ
ನಿನ್ನಜ್ಜ ಅಂಬೇಡ್ಕರ್ ಓದಿದ್ದು
ಬೀದಿ ಬಲ್ಪಿನ ಕೆಳಗೆ ಎಂದು
ಒಂದೊಂದೇ ಪದವ ಎದೆಗಿಟ್ಟು…

ಶಿಕ್ಷಣ ಸ್ವಾಭಿಮಾನ, ಮಾನವೀಯತೆಯ ಮೌಲ್ಯ ಕವಿಯ ಎಳೆಯ ಎದೆಗೆ ಎರೆಯುವ ತಾಯಿಯನ್ನು ಈ ಕವಿತೆ ಕಟ್ಟಿಕೊಡುತ್ತದೆ. ತಮ್ಮೆಲ್ಲ ಸಂಕಟಗಳ ಬಿಡುಗಡೆಯ ಬೆಳಕಾಗಿ ಹೊಮ್ಮುತ್ತದೆ. ಇದೇ ಪರಂಪರೆಯುದ್ದಕ್ಕೂ ಕಾಡಿದ ಶೋಷಣೆಗೆ ಇದೇ ಪರಿಹಾರ ಮಾರ್ಗವೆಂದು ದಾಖಲಿಸುತ್ತದೆ.

ಗಂಡು ಒಂದು ರೀತಿಯ ಶೋಷಣೆಗೆ ಒಳಗಾಗುತ್ತಿದ್ದರೆ, ಹೆಣ್ಣಿನ ಮೇಲೆ ನಡೆವ ದೌರ್ಜನ್ಯದ ಭೀಕರತೆಯನ್ನು ಕವಿ ರೂಪಕಗಳಲ್ಲಿ ಅಲುಗಾಡಿಸಿಬಿಡುತ್ತಾರೆ. ಅಸಹಾಯಕತೆ ಒಂದೆಡೆ, ಅಂತಹ ಸಂದರ್ಭ ಸೃಷ್ಟಿಸಿ ಶೋಷಿಸುವ ಮನಸ್ಸುಗಳನ್ನು ಇನ್ನೊಂದೆಡೆ. ಅನ್ನಕ್ಕಾಗಿ ಅಂಗಲಾಚುವ ಹೆಣ್ಣಿನ ಮುಂದೆ ಕಾಮತೃಷೆ ತೀರಿಸುವ ಕೋರಿಕೆ ಇಡುವುದು, ಬದುಕು ಕಟ್ಟಿಕೊಳ್ಳುವುದಕ್ಕಾಗಿ ತನ್ನ ದೇಹವನ್ನು ಮಾರಿಕೊಳ್ಳಬೇಕಾದ ಸ್ಥಿತಿ ತಲುಪಿದ ಹೆಣ್ಣು ಎದುರಿಸುವ ಕ್ರೌರ್ಯವನ್ನು ಕವಿತೆಗಳು ಮಾತಾಡುತ್ತವೆ. ಅತ್ಯಾಚಾರ, ಕೊಲೆಗೆ ಗುರಿಯಾದ ಮುಗ್ದ ಜೀವಗಳನ್ನು ಕವಿ ನಮಗೆ ಎದುರಾಗಿಸುವ ರೀತಿ ಹೃದಯವನ್ನು ಕರಗಿಸುತ್ತದೆ, ಕೆಲವೊಮ್ಮೆ ನಡುಗಿಸುತ್ತದೆ ಕೂಡ. ಮನುಷ್ಯ ಘನತೆ, ಮಾನವೀಯತೆಯ ಹಂಬಲವನ್ನು ಧ್ಯಾನಿಸುತ್ತಾ ಅದನ್ನು ಕಾಲದ ಎಲ್ಲ ಶೋಷಣೆಗಳಿಗೆ ಮುಖಾಮುಖಿಯಾಗಿಸುತ್ತಾರೆ ಕವಿ ರಂಗನಾಥ್.

ಪ್ರೀತಿ, ವಿರಹಗಳನ್ನು ಧ್ಯಾನಿಸುವ ರಂಗನಾಥ್ ರಾಜಕೀಯ ಬೆಳವಣಿಗೆಗಳನ್ನೂ ಕಾವ್ಯದ ವಸ್ತುವಾಗಿಸಿಕೊಂಡಿದ್ದಾರೆ. ಜಲದ ಪಾದುಕೆಯ ಹಾಡು, ಈ ಸುದ್ದಿ ಇಂದಿನ ವರದಿಯಾಗಿಯೇ ಉಳಿಯಬೇಕಿಲ್ಲ, ದಲಿತರಾಗುವುದೆಂದರೆ ಎಷ್ಟು ಸಡಗರ, ಅಲೆದಷ್ಟು ಅನಾಥಗೊಂಡ ಪಾದಗಳು, ಅವ್ವನೆದೆಯ ಅಜ್ಜನ ಅರಿವು, ಕರಿಯಜ್ಜನ ಯಶೋಗಾಥೆ, ಉರಿಪಾದದ ನೆರಳಲ್ಲಿ, ಕರಿ ಮೈಯ್ಯ ಕಸುವು ಬಹಳ ಮುಖ್ಯವಾದ ಕವಿತೆಗಳು.

ಪರಂಪರೆಯ ಎಲ್ಲ ನೆನಪುಗಳನ್ನು ಕೆದಕುತ್ತಾ, ತಮ್ಮ ಅಸ್ಮಿತೆಯನ್ನು ಅನಾವರಣ ಮಾಡುತ್ತಲೇ ಅದನ್ನು ಒಡೆದು ನಿಲ್ಲಲು ಯತ್ನಿಸುವ ಇಲ್ಲಿನ ಕವಿತೆಗಳು, ಈ ಮಹಾಪಯಣದಲ್ಲಿ ಎಂದೂ ಹಂಗಿನಲಿ ಬಾಳದ ಉದಾಹರಣೆಗಳನ್ನು ಧ್ಯಾನಿಸುತ್ತಾ, ತನ್ನ ಕಾಲದ ದನಿಯನ್ನು ತೀಕ್ಷ್ಣವಾಗಿಯೂ ತೀವ್ರವಾಗಿಯೂ ಕವಿ ರಂಗನಾಥ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬದಿಕಿರುವುದೇ ಕಥೆ ಹೇಳಲಿಕ್ಕೆ ಎಂದು ಬರೆದು ಬದುಕಿದ ಲ್ಯಾಟಿನ್ ಅಮೆರಿಕನ್ ಲೇಖಕ ಮಾರ್ಕ್ವೆಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವಿಮರ್ಶೆ ಅದ್ಬುತ ವಾಗಿದೆ ಸರ್
    ಕವಿಯ ಅಂತರಾಳವ ಹೊಕ್ಕು ಪರಿಚಯಿಸಿದಿರಿ ಸರ್

  2. ಕವಿಯ ಹಿನ್ನೆಲೆಯ ಕ್ಯಾನ್ವಾಸಿನಲ್ಲಿ ಕವನದ ಸೊಗಸಾದ ಚಿತ್ರವನ್ನು ಹೇಗೆ ಕವಿ ಅಭಿವ್ಯಕ್ತಿಸಿದ್ದಾರೆಂದು ಸೊಗಸಿನ ವಿಮರ್ಶೆ ಮಾಡಿರುವುದು ಮುದ ನೀಡಿದೆ. ಪ್ರತಿಮೆಯಾದ ಮೆಟ್ಟು ಮೆಟ್ಟುವ ಜನ ಮೆಟ್ಟಸೃಷ್ಟಿಶಿದವರ ಮುಟ್ಟದಿರುವುದು ಈ ಸಮಾಜದ ಕೊಳೆತ ಮನಸಿನ ಘಾಟು ರಾಚಬೇಕಿತ್ತು‌ ಇನ್ನೂ.

    ವಿಮರ್ಶಕರಿಗೆ ಮತ್ತು ಕವಿವರ್ಯರಿಗೆ ಅಭಿನಂದನೆಗಳು

    ಜಯರಾಮ.ಸಿ.ವಿ. ನಾಗಮಂಗಲ.

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...