Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆಬರಿಯ ನೆನಪಲ್ಲ: ಪ್ಯಾಲಸ್ತೇನ್ ಸಮಸ್ಯೆಯ ಬಗ್ಗೆ ವಿಮರ್ಶಾತ್ಮಕ ಅನುಸಂಧಾನ

ಬರಿಯ ನೆನಪಲ್ಲ: ಪ್ಯಾಲಸ್ತೇನ್ ಸಮಸ್ಯೆಯ ಬಗ್ಗೆ ವಿಮರ್ಶಾತ್ಮಕ ಅನುಸಂಧಾನ

- Advertisement -
- Advertisement -

ಕನ್ನಡದಲ್ಲಿ ಪ್ರತಿವರ್ಷ ನೂರಾರು ಅನುವಾದ ಕೃತಿಗಳು ಪ್ರಕಟವಾಗುತ್ತವೆ. ಹೆಚ್ಚಿನವು ಕಥೆ ಕಾದಂಬರಿ ಕಾವ್ಯಗಳು. ವಿಚಾರಸಾಹಿತ್ಯ, ಚರಿತ್ರೆ, ಆತ್ಮಕಥನ, ಪ್ರವಾಸಕಥನಗಳು ಕಡಿಮೆ. ಹೀಗಿರುತ್ತ ಯುವಲೇಖಕ ಆರ್.ಕೆ. ಆಕರ್ಷ, ಭೂಮಂಡಲದ ಗಾಯವೆನಿಸಿಕೊಂಡಿರುವ ಪ್ಯಾಲಸ್ತೇನಿಗೆ ಸಂಬಂಧಿಸಿದ ಅನುಭವ ಕಥನವೊಂದನ್ನು ಅನುವಾದಿಸಿರುವುದು ವಿಶಿಷ್ಟವಾಗಿದೆ. ಇದು ಏಶ್ಯಾ-ಆಫ್ರಿಕಾದ ಬೇರೆಬೇರೆ ದೇಶಗಳಿಗೆ ಹೋಗಿ, ಅಲ್ಲಿನ ಜನರೊಂದಿಗೆ ಮಾತುಕತೆಯಾಡಿ, ಆ ನಾಡುಗಳ ಸಂಘರ್ಷಮಯ ಕಥನಗಳನ್ನು ರಚಿಸುವುದಕ್ಕೆ ಖ್ಯಾತರಾಗಿರುವ ಕೆನಡಾದ ಲೇಖಕ ಸಿಂಟಿಯೊ ಅವರ ‘ಪೇ ನೋ ಹೀಡ್ ಟು ದಿ ರಾಕೆಟ್ಸ್: ಪ್ಯಾಲೆಸ್ಟೈನ್ ಇನ್ ಪ್ರೆಸೆಂಟ್ ಟೆನ್ಸ್’ ಕೃತಿಯ ತರ್ಜುಮೆ. ‘ನಾನು ಅರೆಬಿಕ್‌ನಲ್ಲಿ ಪ್ರೀತಿಸುತ್ತೇನೆ’ ‘ನಾನೀಗ ಸೈರನ್ನುಗಳಿಗೆ ಹೆದರುವುದಿಲ್ಲ’ ‘ನಿಮ್ಮದೇ ಮುಳ್ಳುಗಳನ್ನು ನಿಮ್ಮ ಕೈಯಿಂದ ಕಿತ್ತುಕೊಳ್ಳುತ್ತ’ ಮೊದಲಾದ ಎಂಟು ಅಧ್ಯಾಯಗಳುಳ್ಳ ಪುಸ್ತಕವಿದು. ಪ್ರತಿ ಅಧ್ಯಾಯವೂ ಒಬ್ಬೊಬ್ಬ ಪ್ಯಾಲಸ್ತೇನಿ ಹೋರಾಟಗಾರ-ಲೇಖಕರನ್ನು ಭೇಟಿಯಾಗಿ ನಡೆಸಲಾದ ಮಾತುಕತೆ ಮತ್ತು ವಿಶ್ಲೇಷಣೆಯನ್ನು ಒಳಗೊಂಡಿದೆ. ಇಸ್ರೇಲ್ ಮತ್ತು ಅಮೆರಿಕಗಳು ಆಕ್ರಮಣಕಾರಿ ರಾಜಕೀಯ ಧೋರಣೆಯ ಫಲವಾಗಿ ಲೋಕದ ಕಣ್ಣಲ್ಲಿ ಉಗ್ರಗಾಮಿಗಳಾಗಿರುವ, ಆದರೆ ತಮ್ಮ ಪೂರ್ವಜರಿಂದ ಬಂದ ಜಮೀನು ಮನೆ ತೋಟ ಗ್ರಂಥಭಂಡಾರಗಳನ್ನು ಕಳೆದುಕೊಂಡು, ಘನತೆಯ ಬದುಕಿಗಾಗಿ ಹೋರಾಡುತ್ತಿರುವ ಜನರ ದುಃಖದುಮ್ಮಾನಗಳ ಅನುಭವ ಮತ್ತು ಚಿಂತನೆಯನ್ನು ಇಲ್ಲಿರುವ ಕಥನವು ಒಳಗೊಂಡಿದೆ. ಇದನ್ನು ಓದುತ್ತಿದ್ದರೆ ಸಾಹಿತ್ಯಕ ತಾತ್ವಿಕ ರಾಜಕೀಯ ತತ್ವಗಳ ಕಿಡಿಗಳೇ ತುಂಬಿದ ಕೊಂಡದಲ್ಲಿ ಹಾಯುವಂತಹ ಅನುಭವವಾಗುತ್ತದೆ.

ನಾನು ಇಸ್ರೇಲ್ ಮತ್ತು ಪ್ಯಾಲೆಸ್ತೇನಿನ ಪ್ರವಾಸ ಮಾಡಿದ್ದೆ. ರಾಜಕೀಯ ಚರ್ಚೆ ಮಾಡುವುದಕ್ಕೆಂದೇ ಇರುವ ಕಾಫಿಕ್ಲಬ್ಬುಗಳನ್ನು ಬೆತ್ಲೆಹೆಂನಲ್ಲಿ ನೋಡಿದ್ದೆ. ಪಶ್ಚಿಮದಂಡೆಯ ಹೆಬ್ರೋನ್ ಜೆರಿಕಾ ಮೊದಲಾದ ಪಟ್ಟಣಗಳಲ್ಲಿ ತಿರುಗಾಡುವಾಗ, ಪ್ಯಾಲಸ್ಟೇನಿಯರ ಊರುಗಳನ್ನು ಬೆಟ್ಟತೋಟಗಳನ್ನು ಒತ್ತುವರಿ ಮಾಡುತ್ತ ಇಸ್ರೇಲಿ ಸರ್ಕಾರವು ಯಹೂದಿಗಳಿಗೆ ಮನೆಗಳನ್ನು ಕಟ್ಟಿಕೊಡುವುದನ್ನು, ಬೃಹತ್ ಗೋಡೆಗಳನ್ನು ನಿರ್ಮಿಸುವುದನ್ನು ಗಮನಿಸಿದ್ದೆ. ಆದರೆ ಅಲ್ಲಿನ ಹೋರಾಟಗಳ ಬಗ್ಗೆ ನೇರವಾಗಿ ಯಾರೊಟ್ಟಿಗೂ ಮಾತಾಡಲು ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನನಗೆ ಈ ಪುಸ್ತಕವು ನನ್ನ ತಿರುಗಾಟದ ಕೊರತೆಗಳನ್ನು ತುಂಬಿಕೊಡುವ ಸಮೃದ್ಧ ಅನುಭವ ನೀಡಿತು. ಇಸ್ರೇಲಿನ ಸೈನಿಕರ ನಿಷ್ಠುರ ತಪಾಸಣೆಯಲ್ಲಿ ಒಂದೇ ಊರಲ್ಲಿರುವ ಬೇರೆಬೇರೆ ಭಾಗಗಳಿಗೆ ಹೋಗಲು ಚೆಕ್‌ಪಾಯಿಂಟುಗಳನ್ನು ದಾಟುವ ಕಷ್ಟವನ್ನು ಕುರಿತ ಇಲ್ಲಿನ ಭಾಗಗಳು ಪ್ರವಾಸಿಗರಾಗಿ ಹೋಗುವ ಎಲ್ಲರ ಅನುಭವಕ್ಕೂ ಬರುತ್ತವೆ. ಆದರೆ ಪ್ಯಾಲೆಸ್ತೇನಿಯರಿಗೆ ಈ ಅಪಮಾನಜನಕ ದಾಟುವಿಕೆ ನಿತ್ಯದ ಅನುಭವವಾಗಿದೆ.

ನೋವು ಹೋರಾಟ ಸಾವು ಹೊರದಬ್ಬುವಿಕೆ ಅನಾಥಪ್ರಜ್ಞೆಗಳ ಅಗ್ನಿಪರ್ವತದಂತಿರುವ ಸಂಘರ್ಷಮಯ ಪ್ರದೇಶದಲ್ಲಿ ಸಾಹಿತ್ಯದಂತಹ ಕಲೆಯೊಂದು ಏನು ಮಾಡಬಲ್ಲದು ಎಂಬುದಕ್ಕೆ, ಈ ಕೃತಿಯಲ್ಲಿರುವ ದಾಖಲೆ ಮಾತುಕತೆ ವಿಶ್ಲೇಷಣೆ ವ್ಯಾಖ್ಯಾನಗಳು ಸಾಕ್ಷಿಯಂತಿವೆ. ಪ್ಯಾಲೆಸ್ತೇನಿ ಲೇಖಕರು ಹೇಳಿಕೊಂಡಿರುವ ಅನುಭವಗಳು ಮೈಜುಂ ಅನಿಸುವಂತಿವೆ. ಒಮ್ಮೆ ಕವಿ ಮೊಹಮ್ಮದ ಕುರ್ದ್ ಅವರು ತಮ್ಮ ಮೂಲಮನೆಯನ್ನು ಯಹೂದಿ ಆಕ್ರಮಣಕಾರರಿಂದ ಕಳೆದುಕೊಂಡ ಅನುಭವದ ಆಧಾರದಲ್ಲಿ ನಿರ್ಮಿಸಿದ ‘ಮೈ ನೈಬರ್‌ಹುಡ್’ ಸಾಕ್ಷ್ಯಚಿತ್ರದೊಂದಿಗೆ ಅಮೆರಿಕಕ್ಕೆ ಹೋಗಬೇಕಾಗುತ್ತದೆ. ಅವರಿಗೆ ರೈಲನ್ನು ನಡುನಡುವೆ ನಿಲ್ಲಿಸಿ ಸೈನಿಕರಿಂದ ತಪಾಸಣೆಗೆ ಒಳಗಾಗದೆ ಪಯಣ ಮಾಡುವುದರ ಅನುಭವವು ಹೊಸತೆನಿಸುತ್ತದೆ. ನಿತ್ಯವೂ ಪ್ರತಿಭಟನ ಘೋಷಣೆ ಹಾಕುತ್ತ ವಿಮೋಚನ ಚಳವಳಿ ನಡೆಸುತ್ತಿರುವ ಪ್ಯಾಲೆಸ್ತೇನಿಯರು ಎಷ್ಟೆಲ್ಲ ಸಣ್ಣಪುಟ್ಟ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದಾರೆ ಎಂಬುದನ್ನು ಕೂಡ ಇದು ಮನದಟ್ಟುಮಾಡುತ್ತದೆ.

 

ಆಕರ್ಷ ರಮೇಶ ಕಮಲ

ಈ ಕೃತಿಯಲ್ಲಿ ಧೀಮಂತರಾದ ಲೇಖಕಿಯರ ಜತೆಗಿನ ಮಾತುಕತೆಗಳಂತೂ ಉಜ್ವಲವಾಗಿವೆ. ಹೋರಾಟದ ಗರ್ಭದಲ್ಲಿರುವ ಸಾಮಾನ್ಯ ಜನ ರೂಪಕಗಳಲ್ಲಿ ಮಾತಾಡುವ ಕವಿಗಳಾಗಿರುತ್ತಾರೆ. ಹೋರಾಟಗಾರರು ದಾರ್ಶನಿಕರಾಗಿರುತ್ತಾರೆ ಮತ್ತು ಲೇಖಕರು ರಾಜಕೀಯ ಪ್ರಜ್ಞೆಯುಳ್ಳವರಾಗಿರುತ್ತಾರೆ ಎಂಬುದನ್ನು ಇಲ್ಲಿನ ಮಾತುಕತೆಗಳು ಸೂಚಿಸುತ್ತವೆ. ಲೇಖಕ ಸಿಂಟಿಯೊ, ಪ್ಯಾಲಸ್ತೇನಿಯರ ಹೋರಾಟ ಮತ್ತು ಸಾಹಿತ್ಯಗಳ ಬಗ್ಗೆ ಸಹಾನುಭೂತಿ ಉಳ್ಳವರು. ಆದರೂ ಇಸ್ರೇಲಿನ ಅಸ್ತಿತ್ವವನ್ನೇ ನಿರಾಕರಿಸುವ ಅತಿರೇಕದ ಅವಾಸ್ತವಿಕ ವಾದಗಳ ಬಗ್ಗೆ ಭಿನ್ನಮತವುಳ್ಳವರು. ಹೀಗಾಗಿ ಇದೊಂದು ಪ್ಯಾಲಸ್ತೇನ್ ಸಮಸ್ಯೆಯ ಬಗ್ಗೆ ವಿಮರ್ಶಾತ್ಮಕ ಅನುಸಂಧಾನವಿರುವ ಕೃತಿ ಕೂಡ ಆಗಿದೆ.

ಹೊಸಕಾಲದ ತರುಣ-ತರುಣಿಯರಲ್ಲಿ ಮತೀಯ ರಾಜಕಾರಣಕ್ಕೆ ಒಲಿದವರು ಸಾಕಷ್ಟು ಜನರಿದ್ದಾರೆ. ಯಾವುದೇ ರಾಜಕೀಯ ಪ್ರಜ್ಞೆಯ ಅಗತ್ಯವನ್ನು ನಿರಾಕರಿಸುತ್ತ ಭೋಗವಾದವನ್ನೇ ನಂಬಿದವರೂ ಇದ್ದಾರೆ. ಆದರೆ ಇಂಜಿನಿಯರಿಂಗ್ ಪದವೀಧರರಾದ ಆಕರ್ಷ ಅವರಂತೆ ಕೆಲವರು, ನಾಡಿನ ಮತ್ತು ದೇಶದ ನೋವುಗಳಿಗೆ ಮಿಡಿಯುವವರೂ ಇದ್ದಾರೆ. ಅನುವಾದಕ್ಕೆ ಈ ಕೃತಿಯ ಆಯ್ಕೆಯೇ ಅವರ ಕಾಳಜಿಯನ್ನು ಲೋಕದೃಷ್ಟಿಯನ್ನು ಕಾಣಿಸುತ್ತದೆ. ತಾಯಿ ಎಂ.ಆರ್. ಕಮಲ ಕನ್ನಡಿಗರಿಗೆ ಅಮೆರಿಕದ ಆಫ್ರಿಕನರ ಹೋರಾಟಗಳ ಕಥನಗಳನ್ನು ಕೊಟ್ಟಿದ್ದರು. ಅವರ ಮಗ ಜಗತ್ತಿನ ಇನ್ನೊಂದು ಭೂಭಾಗದ ಹೋರಾಟದ ಕಥನವನ್ನು ಕೊಟ್ಟಿದ್ದಾರೆ.

ಬರಿಯ ನೆನಪಲ್ಲ
ಮೂಲ: ಪೇ ನೋ ಹೀಡ್ ಟು ದಿ ರಾಕೆಟ್ಸ್
ಲೇಖಕ: ಮಾಸೆಲ್ಲೊ ಟಿ ಸಿಂಟಿಯೊ
ಅನು: ಆಕರ್ಷ ರಮೇಶ್ ಕಮಲ
ಕಥನ ಪ್ರಕಾಶನ, ಬೆಂಗಳೂರು, 2021, ಬೆಲೆ: 225

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.


ಇದನ್ನೂ ಓದಿ: ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...