Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ; ಶಯ್ಯಾಗೃಹದ ಪಿಸುಮಾತುಗಳಿಗೆ ಕಿವುಡಾಗೇ ಇರುವ ಗಂಡು ಜಗತ್ತು!

ಪುಸ್ತಕ ಪರಿಚಯ; ಶಯ್ಯಾಗೃಹದ ಪಿಸುಮಾತುಗಳಿಗೆ ಕಿವುಡಾಗೇ ಇರುವ ಗಂಡು ಜಗತ್ತು!

- Advertisement -
- Advertisement -

ಡಾ. ಶೋಭಾ ನಾಯಕ ಅವರ ’ಶಯ್ಯಾಗೃಹದ ಸುದ್ದಿಗಳು’ ಕವನಸಂಕಲನ ಓದಿ ಮುಗಿಸಿದಾಗ ನನಗೆ ನೆನಪಾಗಿದ್ದು ಇಬ್ಬರು. ಒಬ್ಬ ಚಾರ್ಲ್ಸ್ ಬುಕೋಸ್ಕಿ ಮತ್ತೊಬ್ಬರು ಬೆಲ್ ಹುಕ್ಸ್.

ಚಾರ್ಲ್ಸ್ ಬುಕೋಸ್ಕಿ, ತನ್ನ ಮುಕ್ತ ಕಾವ್ಯದ ಮೂಲಕ ದಿಢೀರನೆ ಜನಪ್ರಿಯತೆ ಪಡೆದ ಅಮೆರಿಕದ ಕವಿ. ಆತನ ಜನಪ್ರಿಯತೆ ಕಾರಣ, ತನ್ನ ಕಾವ್ಯದ ಮುಕ್ತತೆ, ಸೋಗಿಲ್ಲದ ಮತ್ತು ಪ್ರಾಮಾಣಿಕ ಅಭಿವ್ಯಕ್ತಿ. ತನ್ನ ಹೆಣ್ಣುಬಾಕುತನ, ಆಷಾಢಭೂತಿನದ ಬಗ್ಗೆ ಇದ್ದ ತೀವ್ರ ಅಸಹನೆ, ಜನರ ಒಣಪ್ರತಿಷ್ಠೆಗಳ ಬಗ್ಗೆ ಮರ್ಮಾಘಾತವಾಗುವಂತೆ ಕವಿತೆಯಲ್ಲಿ ಕಾಲೆಳೆದು, ಟೀಕಿಸಿ, ಬರೆದಾತ. ತನ್ನ ತೀರಾ ಖಾಸಗಿಯದ್ದನ್ನು ನಿರ್ಭಿಡೆಯಿಂದ ಹೇಳುವಂತಹ ಬುಕೋಸ್ಕಿಯ ಕಾವ್ಯದಂತೆಯೇ, ಶೋಭಾ ನಾಯಕರ ಕಾವ್ಯದಲ್ಲಿರುವುದು, ಕೇಳುವವ ತನ್ನೊಳಗೆ ತಾನು ನೋಡಿಕೊಳ್ಳುವಂತೆ ಮಾಡುವ ಅಭಿವ್ಯಕ್ತಿಯ ವಿಧಾನ.

ಇನ್ನೊಂದು ಹೆಸರು ಬೆಲ್ ಹುಕ್ಸ್. ಸ್ತ್ರೀವಾದಕ್ಕೆ ಭಿನ್ನ ಒಳನೋಟಗಳನ್ನು ನೀಡಿದ ಲೇಖಕಿ ಇವರು. ಇವರ ’ಕಮ್ಯುನಿಯನ್: ದಿ ಫೀಮೇಲ್ ಸರ್ಚ್ ಫಾರ್ ಲವ್ ಕೃತಿಯಲ್ಲಿ ಒಂದೆಡೆ, “ಸತ್ಯ ಹೇಳುವ ಸಮಯ ಬಂದಿದೆ. ಮತ್ತೆ, ನ್ಯಾಯವಿಲ್ಲದ ಪ್ರೀತಿ ಇರಲಾರದು. ಹೆಣ್ಣು ಮತ್ತು ಗಂಡಿಗೆ, ತಾವು ಆತ್ಮೀಯವಾಗಿ ಬೆರೆಯುವ, ಎಲ್ಲರೊಂದಿಗೆ ಮತ್ತು ಪ್ರತಿಯೊಬ್ಬರೊಂದಿಗೂ ಪರಸ್ಪರರ ಪ್ರೀತಿಯನ್ನು ಅರಿಯುವ ಸ್ವಾತಂತ್ರ್ಯ ನಿರಾಕರಿಸಲಾಗುವುದಿಲ್ಲ. ಒಂದುವೇಳೆ ಪ್ರೀತಿಯನ್ನು ಒಂದು ಮಾಡುವ ನೀತಿಯನ್ನು ನಾವು ಗುರುತಿಸದೇ ಹೋದಲ್ಲಿ, ಅದು ಅಧಿಕಾರವನ್ನು ಅರಸುವಂತೆ ಮತ್ತು ಜಾಣ್ಮೆಯಿಂದ ಬಳಸುವಂತೆ ಮಾಡುತ್ತದೆ. ಹೀಗಾದರೆ ನಾವು ಸಾಂಸ್ಕೃತಿಕ ಯಜಮಾನಿಕೆಯೊಂದಿಗೆ ಬೆಸೆದುಕೊಳ್ಳುತ್ತೇವೆ, ಪ್ರೀತಿಯ ಬದಲು ಅಧಿಕಾರವನ್ನು ಆಯ್ಕೆಮಾಡಿಕೊಳ್ಳುತ್ತೇವೆ” ಎನ್ನುತ್ತಾರೆ. ಪಿತೃಪ್ರಧಾನ ಮನಸ್ಥಿತಿ ಹೇಗೆ ಗಂಡು-ಹೆಣ್ಣಿನ ಪ್ರೇಮ ಮತ್ತು ಕಾಮದ ಸಂಬಂಧವನ್ನು ನಿರ್ಧರಿಸುತ್ತದೆ, ಆಳುತ್ತದೆ ಎಂಬುದನ್ನು ಬೆಲ್ ಹುಕ್ಸ್ ತಮ್ಮ ಹಲವು ಕೃತಿಗಳಲ್ಲಿ ಚರ್ಚಿಸಿದ್ದಾರೆ, ವಿಶ್ಲೇಷಿಸಿದ್ದಾರೆ.

ಶೋಭಾ ನಾಯಕ ಅವರ ಕವಿತೆಗಳಲ್ಲಿ ತೀವ್ರವಾಗಿ ಆವರಿಸಿರುವ ’ಲಾಂಗಿಂಗ್’ (ಬಯಕೆ ತೀವ್ರತೆಯ ನಿರೀಕ್ಷೆ), ಅಕ್ಕ ಹೇಳುವ, ಸಾವಿಲ್ಲದ ಕೇಡಿಲ್ಲ, ರೂಹಿಲ್ಲದ ಚೆಲುವನಿಗೆ ಕಾತರಿಸುವಂತಹದ್ದು. ಅಂತಹ ಪ್ರೇಮಿಯೊಬ್ಬನ ಧ್ಯಾನ ಇಲ್ಲಿದೆ. ಅಡುಗೆ ಒಗ್ಗರಣೆಯ ಪಾತ್ರೆಗಳ ಸದ್ದಿನಲ್ಲಿ ಕಳೆದುಹೋಗುವ ಹೆಣ್ಣಿನ ಮನೋಲೋಕದ ಮಾತುಗಳನ್ನು ಗಂಡು-ಹೆಣ್ಣು ಮಲಗುವ ಕೋಣೆಯಲ್ಲಿ ಪಿಸುಮಾತಿನಲ್ಲಿ, ತುಸುಕೋಪದಲ್ಲಿ, ತುಸು ರಮಿಸುವಂತೆ ಹಂಚಿಕೊಳ್ಳಬೇಕು. ಗಂಡು ತಾನು ಗಂಡಾಗದೆ, ಹೆಣ್ಣು ತಾನು ಹೆಣ್ಣಾಗದೆ, ಗಂಡು ಹೆಣ್ಣಾಗುತ, ಹೆಣ್ಣು ಗಂಡಾಗುತ ಬೆರೆತು ಕಲೆತು ಹೋಗುವ ಏಕಾಂತವದು. ನಿಜಕ್ಕೂ ಮಲಗುವ ಕೋಣೆಯ ಏಕಾಂತ ಹಾಗಿರುತ್ತದೆಯೇ?

ಇಲ್ಲ, ಶೋಭಾ ನಾಯಕ್ ಅವರು ಅದನ್ನು ಪುರಾಣಕಾಲದಿಂದ ಕುರುಕ್ಷೇತ್ರದವರೆಗಿನ ಸ್ತ್ರೀಯರನ್ನು ನೆನಪಿಸುವ ಮೂಲಕ ಗಟ್ಟಿಯಾಗಿ ಹೇಳುತ್ತಾರೆ. ರಾಜ್ಯಕಾರಣ ಕವಿತೆಯಲ್ಲಿ ಸೀತೆ, ಮರಿಯಾ ಮ್ಯಾಗ್ಡಲೀನ್, ದ್ರೌಪದಿ, ರಾಧೆಯರನ್ನು ಅವರ ಪತಿ, ಪ್ರಿಯಕರರು ಅತಂತ್ರವಾಗಿಸಿದ್ದನ್ನು ಬಿಚ್ಚಿಡುತ್ತಾರೆ.

ಗಂಡಿನ ಅಹಂಕಾರವನ್ನು ’ಅಹಂ’ನಲ್ಲಿ ಅನಾವರಣ ಮಾಡುತ್ತಾರೆ. ’ಮಂಚವೆಂದರೆ ಸಮರಾಂಗಣ’ ಎಂದೂ, ’ನಾನು ನರಳುವಾಗ/ ನಿನಗೆ ಸಿಗುವ/ ಸುಖದ ಹೆಸರು: ಅಹಂ’ ಎಂದೂ ವ್ಯಾಖ್ಯಾನಿಸುತ್ತಾರೆ.

ಆದರೆ ಪ್ರೇಮ ಧ್ಯಾನದಲ್ಲಿ ತನ್ನ ನಿಜವಾದ ಸಂಗಾತಿಯನ್ನು ಹುಡುಕುವ ಕವಿ, ತನ್ನೊಳಗೆ ಪುಳಕವನ್ನು ಹುಟ್ಟಿಸಿದವನನ್ನು ನೆನಪಿಸಿಕೊಳ್ಳುತ್ತಾರೆ ಮತ್ತು ಹಂಬಲಿಸುತ್ತಾರೆ.

ಡಾ. ಶೋಭಾ ನಾಯಕ

ಆಡುವಾಗ ಜಡೆಯೆಳೆದವನು
ತರಗತಿಯಲ್ಲಿ ಲಂಗ ಜಗ್ಗಿದವನು
ಓಣಿ ಇಕ್ಕಟ್ಟಿನಲಿ ಜಾಲಿ ಮಾತ ಕಲಿಸಿದವನು
ಮುಗಳುನಗೆಯಲಿ ಕನಸು ಹುಟ್ಟಿಸಿದವನು
ಮೊದಲು ಚುಂಬಿಸಿದ ಅವನು
ಮೈಯರಳಿಸಿದ ಇವನು..

ಎಂದು ’ನಿನ್ನ ಪ್ರೇಮದಲ್ಲಿ ಎಚ್ಚರವಿದ್ದೇನೆ’ ಎಂದು ಘೋಷಿಸುತ್ತಾರೆ. ಈ ಎಚ್ಚರ ಮತ್ತು ಕಾಯುವಿಕೆಯ ನಿರಂತರ ಚಡಪಡಿಕೆಯ ಕುದಿಯನ್ನು ಅಷ್ಟೇ ತಣ್ಣಗೆ ದಾಟಿಸುತ್ತಾರೆ.

ಕಪ್ಪಿನ ಬಿಸಿ ಚ್ಹಾದೊಳಕ್ಕೆ
ಪ್ರತಿ ಅದ್ದಿಗೂ
ಇಷ್ಟಿಷ್ಟೇ ಕರಗಿಬೀಳುವ
ಬಿಸ್ಕೆಟಿನಂತೆ
ನಿನ್ನ ಪ್ರತಿ ಅಗಲಿಕೆಯಲೂ
ನರಕದಾಳಕ್ಕೆ
ಇಷ್ಟಿಷ್ಟೇ ಮುರಿದುಬೀಳುತ್ತೇನೆ.
ಆದರೆ,
ಈ ಕಪ್ಪಿನ ತಳ ಕಲಕಿ ಕುಡಿಯಲು ಬರುವ
ಯಾವನಿಗಾದರೂ ಕಾದಿರುತ್ತದೆ
ಮುರಿದು ಬಿದ್ದ
ಮರಣದ ಆ ತುತ್ತು.

ಹೀಗೆ ಧ್ಯಾನಿಸುವ ಕವಿ, ತಮ್ಮ ತೀವ್ರ ಅಭೀಪ್ಸೆಯನ್ನು ಹೆಣ್ಣಿನ ದೇಹ ಮತ್ತು ವಾಂಚೆಯ ರೂಪಕಗಳ ಮೂಲಕ ತಮ್ಮ ಪ್ರೇಮಾಂಕ್ಷೆ, ಸಾಂಗತ್ಯದ ಬಯಕೆಗಳನ್ನು ಕಟ್ಟಿಕೊಡುತ್ತಾರೆ. ಈ ಪ್ರತಿಮೆ-ರೂಪಕಗಳ ಹಸಿತನ ಹೆಣ್ಣಿನ ಅಭಿವ್ಯಕ್ತಿಗೆ ಈಗಲೂ ಇರುವ ಚೌಕಟ್ಟನ್ನು ಒಡೆಯುವ ಸಾಹಸ ಮಾಡುತ್ತವೆ. ಗಂಡಿನ ಅಹಂಕಾರವನ್ನು ಕೆಣುಕಲೆಂದೇ ಇಲ್ಲಿ ನಿರ್ಭಿಡೆಯಿಂದ ತನ್ನ ಮನದ ಮಾತುಗಳನ್ನು ಶಯ್ಯಾಗೃಹದ ಪಲ್ಲಂಗದ ಮೇಲೆ ಹರಡಿದಂತೆ ಹೊರಬಂದಿವೆ. ಈ ಪಿಸುಮಾತುಗಳನ್ನು ಕೇಳಿಸಿಕೊಳ್ಳುವ ಗಂಡಿಗೆ ಧ್ಯಾನಿಸುತ್ತವೆ.

ಶೃಂಗಾರ, ಪ್ರಣಯ, ಪ್ರೇಮದ ದಟ್ಟ ರೂಪಕಗಳು, ನುಡಿಗಟ್ಟು ಹೆಣ್ಣಿನ ಅತ್ಯಂತಿಕ ಭಾವಲೋಕವನ್ನು ಬೆಚ್ಚಿಬೀಳಿಸುವ ಉತ್ಕಟತೆಯೊಂದಿಗೆ ಹೊರಹೊಮ್ಮಿಸುತ್ತವೆ. ಶಯ್ಯಾಗೃಹದ ಸುದ್ದಿಗಳು, ಧ್ಯಾನಸ್ಥ ಶಿವ, ಯಯಾತಿಗೊಂದು ಪತ್ರ, ಹಾಲೆದೆ, ಚರಿತ್ರೆ ಮತ್ತು ಕವಿತೆ, ಕನ್ನಡಿಯ ಚೂರು, ಅನುಭವ ಮಂಟಪ, ಮಂಡೋದರಿ, ಸವರಾತ್ರಿಯ ಸಂಲಗ್ನ, ಶಯ್ಯಾಗೃಹದ ಎಲ್ಲಾ ರಾತ್ರಿಗಳು ಮುಗಿದ ಮೇಲೆ, ಕಲ್ಲಾದವರ ನೆತ್ತಿಯ ಮೇಲೆ, ನಾನು ನೀನು ಕವಿತೆಗಳು ಇಷ್ಟವಾಗುವ ಕವಿತೆಗಳು.

ಒಂದೆಡೆ ಗಂಡಿನ ಅಹಂಕಾರಕ್ಕೆ ಹೆಣ್ಣಿನ ಕನಿಷ್ಠ ಪ್ರತಿರೋಧದ ಅಗತ್ಯವನ್ನು ಹೇಳುತ್ತಾರೆ;

“ಕಲ್ಲಾದವರ ನೆತ್ತಿಯ ಮೇಲೆ
ಕಾಗೆ ಗೂಬೆ ಹೇತುಹೋಗುತ್ತವೆ.
ಮಿಸುಕಾಡಬೇಕು
ಮಾತಾಡಬೇಕು”

ಹಾಗೆಯೇ ಅರಿತು ಬೆರೆತು ಸಮಾನರೆನಿಸಿದಾಗ ಪೂರ್ಣತಯು ಎಂಬುದನ್ನೂ ಕವಿ ನೆನಪಿಸುತ್ತಾರೆ;

ಸುಖ
ಕೇವಲ ಒಂದು
ಹೊಂಗನಸಲ್ಲ
ನಾವಾಗೇ ಬರೆದು
ಪೂರ್ಣಗೊಳಿಸಬೇಕಾದ ವರ್ಣಚಿತ್ರ.

ಪ್ರೇಮಕ್ಕೆ ಮರಳಲು, ನಾವೆಂದೂ ಪಡೆಯದ, ಆದರೆ ಸದಾ ಹಂಬಲಿಸಿದ ಪ್ರೀತಿ ಪಡೆಯಲು, ನಾವು ಕೊಡಬೇಕಾದ ಪ್ರೀತಿಯನ್ನು ಹಂಚಿಕೊಳ್ಳಲು ಸಿದ್ಧರಾಗದ ನಾವು ರಮ್ಯ ಸಂಬಂಧಗಳತ್ತ ವಾಲುತ್ತೇವೆ. ಈ ಸಂಬಂಧಗಳು ಉಳಿದ ಯಾವುದೇ ಸಂಬಂಧಗಳಿಗಿಂತ ಹೆಚ್ಚಾಗಿ ನಮ್ಮನ್ನು ವಿಮೋಚನೆಯತ್ತ, ಬಿಡುಗಡೆಯತ್ತ ಕರೆದೊಯ್ಯುತ್ತವೆ ಎಂದು ನಂಬಿರುತ್ತೇವೆ. ಆದರೆ ನಿಜವಾದ ಪ್ರೀತಿ, ನಾವು ವಿಮೋಚನೆಗೆ ಸಿದ್ಧರಾಗಿದ್ದರಷ್ಟೆ, ಸ್ವತಂತ್ರಗೊಳಿಸುವ ಶಕ್ತಿಯನ್ನು ಹೊಂದಿರುತ್ತದೆ. ನಾವು ಉಳಿಯಬೇಕೆಂದಿದ್ದರೆ ಮಾತ್ರ ಪ್ರೀತಿ ನಮ್ಮನ್ನು ಉಳಿಸುತ್ತದೆ ಎಂದು ಬೆಲ್ ಹುಕ್ಸ್ ಹೇಳುತ್ತಾರೆ.

ಎಲ್ಲ ಅಹಮಿಕೆಯ ಪದರಗಳನ್ನು ಕಳಚಿದಾಗ ಮಾತ್ರ ಪ್ರೇಮ ಸಾಧ್ಯ. ಅದು ಬಿಡುಗಡೆಯ ಹಾದಿ. ಅಂತಹ ಧ್ಯಾನ ಶೋಭ ನಾಯ್ಕರ ಕವಿತೆಗಳಲ್ಲಿ ಇರುವುದರಿಂದಲೇ ಇವು ಇಲ್ಲಿರುವ ಶೃಂಗಾರದ ರೂಪಕಗಳಾಚೆಗೆ ಹಾರುತ್ತವೆ.

ಶಯ್ಯಾಗೃಹದ ಸುದ್ದಿಗಳು
ಡಾ. ಶೋಭಾ ನಾಯಕ
ಪುಟ: 92 | ಬೆಲೆ : 100/-
ಪ್ರಕಾಶನ: ಮನೋರಮಾ
ಬುಕ್ ಹೌಸ್, ಬೆಳಗಾವಿ

– ಎಸ್ ಕುಮಾರ್


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬದಿಕಿರುವುದೇ ಕಥೆ ಹೇಳಲಿಕ್ಕೆ ಎಂದು ಬರೆದು ಬದುಕಿದ ಲ್ಯಾಟಿನ್ ಅಮೆರಿಕನ್ ಲೇಖಕ ಮಾರ್ಕ್ವೆಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...