Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ; ಶಯ್ಯಾಗೃಹದ ಪಿಸುಮಾತುಗಳಿಗೆ ಕಿವುಡಾಗೇ ಇರುವ ಗಂಡು ಜಗತ್ತು!

ಪುಸ್ತಕ ಪರಿಚಯ; ಶಯ್ಯಾಗೃಹದ ಪಿಸುಮಾತುಗಳಿಗೆ ಕಿವುಡಾಗೇ ಇರುವ ಗಂಡು ಜಗತ್ತು!

- Advertisement -
- Advertisement -

ಡಾ. ಶೋಭಾ ನಾಯಕ ಅವರ ’ಶಯ್ಯಾಗೃಹದ ಸುದ್ದಿಗಳು’ ಕವನಸಂಕಲನ ಓದಿ ಮುಗಿಸಿದಾಗ ನನಗೆ ನೆನಪಾಗಿದ್ದು ಇಬ್ಬರು. ಒಬ್ಬ ಚಾರ್ಲ್ಸ್ ಬುಕೋಸ್ಕಿ ಮತ್ತೊಬ್ಬರು ಬೆಲ್ ಹುಕ್ಸ್.

ಚಾರ್ಲ್ಸ್ ಬುಕೋಸ್ಕಿ, ತನ್ನ ಮುಕ್ತ ಕಾವ್ಯದ ಮೂಲಕ ದಿಢೀರನೆ ಜನಪ್ರಿಯತೆ ಪಡೆದ ಅಮೆರಿಕದ ಕವಿ. ಆತನ ಜನಪ್ರಿಯತೆ ಕಾರಣ, ತನ್ನ ಕಾವ್ಯದ ಮುಕ್ತತೆ, ಸೋಗಿಲ್ಲದ ಮತ್ತು ಪ್ರಾಮಾಣಿಕ ಅಭಿವ್ಯಕ್ತಿ. ತನ್ನ ಹೆಣ್ಣುಬಾಕುತನ, ಆಷಾಢಭೂತಿನದ ಬಗ್ಗೆ ಇದ್ದ ತೀವ್ರ ಅಸಹನೆ, ಜನರ ಒಣಪ್ರತಿಷ್ಠೆಗಳ ಬಗ್ಗೆ ಮರ್ಮಾಘಾತವಾಗುವಂತೆ ಕವಿತೆಯಲ್ಲಿ ಕಾಲೆಳೆದು, ಟೀಕಿಸಿ, ಬರೆದಾತ. ತನ್ನ ತೀರಾ ಖಾಸಗಿಯದ್ದನ್ನು ನಿರ್ಭಿಡೆಯಿಂದ ಹೇಳುವಂತಹ ಬುಕೋಸ್ಕಿಯ ಕಾವ್ಯದಂತೆಯೇ, ಶೋಭಾ ನಾಯಕರ ಕಾವ್ಯದಲ್ಲಿರುವುದು, ಕೇಳುವವ ತನ್ನೊಳಗೆ ತಾನು ನೋಡಿಕೊಳ್ಳುವಂತೆ ಮಾಡುವ ಅಭಿವ್ಯಕ್ತಿಯ ವಿಧಾನ.

ಇನ್ನೊಂದು ಹೆಸರು ಬೆಲ್ ಹುಕ್ಸ್. ಸ್ತ್ರೀವಾದಕ್ಕೆ ಭಿನ್ನ ಒಳನೋಟಗಳನ್ನು ನೀಡಿದ ಲೇಖಕಿ ಇವರು. ಇವರ ’ಕಮ್ಯುನಿಯನ್: ದಿ ಫೀಮೇಲ್ ಸರ್ಚ್ ಫಾರ್ ಲವ್ ಕೃತಿಯಲ್ಲಿ ಒಂದೆಡೆ, “ಸತ್ಯ ಹೇಳುವ ಸಮಯ ಬಂದಿದೆ. ಮತ್ತೆ, ನ್ಯಾಯವಿಲ್ಲದ ಪ್ರೀತಿ ಇರಲಾರದು. ಹೆಣ್ಣು ಮತ್ತು ಗಂಡಿಗೆ, ತಾವು ಆತ್ಮೀಯವಾಗಿ ಬೆರೆಯುವ, ಎಲ್ಲರೊಂದಿಗೆ ಮತ್ತು ಪ್ರತಿಯೊಬ್ಬರೊಂದಿಗೂ ಪರಸ್ಪರರ ಪ್ರೀತಿಯನ್ನು ಅರಿಯುವ ಸ್ವಾತಂತ್ರ್ಯ ನಿರಾಕರಿಸಲಾಗುವುದಿಲ್ಲ. ಒಂದುವೇಳೆ ಪ್ರೀತಿಯನ್ನು ಒಂದು ಮಾಡುವ ನೀತಿಯನ್ನು ನಾವು ಗುರುತಿಸದೇ ಹೋದಲ್ಲಿ, ಅದು ಅಧಿಕಾರವನ್ನು ಅರಸುವಂತೆ ಮತ್ತು ಜಾಣ್ಮೆಯಿಂದ ಬಳಸುವಂತೆ ಮಾಡುತ್ತದೆ. ಹೀಗಾದರೆ ನಾವು ಸಾಂಸ್ಕೃತಿಕ ಯಜಮಾನಿಕೆಯೊಂದಿಗೆ ಬೆಸೆದುಕೊಳ್ಳುತ್ತೇವೆ, ಪ್ರೀತಿಯ ಬದಲು ಅಧಿಕಾರವನ್ನು ಆಯ್ಕೆಮಾಡಿಕೊಳ್ಳುತ್ತೇವೆ” ಎನ್ನುತ್ತಾರೆ. ಪಿತೃಪ್ರಧಾನ ಮನಸ್ಥಿತಿ ಹೇಗೆ ಗಂಡು-ಹೆಣ್ಣಿನ ಪ್ರೇಮ ಮತ್ತು ಕಾಮದ ಸಂಬಂಧವನ್ನು ನಿರ್ಧರಿಸುತ್ತದೆ, ಆಳುತ್ತದೆ ಎಂಬುದನ್ನು ಬೆಲ್ ಹುಕ್ಸ್ ತಮ್ಮ ಹಲವು ಕೃತಿಗಳಲ್ಲಿ ಚರ್ಚಿಸಿದ್ದಾರೆ, ವಿಶ್ಲೇಷಿಸಿದ್ದಾರೆ.

ಶೋಭಾ ನಾಯಕ ಅವರ ಕವಿತೆಗಳಲ್ಲಿ ತೀವ್ರವಾಗಿ ಆವರಿಸಿರುವ ’ಲಾಂಗಿಂಗ್’ (ಬಯಕೆ ತೀವ್ರತೆಯ ನಿರೀಕ್ಷೆ), ಅಕ್ಕ ಹೇಳುವ, ಸಾವಿಲ್ಲದ ಕೇಡಿಲ್ಲ, ರೂಹಿಲ್ಲದ ಚೆಲುವನಿಗೆ ಕಾತರಿಸುವಂತಹದ್ದು. ಅಂತಹ ಪ್ರೇಮಿಯೊಬ್ಬನ ಧ್ಯಾನ ಇಲ್ಲಿದೆ. ಅಡುಗೆ ಒಗ್ಗರಣೆಯ ಪಾತ್ರೆಗಳ ಸದ್ದಿನಲ್ಲಿ ಕಳೆದುಹೋಗುವ ಹೆಣ್ಣಿನ ಮನೋಲೋಕದ ಮಾತುಗಳನ್ನು ಗಂಡು-ಹೆಣ್ಣು ಮಲಗುವ ಕೋಣೆಯಲ್ಲಿ ಪಿಸುಮಾತಿನಲ್ಲಿ, ತುಸುಕೋಪದಲ್ಲಿ, ತುಸು ರಮಿಸುವಂತೆ ಹಂಚಿಕೊಳ್ಳಬೇಕು. ಗಂಡು ತಾನು ಗಂಡಾಗದೆ, ಹೆಣ್ಣು ತಾನು ಹೆಣ್ಣಾಗದೆ, ಗಂಡು ಹೆಣ್ಣಾಗುತ, ಹೆಣ್ಣು ಗಂಡಾಗುತ ಬೆರೆತು ಕಲೆತು ಹೋಗುವ ಏಕಾಂತವದು. ನಿಜಕ್ಕೂ ಮಲಗುವ ಕೋಣೆಯ ಏಕಾಂತ ಹಾಗಿರುತ್ತದೆಯೇ?

ಇಲ್ಲ, ಶೋಭಾ ನಾಯಕ್ ಅವರು ಅದನ್ನು ಪುರಾಣಕಾಲದಿಂದ ಕುರುಕ್ಷೇತ್ರದವರೆಗಿನ ಸ್ತ್ರೀಯರನ್ನು ನೆನಪಿಸುವ ಮೂಲಕ ಗಟ್ಟಿಯಾಗಿ ಹೇಳುತ್ತಾರೆ. ರಾಜ್ಯಕಾರಣ ಕವಿತೆಯಲ್ಲಿ ಸೀತೆ, ಮರಿಯಾ ಮ್ಯಾಗ್ಡಲೀನ್, ದ್ರೌಪದಿ, ರಾಧೆಯರನ್ನು ಅವರ ಪತಿ, ಪ್ರಿಯಕರರು ಅತಂತ್ರವಾಗಿಸಿದ್ದನ್ನು ಬಿಚ್ಚಿಡುತ್ತಾರೆ.

ಗಂಡಿನ ಅಹಂಕಾರವನ್ನು ’ಅಹಂ’ನಲ್ಲಿ ಅನಾವರಣ ಮಾಡುತ್ತಾರೆ. ’ಮಂಚವೆಂದರೆ ಸಮರಾಂಗಣ’ ಎಂದೂ, ’ನಾನು ನರಳುವಾಗ/ ನಿನಗೆ ಸಿಗುವ/ ಸುಖದ ಹೆಸರು: ಅಹಂ’ ಎಂದೂ ವ್ಯಾಖ್ಯಾನಿಸುತ್ತಾರೆ.

ಆದರೆ ಪ್ರೇಮ ಧ್ಯಾನದಲ್ಲಿ ತನ್ನ ನಿಜವಾದ ಸಂಗಾತಿಯನ್ನು ಹುಡುಕುವ ಕವಿ, ತನ್ನೊಳಗೆ ಪುಳಕವನ್ನು ಹುಟ್ಟಿಸಿದವನನ್ನು ನೆನಪಿಸಿಕೊಳ್ಳುತ್ತಾರೆ ಮತ್ತು ಹಂಬಲಿಸುತ್ತಾರೆ.

ಡಾ. ಶೋಭಾ ನಾಯಕ

ಆಡುವಾಗ ಜಡೆಯೆಳೆದವನು
ತರಗತಿಯಲ್ಲಿ ಲಂಗ ಜಗ್ಗಿದವನು
ಓಣಿ ಇಕ್ಕಟ್ಟಿನಲಿ ಜಾಲಿ ಮಾತ ಕಲಿಸಿದವನು
ಮುಗಳುನಗೆಯಲಿ ಕನಸು ಹುಟ್ಟಿಸಿದವನು
ಮೊದಲು ಚುಂಬಿಸಿದ ಅವನು
ಮೈಯರಳಿಸಿದ ಇವನು..

ಎಂದು ’ನಿನ್ನ ಪ್ರೇಮದಲ್ಲಿ ಎಚ್ಚರವಿದ್ದೇನೆ’ ಎಂದು ಘೋಷಿಸುತ್ತಾರೆ. ಈ ಎಚ್ಚರ ಮತ್ತು ಕಾಯುವಿಕೆಯ ನಿರಂತರ ಚಡಪಡಿಕೆಯ ಕುದಿಯನ್ನು ಅಷ್ಟೇ ತಣ್ಣಗೆ ದಾಟಿಸುತ್ತಾರೆ.

ಕಪ್ಪಿನ ಬಿಸಿ ಚ್ಹಾದೊಳಕ್ಕೆ
ಪ್ರತಿ ಅದ್ದಿಗೂ
ಇಷ್ಟಿಷ್ಟೇ ಕರಗಿಬೀಳುವ
ಬಿಸ್ಕೆಟಿನಂತೆ
ನಿನ್ನ ಪ್ರತಿ ಅಗಲಿಕೆಯಲೂ
ನರಕದಾಳಕ್ಕೆ
ಇಷ್ಟಿಷ್ಟೇ ಮುರಿದುಬೀಳುತ್ತೇನೆ.
ಆದರೆ,
ಈ ಕಪ್ಪಿನ ತಳ ಕಲಕಿ ಕುಡಿಯಲು ಬರುವ
ಯಾವನಿಗಾದರೂ ಕಾದಿರುತ್ತದೆ
ಮುರಿದು ಬಿದ್ದ
ಮರಣದ ಆ ತುತ್ತು.

ಹೀಗೆ ಧ್ಯಾನಿಸುವ ಕವಿ, ತಮ್ಮ ತೀವ್ರ ಅಭೀಪ್ಸೆಯನ್ನು ಹೆಣ್ಣಿನ ದೇಹ ಮತ್ತು ವಾಂಚೆಯ ರೂಪಕಗಳ ಮೂಲಕ ತಮ್ಮ ಪ್ರೇಮಾಂಕ್ಷೆ, ಸಾಂಗತ್ಯದ ಬಯಕೆಗಳನ್ನು ಕಟ್ಟಿಕೊಡುತ್ತಾರೆ. ಈ ಪ್ರತಿಮೆ-ರೂಪಕಗಳ ಹಸಿತನ ಹೆಣ್ಣಿನ ಅಭಿವ್ಯಕ್ತಿಗೆ ಈಗಲೂ ಇರುವ ಚೌಕಟ್ಟನ್ನು ಒಡೆಯುವ ಸಾಹಸ ಮಾಡುತ್ತವೆ. ಗಂಡಿನ ಅಹಂಕಾರವನ್ನು ಕೆಣುಕಲೆಂದೇ ಇಲ್ಲಿ ನಿರ್ಭಿಡೆಯಿಂದ ತನ್ನ ಮನದ ಮಾತುಗಳನ್ನು ಶಯ್ಯಾಗೃಹದ ಪಲ್ಲಂಗದ ಮೇಲೆ ಹರಡಿದಂತೆ ಹೊರಬಂದಿವೆ. ಈ ಪಿಸುಮಾತುಗಳನ್ನು ಕೇಳಿಸಿಕೊಳ್ಳುವ ಗಂಡಿಗೆ ಧ್ಯಾನಿಸುತ್ತವೆ.

ಶೃಂಗಾರ, ಪ್ರಣಯ, ಪ್ರೇಮದ ದಟ್ಟ ರೂಪಕಗಳು, ನುಡಿಗಟ್ಟು ಹೆಣ್ಣಿನ ಅತ್ಯಂತಿಕ ಭಾವಲೋಕವನ್ನು ಬೆಚ್ಚಿಬೀಳಿಸುವ ಉತ್ಕಟತೆಯೊಂದಿಗೆ ಹೊರಹೊಮ್ಮಿಸುತ್ತವೆ. ಶಯ್ಯಾಗೃಹದ ಸುದ್ದಿಗಳು, ಧ್ಯಾನಸ್ಥ ಶಿವ, ಯಯಾತಿಗೊಂದು ಪತ್ರ, ಹಾಲೆದೆ, ಚರಿತ್ರೆ ಮತ್ತು ಕವಿತೆ, ಕನ್ನಡಿಯ ಚೂರು, ಅನುಭವ ಮಂಟಪ, ಮಂಡೋದರಿ, ಸವರಾತ್ರಿಯ ಸಂಲಗ್ನ, ಶಯ್ಯಾಗೃಹದ ಎಲ್ಲಾ ರಾತ್ರಿಗಳು ಮುಗಿದ ಮೇಲೆ, ಕಲ್ಲಾದವರ ನೆತ್ತಿಯ ಮೇಲೆ, ನಾನು ನೀನು ಕವಿತೆಗಳು ಇಷ್ಟವಾಗುವ ಕವಿತೆಗಳು.

ಒಂದೆಡೆ ಗಂಡಿನ ಅಹಂಕಾರಕ್ಕೆ ಹೆಣ್ಣಿನ ಕನಿಷ್ಠ ಪ್ರತಿರೋಧದ ಅಗತ್ಯವನ್ನು ಹೇಳುತ್ತಾರೆ;

“ಕಲ್ಲಾದವರ ನೆತ್ತಿಯ ಮೇಲೆ
ಕಾಗೆ ಗೂಬೆ ಹೇತುಹೋಗುತ್ತವೆ.
ಮಿಸುಕಾಡಬೇಕು
ಮಾತಾಡಬೇಕು”

ಹಾಗೆಯೇ ಅರಿತು ಬೆರೆತು ಸಮಾನರೆನಿಸಿದಾಗ ಪೂರ್ಣತಯು ಎಂಬುದನ್ನೂ ಕವಿ ನೆನಪಿಸುತ್ತಾರೆ;

ಸುಖ
ಕೇವಲ ಒಂದು
ಹೊಂಗನಸಲ್ಲ
ನಾವಾಗೇ ಬರೆದು
ಪೂರ್ಣಗೊಳಿಸಬೇಕಾದ ವರ್ಣಚಿತ್ರ.

ಪ್ರೇಮಕ್ಕೆ ಮರಳಲು, ನಾವೆಂದೂ ಪಡೆಯದ, ಆದರೆ ಸದಾ ಹಂಬಲಿಸಿದ ಪ್ರೀತಿ ಪಡೆಯಲು, ನಾವು ಕೊಡಬೇಕಾದ ಪ್ರೀತಿಯನ್ನು ಹಂಚಿಕೊಳ್ಳಲು ಸಿದ್ಧರಾಗದ ನಾವು ರಮ್ಯ ಸಂಬಂಧಗಳತ್ತ ವಾಲುತ್ತೇವೆ. ಈ ಸಂಬಂಧಗಳು ಉಳಿದ ಯಾವುದೇ ಸಂಬಂಧಗಳಿಗಿಂತ ಹೆಚ್ಚಾಗಿ ನಮ್ಮನ್ನು ವಿಮೋಚನೆಯತ್ತ, ಬಿಡುಗಡೆಯತ್ತ ಕರೆದೊಯ್ಯುತ್ತವೆ ಎಂದು ನಂಬಿರುತ್ತೇವೆ. ಆದರೆ ನಿಜವಾದ ಪ್ರೀತಿ, ನಾವು ವಿಮೋಚನೆಗೆ ಸಿದ್ಧರಾಗಿದ್ದರಷ್ಟೆ, ಸ್ವತಂತ್ರಗೊಳಿಸುವ ಶಕ್ತಿಯನ್ನು ಹೊಂದಿರುತ್ತದೆ. ನಾವು ಉಳಿಯಬೇಕೆಂದಿದ್ದರೆ ಮಾತ್ರ ಪ್ರೀತಿ ನಮ್ಮನ್ನು ಉಳಿಸುತ್ತದೆ ಎಂದು ಬೆಲ್ ಹುಕ್ಸ್ ಹೇಳುತ್ತಾರೆ.

ಎಲ್ಲ ಅಹಮಿಕೆಯ ಪದರಗಳನ್ನು ಕಳಚಿದಾಗ ಮಾತ್ರ ಪ್ರೇಮ ಸಾಧ್ಯ. ಅದು ಬಿಡುಗಡೆಯ ಹಾದಿ. ಅಂತಹ ಧ್ಯಾನ ಶೋಭ ನಾಯ್ಕರ ಕವಿತೆಗಳಲ್ಲಿ ಇರುವುದರಿಂದಲೇ ಇವು ಇಲ್ಲಿರುವ ಶೃಂಗಾರದ ರೂಪಕಗಳಾಚೆಗೆ ಹಾರುತ್ತವೆ.

ಶಯ್ಯಾಗೃಹದ ಸುದ್ದಿಗಳು
ಡಾ. ಶೋಭಾ ನಾಯಕ
ಪುಟ: 92 | ಬೆಲೆ : 100/-
ಪ್ರಕಾಶನ: ಮನೋರಮಾ
ಬುಕ್ ಹೌಸ್, ಬೆಳಗಾವಿ

– ಎಸ್ ಕುಮಾರ್


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬದಿಕಿರುವುದೇ ಕಥೆ ಹೇಳಲಿಕ್ಕೆ ಎಂದು ಬರೆದು ಬದುಕಿದ ಲ್ಯಾಟಿನ್ ಅಮೆರಿಕನ್ ಲೇಖಕ ಮಾರ್ಕ್ವೆಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...