Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ; ಶಯ್ಯಾಗೃಹದ ಪಿಸುಮಾತುಗಳಿಗೆ ಕಿವುಡಾಗೇ ಇರುವ ಗಂಡು ಜಗತ್ತು!

ಪುಸ್ತಕ ಪರಿಚಯ; ಶಯ್ಯಾಗೃಹದ ಪಿಸುಮಾತುಗಳಿಗೆ ಕಿವುಡಾಗೇ ಇರುವ ಗಂಡು ಜಗತ್ತು!

- Advertisement -
- Advertisement -

ಡಾ. ಶೋಭಾ ನಾಯಕ ಅವರ ’ಶಯ್ಯಾಗೃಹದ ಸುದ್ದಿಗಳು’ ಕವನಸಂಕಲನ ಓದಿ ಮುಗಿಸಿದಾಗ ನನಗೆ ನೆನಪಾಗಿದ್ದು ಇಬ್ಬರು. ಒಬ್ಬ ಚಾರ್ಲ್ಸ್ ಬುಕೋಸ್ಕಿ ಮತ್ತೊಬ್ಬರು ಬೆಲ್ ಹುಕ್ಸ್.

ಚಾರ್ಲ್ಸ್ ಬುಕೋಸ್ಕಿ, ತನ್ನ ಮುಕ್ತ ಕಾವ್ಯದ ಮೂಲಕ ದಿಢೀರನೆ ಜನಪ್ರಿಯತೆ ಪಡೆದ ಅಮೆರಿಕದ ಕವಿ. ಆತನ ಜನಪ್ರಿಯತೆ ಕಾರಣ, ತನ್ನ ಕಾವ್ಯದ ಮುಕ್ತತೆ, ಸೋಗಿಲ್ಲದ ಮತ್ತು ಪ್ರಾಮಾಣಿಕ ಅಭಿವ್ಯಕ್ತಿ. ತನ್ನ ಹೆಣ್ಣುಬಾಕುತನ, ಆಷಾಢಭೂತಿನದ ಬಗ್ಗೆ ಇದ್ದ ತೀವ್ರ ಅಸಹನೆ, ಜನರ ಒಣಪ್ರತಿಷ್ಠೆಗಳ ಬಗ್ಗೆ ಮರ್ಮಾಘಾತವಾಗುವಂತೆ ಕವಿತೆಯಲ್ಲಿ ಕಾಲೆಳೆದು, ಟೀಕಿಸಿ, ಬರೆದಾತ. ತನ್ನ ತೀರಾ ಖಾಸಗಿಯದ್ದನ್ನು ನಿರ್ಭಿಡೆಯಿಂದ ಹೇಳುವಂತಹ ಬುಕೋಸ್ಕಿಯ ಕಾವ್ಯದಂತೆಯೇ, ಶೋಭಾ ನಾಯಕರ ಕಾವ್ಯದಲ್ಲಿರುವುದು, ಕೇಳುವವ ತನ್ನೊಳಗೆ ತಾನು ನೋಡಿಕೊಳ್ಳುವಂತೆ ಮಾಡುವ ಅಭಿವ್ಯಕ್ತಿಯ ವಿಧಾನ.

ಇನ್ನೊಂದು ಹೆಸರು ಬೆಲ್ ಹುಕ್ಸ್. ಸ್ತ್ರೀವಾದಕ್ಕೆ ಭಿನ್ನ ಒಳನೋಟಗಳನ್ನು ನೀಡಿದ ಲೇಖಕಿ ಇವರು. ಇವರ ’ಕಮ್ಯುನಿಯನ್: ದಿ ಫೀಮೇಲ್ ಸರ್ಚ್ ಫಾರ್ ಲವ್ ಕೃತಿಯಲ್ಲಿ ಒಂದೆಡೆ, “ಸತ್ಯ ಹೇಳುವ ಸಮಯ ಬಂದಿದೆ. ಮತ್ತೆ, ನ್ಯಾಯವಿಲ್ಲದ ಪ್ರೀತಿ ಇರಲಾರದು. ಹೆಣ್ಣು ಮತ್ತು ಗಂಡಿಗೆ, ತಾವು ಆತ್ಮೀಯವಾಗಿ ಬೆರೆಯುವ, ಎಲ್ಲರೊಂದಿಗೆ ಮತ್ತು ಪ್ರತಿಯೊಬ್ಬರೊಂದಿಗೂ ಪರಸ್ಪರರ ಪ್ರೀತಿಯನ್ನು ಅರಿಯುವ ಸ್ವಾತಂತ್ರ್ಯ ನಿರಾಕರಿಸಲಾಗುವುದಿಲ್ಲ. ಒಂದುವೇಳೆ ಪ್ರೀತಿಯನ್ನು ಒಂದು ಮಾಡುವ ನೀತಿಯನ್ನು ನಾವು ಗುರುತಿಸದೇ ಹೋದಲ್ಲಿ, ಅದು ಅಧಿಕಾರವನ್ನು ಅರಸುವಂತೆ ಮತ್ತು ಜಾಣ್ಮೆಯಿಂದ ಬಳಸುವಂತೆ ಮಾಡುತ್ತದೆ. ಹೀಗಾದರೆ ನಾವು ಸಾಂಸ್ಕೃತಿಕ ಯಜಮಾನಿಕೆಯೊಂದಿಗೆ ಬೆಸೆದುಕೊಳ್ಳುತ್ತೇವೆ, ಪ್ರೀತಿಯ ಬದಲು ಅಧಿಕಾರವನ್ನು ಆಯ್ಕೆಮಾಡಿಕೊಳ್ಳುತ್ತೇವೆ” ಎನ್ನುತ್ತಾರೆ. ಪಿತೃಪ್ರಧಾನ ಮನಸ್ಥಿತಿ ಹೇಗೆ ಗಂಡು-ಹೆಣ್ಣಿನ ಪ್ರೇಮ ಮತ್ತು ಕಾಮದ ಸಂಬಂಧವನ್ನು ನಿರ್ಧರಿಸುತ್ತದೆ, ಆಳುತ್ತದೆ ಎಂಬುದನ್ನು ಬೆಲ್ ಹುಕ್ಸ್ ತಮ್ಮ ಹಲವು ಕೃತಿಗಳಲ್ಲಿ ಚರ್ಚಿಸಿದ್ದಾರೆ, ವಿಶ್ಲೇಷಿಸಿದ್ದಾರೆ.

ಶೋಭಾ ನಾಯಕ ಅವರ ಕವಿತೆಗಳಲ್ಲಿ ತೀವ್ರವಾಗಿ ಆವರಿಸಿರುವ ’ಲಾಂಗಿಂಗ್’ (ಬಯಕೆ ತೀವ್ರತೆಯ ನಿರೀಕ್ಷೆ), ಅಕ್ಕ ಹೇಳುವ, ಸಾವಿಲ್ಲದ ಕೇಡಿಲ್ಲ, ರೂಹಿಲ್ಲದ ಚೆಲುವನಿಗೆ ಕಾತರಿಸುವಂತಹದ್ದು. ಅಂತಹ ಪ್ರೇಮಿಯೊಬ್ಬನ ಧ್ಯಾನ ಇಲ್ಲಿದೆ. ಅಡುಗೆ ಒಗ್ಗರಣೆಯ ಪಾತ್ರೆಗಳ ಸದ್ದಿನಲ್ಲಿ ಕಳೆದುಹೋಗುವ ಹೆಣ್ಣಿನ ಮನೋಲೋಕದ ಮಾತುಗಳನ್ನು ಗಂಡು-ಹೆಣ್ಣು ಮಲಗುವ ಕೋಣೆಯಲ್ಲಿ ಪಿಸುಮಾತಿನಲ್ಲಿ, ತುಸುಕೋಪದಲ್ಲಿ, ತುಸು ರಮಿಸುವಂತೆ ಹಂಚಿಕೊಳ್ಳಬೇಕು. ಗಂಡು ತಾನು ಗಂಡಾಗದೆ, ಹೆಣ್ಣು ತಾನು ಹೆಣ್ಣಾಗದೆ, ಗಂಡು ಹೆಣ್ಣಾಗುತ, ಹೆಣ್ಣು ಗಂಡಾಗುತ ಬೆರೆತು ಕಲೆತು ಹೋಗುವ ಏಕಾಂತವದು. ನಿಜಕ್ಕೂ ಮಲಗುವ ಕೋಣೆಯ ಏಕಾಂತ ಹಾಗಿರುತ್ತದೆಯೇ?

ಇಲ್ಲ, ಶೋಭಾ ನಾಯಕ್ ಅವರು ಅದನ್ನು ಪುರಾಣಕಾಲದಿಂದ ಕುರುಕ್ಷೇತ್ರದವರೆಗಿನ ಸ್ತ್ರೀಯರನ್ನು ನೆನಪಿಸುವ ಮೂಲಕ ಗಟ್ಟಿಯಾಗಿ ಹೇಳುತ್ತಾರೆ. ರಾಜ್ಯಕಾರಣ ಕವಿತೆಯಲ್ಲಿ ಸೀತೆ, ಮರಿಯಾ ಮ್ಯಾಗ್ಡಲೀನ್, ದ್ರೌಪದಿ, ರಾಧೆಯರನ್ನು ಅವರ ಪತಿ, ಪ್ರಿಯಕರರು ಅತಂತ್ರವಾಗಿಸಿದ್ದನ್ನು ಬಿಚ್ಚಿಡುತ್ತಾರೆ.

ಗಂಡಿನ ಅಹಂಕಾರವನ್ನು ’ಅಹಂ’ನಲ್ಲಿ ಅನಾವರಣ ಮಾಡುತ್ತಾರೆ. ’ಮಂಚವೆಂದರೆ ಸಮರಾಂಗಣ’ ಎಂದೂ, ’ನಾನು ನರಳುವಾಗ/ ನಿನಗೆ ಸಿಗುವ/ ಸುಖದ ಹೆಸರು: ಅಹಂ’ ಎಂದೂ ವ್ಯಾಖ್ಯಾನಿಸುತ್ತಾರೆ.

ಆದರೆ ಪ್ರೇಮ ಧ್ಯಾನದಲ್ಲಿ ತನ್ನ ನಿಜವಾದ ಸಂಗಾತಿಯನ್ನು ಹುಡುಕುವ ಕವಿ, ತನ್ನೊಳಗೆ ಪುಳಕವನ್ನು ಹುಟ್ಟಿಸಿದವನನ್ನು ನೆನಪಿಸಿಕೊಳ್ಳುತ್ತಾರೆ ಮತ್ತು ಹಂಬಲಿಸುತ್ತಾರೆ.

ಡಾ. ಶೋಭಾ ನಾಯಕ

ಆಡುವಾಗ ಜಡೆಯೆಳೆದವನು
ತರಗತಿಯಲ್ಲಿ ಲಂಗ ಜಗ್ಗಿದವನು
ಓಣಿ ಇಕ್ಕಟ್ಟಿನಲಿ ಜಾಲಿ ಮಾತ ಕಲಿಸಿದವನು
ಮುಗಳುನಗೆಯಲಿ ಕನಸು ಹುಟ್ಟಿಸಿದವನು
ಮೊದಲು ಚುಂಬಿಸಿದ ಅವನು
ಮೈಯರಳಿಸಿದ ಇವನು..

ಎಂದು ’ನಿನ್ನ ಪ್ರೇಮದಲ್ಲಿ ಎಚ್ಚರವಿದ್ದೇನೆ’ ಎಂದು ಘೋಷಿಸುತ್ತಾರೆ. ಈ ಎಚ್ಚರ ಮತ್ತು ಕಾಯುವಿಕೆಯ ನಿರಂತರ ಚಡಪಡಿಕೆಯ ಕುದಿಯನ್ನು ಅಷ್ಟೇ ತಣ್ಣಗೆ ದಾಟಿಸುತ್ತಾರೆ.

ಕಪ್ಪಿನ ಬಿಸಿ ಚ್ಹಾದೊಳಕ್ಕೆ
ಪ್ರತಿ ಅದ್ದಿಗೂ
ಇಷ್ಟಿಷ್ಟೇ ಕರಗಿಬೀಳುವ
ಬಿಸ್ಕೆಟಿನಂತೆ
ನಿನ್ನ ಪ್ರತಿ ಅಗಲಿಕೆಯಲೂ
ನರಕದಾಳಕ್ಕೆ
ಇಷ್ಟಿಷ್ಟೇ ಮುರಿದುಬೀಳುತ್ತೇನೆ.
ಆದರೆ,
ಈ ಕಪ್ಪಿನ ತಳ ಕಲಕಿ ಕುಡಿಯಲು ಬರುವ
ಯಾವನಿಗಾದರೂ ಕಾದಿರುತ್ತದೆ
ಮುರಿದು ಬಿದ್ದ
ಮರಣದ ಆ ತುತ್ತು.

ಹೀಗೆ ಧ್ಯಾನಿಸುವ ಕವಿ, ತಮ್ಮ ತೀವ್ರ ಅಭೀಪ್ಸೆಯನ್ನು ಹೆಣ್ಣಿನ ದೇಹ ಮತ್ತು ವಾಂಚೆಯ ರೂಪಕಗಳ ಮೂಲಕ ತಮ್ಮ ಪ್ರೇಮಾಂಕ್ಷೆ, ಸಾಂಗತ್ಯದ ಬಯಕೆಗಳನ್ನು ಕಟ್ಟಿಕೊಡುತ್ತಾರೆ. ಈ ಪ್ರತಿಮೆ-ರೂಪಕಗಳ ಹಸಿತನ ಹೆಣ್ಣಿನ ಅಭಿವ್ಯಕ್ತಿಗೆ ಈಗಲೂ ಇರುವ ಚೌಕಟ್ಟನ್ನು ಒಡೆಯುವ ಸಾಹಸ ಮಾಡುತ್ತವೆ. ಗಂಡಿನ ಅಹಂಕಾರವನ್ನು ಕೆಣುಕಲೆಂದೇ ಇಲ್ಲಿ ನಿರ್ಭಿಡೆಯಿಂದ ತನ್ನ ಮನದ ಮಾತುಗಳನ್ನು ಶಯ್ಯಾಗೃಹದ ಪಲ್ಲಂಗದ ಮೇಲೆ ಹರಡಿದಂತೆ ಹೊರಬಂದಿವೆ. ಈ ಪಿಸುಮಾತುಗಳನ್ನು ಕೇಳಿಸಿಕೊಳ್ಳುವ ಗಂಡಿಗೆ ಧ್ಯಾನಿಸುತ್ತವೆ.

ಶೃಂಗಾರ, ಪ್ರಣಯ, ಪ್ರೇಮದ ದಟ್ಟ ರೂಪಕಗಳು, ನುಡಿಗಟ್ಟು ಹೆಣ್ಣಿನ ಅತ್ಯಂತಿಕ ಭಾವಲೋಕವನ್ನು ಬೆಚ್ಚಿಬೀಳಿಸುವ ಉತ್ಕಟತೆಯೊಂದಿಗೆ ಹೊರಹೊಮ್ಮಿಸುತ್ತವೆ. ಶಯ್ಯಾಗೃಹದ ಸುದ್ದಿಗಳು, ಧ್ಯಾನಸ್ಥ ಶಿವ, ಯಯಾತಿಗೊಂದು ಪತ್ರ, ಹಾಲೆದೆ, ಚರಿತ್ರೆ ಮತ್ತು ಕವಿತೆ, ಕನ್ನಡಿಯ ಚೂರು, ಅನುಭವ ಮಂಟಪ, ಮಂಡೋದರಿ, ಸವರಾತ್ರಿಯ ಸಂಲಗ್ನ, ಶಯ್ಯಾಗೃಹದ ಎಲ್ಲಾ ರಾತ್ರಿಗಳು ಮುಗಿದ ಮೇಲೆ, ಕಲ್ಲಾದವರ ನೆತ್ತಿಯ ಮೇಲೆ, ನಾನು ನೀನು ಕವಿತೆಗಳು ಇಷ್ಟವಾಗುವ ಕವಿತೆಗಳು.

ಒಂದೆಡೆ ಗಂಡಿನ ಅಹಂಕಾರಕ್ಕೆ ಹೆಣ್ಣಿನ ಕನಿಷ್ಠ ಪ್ರತಿರೋಧದ ಅಗತ್ಯವನ್ನು ಹೇಳುತ್ತಾರೆ;

“ಕಲ್ಲಾದವರ ನೆತ್ತಿಯ ಮೇಲೆ
ಕಾಗೆ ಗೂಬೆ ಹೇತುಹೋಗುತ್ತವೆ.
ಮಿಸುಕಾಡಬೇಕು
ಮಾತಾಡಬೇಕು”

ಹಾಗೆಯೇ ಅರಿತು ಬೆರೆತು ಸಮಾನರೆನಿಸಿದಾಗ ಪೂರ್ಣತಯು ಎಂಬುದನ್ನೂ ಕವಿ ನೆನಪಿಸುತ್ತಾರೆ;

ಸುಖ
ಕೇವಲ ಒಂದು
ಹೊಂಗನಸಲ್ಲ
ನಾವಾಗೇ ಬರೆದು
ಪೂರ್ಣಗೊಳಿಸಬೇಕಾದ ವರ್ಣಚಿತ್ರ.

ಪ್ರೇಮಕ್ಕೆ ಮರಳಲು, ನಾವೆಂದೂ ಪಡೆಯದ, ಆದರೆ ಸದಾ ಹಂಬಲಿಸಿದ ಪ್ರೀತಿ ಪಡೆಯಲು, ನಾವು ಕೊಡಬೇಕಾದ ಪ್ರೀತಿಯನ್ನು ಹಂಚಿಕೊಳ್ಳಲು ಸಿದ್ಧರಾಗದ ನಾವು ರಮ್ಯ ಸಂಬಂಧಗಳತ್ತ ವಾಲುತ್ತೇವೆ. ಈ ಸಂಬಂಧಗಳು ಉಳಿದ ಯಾವುದೇ ಸಂಬಂಧಗಳಿಗಿಂತ ಹೆಚ್ಚಾಗಿ ನಮ್ಮನ್ನು ವಿಮೋಚನೆಯತ್ತ, ಬಿಡುಗಡೆಯತ್ತ ಕರೆದೊಯ್ಯುತ್ತವೆ ಎಂದು ನಂಬಿರುತ್ತೇವೆ. ಆದರೆ ನಿಜವಾದ ಪ್ರೀತಿ, ನಾವು ವಿಮೋಚನೆಗೆ ಸಿದ್ಧರಾಗಿದ್ದರಷ್ಟೆ, ಸ್ವತಂತ್ರಗೊಳಿಸುವ ಶಕ್ತಿಯನ್ನು ಹೊಂದಿರುತ್ತದೆ. ನಾವು ಉಳಿಯಬೇಕೆಂದಿದ್ದರೆ ಮಾತ್ರ ಪ್ರೀತಿ ನಮ್ಮನ್ನು ಉಳಿಸುತ್ತದೆ ಎಂದು ಬೆಲ್ ಹುಕ್ಸ್ ಹೇಳುತ್ತಾರೆ.

ಎಲ್ಲ ಅಹಮಿಕೆಯ ಪದರಗಳನ್ನು ಕಳಚಿದಾಗ ಮಾತ್ರ ಪ್ರೇಮ ಸಾಧ್ಯ. ಅದು ಬಿಡುಗಡೆಯ ಹಾದಿ. ಅಂತಹ ಧ್ಯಾನ ಶೋಭ ನಾಯ್ಕರ ಕವಿತೆಗಳಲ್ಲಿ ಇರುವುದರಿಂದಲೇ ಇವು ಇಲ್ಲಿರುವ ಶೃಂಗಾರದ ರೂಪಕಗಳಾಚೆಗೆ ಹಾರುತ್ತವೆ.

ಶಯ್ಯಾಗೃಹದ ಸುದ್ದಿಗಳು
ಡಾ. ಶೋಭಾ ನಾಯಕ
ಪುಟ: 92 | ಬೆಲೆ : 100/-
ಪ್ರಕಾಶನ: ಮನೋರಮಾ
ಬುಕ್ ಹೌಸ್, ಬೆಳಗಾವಿ

– ಎಸ್ ಕುಮಾರ್


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬದಿಕಿರುವುದೇ ಕಥೆ ಹೇಳಲಿಕ್ಕೆ ಎಂದು ಬರೆದು ಬದುಕಿದ ಲ್ಯಾಟಿನ್ ಅಮೆರಿಕನ್ ಲೇಖಕ ಮಾರ್ಕ್ವೆಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...