Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ; ಶಯ್ಯಾಗೃಹದ ಪಿಸುಮಾತುಗಳಿಗೆ ಕಿವುಡಾಗೇ ಇರುವ ಗಂಡು ಜಗತ್ತು!

ಪುಸ್ತಕ ಪರಿಚಯ; ಶಯ್ಯಾಗೃಹದ ಪಿಸುಮಾತುಗಳಿಗೆ ಕಿವುಡಾಗೇ ಇರುವ ಗಂಡು ಜಗತ್ತು!

- Advertisement -
- Advertisement -

ಡಾ. ಶೋಭಾ ನಾಯಕ ಅವರ ’ಶಯ್ಯಾಗೃಹದ ಸುದ್ದಿಗಳು’ ಕವನಸಂಕಲನ ಓದಿ ಮುಗಿಸಿದಾಗ ನನಗೆ ನೆನಪಾಗಿದ್ದು ಇಬ್ಬರು. ಒಬ್ಬ ಚಾರ್ಲ್ಸ್ ಬುಕೋಸ್ಕಿ ಮತ್ತೊಬ್ಬರು ಬೆಲ್ ಹುಕ್ಸ್.

ಚಾರ್ಲ್ಸ್ ಬುಕೋಸ್ಕಿ, ತನ್ನ ಮುಕ್ತ ಕಾವ್ಯದ ಮೂಲಕ ದಿಢೀರನೆ ಜನಪ್ರಿಯತೆ ಪಡೆದ ಅಮೆರಿಕದ ಕವಿ. ಆತನ ಜನಪ್ರಿಯತೆ ಕಾರಣ, ತನ್ನ ಕಾವ್ಯದ ಮುಕ್ತತೆ, ಸೋಗಿಲ್ಲದ ಮತ್ತು ಪ್ರಾಮಾಣಿಕ ಅಭಿವ್ಯಕ್ತಿ. ತನ್ನ ಹೆಣ್ಣುಬಾಕುತನ, ಆಷಾಢಭೂತಿನದ ಬಗ್ಗೆ ಇದ್ದ ತೀವ್ರ ಅಸಹನೆ, ಜನರ ಒಣಪ್ರತಿಷ್ಠೆಗಳ ಬಗ್ಗೆ ಮರ್ಮಾಘಾತವಾಗುವಂತೆ ಕವಿತೆಯಲ್ಲಿ ಕಾಲೆಳೆದು, ಟೀಕಿಸಿ, ಬರೆದಾತ. ತನ್ನ ತೀರಾ ಖಾಸಗಿಯದ್ದನ್ನು ನಿರ್ಭಿಡೆಯಿಂದ ಹೇಳುವಂತಹ ಬುಕೋಸ್ಕಿಯ ಕಾವ್ಯದಂತೆಯೇ, ಶೋಭಾ ನಾಯಕರ ಕಾವ್ಯದಲ್ಲಿರುವುದು, ಕೇಳುವವ ತನ್ನೊಳಗೆ ತಾನು ನೋಡಿಕೊಳ್ಳುವಂತೆ ಮಾಡುವ ಅಭಿವ್ಯಕ್ತಿಯ ವಿಧಾನ.

ಇನ್ನೊಂದು ಹೆಸರು ಬೆಲ್ ಹುಕ್ಸ್. ಸ್ತ್ರೀವಾದಕ್ಕೆ ಭಿನ್ನ ಒಳನೋಟಗಳನ್ನು ನೀಡಿದ ಲೇಖಕಿ ಇವರು. ಇವರ ’ಕಮ್ಯುನಿಯನ್: ದಿ ಫೀಮೇಲ್ ಸರ್ಚ್ ಫಾರ್ ಲವ್ ಕೃತಿಯಲ್ಲಿ ಒಂದೆಡೆ, “ಸತ್ಯ ಹೇಳುವ ಸಮಯ ಬಂದಿದೆ. ಮತ್ತೆ, ನ್ಯಾಯವಿಲ್ಲದ ಪ್ರೀತಿ ಇರಲಾರದು. ಹೆಣ್ಣು ಮತ್ತು ಗಂಡಿಗೆ, ತಾವು ಆತ್ಮೀಯವಾಗಿ ಬೆರೆಯುವ, ಎಲ್ಲರೊಂದಿಗೆ ಮತ್ತು ಪ್ರತಿಯೊಬ್ಬರೊಂದಿಗೂ ಪರಸ್ಪರರ ಪ್ರೀತಿಯನ್ನು ಅರಿಯುವ ಸ್ವಾತಂತ್ರ್ಯ ನಿರಾಕರಿಸಲಾಗುವುದಿಲ್ಲ. ಒಂದುವೇಳೆ ಪ್ರೀತಿಯನ್ನು ಒಂದು ಮಾಡುವ ನೀತಿಯನ್ನು ನಾವು ಗುರುತಿಸದೇ ಹೋದಲ್ಲಿ, ಅದು ಅಧಿಕಾರವನ್ನು ಅರಸುವಂತೆ ಮತ್ತು ಜಾಣ್ಮೆಯಿಂದ ಬಳಸುವಂತೆ ಮಾಡುತ್ತದೆ. ಹೀಗಾದರೆ ನಾವು ಸಾಂಸ್ಕೃತಿಕ ಯಜಮಾನಿಕೆಯೊಂದಿಗೆ ಬೆಸೆದುಕೊಳ್ಳುತ್ತೇವೆ, ಪ್ರೀತಿಯ ಬದಲು ಅಧಿಕಾರವನ್ನು ಆಯ್ಕೆಮಾಡಿಕೊಳ್ಳುತ್ತೇವೆ” ಎನ್ನುತ್ತಾರೆ. ಪಿತೃಪ್ರಧಾನ ಮನಸ್ಥಿತಿ ಹೇಗೆ ಗಂಡು-ಹೆಣ್ಣಿನ ಪ್ರೇಮ ಮತ್ತು ಕಾಮದ ಸಂಬಂಧವನ್ನು ನಿರ್ಧರಿಸುತ್ತದೆ, ಆಳುತ್ತದೆ ಎಂಬುದನ್ನು ಬೆಲ್ ಹುಕ್ಸ್ ತಮ್ಮ ಹಲವು ಕೃತಿಗಳಲ್ಲಿ ಚರ್ಚಿಸಿದ್ದಾರೆ, ವಿಶ್ಲೇಷಿಸಿದ್ದಾರೆ.

ಶೋಭಾ ನಾಯಕ ಅವರ ಕವಿತೆಗಳಲ್ಲಿ ತೀವ್ರವಾಗಿ ಆವರಿಸಿರುವ ’ಲಾಂಗಿಂಗ್’ (ಬಯಕೆ ತೀವ್ರತೆಯ ನಿರೀಕ್ಷೆ), ಅಕ್ಕ ಹೇಳುವ, ಸಾವಿಲ್ಲದ ಕೇಡಿಲ್ಲ, ರೂಹಿಲ್ಲದ ಚೆಲುವನಿಗೆ ಕಾತರಿಸುವಂತಹದ್ದು. ಅಂತಹ ಪ್ರೇಮಿಯೊಬ್ಬನ ಧ್ಯಾನ ಇಲ್ಲಿದೆ. ಅಡುಗೆ ಒಗ್ಗರಣೆಯ ಪಾತ್ರೆಗಳ ಸದ್ದಿನಲ್ಲಿ ಕಳೆದುಹೋಗುವ ಹೆಣ್ಣಿನ ಮನೋಲೋಕದ ಮಾತುಗಳನ್ನು ಗಂಡು-ಹೆಣ್ಣು ಮಲಗುವ ಕೋಣೆಯಲ್ಲಿ ಪಿಸುಮಾತಿನಲ್ಲಿ, ತುಸುಕೋಪದಲ್ಲಿ, ತುಸು ರಮಿಸುವಂತೆ ಹಂಚಿಕೊಳ್ಳಬೇಕು. ಗಂಡು ತಾನು ಗಂಡಾಗದೆ, ಹೆಣ್ಣು ತಾನು ಹೆಣ್ಣಾಗದೆ, ಗಂಡು ಹೆಣ್ಣಾಗುತ, ಹೆಣ್ಣು ಗಂಡಾಗುತ ಬೆರೆತು ಕಲೆತು ಹೋಗುವ ಏಕಾಂತವದು. ನಿಜಕ್ಕೂ ಮಲಗುವ ಕೋಣೆಯ ಏಕಾಂತ ಹಾಗಿರುತ್ತದೆಯೇ?

ಇಲ್ಲ, ಶೋಭಾ ನಾಯಕ್ ಅವರು ಅದನ್ನು ಪುರಾಣಕಾಲದಿಂದ ಕುರುಕ್ಷೇತ್ರದವರೆಗಿನ ಸ್ತ್ರೀಯರನ್ನು ನೆನಪಿಸುವ ಮೂಲಕ ಗಟ್ಟಿಯಾಗಿ ಹೇಳುತ್ತಾರೆ. ರಾಜ್ಯಕಾರಣ ಕವಿತೆಯಲ್ಲಿ ಸೀತೆ, ಮರಿಯಾ ಮ್ಯಾಗ್ಡಲೀನ್, ದ್ರೌಪದಿ, ರಾಧೆಯರನ್ನು ಅವರ ಪತಿ, ಪ್ರಿಯಕರರು ಅತಂತ್ರವಾಗಿಸಿದ್ದನ್ನು ಬಿಚ್ಚಿಡುತ್ತಾರೆ.

ಗಂಡಿನ ಅಹಂಕಾರವನ್ನು ’ಅಹಂ’ನಲ್ಲಿ ಅನಾವರಣ ಮಾಡುತ್ತಾರೆ. ’ಮಂಚವೆಂದರೆ ಸಮರಾಂಗಣ’ ಎಂದೂ, ’ನಾನು ನರಳುವಾಗ/ ನಿನಗೆ ಸಿಗುವ/ ಸುಖದ ಹೆಸರು: ಅಹಂ’ ಎಂದೂ ವ್ಯಾಖ್ಯಾನಿಸುತ್ತಾರೆ.

ಆದರೆ ಪ್ರೇಮ ಧ್ಯಾನದಲ್ಲಿ ತನ್ನ ನಿಜವಾದ ಸಂಗಾತಿಯನ್ನು ಹುಡುಕುವ ಕವಿ, ತನ್ನೊಳಗೆ ಪುಳಕವನ್ನು ಹುಟ್ಟಿಸಿದವನನ್ನು ನೆನಪಿಸಿಕೊಳ್ಳುತ್ತಾರೆ ಮತ್ತು ಹಂಬಲಿಸುತ್ತಾರೆ.

ಡಾ. ಶೋಭಾ ನಾಯಕ

ಆಡುವಾಗ ಜಡೆಯೆಳೆದವನು
ತರಗತಿಯಲ್ಲಿ ಲಂಗ ಜಗ್ಗಿದವನು
ಓಣಿ ಇಕ್ಕಟ್ಟಿನಲಿ ಜಾಲಿ ಮಾತ ಕಲಿಸಿದವನು
ಮುಗಳುನಗೆಯಲಿ ಕನಸು ಹುಟ್ಟಿಸಿದವನು
ಮೊದಲು ಚುಂಬಿಸಿದ ಅವನು
ಮೈಯರಳಿಸಿದ ಇವನು..

ಎಂದು ’ನಿನ್ನ ಪ್ರೇಮದಲ್ಲಿ ಎಚ್ಚರವಿದ್ದೇನೆ’ ಎಂದು ಘೋಷಿಸುತ್ತಾರೆ. ಈ ಎಚ್ಚರ ಮತ್ತು ಕಾಯುವಿಕೆಯ ನಿರಂತರ ಚಡಪಡಿಕೆಯ ಕುದಿಯನ್ನು ಅಷ್ಟೇ ತಣ್ಣಗೆ ದಾಟಿಸುತ್ತಾರೆ.

ಕಪ್ಪಿನ ಬಿಸಿ ಚ್ಹಾದೊಳಕ್ಕೆ
ಪ್ರತಿ ಅದ್ದಿಗೂ
ಇಷ್ಟಿಷ್ಟೇ ಕರಗಿಬೀಳುವ
ಬಿಸ್ಕೆಟಿನಂತೆ
ನಿನ್ನ ಪ್ರತಿ ಅಗಲಿಕೆಯಲೂ
ನರಕದಾಳಕ್ಕೆ
ಇಷ್ಟಿಷ್ಟೇ ಮುರಿದುಬೀಳುತ್ತೇನೆ.
ಆದರೆ,
ಈ ಕಪ್ಪಿನ ತಳ ಕಲಕಿ ಕುಡಿಯಲು ಬರುವ
ಯಾವನಿಗಾದರೂ ಕಾದಿರುತ್ತದೆ
ಮುರಿದು ಬಿದ್ದ
ಮರಣದ ಆ ತುತ್ತು.

ಹೀಗೆ ಧ್ಯಾನಿಸುವ ಕವಿ, ತಮ್ಮ ತೀವ್ರ ಅಭೀಪ್ಸೆಯನ್ನು ಹೆಣ್ಣಿನ ದೇಹ ಮತ್ತು ವಾಂಚೆಯ ರೂಪಕಗಳ ಮೂಲಕ ತಮ್ಮ ಪ್ರೇಮಾಂಕ್ಷೆ, ಸಾಂಗತ್ಯದ ಬಯಕೆಗಳನ್ನು ಕಟ್ಟಿಕೊಡುತ್ತಾರೆ. ಈ ಪ್ರತಿಮೆ-ರೂಪಕಗಳ ಹಸಿತನ ಹೆಣ್ಣಿನ ಅಭಿವ್ಯಕ್ತಿಗೆ ಈಗಲೂ ಇರುವ ಚೌಕಟ್ಟನ್ನು ಒಡೆಯುವ ಸಾಹಸ ಮಾಡುತ್ತವೆ. ಗಂಡಿನ ಅಹಂಕಾರವನ್ನು ಕೆಣುಕಲೆಂದೇ ಇಲ್ಲಿ ನಿರ್ಭಿಡೆಯಿಂದ ತನ್ನ ಮನದ ಮಾತುಗಳನ್ನು ಶಯ್ಯಾಗೃಹದ ಪಲ್ಲಂಗದ ಮೇಲೆ ಹರಡಿದಂತೆ ಹೊರಬಂದಿವೆ. ಈ ಪಿಸುಮಾತುಗಳನ್ನು ಕೇಳಿಸಿಕೊಳ್ಳುವ ಗಂಡಿಗೆ ಧ್ಯಾನಿಸುತ್ತವೆ.

ಶೃಂಗಾರ, ಪ್ರಣಯ, ಪ್ರೇಮದ ದಟ್ಟ ರೂಪಕಗಳು, ನುಡಿಗಟ್ಟು ಹೆಣ್ಣಿನ ಅತ್ಯಂತಿಕ ಭಾವಲೋಕವನ್ನು ಬೆಚ್ಚಿಬೀಳಿಸುವ ಉತ್ಕಟತೆಯೊಂದಿಗೆ ಹೊರಹೊಮ್ಮಿಸುತ್ತವೆ. ಶಯ್ಯಾಗೃಹದ ಸುದ್ದಿಗಳು, ಧ್ಯಾನಸ್ಥ ಶಿವ, ಯಯಾತಿಗೊಂದು ಪತ್ರ, ಹಾಲೆದೆ, ಚರಿತ್ರೆ ಮತ್ತು ಕವಿತೆ, ಕನ್ನಡಿಯ ಚೂರು, ಅನುಭವ ಮಂಟಪ, ಮಂಡೋದರಿ, ಸವರಾತ್ರಿಯ ಸಂಲಗ್ನ, ಶಯ್ಯಾಗೃಹದ ಎಲ್ಲಾ ರಾತ್ರಿಗಳು ಮುಗಿದ ಮೇಲೆ, ಕಲ್ಲಾದವರ ನೆತ್ತಿಯ ಮೇಲೆ, ನಾನು ನೀನು ಕವಿತೆಗಳು ಇಷ್ಟವಾಗುವ ಕವಿತೆಗಳು.

ಒಂದೆಡೆ ಗಂಡಿನ ಅಹಂಕಾರಕ್ಕೆ ಹೆಣ್ಣಿನ ಕನಿಷ್ಠ ಪ್ರತಿರೋಧದ ಅಗತ್ಯವನ್ನು ಹೇಳುತ್ತಾರೆ;

“ಕಲ್ಲಾದವರ ನೆತ್ತಿಯ ಮೇಲೆ
ಕಾಗೆ ಗೂಬೆ ಹೇತುಹೋಗುತ್ತವೆ.
ಮಿಸುಕಾಡಬೇಕು
ಮಾತಾಡಬೇಕು”

ಹಾಗೆಯೇ ಅರಿತು ಬೆರೆತು ಸಮಾನರೆನಿಸಿದಾಗ ಪೂರ್ಣತಯು ಎಂಬುದನ್ನೂ ಕವಿ ನೆನಪಿಸುತ್ತಾರೆ;

ಸುಖ
ಕೇವಲ ಒಂದು
ಹೊಂಗನಸಲ್ಲ
ನಾವಾಗೇ ಬರೆದು
ಪೂರ್ಣಗೊಳಿಸಬೇಕಾದ ವರ್ಣಚಿತ್ರ.

ಪ್ರೇಮಕ್ಕೆ ಮರಳಲು, ನಾವೆಂದೂ ಪಡೆಯದ, ಆದರೆ ಸದಾ ಹಂಬಲಿಸಿದ ಪ್ರೀತಿ ಪಡೆಯಲು, ನಾವು ಕೊಡಬೇಕಾದ ಪ್ರೀತಿಯನ್ನು ಹಂಚಿಕೊಳ್ಳಲು ಸಿದ್ಧರಾಗದ ನಾವು ರಮ್ಯ ಸಂಬಂಧಗಳತ್ತ ವಾಲುತ್ತೇವೆ. ಈ ಸಂಬಂಧಗಳು ಉಳಿದ ಯಾವುದೇ ಸಂಬಂಧಗಳಿಗಿಂತ ಹೆಚ್ಚಾಗಿ ನಮ್ಮನ್ನು ವಿಮೋಚನೆಯತ್ತ, ಬಿಡುಗಡೆಯತ್ತ ಕರೆದೊಯ್ಯುತ್ತವೆ ಎಂದು ನಂಬಿರುತ್ತೇವೆ. ಆದರೆ ನಿಜವಾದ ಪ್ರೀತಿ, ನಾವು ವಿಮೋಚನೆಗೆ ಸಿದ್ಧರಾಗಿದ್ದರಷ್ಟೆ, ಸ್ವತಂತ್ರಗೊಳಿಸುವ ಶಕ್ತಿಯನ್ನು ಹೊಂದಿರುತ್ತದೆ. ನಾವು ಉಳಿಯಬೇಕೆಂದಿದ್ದರೆ ಮಾತ್ರ ಪ್ರೀತಿ ನಮ್ಮನ್ನು ಉಳಿಸುತ್ತದೆ ಎಂದು ಬೆಲ್ ಹುಕ್ಸ್ ಹೇಳುತ್ತಾರೆ.

ಎಲ್ಲ ಅಹಮಿಕೆಯ ಪದರಗಳನ್ನು ಕಳಚಿದಾಗ ಮಾತ್ರ ಪ್ರೇಮ ಸಾಧ್ಯ. ಅದು ಬಿಡುಗಡೆಯ ಹಾದಿ. ಅಂತಹ ಧ್ಯಾನ ಶೋಭ ನಾಯ್ಕರ ಕವಿತೆಗಳಲ್ಲಿ ಇರುವುದರಿಂದಲೇ ಇವು ಇಲ್ಲಿರುವ ಶೃಂಗಾರದ ರೂಪಕಗಳಾಚೆಗೆ ಹಾರುತ್ತವೆ.

ಶಯ್ಯಾಗೃಹದ ಸುದ್ದಿಗಳು
ಡಾ. ಶೋಭಾ ನಾಯಕ
ಪುಟ: 92 | ಬೆಲೆ : 100/-
ಪ್ರಕಾಶನ: ಮನೋರಮಾ
ಬುಕ್ ಹೌಸ್, ಬೆಳಗಾವಿ

– ಎಸ್ ಕುಮಾರ್


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬದಿಕಿರುವುದೇ ಕಥೆ ಹೇಳಲಿಕ್ಕೆ ಎಂದು ಬರೆದು ಬದುಕಿದ ಲ್ಯಾಟಿನ್ ಅಮೆರಿಕನ್ ಲೇಖಕ ಮಾರ್ಕ್ವೆಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...