Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ; ಶಯ್ಯಾಗೃಹದ ಪಿಸುಮಾತುಗಳಿಗೆ ಕಿವುಡಾಗೇ ಇರುವ ಗಂಡು ಜಗತ್ತು!

ಪುಸ್ತಕ ಪರಿಚಯ; ಶಯ್ಯಾಗೃಹದ ಪಿಸುಮಾತುಗಳಿಗೆ ಕಿವುಡಾಗೇ ಇರುವ ಗಂಡು ಜಗತ್ತು!

- Advertisement -
- Advertisement -

ಡಾ. ಶೋಭಾ ನಾಯಕ ಅವರ ’ಶಯ್ಯಾಗೃಹದ ಸುದ್ದಿಗಳು’ ಕವನಸಂಕಲನ ಓದಿ ಮುಗಿಸಿದಾಗ ನನಗೆ ನೆನಪಾಗಿದ್ದು ಇಬ್ಬರು. ಒಬ್ಬ ಚಾರ್ಲ್ಸ್ ಬುಕೋಸ್ಕಿ ಮತ್ತೊಬ್ಬರು ಬೆಲ್ ಹುಕ್ಸ್.

ಚಾರ್ಲ್ಸ್ ಬುಕೋಸ್ಕಿ, ತನ್ನ ಮುಕ್ತ ಕಾವ್ಯದ ಮೂಲಕ ದಿಢೀರನೆ ಜನಪ್ರಿಯತೆ ಪಡೆದ ಅಮೆರಿಕದ ಕವಿ. ಆತನ ಜನಪ್ರಿಯತೆ ಕಾರಣ, ತನ್ನ ಕಾವ್ಯದ ಮುಕ್ತತೆ, ಸೋಗಿಲ್ಲದ ಮತ್ತು ಪ್ರಾಮಾಣಿಕ ಅಭಿವ್ಯಕ್ತಿ. ತನ್ನ ಹೆಣ್ಣುಬಾಕುತನ, ಆಷಾಢಭೂತಿನದ ಬಗ್ಗೆ ಇದ್ದ ತೀವ್ರ ಅಸಹನೆ, ಜನರ ಒಣಪ್ರತಿಷ್ಠೆಗಳ ಬಗ್ಗೆ ಮರ್ಮಾಘಾತವಾಗುವಂತೆ ಕವಿತೆಯಲ್ಲಿ ಕಾಲೆಳೆದು, ಟೀಕಿಸಿ, ಬರೆದಾತ. ತನ್ನ ತೀರಾ ಖಾಸಗಿಯದ್ದನ್ನು ನಿರ್ಭಿಡೆಯಿಂದ ಹೇಳುವಂತಹ ಬುಕೋಸ್ಕಿಯ ಕಾವ್ಯದಂತೆಯೇ, ಶೋಭಾ ನಾಯಕರ ಕಾವ್ಯದಲ್ಲಿರುವುದು, ಕೇಳುವವ ತನ್ನೊಳಗೆ ತಾನು ನೋಡಿಕೊಳ್ಳುವಂತೆ ಮಾಡುವ ಅಭಿವ್ಯಕ್ತಿಯ ವಿಧಾನ.

ಇನ್ನೊಂದು ಹೆಸರು ಬೆಲ್ ಹುಕ್ಸ್. ಸ್ತ್ರೀವಾದಕ್ಕೆ ಭಿನ್ನ ಒಳನೋಟಗಳನ್ನು ನೀಡಿದ ಲೇಖಕಿ ಇವರು. ಇವರ ’ಕಮ್ಯುನಿಯನ್: ದಿ ಫೀಮೇಲ್ ಸರ್ಚ್ ಫಾರ್ ಲವ್ ಕೃತಿಯಲ್ಲಿ ಒಂದೆಡೆ, “ಸತ್ಯ ಹೇಳುವ ಸಮಯ ಬಂದಿದೆ. ಮತ್ತೆ, ನ್ಯಾಯವಿಲ್ಲದ ಪ್ರೀತಿ ಇರಲಾರದು. ಹೆಣ್ಣು ಮತ್ತು ಗಂಡಿಗೆ, ತಾವು ಆತ್ಮೀಯವಾಗಿ ಬೆರೆಯುವ, ಎಲ್ಲರೊಂದಿಗೆ ಮತ್ತು ಪ್ರತಿಯೊಬ್ಬರೊಂದಿಗೂ ಪರಸ್ಪರರ ಪ್ರೀತಿಯನ್ನು ಅರಿಯುವ ಸ್ವಾತಂತ್ರ್ಯ ನಿರಾಕರಿಸಲಾಗುವುದಿಲ್ಲ. ಒಂದುವೇಳೆ ಪ್ರೀತಿಯನ್ನು ಒಂದು ಮಾಡುವ ನೀತಿಯನ್ನು ನಾವು ಗುರುತಿಸದೇ ಹೋದಲ್ಲಿ, ಅದು ಅಧಿಕಾರವನ್ನು ಅರಸುವಂತೆ ಮತ್ತು ಜಾಣ್ಮೆಯಿಂದ ಬಳಸುವಂತೆ ಮಾಡುತ್ತದೆ. ಹೀಗಾದರೆ ನಾವು ಸಾಂಸ್ಕೃತಿಕ ಯಜಮಾನಿಕೆಯೊಂದಿಗೆ ಬೆಸೆದುಕೊಳ್ಳುತ್ತೇವೆ, ಪ್ರೀತಿಯ ಬದಲು ಅಧಿಕಾರವನ್ನು ಆಯ್ಕೆಮಾಡಿಕೊಳ್ಳುತ್ತೇವೆ” ಎನ್ನುತ್ತಾರೆ. ಪಿತೃಪ್ರಧಾನ ಮನಸ್ಥಿತಿ ಹೇಗೆ ಗಂಡು-ಹೆಣ್ಣಿನ ಪ್ರೇಮ ಮತ್ತು ಕಾಮದ ಸಂಬಂಧವನ್ನು ನಿರ್ಧರಿಸುತ್ತದೆ, ಆಳುತ್ತದೆ ಎಂಬುದನ್ನು ಬೆಲ್ ಹುಕ್ಸ್ ತಮ್ಮ ಹಲವು ಕೃತಿಗಳಲ್ಲಿ ಚರ್ಚಿಸಿದ್ದಾರೆ, ವಿಶ್ಲೇಷಿಸಿದ್ದಾರೆ.

ಶೋಭಾ ನಾಯಕ ಅವರ ಕವಿತೆಗಳಲ್ಲಿ ತೀವ್ರವಾಗಿ ಆವರಿಸಿರುವ ’ಲಾಂಗಿಂಗ್’ (ಬಯಕೆ ತೀವ್ರತೆಯ ನಿರೀಕ್ಷೆ), ಅಕ್ಕ ಹೇಳುವ, ಸಾವಿಲ್ಲದ ಕೇಡಿಲ್ಲ, ರೂಹಿಲ್ಲದ ಚೆಲುವನಿಗೆ ಕಾತರಿಸುವಂತಹದ್ದು. ಅಂತಹ ಪ್ರೇಮಿಯೊಬ್ಬನ ಧ್ಯಾನ ಇಲ್ಲಿದೆ. ಅಡುಗೆ ಒಗ್ಗರಣೆಯ ಪಾತ್ರೆಗಳ ಸದ್ದಿನಲ್ಲಿ ಕಳೆದುಹೋಗುವ ಹೆಣ್ಣಿನ ಮನೋಲೋಕದ ಮಾತುಗಳನ್ನು ಗಂಡು-ಹೆಣ್ಣು ಮಲಗುವ ಕೋಣೆಯಲ್ಲಿ ಪಿಸುಮಾತಿನಲ್ಲಿ, ತುಸುಕೋಪದಲ್ಲಿ, ತುಸು ರಮಿಸುವಂತೆ ಹಂಚಿಕೊಳ್ಳಬೇಕು. ಗಂಡು ತಾನು ಗಂಡಾಗದೆ, ಹೆಣ್ಣು ತಾನು ಹೆಣ್ಣಾಗದೆ, ಗಂಡು ಹೆಣ್ಣಾಗುತ, ಹೆಣ್ಣು ಗಂಡಾಗುತ ಬೆರೆತು ಕಲೆತು ಹೋಗುವ ಏಕಾಂತವದು. ನಿಜಕ್ಕೂ ಮಲಗುವ ಕೋಣೆಯ ಏಕಾಂತ ಹಾಗಿರುತ್ತದೆಯೇ?

ಇಲ್ಲ, ಶೋಭಾ ನಾಯಕ್ ಅವರು ಅದನ್ನು ಪುರಾಣಕಾಲದಿಂದ ಕುರುಕ್ಷೇತ್ರದವರೆಗಿನ ಸ್ತ್ರೀಯರನ್ನು ನೆನಪಿಸುವ ಮೂಲಕ ಗಟ್ಟಿಯಾಗಿ ಹೇಳುತ್ತಾರೆ. ರಾಜ್ಯಕಾರಣ ಕವಿತೆಯಲ್ಲಿ ಸೀತೆ, ಮರಿಯಾ ಮ್ಯಾಗ್ಡಲೀನ್, ದ್ರೌಪದಿ, ರಾಧೆಯರನ್ನು ಅವರ ಪತಿ, ಪ್ರಿಯಕರರು ಅತಂತ್ರವಾಗಿಸಿದ್ದನ್ನು ಬಿಚ್ಚಿಡುತ್ತಾರೆ.

ಗಂಡಿನ ಅಹಂಕಾರವನ್ನು ’ಅಹಂ’ನಲ್ಲಿ ಅನಾವರಣ ಮಾಡುತ್ತಾರೆ. ’ಮಂಚವೆಂದರೆ ಸಮರಾಂಗಣ’ ಎಂದೂ, ’ನಾನು ನರಳುವಾಗ/ ನಿನಗೆ ಸಿಗುವ/ ಸುಖದ ಹೆಸರು: ಅಹಂ’ ಎಂದೂ ವ್ಯಾಖ್ಯಾನಿಸುತ್ತಾರೆ.

ಆದರೆ ಪ್ರೇಮ ಧ್ಯಾನದಲ್ಲಿ ತನ್ನ ನಿಜವಾದ ಸಂಗಾತಿಯನ್ನು ಹುಡುಕುವ ಕವಿ, ತನ್ನೊಳಗೆ ಪುಳಕವನ್ನು ಹುಟ್ಟಿಸಿದವನನ್ನು ನೆನಪಿಸಿಕೊಳ್ಳುತ್ತಾರೆ ಮತ್ತು ಹಂಬಲಿಸುತ್ತಾರೆ.

ಡಾ. ಶೋಭಾ ನಾಯಕ

ಆಡುವಾಗ ಜಡೆಯೆಳೆದವನು
ತರಗತಿಯಲ್ಲಿ ಲಂಗ ಜಗ್ಗಿದವನು
ಓಣಿ ಇಕ್ಕಟ್ಟಿನಲಿ ಜಾಲಿ ಮಾತ ಕಲಿಸಿದವನು
ಮುಗಳುನಗೆಯಲಿ ಕನಸು ಹುಟ್ಟಿಸಿದವನು
ಮೊದಲು ಚುಂಬಿಸಿದ ಅವನು
ಮೈಯರಳಿಸಿದ ಇವನು..

ಎಂದು ’ನಿನ್ನ ಪ್ರೇಮದಲ್ಲಿ ಎಚ್ಚರವಿದ್ದೇನೆ’ ಎಂದು ಘೋಷಿಸುತ್ತಾರೆ. ಈ ಎಚ್ಚರ ಮತ್ತು ಕಾಯುವಿಕೆಯ ನಿರಂತರ ಚಡಪಡಿಕೆಯ ಕುದಿಯನ್ನು ಅಷ್ಟೇ ತಣ್ಣಗೆ ದಾಟಿಸುತ್ತಾರೆ.

ಕಪ್ಪಿನ ಬಿಸಿ ಚ್ಹಾದೊಳಕ್ಕೆ
ಪ್ರತಿ ಅದ್ದಿಗೂ
ಇಷ್ಟಿಷ್ಟೇ ಕರಗಿಬೀಳುವ
ಬಿಸ್ಕೆಟಿನಂತೆ
ನಿನ್ನ ಪ್ರತಿ ಅಗಲಿಕೆಯಲೂ
ನರಕದಾಳಕ್ಕೆ
ಇಷ್ಟಿಷ್ಟೇ ಮುರಿದುಬೀಳುತ್ತೇನೆ.
ಆದರೆ,
ಈ ಕಪ್ಪಿನ ತಳ ಕಲಕಿ ಕುಡಿಯಲು ಬರುವ
ಯಾವನಿಗಾದರೂ ಕಾದಿರುತ್ತದೆ
ಮುರಿದು ಬಿದ್ದ
ಮರಣದ ಆ ತುತ್ತು.

ಹೀಗೆ ಧ್ಯಾನಿಸುವ ಕವಿ, ತಮ್ಮ ತೀವ್ರ ಅಭೀಪ್ಸೆಯನ್ನು ಹೆಣ್ಣಿನ ದೇಹ ಮತ್ತು ವಾಂಚೆಯ ರೂಪಕಗಳ ಮೂಲಕ ತಮ್ಮ ಪ್ರೇಮಾಂಕ್ಷೆ, ಸಾಂಗತ್ಯದ ಬಯಕೆಗಳನ್ನು ಕಟ್ಟಿಕೊಡುತ್ತಾರೆ. ಈ ಪ್ರತಿಮೆ-ರೂಪಕಗಳ ಹಸಿತನ ಹೆಣ್ಣಿನ ಅಭಿವ್ಯಕ್ತಿಗೆ ಈಗಲೂ ಇರುವ ಚೌಕಟ್ಟನ್ನು ಒಡೆಯುವ ಸಾಹಸ ಮಾಡುತ್ತವೆ. ಗಂಡಿನ ಅಹಂಕಾರವನ್ನು ಕೆಣುಕಲೆಂದೇ ಇಲ್ಲಿ ನಿರ್ಭಿಡೆಯಿಂದ ತನ್ನ ಮನದ ಮಾತುಗಳನ್ನು ಶಯ್ಯಾಗೃಹದ ಪಲ್ಲಂಗದ ಮೇಲೆ ಹರಡಿದಂತೆ ಹೊರಬಂದಿವೆ. ಈ ಪಿಸುಮಾತುಗಳನ್ನು ಕೇಳಿಸಿಕೊಳ್ಳುವ ಗಂಡಿಗೆ ಧ್ಯಾನಿಸುತ್ತವೆ.

ಶೃಂಗಾರ, ಪ್ರಣಯ, ಪ್ರೇಮದ ದಟ್ಟ ರೂಪಕಗಳು, ನುಡಿಗಟ್ಟು ಹೆಣ್ಣಿನ ಅತ್ಯಂತಿಕ ಭಾವಲೋಕವನ್ನು ಬೆಚ್ಚಿಬೀಳಿಸುವ ಉತ್ಕಟತೆಯೊಂದಿಗೆ ಹೊರಹೊಮ್ಮಿಸುತ್ತವೆ. ಶಯ್ಯಾಗೃಹದ ಸುದ್ದಿಗಳು, ಧ್ಯಾನಸ್ಥ ಶಿವ, ಯಯಾತಿಗೊಂದು ಪತ್ರ, ಹಾಲೆದೆ, ಚರಿತ್ರೆ ಮತ್ತು ಕವಿತೆ, ಕನ್ನಡಿಯ ಚೂರು, ಅನುಭವ ಮಂಟಪ, ಮಂಡೋದರಿ, ಸವರಾತ್ರಿಯ ಸಂಲಗ್ನ, ಶಯ್ಯಾಗೃಹದ ಎಲ್ಲಾ ರಾತ್ರಿಗಳು ಮುಗಿದ ಮೇಲೆ, ಕಲ್ಲಾದವರ ನೆತ್ತಿಯ ಮೇಲೆ, ನಾನು ನೀನು ಕವಿತೆಗಳು ಇಷ್ಟವಾಗುವ ಕವಿತೆಗಳು.

ಒಂದೆಡೆ ಗಂಡಿನ ಅಹಂಕಾರಕ್ಕೆ ಹೆಣ್ಣಿನ ಕನಿಷ್ಠ ಪ್ರತಿರೋಧದ ಅಗತ್ಯವನ್ನು ಹೇಳುತ್ತಾರೆ;

“ಕಲ್ಲಾದವರ ನೆತ್ತಿಯ ಮೇಲೆ
ಕಾಗೆ ಗೂಬೆ ಹೇತುಹೋಗುತ್ತವೆ.
ಮಿಸುಕಾಡಬೇಕು
ಮಾತಾಡಬೇಕು”

ಹಾಗೆಯೇ ಅರಿತು ಬೆರೆತು ಸಮಾನರೆನಿಸಿದಾಗ ಪೂರ್ಣತಯು ಎಂಬುದನ್ನೂ ಕವಿ ನೆನಪಿಸುತ್ತಾರೆ;

ಸುಖ
ಕೇವಲ ಒಂದು
ಹೊಂಗನಸಲ್ಲ
ನಾವಾಗೇ ಬರೆದು
ಪೂರ್ಣಗೊಳಿಸಬೇಕಾದ ವರ್ಣಚಿತ್ರ.

ಪ್ರೇಮಕ್ಕೆ ಮರಳಲು, ನಾವೆಂದೂ ಪಡೆಯದ, ಆದರೆ ಸದಾ ಹಂಬಲಿಸಿದ ಪ್ರೀತಿ ಪಡೆಯಲು, ನಾವು ಕೊಡಬೇಕಾದ ಪ್ರೀತಿಯನ್ನು ಹಂಚಿಕೊಳ್ಳಲು ಸಿದ್ಧರಾಗದ ನಾವು ರಮ್ಯ ಸಂಬಂಧಗಳತ್ತ ವಾಲುತ್ತೇವೆ. ಈ ಸಂಬಂಧಗಳು ಉಳಿದ ಯಾವುದೇ ಸಂಬಂಧಗಳಿಗಿಂತ ಹೆಚ್ಚಾಗಿ ನಮ್ಮನ್ನು ವಿಮೋಚನೆಯತ್ತ, ಬಿಡುಗಡೆಯತ್ತ ಕರೆದೊಯ್ಯುತ್ತವೆ ಎಂದು ನಂಬಿರುತ್ತೇವೆ. ಆದರೆ ನಿಜವಾದ ಪ್ರೀತಿ, ನಾವು ವಿಮೋಚನೆಗೆ ಸಿದ್ಧರಾಗಿದ್ದರಷ್ಟೆ, ಸ್ವತಂತ್ರಗೊಳಿಸುವ ಶಕ್ತಿಯನ್ನು ಹೊಂದಿರುತ್ತದೆ. ನಾವು ಉಳಿಯಬೇಕೆಂದಿದ್ದರೆ ಮಾತ್ರ ಪ್ರೀತಿ ನಮ್ಮನ್ನು ಉಳಿಸುತ್ತದೆ ಎಂದು ಬೆಲ್ ಹುಕ್ಸ್ ಹೇಳುತ್ತಾರೆ.

ಎಲ್ಲ ಅಹಮಿಕೆಯ ಪದರಗಳನ್ನು ಕಳಚಿದಾಗ ಮಾತ್ರ ಪ್ರೇಮ ಸಾಧ್ಯ. ಅದು ಬಿಡುಗಡೆಯ ಹಾದಿ. ಅಂತಹ ಧ್ಯಾನ ಶೋಭ ನಾಯ್ಕರ ಕವಿತೆಗಳಲ್ಲಿ ಇರುವುದರಿಂದಲೇ ಇವು ಇಲ್ಲಿರುವ ಶೃಂಗಾರದ ರೂಪಕಗಳಾಚೆಗೆ ಹಾರುತ್ತವೆ.

ಶಯ್ಯಾಗೃಹದ ಸುದ್ದಿಗಳು
ಡಾ. ಶೋಭಾ ನಾಯಕ
ಪುಟ: 92 | ಬೆಲೆ : 100/-
ಪ್ರಕಾಶನ: ಮನೋರಮಾ
ಬುಕ್ ಹೌಸ್, ಬೆಳಗಾವಿ

– ಎಸ್ ಕುಮಾರ್


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬದಿಕಿರುವುದೇ ಕಥೆ ಹೇಳಲಿಕ್ಕೆ ಎಂದು ಬರೆದು ಬದುಕಿದ ಲ್ಯಾಟಿನ್ ಅಮೆರಿಕನ್ ಲೇಖಕ ಮಾರ್ಕ್ವೆಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...