Homeಪುಸ್ತಕ ವಿಮರ್ಶೆದೀಪವಿರದ ದಾರಿಯಲ್ಲಿ: ಸಲಿಂಗಪ್ರೇಮವನ್ನು ಪ್ರಧಾನವಸ್ತುವಾಗಿರಿಸಿಕೊಂಡಿರುವ ಕೃತಿಯಲ್ಲಿ ಸಂಕೀರ್ಣತೆಯ ಕೊರತೆ

ದೀಪವಿರದ ದಾರಿಯಲ್ಲಿ: ಸಲಿಂಗಪ್ರೇಮವನ್ನು ಪ್ರಧಾನವಸ್ತುವಾಗಿರಿಸಿಕೊಂಡಿರುವ ಕೃತಿಯಲ್ಲಿ ಸಂಕೀರ್ಣತೆಯ ಕೊರತೆ

- Advertisement -
- Advertisement -

ಹೊಸ ತಲೆಮಾರು ತನ್ನದೇ ರೀತಿಯಲ್ಲಿ ಸೃಜನಶೀಲ ಬರವಣಿಗೆಯಲ್ಲಿ ತೊಡಗಿಸಿಕೊಂಡಿದೆ. ವಿಶೇಷವೆಂದರೆ ಸಮಕಾಲೀನ ಸಾಮಾಜಿಕ ಬಿಕ್ಕಟ್ಟುಗಳೇ ಕೃತಿಗಳ ವಸ್ತುಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕರಾವಳಿ ಸೀಮೆಯವರಾದ ಸುಶಾಂತ್ ಕೋಟ್ಯಾನ್ ಅವರ ’ದೀಪವಿರದ ದಾರಿಯಲ್ಲಿ’ ಕಾದಂಬರಿಯು ಪುರುಷ ಸಲಿಂಗರತಿಯನ್ನು ಪ್ರಧಾನ ಭೂಮಿಕೆಯನ್ನಾಗಿ ರೂಪಿಸಿಕೊಂಡಿದೆ.

ಈ ಕಾದಂಬರಿಯು ಯಕ್ಷಗಾನದ ಸ್ತ್ರೀವೇಷಧಾರಿಗಳಾದ ಸುಕೇಶ, ರಘುಪತಿ ಹಾಗೂ ಸಂಜೀವ-ಇವರ ಲೈಂಗಿಕ ಜೀವನದ ಕತೆಯನ್ನು ನವಿರಾದ ಭಾಷಿಕ ಧಾಟಿಯಲ್ಲಿ ನಿರೂಪಿಸುತ್ತದೆ. ಇದರೊಳಗೆ ಇನ್ನೂ ಹಲವರ ಕತೆಗಳು ಕೂಡ ಸೇರಿಕೊಳ್ಳುತ್ತವೆ. ಕಾದಂಬರಿಯ ತುಂಬ ಆವರಿಸಿಕೊಂಡಿರುವ ಸುಕೇಶನೇ ಇದರ ಕಥಾ ನಾಯಕ; ಈತ ತನ್ನೊಳಗಿನ ಹೆಣ್ಣು ಜೀವವನ್ನು ಪೋಷಿಸಿಕೊಳ್ಳುತ್ತಾನೆ; ಗಂಡು ದೇಹದೊಳಗಿರುವ ಹೆಣ್ಣನ್ನು ಪ್ರೀತಿಸುವ ಗಂಡಿಗಾಗಿ ಹಂಬಲಿಸುತ್ತಾನೆ. ಈ ನಿಟ್ಟಿನಲ್ಲಿ ಸುಕೇಶನಲ್ಲಿ ಅಂತಸ್ಥವಾಗಿರುವ ಹೆಣ್ಣಿನ ಆಸೆ, ಆಕಾಂಕ್ಷೆ, ಆಯ್ಕೆ ಹಾಗೂ ನಿರಾಕರಣೆಗಳೇ ಈ ಕಾದಂಬರಿಯ ಕಥನವನ್ನು ಮುನ್ನಡೆಸಿಕೊಂಡು ಹೋಗುತ್ತವೆ. ಕಾದಂಬರಿಯು ಇವುಗಳ ಪರಿಣಾಮಗಳನ್ನು ಒಂದು ಸೂತ್ರಬದ್ಧ ಚೌಕಟ್ಟಿನಲ್ಲಿ ಆಪ್ತವಾದ ಶೈಲಿಯಲ್ಲಿ ಓದುಗರಿಗೆ ದಾಟಿಸುವುದರಲ್ಲಿ ಸಫಲವಾಗಿದೆ.

ಕೆಲವು ವರ್ಷಗಳ ಹಿಂದೆಯಷ್ಟೇ ಸರ್ವೋಚ್ಚ ನ್ಯಾಯಾಲಯವು ಸಲಿಂಗಪ್ರೇಮ ಅಪರಾಧ ಅಲ್ಲ ಎಂದು ತೀರ್ಪು ನೀಡಿತು. ಅದರೂ ಇದಕ್ಕೆ ಸಾಮಾಜಿಕ ಮಾನ್ಯತೆಯಾಗಲಿ, ಒಪ್ಪಿಗೆಯಾಗಲಿ ವ್ಯಾಪಕವಾಗಿಲ್ಲ. ನಮ್ಮದು ಅತಿ ಮಡಿವಂತಿಕೆಯ ಸಮಾಜವಾಗಿ ಇನ್ನೂ ಮುಂದುವರೆದಿದೆ. ಆದರೆ ಪುರುಷನಿಗೆ ವಿವಾಹೇತರ ಲೈಂಗಿಕ ಸಂಬಂಧವು ಸಂಭ್ರಮಿಸುವ ಪ್ರತಿಷ್ಠೆಯಾಗಿರುತ್ತದೆ. ಇದೇ ಸಂಗತಿಯು ಹೆಣ್ಣಿಗೆ ಅವಮಾನ, ನಿಂದನೆ, ಅಪಹಾಸ್ಯ ಮತ್ತು ನಿಷೇಧಗಳನ್ನು ತಂದೊಡ್ಡುತ್ತವೆ. ಈ ಹಿನ್ನೆಲೆಯಲ್ಲಿ ಕಾದಂಬರಿಯ ಪಾತ್ರಗಳಾದ ರವೀಂದ್ರ, ಆಕಾಶ್ ಹಾಗೂ ಅನೇಕ ಪುರುಷರು ನೈತಿಕತೆಯಿಲ್ಲದೆ ಲಜ್ಜಾಹೀನರಾಗಿ ನಡೆದುಕೊಳ್ಳುತ್ತಾರೆ. ರಘುಪತಿಯ ಹೆಂಡತಿ ಪರಪುರುಷನೊಂದಿಗೆ ಹೋಗುವುದನ್ನು ಕಾದಂಬರಿಯು ಓಡಿಹೋದವಳೆಂದು ಜರೆಯುತ್ತದೆ. ಇಂತಹ ಲಿಂಗತ್ವ ಆಧಾರಿತ ತಾರತಮ್ಯದ ಬಗ್ಗೆ ಕಾದಂಬರಿಯ ನಿರೂಪಕ ತಟಸ್ಥನಾಗಿದ್ದಾನೆ.

ಸುಶಾಂತ್ ಕೋಟ್ಯಾನ್

ಜೈವಿಕವಾಗಿ ಗಂಡಾಗಿರುವ ಎಷ್ಟೋ ಜನ ಹೆಣ್ಣಾಗಲು ಇಚ್ಛಿಸುವುದನ್ನು ಅಸಹಜವಾಗಿ ಕಾಣುವ ಭಾವ ಇಲ್ಲಿ ಬಹುತೇಕರಿಗೆ ನೆಲೆಯೂರಿದೆ. ಸಾಮಾಜಿಕವಾಗಿಯೂ ಇದು ಅಸ್ವಾಭಾವಿಕ ಮತ್ತು ಅನೈಸರ್ಗಿಕವೆಂಬ ನಂಬಿಕೆ ಇಲ್ಲಿ ದೊಡ್ಡದಾಗಿ ಬೆಳೆದಿದೆ. ಕಾದಂಬರಿಯು ಮೇಲ್ನೋಟಕ್ಕೆ ಇಂತಹ ಮನಸ್ಥಿತಿಯನ್ನು ಪ್ರಶ್ನಿಸುತ್ತಿರುವಂತೆ ತೋರುತ್ತದೆ. ಗಂಡಸರ ಲೈಂಗಿಕ ವಿಕೃತಿಗಳನ್ನು ತೆರೆದು ತೋರಿಸುತ್ತದೆ. ಅವರಿಗೆ ಸಾಮಾಜಿಕವಾಗಿ ದೊರಕಿರುವ ಇಂತಹ ಸ್ವಾತಂತ್ರ್ಯದ ಬಗ್ಗೆ ದೂಷಿಸುತ್ತದೆ. ಸುದರ್ಶನ, ಸುಕೇಶನಿಗೆ ಕೆಲಸ ಕೊಡಿಸುವುದಾಗಿ ಹೇಳಿ ಲೈಂಗಿಕವಾಗಿ ಪೀಡಿಸುವುದನ್ನು ಹಾಗೂ ರವೀಂದ್ರ ತನ್ನ ಹೆಂಡತಿ ತವರಿಗೆ ಹೋದಾಗ ಪುನಃ ಸುಕೇಶನಿಗೆ ಗಂಟು ಬೀಳುವ ಸನ್ನಿವೇಶಗಳನ್ನು ಈ ನೆಲೆಯಿಂದ ಗಮನಿಸಬಹುದು. ಆದರೆ ಲೈಂಗಿಕವಾಗಿ ಸ್ವೇಚ್ಛಾಚಾರವನ್ನು ಅನುಭವಿಸುವ ಗಂಡಿನ ಬಗ್ಗೆ ಕಾದಂಬರಿ ಖಚಿತ ನಿಲುವುಗಳನ್ನು ವ್ಯಕ್ತಪಡಿಸುವುದಿಲ್ಲ. ಅದು ವ್ಯಕ್ತಿಗತ ನೆಲೆಗಷ್ಟೇ ಸೀಮಿತವಾಗುತ್ತದೆ.

ಯಾವ ಅಂಶಗಳು ಈ ಕಾದಂಬರಿಯ ಶಕ್ತಿಯಾಗಿದೆಯೋ ಅವುಗಳೇ ಅದರ ದುರ್ಬಲ ಸಂಗತಿಯಾಗಿದೆ. ಕಾದಂಬರಿಯ ಕೇಂದ್ರ ಭಿತ್ತಿಯಲ್ಲಿರುವ ಸುಕೇಶನ ಪಾತ್ರವು ಗಟ್ಟಿಯಾಗಿ ಮೂಡಿಬರಲಿಲ್ಲ. ಇದಕ್ಕೆ ಕಾರಣವೆಂದರೆ ಈತ ತನ್ನ ಪ್ರತಿಯೊಂದು ಸಮಸ್ಯೆಗಳಿಗೂ ಬೇರೆಯವರಲ್ಲಿ ಸಾಂತ್ವನ ಪಡೆಯಲು ಬಯಸುತ್ತಾನೆ. ಕಾದಂಬರಿಯು ಹಲವು ಕಡೆಯಲ್ಲಿ ಸುಕೇಶನನ್ನು ’ಗಂಡು ದೇಹದೊಳಗಿನ ಹೆಣ್ಣು ಮನಸ್ಸು’ ಎಂದು ವರ್ಣಿಸುತ್ತದೆ. ಸುಕೇಶ ತಾನು ಇಷ್ಟಪಡುವ ರವೀಂದ್ರ ಬೇರೆ ಹುಡುಗಿಯನ್ನು ಮದುವೆಯಾಗುವ ಸಂದರ್ಭದಲ್ಲಿಯು ತನಗೆ ಆಸರೆಯಾಗಿ ಇರಬೇಕೆಂದು ಕೇಳುತ್ತಾನೆ; ನಂತರದಲ್ಲಿ ವಿಧುರನಾಗಿರುವ ಆಕಾಶನ ಹೆಂಡತಿಯ ಸ್ಥಾನವನ್ನು ತುಂಬುವ ದೈನಸ್ಥಿತಿಗೆ ಇಳಿಯಬೇಕಾಗುತ್ತದೆ. ಹೀಗಾಗಿ ಕಾದಂಬರಿಯಲ್ಲಿ ಹೆಣ್ಣೆಂದರೆ ಎಂದಿಗೂ ಗಂಡಿನ ಅಧೀನವಾಗಿಯೇ ಇರುವಂತೆ ಚಿತ್ರಿಸಿದ್ದು ಯಥಾಸ್ಥಿತಿವಾದದ ಸಮರ್ಥನೆಯೇ ಆಗಿದೆ. ಕೊನೆಯ ಭಾಗದಲ್ಲಿ ಬರುವ ಸುಕೇಶನ ಅಸಹಾಯಕತೆ ಮತ್ತು ಗೋಳಾಟವು ಕಾದಂಬರಿಯಲ್ಲಿ ಬರಿ ರೋದನವಾಗಿ ಕೇಳಿಸುವಂತಾಗಿದೆ.

’ದೀಪವಿರದ ದಾರಿಯಲ್ಲಿ’ ಕಾದಂಬರಿಯಲ್ಲಿ ಸುಕೇಶ, ಸಂಜೀವ, ರಘುಪತಿ-ಇವರೆಲ್ಲರೂ ಒಂದಲ್ಲ ಒಂದು ಬಗೆಯಲ್ಲಿ ಗಂಡಸರ ಲೈಂಗಿಕ ತೃಷೆಗೆ ಬಲಿಪಶುಗಳೇ ಆಗಿದ್ದಾರೆ. ಲಿಂಗ ಪರಿವರ್ತಿಸಿಕೊಂಡಿರುವ ಸುನಂದಾ ಮತ್ತು ಮಂದಾಕಿನಿಯಂತಹವರ ಬದುಕು ಇನ್ನೂ ಹೀನಾಯವಾಗುತ್ತದೆ. ಇವರ ಬಾಳು ಬರಿ ಕತ್ತಲಿನಿಂದಲೇ ತುಂಬಿರುತ್ತದೆ ಎಂಬ ನೇತ್ಯಾತ್ಮಕ ನಿಟ್ಟಿನಿಂದಲೇ ಕಾದಂಬರಿಯನ್ನು ಹೆಣೆಯಲಾಗಿದೆ. ಕಾದಂಬರಿಯ ಶೀರ್ಷಿಕೆಯು ಕೂಡ ಅದನ್ನೇ ಧ್ವನಿಸುತ್ತದೆ. ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಕಾದಂಬರಿಯು ಯಾವ ಧೋರಣೆಗಳನ್ನು ಹೊಂದಿದೆ ಎನ್ನುವುದು ಸ್ಪಷ್ಟವಾಗುವುದಿಲ್ಲ. ಆದರೆ ಸಲಿಂಗಪ್ರೇಮದ ವ್ಯಕ್ತಿಗಳ ಅಸ್ಮಿತೆಗೆ ಸಾಮಾಜಿಕ ಒಪ್ಪಿಗೆ ಇಲ್ಲದಿರುವುದನ್ನು ಕಾದಂಬರಿಯು ತೀವ್ರ ಅನುಕಂಪದ ದೃಷ್ಟಿಕೋನದಿಂದಲೇ ನೋಡುತ್ತದೆ.

ನಮ್ಮ ಕಾಲದಲ್ಲಿ ಸಲಿಂಗಪ್ರೇಮದಂತಹ ಸೂಕ್ಷ್ಮ ಮತ್ತು ಸಂಕೀರ್ಣ ವಿಷಯವನ್ನು ಒಂದು ಕಾದಂಬರಿಯಾಗಿ ಬರೆದಿರುವುದು ಮುಖ್ಯ ಸಂಗತಿಯಾಗಿದೆ. ಈ ಕಾದಂಬರಿಯು ಸರಳ ಮತ್ತು ನೇರವಾದ ಕಥನ ನಿರೂಪಣೆಯಿಂದ ಗಮನ ಸೆಳೆಯುತ್ತದೆ. ಆದರೆ ಸಲಿಂಗಪ್ರೇಮದ ಸಂಕೀರ್ಣ ನೆಲೆಗಳನ್ನು ಶೋಧಿಸಲು ಇಲ್ಲಿ ಲೇಖಕರಿಗೆ ಸಾಧ್ಯವಾಗಿಲ್ಲ. ಆದರೂ ಭಾಷೆಯ ಹೊಸತನ, ನಿರೂಪಣೆಯ ಭಾವತೀವ್ರತೆಯಿಂದ ಕಾದಂಬರಿಯು ಆಪ್ತಭಾವವನ್ನು ಮೂಡಿಸುತ್ತದೆ.

ಡಾ. ಸುಭಾಷ್ ರಾಜಮಾನೆ

ಡಾ. ಸುಭಾಷ್ ರಾಜಮಾನೆ
ಬೆಂಗಳೂರಿನ ಯಲಹಂಕ ಪದವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರು. ಕನ್ನಡ, ಇಂಗ್ಲಿಷ್, ಮರಾಠಿ ಭಾಷೆಗಳನ್ನು ಬಲ್ಲ ಇವರು, ಸಿನಿಮಾ ಮತ್ತು ಸಾಹಿತ್ಯ ವಿಮರ್ಶೆಯಲ್ಲಿ ತೊಡಗಿಸಿಕೊಂಡಿದ್ದಾರೆ


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಯಾರು ಭಾರತ ಮಾತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...