Homeಪುಸ್ತಕ ವಿಮರ್ಶೆದೀಪವಿರದ ದಾರಿಯಲ್ಲಿ: ಸಲಿಂಗಪ್ರೇಮವನ್ನು ಪ್ರಧಾನವಸ್ತುವಾಗಿರಿಸಿಕೊಂಡಿರುವ ಕೃತಿಯಲ್ಲಿ ಸಂಕೀರ್ಣತೆಯ ಕೊರತೆ

ದೀಪವಿರದ ದಾರಿಯಲ್ಲಿ: ಸಲಿಂಗಪ್ರೇಮವನ್ನು ಪ್ರಧಾನವಸ್ತುವಾಗಿರಿಸಿಕೊಂಡಿರುವ ಕೃತಿಯಲ್ಲಿ ಸಂಕೀರ್ಣತೆಯ ಕೊರತೆ

- Advertisement -
- Advertisement -

ಹೊಸ ತಲೆಮಾರು ತನ್ನದೇ ರೀತಿಯಲ್ಲಿ ಸೃಜನಶೀಲ ಬರವಣಿಗೆಯಲ್ಲಿ ತೊಡಗಿಸಿಕೊಂಡಿದೆ. ವಿಶೇಷವೆಂದರೆ ಸಮಕಾಲೀನ ಸಾಮಾಜಿಕ ಬಿಕ್ಕಟ್ಟುಗಳೇ ಕೃತಿಗಳ ವಸ್ತುಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕರಾವಳಿ ಸೀಮೆಯವರಾದ ಸುಶಾಂತ್ ಕೋಟ್ಯಾನ್ ಅವರ ’ದೀಪವಿರದ ದಾರಿಯಲ್ಲಿ’ ಕಾದಂಬರಿಯು ಪುರುಷ ಸಲಿಂಗರತಿಯನ್ನು ಪ್ರಧಾನ ಭೂಮಿಕೆಯನ್ನಾಗಿ ರೂಪಿಸಿಕೊಂಡಿದೆ.

ಈ ಕಾದಂಬರಿಯು ಯಕ್ಷಗಾನದ ಸ್ತ್ರೀವೇಷಧಾರಿಗಳಾದ ಸುಕೇಶ, ರಘುಪತಿ ಹಾಗೂ ಸಂಜೀವ-ಇವರ ಲೈಂಗಿಕ ಜೀವನದ ಕತೆಯನ್ನು ನವಿರಾದ ಭಾಷಿಕ ಧಾಟಿಯಲ್ಲಿ ನಿರೂಪಿಸುತ್ತದೆ. ಇದರೊಳಗೆ ಇನ್ನೂ ಹಲವರ ಕತೆಗಳು ಕೂಡ ಸೇರಿಕೊಳ್ಳುತ್ತವೆ. ಕಾದಂಬರಿಯ ತುಂಬ ಆವರಿಸಿಕೊಂಡಿರುವ ಸುಕೇಶನೇ ಇದರ ಕಥಾ ನಾಯಕ; ಈತ ತನ್ನೊಳಗಿನ ಹೆಣ್ಣು ಜೀವವನ್ನು ಪೋಷಿಸಿಕೊಳ್ಳುತ್ತಾನೆ; ಗಂಡು ದೇಹದೊಳಗಿರುವ ಹೆಣ್ಣನ್ನು ಪ್ರೀತಿಸುವ ಗಂಡಿಗಾಗಿ ಹಂಬಲಿಸುತ್ತಾನೆ. ಈ ನಿಟ್ಟಿನಲ್ಲಿ ಸುಕೇಶನಲ್ಲಿ ಅಂತಸ್ಥವಾಗಿರುವ ಹೆಣ್ಣಿನ ಆಸೆ, ಆಕಾಂಕ್ಷೆ, ಆಯ್ಕೆ ಹಾಗೂ ನಿರಾಕರಣೆಗಳೇ ಈ ಕಾದಂಬರಿಯ ಕಥನವನ್ನು ಮುನ್ನಡೆಸಿಕೊಂಡು ಹೋಗುತ್ತವೆ. ಕಾದಂಬರಿಯು ಇವುಗಳ ಪರಿಣಾಮಗಳನ್ನು ಒಂದು ಸೂತ್ರಬದ್ಧ ಚೌಕಟ್ಟಿನಲ್ಲಿ ಆಪ್ತವಾದ ಶೈಲಿಯಲ್ಲಿ ಓದುಗರಿಗೆ ದಾಟಿಸುವುದರಲ್ಲಿ ಸಫಲವಾಗಿದೆ.

ಕೆಲವು ವರ್ಷಗಳ ಹಿಂದೆಯಷ್ಟೇ ಸರ್ವೋಚ್ಚ ನ್ಯಾಯಾಲಯವು ಸಲಿಂಗಪ್ರೇಮ ಅಪರಾಧ ಅಲ್ಲ ಎಂದು ತೀರ್ಪು ನೀಡಿತು. ಅದರೂ ಇದಕ್ಕೆ ಸಾಮಾಜಿಕ ಮಾನ್ಯತೆಯಾಗಲಿ, ಒಪ್ಪಿಗೆಯಾಗಲಿ ವ್ಯಾಪಕವಾಗಿಲ್ಲ. ನಮ್ಮದು ಅತಿ ಮಡಿವಂತಿಕೆಯ ಸಮಾಜವಾಗಿ ಇನ್ನೂ ಮುಂದುವರೆದಿದೆ. ಆದರೆ ಪುರುಷನಿಗೆ ವಿವಾಹೇತರ ಲೈಂಗಿಕ ಸಂಬಂಧವು ಸಂಭ್ರಮಿಸುವ ಪ್ರತಿಷ್ಠೆಯಾಗಿರುತ್ತದೆ. ಇದೇ ಸಂಗತಿಯು ಹೆಣ್ಣಿಗೆ ಅವಮಾನ, ನಿಂದನೆ, ಅಪಹಾಸ್ಯ ಮತ್ತು ನಿಷೇಧಗಳನ್ನು ತಂದೊಡ್ಡುತ್ತವೆ. ಈ ಹಿನ್ನೆಲೆಯಲ್ಲಿ ಕಾದಂಬರಿಯ ಪಾತ್ರಗಳಾದ ರವೀಂದ್ರ, ಆಕಾಶ್ ಹಾಗೂ ಅನೇಕ ಪುರುಷರು ನೈತಿಕತೆಯಿಲ್ಲದೆ ಲಜ್ಜಾಹೀನರಾಗಿ ನಡೆದುಕೊಳ್ಳುತ್ತಾರೆ. ರಘುಪತಿಯ ಹೆಂಡತಿ ಪರಪುರುಷನೊಂದಿಗೆ ಹೋಗುವುದನ್ನು ಕಾದಂಬರಿಯು ಓಡಿಹೋದವಳೆಂದು ಜರೆಯುತ್ತದೆ. ಇಂತಹ ಲಿಂಗತ್ವ ಆಧಾರಿತ ತಾರತಮ್ಯದ ಬಗ್ಗೆ ಕಾದಂಬರಿಯ ನಿರೂಪಕ ತಟಸ್ಥನಾಗಿದ್ದಾನೆ.

ಸುಶಾಂತ್ ಕೋಟ್ಯಾನ್

ಜೈವಿಕವಾಗಿ ಗಂಡಾಗಿರುವ ಎಷ್ಟೋ ಜನ ಹೆಣ್ಣಾಗಲು ಇಚ್ಛಿಸುವುದನ್ನು ಅಸಹಜವಾಗಿ ಕಾಣುವ ಭಾವ ಇಲ್ಲಿ ಬಹುತೇಕರಿಗೆ ನೆಲೆಯೂರಿದೆ. ಸಾಮಾಜಿಕವಾಗಿಯೂ ಇದು ಅಸ್ವಾಭಾವಿಕ ಮತ್ತು ಅನೈಸರ್ಗಿಕವೆಂಬ ನಂಬಿಕೆ ಇಲ್ಲಿ ದೊಡ್ಡದಾಗಿ ಬೆಳೆದಿದೆ. ಕಾದಂಬರಿಯು ಮೇಲ್ನೋಟಕ್ಕೆ ಇಂತಹ ಮನಸ್ಥಿತಿಯನ್ನು ಪ್ರಶ್ನಿಸುತ್ತಿರುವಂತೆ ತೋರುತ್ತದೆ. ಗಂಡಸರ ಲೈಂಗಿಕ ವಿಕೃತಿಗಳನ್ನು ತೆರೆದು ತೋರಿಸುತ್ತದೆ. ಅವರಿಗೆ ಸಾಮಾಜಿಕವಾಗಿ ದೊರಕಿರುವ ಇಂತಹ ಸ್ವಾತಂತ್ರ್ಯದ ಬಗ್ಗೆ ದೂಷಿಸುತ್ತದೆ. ಸುದರ್ಶನ, ಸುಕೇಶನಿಗೆ ಕೆಲಸ ಕೊಡಿಸುವುದಾಗಿ ಹೇಳಿ ಲೈಂಗಿಕವಾಗಿ ಪೀಡಿಸುವುದನ್ನು ಹಾಗೂ ರವೀಂದ್ರ ತನ್ನ ಹೆಂಡತಿ ತವರಿಗೆ ಹೋದಾಗ ಪುನಃ ಸುಕೇಶನಿಗೆ ಗಂಟು ಬೀಳುವ ಸನ್ನಿವೇಶಗಳನ್ನು ಈ ನೆಲೆಯಿಂದ ಗಮನಿಸಬಹುದು. ಆದರೆ ಲೈಂಗಿಕವಾಗಿ ಸ್ವೇಚ್ಛಾಚಾರವನ್ನು ಅನುಭವಿಸುವ ಗಂಡಿನ ಬಗ್ಗೆ ಕಾದಂಬರಿ ಖಚಿತ ನಿಲುವುಗಳನ್ನು ವ್ಯಕ್ತಪಡಿಸುವುದಿಲ್ಲ. ಅದು ವ್ಯಕ್ತಿಗತ ನೆಲೆಗಷ್ಟೇ ಸೀಮಿತವಾಗುತ್ತದೆ.

ಯಾವ ಅಂಶಗಳು ಈ ಕಾದಂಬರಿಯ ಶಕ್ತಿಯಾಗಿದೆಯೋ ಅವುಗಳೇ ಅದರ ದುರ್ಬಲ ಸಂಗತಿಯಾಗಿದೆ. ಕಾದಂಬರಿಯ ಕೇಂದ್ರ ಭಿತ್ತಿಯಲ್ಲಿರುವ ಸುಕೇಶನ ಪಾತ್ರವು ಗಟ್ಟಿಯಾಗಿ ಮೂಡಿಬರಲಿಲ್ಲ. ಇದಕ್ಕೆ ಕಾರಣವೆಂದರೆ ಈತ ತನ್ನ ಪ್ರತಿಯೊಂದು ಸಮಸ್ಯೆಗಳಿಗೂ ಬೇರೆಯವರಲ್ಲಿ ಸಾಂತ್ವನ ಪಡೆಯಲು ಬಯಸುತ್ತಾನೆ. ಕಾದಂಬರಿಯು ಹಲವು ಕಡೆಯಲ್ಲಿ ಸುಕೇಶನನ್ನು ’ಗಂಡು ದೇಹದೊಳಗಿನ ಹೆಣ್ಣು ಮನಸ್ಸು’ ಎಂದು ವರ್ಣಿಸುತ್ತದೆ. ಸುಕೇಶ ತಾನು ಇಷ್ಟಪಡುವ ರವೀಂದ್ರ ಬೇರೆ ಹುಡುಗಿಯನ್ನು ಮದುವೆಯಾಗುವ ಸಂದರ್ಭದಲ್ಲಿಯು ತನಗೆ ಆಸರೆಯಾಗಿ ಇರಬೇಕೆಂದು ಕೇಳುತ್ತಾನೆ; ನಂತರದಲ್ಲಿ ವಿಧುರನಾಗಿರುವ ಆಕಾಶನ ಹೆಂಡತಿಯ ಸ್ಥಾನವನ್ನು ತುಂಬುವ ದೈನಸ್ಥಿತಿಗೆ ಇಳಿಯಬೇಕಾಗುತ್ತದೆ. ಹೀಗಾಗಿ ಕಾದಂಬರಿಯಲ್ಲಿ ಹೆಣ್ಣೆಂದರೆ ಎಂದಿಗೂ ಗಂಡಿನ ಅಧೀನವಾಗಿಯೇ ಇರುವಂತೆ ಚಿತ್ರಿಸಿದ್ದು ಯಥಾಸ್ಥಿತಿವಾದದ ಸಮರ್ಥನೆಯೇ ಆಗಿದೆ. ಕೊನೆಯ ಭಾಗದಲ್ಲಿ ಬರುವ ಸುಕೇಶನ ಅಸಹಾಯಕತೆ ಮತ್ತು ಗೋಳಾಟವು ಕಾದಂಬರಿಯಲ್ಲಿ ಬರಿ ರೋದನವಾಗಿ ಕೇಳಿಸುವಂತಾಗಿದೆ.

’ದೀಪವಿರದ ದಾರಿಯಲ್ಲಿ’ ಕಾದಂಬರಿಯಲ್ಲಿ ಸುಕೇಶ, ಸಂಜೀವ, ರಘುಪತಿ-ಇವರೆಲ್ಲರೂ ಒಂದಲ್ಲ ಒಂದು ಬಗೆಯಲ್ಲಿ ಗಂಡಸರ ಲೈಂಗಿಕ ತೃಷೆಗೆ ಬಲಿಪಶುಗಳೇ ಆಗಿದ್ದಾರೆ. ಲಿಂಗ ಪರಿವರ್ತಿಸಿಕೊಂಡಿರುವ ಸುನಂದಾ ಮತ್ತು ಮಂದಾಕಿನಿಯಂತಹವರ ಬದುಕು ಇನ್ನೂ ಹೀನಾಯವಾಗುತ್ತದೆ. ಇವರ ಬಾಳು ಬರಿ ಕತ್ತಲಿನಿಂದಲೇ ತುಂಬಿರುತ್ತದೆ ಎಂಬ ನೇತ್ಯಾತ್ಮಕ ನಿಟ್ಟಿನಿಂದಲೇ ಕಾದಂಬರಿಯನ್ನು ಹೆಣೆಯಲಾಗಿದೆ. ಕಾದಂಬರಿಯ ಶೀರ್ಷಿಕೆಯು ಕೂಡ ಅದನ್ನೇ ಧ್ವನಿಸುತ್ತದೆ. ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಕಾದಂಬರಿಯು ಯಾವ ಧೋರಣೆಗಳನ್ನು ಹೊಂದಿದೆ ಎನ್ನುವುದು ಸ್ಪಷ್ಟವಾಗುವುದಿಲ್ಲ. ಆದರೆ ಸಲಿಂಗಪ್ರೇಮದ ವ್ಯಕ್ತಿಗಳ ಅಸ್ಮಿತೆಗೆ ಸಾಮಾಜಿಕ ಒಪ್ಪಿಗೆ ಇಲ್ಲದಿರುವುದನ್ನು ಕಾದಂಬರಿಯು ತೀವ್ರ ಅನುಕಂಪದ ದೃಷ್ಟಿಕೋನದಿಂದಲೇ ನೋಡುತ್ತದೆ.

ನಮ್ಮ ಕಾಲದಲ್ಲಿ ಸಲಿಂಗಪ್ರೇಮದಂತಹ ಸೂಕ್ಷ್ಮ ಮತ್ತು ಸಂಕೀರ್ಣ ವಿಷಯವನ್ನು ಒಂದು ಕಾದಂಬರಿಯಾಗಿ ಬರೆದಿರುವುದು ಮುಖ್ಯ ಸಂಗತಿಯಾಗಿದೆ. ಈ ಕಾದಂಬರಿಯು ಸರಳ ಮತ್ತು ನೇರವಾದ ಕಥನ ನಿರೂಪಣೆಯಿಂದ ಗಮನ ಸೆಳೆಯುತ್ತದೆ. ಆದರೆ ಸಲಿಂಗಪ್ರೇಮದ ಸಂಕೀರ್ಣ ನೆಲೆಗಳನ್ನು ಶೋಧಿಸಲು ಇಲ್ಲಿ ಲೇಖಕರಿಗೆ ಸಾಧ್ಯವಾಗಿಲ್ಲ. ಆದರೂ ಭಾಷೆಯ ಹೊಸತನ, ನಿರೂಪಣೆಯ ಭಾವತೀವ್ರತೆಯಿಂದ ಕಾದಂಬರಿಯು ಆಪ್ತಭಾವವನ್ನು ಮೂಡಿಸುತ್ತದೆ.

ಡಾ. ಸುಭಾಷ್ ರಾಜಮಾನೆ

ಡಾ. ಸುಭಾಷ್ ರಾಜಮಾನೆ
ಬೆಂಗಳೂರಿನ ಯಲಹಂಕ ಪದವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರು. ಕನ್ನಡ, ಇಂಗ್ಲಿಷ್, ಮರಾಠಿ ಭಾಷೆಗಳನ್ನು ಬಲ್ಲ ಇವರು, ಸಿನಿಮಾ ಮತ್ತು ಸಾಹಿತ್ಯ ವಿಮರ್ಶೆಯಲ್ಲಿ ತೊಡಗಿಸಿಕೊಂಡಿದ್ದಾರೆ


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಯಾರು ಭಾರತ ಮಾತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...