Homeಪುಸ್ತಕ ವಿಮರ್ಶೆದೀಪವಿರದ ದಾರಿಯಲ್ಲಿ: ಸಲಿಂಗಪ್ರೇಮವನ್ನು ಪ್ರಧಾನವಸ್ತುವಾಗಿರಿಸಿಕೊಂಡಿರುವ ಕೃತಿಯಲ್ಲಿ ಸಂಕೀರ್ಣತೆಯ ಕೊರತೆ

ದೀಪವಿರದ ದಾರಿಯಲ್ಲಿ: ಸಲಿಂಗಪ್ರೇಮವನ್ನು ಪ್ರಧಾನವಸ್ತುವಾಗಿರಿಸಿಕೊಂಡಿರುವ ಕೃತಿಯಲ್ಲಿ ಸಂಕೀರ್ಣತೆಯ ಕೊರತೆ

- Advertisement -
- Advertisement -

ಹೊಸ ತಲೆಮಾರು ತನ್ನದೇ ರೀತಿಯಲ್ಲಿ ಸೃಜನಶೀಲ ಬರವಣಿಗೆಯಲ್ಲಿ ತೊಡಗಿಸಿಕೊಂಡಿದೆ. ವಿಶೇಷವೆಂದರೆ ಸಮಕಾಲೀನ ಸಾಮಾಜಿಕ ಬಿಕ್ಕಟ್ಟುಗಳೇ ಕೃತಿಗಳ ವಸ್ತುಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕರಾವಳಿ ಸೀಮೆಯವರಾದ ಸುಶಾಂತ್ ಕೋಟ್ಯಾನ್ ಅವರ ’ದೀಪವಿರದ ದಾರಿಯಲ್ಲಿ’ ಕಾದಂಬರಿಯು ಪುರುಷ ಸಲಿಂಗರತಿಯನ್ನು ಪ್ರಧಾನ ಭೂಮಿಕೆಯನ್ನಾಗಿ ರೂಪಿಸಿಕೊಂಡಿದೆ.

ಈ ಕಾದಂಬರಿಯು ಯಕ್ಷಗಾನದ ಸ್ತ್ರೀವೇಷಧಾರಿಗಳಾದ ಸುಕೇಶ, ರಘುಪತಿ ಹಾಗೂ ಸಂಜೀವ-ಇವರ ಲೈಂಗಿಕ ಜೀವನದ ಕತೆಯನ್ನು ನವಿರಾದ ಭಾಷಿಕ ಧಾಟಿಯಲ್ಲಿ ನಿರೂಪಿಸುತ್ತದೆ. ಇದರೊಳಗೆ ಇನ್ನೂ ಹಲವರ ಕತೆಗಳು ಕೂಡ ಸೇರಿಕೊಳ್ಳುತ್ತವೆ. ಕಾದಂಬರಿಯ ತುಂಬ ಆವರಿಸಿಕೊಂಡಿರುವ ಸುಕೇಶನೇ ಇದರ ಕಥಾ ನಾಯಕ; ಈತ ತನ್ನೊಳಗಿನ ಹೆಣ್ಣು ಜೀವವನ್ನು ಪೋಷಿಸಿಕೊಳ್ಳುತ್ತಾನೆ; ಗಂಡು ದೇಹದೊಳಗಿರುವ ಹೆಣ್ಣನ್ನು ಪ್ರೀತಿಸುವ ಗಂಡಿಗಾಗಿ ಹಂಬಲಿಸುತ್ತಾನೆ. ಈ ನಿಟ್ಟಿನಲ್ಲಿ ಸುಕೇಶನಲ್ಲಿ ಅಂತಸ್ಥವಾಗಿರುವ ಹೆಣ್ಣಿನ ಆಸೆ, ಆಕಾಂಕ್ಷೆ, ಆಯ್ಕೆ ಹಾಗೂ ನಿರಾಕರಣೆಗಳೇ ಈ ಕಾದಂಬರಿಯ ಕಥನವನ್ನು ಮುನ್ನಡೆಸಿಕೊಂಡು ಹೋಗುತ್ತವೆ. ಕಾದಂಬರಿಯು ಇವುಗಳ ಪರಿಣಾಮಗಳನ್ನು ಒಂದು ಸೂತ್ರಬದ್ಧ ಚೌಕಟ್ಟಿನಲ್ಲಿ ಆಪ್ತವಾದ ಶೈಲಿಯಲ್ಲಿ ಓದುಗರಿಗೆ ದಾಟಿಸುವುದರಲ್ಲಿ ಸಫಲವಾಗಿದೆ.

ಕೆಲವು ವರ್ಷಗಳ ಹಿಂದೆಯಷ್ಟೇ ಸರ್ವೋಚ್ಚ ನ್ಯಾಯಾಲಯವು ಸಲಿಂಗಪ್ರೇಮ ಅಪರಾಧ ಅಲ್ಲ ಎಂದು ತೀರ್ಪು ನೀಡಿತು. ಅದರೂ ಇದಕ್ಕೆ ಸಾಮಾಜಿಕ ಮಾನ್ಯತೆಯಾಗಲಿ, ಒಪ್ಪಿಗೆಯಾಗಲಿ ವ್ಯಾಪಕವಾಗಿಲ್ಲ. ನಮ್ಮದು ಅತಿ ಮಡಿವಂತಿಕೆಯ ಸಮಾಜವಾಗಿ ಇನ್ನೂ ಮುಂದುವರೆದಿದೆ. ಆದರೆ ಪುರುಷನಿಗೆ ವಿವಾಹೇತರ ಲೈಂಗಿಕ ಸಂಬಂಧವು ಸಂಭ್ರಮಿಸುವ ಪ್ರತಿಷ್ಠೆಯಾಗಿರುತ್ತದೆ. ಇದೇ ಸಂಗತಿಯು ಹೆಣ್ಣಿಗೆ ಅವಮಾನ, ನಿಂದನೆ, ಅಪಹಾಸ್ಯ ಮತ್ತು ನಿಷೇಧಗಳನ್ನು ತಂದೊಡ್ಡುತ್ತವೆ. ಈ ಹಿನ್ನೆಲೆಯಲ್ಲಿ ಕಾದಂಬರಿಯ ಪಾತ್ರಗಳಾದ ರವೀಂದ್ರ, ಆಕಾಶ್ ಹಾಗೂ ಅನೇಕ ಪುರುಷರು ನೈತಿಕತೆಯಿಲ್ಲದೆ ಲಜ್ಜಾಹೀನರಾಗಿ ನಡೆದುಕೊಳ್ಳುತ್ತಾರೆ. ರಘುಪತಿಯ ಹೆಂಡತಿ ಪರಪುರುಷನೊಂದಿಗೆ ಹೋಗುವುದನ್ನು ಕಾದಂಬರಿಯು ಓಡಿಹೋದವಳೆಂದು ಜರೆಯುತ್ತದೆ. ಇಂತಹ ಲಿಂಗತ್ವ ಆಧಾರಿತ ತಾರತಮ್ಯದ ಬಗ್ಗೆ ಕಾದಂಬರಿಯ ನಿರೂಪಕ ತಟಸ್ಥನಾಗಿದ್ದಾನೆ.

ಸುಶಾಂತ್ ಕೋಟ್ಯಾನ್

ಜೈವಿಕವಾಗಿ ಗಂಡಾಗಿರುವ ಎಷ್ಟೋ ಜನ ಹೆಣ್ಣಾಗಲು ಇಚ್ಛಿಸುವುದನ್ನು ಅಸಹಜವಾಗಿ ಕಾಣುವ ಭಾವ ಇಲ್ಲಿ ಬಹುತೇಕರಿಗೆ ನೆಲೆಯೂರಿದೆ. ಸಾಮಾಜಿಕವಾಗಿಯೂ ಇದು ಅಸ್ವಾಭಾವಿಕ ಮತ್ತು ಅನೈಸರ್ಗಿಕವೆಂಬ ನಂಬಿಕೆ ಇಲ್ಲಿ ದೊಡ್ಡದಾಗಿ ಬೆಳೆದಿದೆ. ಕಾದಂಬರಿಯು ಮೇಲ್ನೋಟಕ್ಕೆ ಇಂತಹ ಮನಸ್ಥಿತಿಯನ್ನು ಪ್ರಶ್ನಿಸುತ್ತಿರುವಂತೆ ತೋರುತ್ತದೆ. ಗಂಡಸರ ಲೈಂಗಿಕ ವಿಕೃತಿಗಳನ್ನು ತೆರೆದು ತೋರಿಸುತ್ತದೆ. ಅವರಿಗೆ ಸಾಮಾಜಿಕವಾಗಿ ದೊರಕಿರುವ ಇಂತಹ ಸ್ವಾತಂತ್ರ್ಯದ ಬಗ್ಗೆ ದೂಷಿಸುತ್ತದೆ. ಸುದರ್ಶನ, ಸುಕೇಶನಿಗೆ ಕೆಲಸ ಕೊಡಿಸುವುದಾಗಿ ಹೇಳಿ ಲೈಂಗಿಕವಾಗಿ ಪೀಡಿಸುವುದನ್ನು ಹಾಗೂ ರವೀಂದ್ರ ತನ್ನ ಹೆಂಡತಿ ತವರಿಗೆ ಹೋದಾಗ ಪುನಃ ಸುಕೇಶನಿಗೆ ಗಂಟು ಬೀಳುವ ಸನ್ನಿವೇಶಗಳನ್ನು ಈ ನೆಲೆಯಿಂದ ಗಮನಿಸಬಹುದು. ಆದರೆ ಲೈಂಗಿಕವಾಗಿ ಸ್ವೇಚ್ಛಾಚಾರವನ್ನು ಅನುಭವಿಸುವ ಗಂಡಿನ ಬಗ್ಗೆ ಕಾದಂಬರಿ ಖಚಿತ ನಿಲುವುಗಳನ್ನು ವ್ಯಕ್ತಪಡಿಸುವುದಿಲ್ಲ. ಅದು ವ್ಯಕ್ತಿಗತ ನೆಲೆಗಷ್ಟೇ ಸೀಮಿತವಾಗುತ್ತದೆ.

ಯಾವ ಅಂಶಗಳು ಈ ಕಾದಂಬರಿಯ ಶಕ್ತಿಯಾಗಿದೆಯೋ ಅವುಗಳೇ ಅದರ ದುರ್ಬಲ ಸಂಗತಿಯಾಗಿದೆ. ಕಾದಂಬರಿಯ ಕೇಂದ್ರ ಭಿತ್ತಿಯಲ್ಲಿರುವ ಸುಕೇಶನ ಪಾತ್ರವು ಗಟ್ಟಿಯಾಗಿ ಮೂಡಿಬರಲಿಲ್ಲ. ಇದಕ್ಕೆ ಕಾರಣವೆಂದರೆ ಈತ ತನ್ನ ಪ್ರತಿಯೊಂದು ಸಮಸ್ಯೆಗಳಿಗೂ ಬೇರೆಯವರಲ್ಲಿ ಸಾಂತ್ವನ ಪಡೆಯಲು ಬಯಸುತ್ತಾನೆ. ಕಾದಂಬರಿಯು ಹಲವು ಕಡೆಯಲ್ಲಿ ಸುಕೇಶನನ್ನು ’ಗಂಡು ದೇಹದೊಳಗಿನ ಹೆಣ್ಣು ಮನಸ್ಸು’ ಎಂದು ವರ್ಣಿಸುತ್ತದೆ. ಸುಕೇಶ ತಾನು ಇಷ್ಟಪಡುವ ರವೀಂದ್ರ ಬೇರೆ ಹುಡುಗಿಯನ್ನು ಮದುವೆಯಾಗುವ ಸಂದರ್ಭದಲ್ಲಿಯು ತನಗೆ ಆಸರೆಯಾಗಿ ಇರಬೇಕೆಂದು ಕೇಳುತ್ತಾನೆ; ನಂತರದಲ್ಲಿ ವಿಧುರನಾಗಿರುವ ಆಕಾಶನ ಹೆಂಡತಿಯ ಸ್ಥಾನವನ್ನು ತುಂಬುವ ದೈನಸ್ಥಿತಿಗೆ ಇಳಿಯಬೇಕಾಗುತ್ತದೆ. ಹೀಗಾಗಿ ಕಾದಂಬರಿಯಲ್ಲಿ ಹೆಣ್ಣೆಂದರೆ ಎಂದಿಗೂ ಗಂಡಿನ ಅಧೀನವಾಗಿಯೇ ಇರುವಂತೆ ಚಿತ್ರಿಸಿದ್ದು ಯಥಾಸ್ಥಿತಿವಾದದ ಸಮರ್ಥನೆಯೇ ಆಗಿದೆ. ಕೊನೆಯ ಭಾಗದಲ್ಲಿ ಬರುವ ಸುಕೇಶನ ಅಸಹಾಯಕತೆ ಮತ್ತು ಗೋಳಾಟವು ಕಾದಂಬರಿಯಲ್ಲಿ ಬರಿ ರೋದನವಾಗಿ ಕೇಳಿಸುವಂತಾಗಿದೆ.

’ದೀಪವಿರದ ದಾರಿಯಲ್ಲಿ’ ಕಾದಂಬರಿಯಲ್ಲಿ ಸುಕೇಶ, ಸಂಜೀವ, ರಘುಪತಿ-ಇವರೆಲ್ಲರೂ ಒಂದಲ್ಲ ಒಂದು ಬಗೆಯಲ್ಲಿ ಗಂಡಸರ ಲೈಂಗಿಕ ತೃಷೆಗೆ ಬಲಿಪಶುಗಳೇ ಆಗಿದ್ದಾರೆ. ಲಿಂಗ ಪರಿವರ್ತಿಸಿಕೊಂಡಿರುವ ಸುನಂದಾ ಮತ್ತು ಮಂದಾಕಿನಿಯಂತಹವರ ಬದುಕು ಇನ್ನೂ ಹೀನಾಯವಾಗುತ್ತದೆ. ಇವರ ಬಾಳು ಬರಿ ಕತ್ತಲಿನಿಂದಲೇ ತುಂಬಿರುತ್ತದೆ ಎಂಬ ನೇತ್ಯಾತ್ಮಕ ನಿಟ್ಟಿನಿಂದಲೇ ಕಾದಂಬರಿಯನ್ನು ಹೆಣೆಯಲಾಗಿದೆ. ಕಾದಂಬರಿಯ ಶೀರ್ಷಿಕೆಯು ಕೂಡ ಅದನ್ನೇ ಧ್ವನಿಸುತ್ತದೆ. ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಕಾದಂಬರಿಯು ಯಾವ ಧೋರಣೆಗಳನ್ನು ಹೊಂದಿದೆ ಎನ್ನುವುದು ಸ್ಪಷ್ಟವಾಗುವುದಿಲ್ಲ. ಆದರೆ ಸಲಿಂಗಪ್ರೇಮದ ವ್ಯಕ್ತಿಗಳ ಅಸ್ಮಿತೆಗೆ ಸಾಮಾಜಿಕ ಒಪ್ಪಿಗೆ ಇಲ್ಲದಿರುವುದನ್ನು ಕಾದಂಬರಿಯು ತೀವ್ರ ಅನುಕಂಪದ ದೃಷ್ಟಿಕೋನದಿಂದಲೇ ನೋಡುತ್ತದೆ.

ನಮ್ಮ ಕಾಲದಲ್ಲಿ ಸಲಿಂಗಪ್ರೇಮದಂತಹ ಸೂಕ್ಷ್ಮ ಮತ್ತು ಸಂಕೀರ್ಣ ವಿಷಯವನ್ನು ಒಂದು ಕಾದಂಬರಿಯಾಗಿ ಬರೆದಿರುವುದು ಮುಖ್ಯ ಸಂಗತಿಯಾಗಿದೆ. ಈ ಕಾದಂಬರಿಯು ಸರಳ ಮತ್ತು ನೇರವಾದ ಕಥನ ನಿರೂಪಣೆಯಿಂದ ಗಮನ ಸೆಳೆಯುತ್ತದೆ. ಆದರೆ ಸಲಿಂಗಪ್ರೇಮದ ಸಂಕೀರ್ಣ ನೆಲೆಗಳನ್ನು ಶೋಧಿಸಲು ಇಲ್ಲಿ ಲೇಖಕರಿಗೆ ಸಾಧ್ಯವಾಗಿಲ್ಲ. ಆದರೂ ಭಾಷೆಯ ಹೊಸತನ, ನಿರೂಪಣೆಯ ಭಾವತೀವ್ರತೆಯಿಂದ ಕಾದಂಬರಿಯು ಆಪ್ತಭಾವವನ್ನು ಮೂಡಿಸುತ್ತದೆ.

ಡಾ. ಸುಭಾಷ್ ರಾಜಮಾನೆ

ಡಾ. ಸುಭಾಷ್ ರಾಜಮಾನೆ
ಬೆಂಗಳೂರಿನ ಯಲಹಂಕ ಪದವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರು. ಕನ್ನಡ, ಇಂಗ್ಲಿಷ್, ಮರಾಠಿ ಭಾಷೆಗಳನ್ನು ಬಲ್ಲ ಇವರು, ಸಿನಿಮಾ ಮತ್ತು ಸಾಹಿತ್ಯ ವಿಮರ್ಶೆಯಲ್ಲಿ ತೊಡಗಿಸಿಕೊಂಡಿದ್ದಾರೆ


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಯಾರು ಭಾರತ ಮಾತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...