Homeಮುಖಪುಟಗಡಿ ಸಂಘರ್ಷ: ಮಿಜೋರಾಂಗೆ ಪ್ರಯಾಣಿಸದಂತೆ ರಾಜ್ಯಕ್ಕೆ ಸಲಹೆ ನೀಡಿದ ಅಸ್ಸಾಂ ಸರ್ಕಾರ

ಗಡಿ ಸಂಘರ್ಷ: ಮಿಜೋರಾಂಗೆ ಪ್ರಯಾಣಿಸದಂತೆ ರಾಜ್ಯಕ್ಕೆ ಸಲಹೆ ನೀಡಿದ ಅಸ್ಸಾಂ ಸರ್ಕಾರ

- Advertisement -
- Advertisement -

ಇತ್ತೀಚೆಗೆ ಅಸ್ಸಾಂ ಮತ್ತು ಮಿಜೋರಾಂ ಅಂತರ ರಾಜ್ಯ ಗಡಿಯಲ್ಲಿ ನಡೆದ ಸಂಘರ್ಷದಿಂದಾಗಿ ಆರು ಅಸ್ಸಾಂ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು ಮತ್ತು ಹಲವಾರು ಜನರು ಗಾಯಗೊಂಡಿದ್ದರು. ಇದಾಗಿಯು ಅಸ್ಸಾಂನ ಕ್ಯಾಚಾರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳ ಮಿಜೋರಾಂ ಗಡಿಯ ಬಳಿ ಇತ್ತೀಚಿನ ಕೆಲವು ಘರ್ಷಣೆಗಳನ್ನು ಸೂಚಿಸಿರುವ ಅಸ್ಸಾಂ ಸರ್ಕಾರ, ಗುರುವಾರದಂದು ‘ಪ್ರವಾಸ ಸಲಹೆ’ ನೀಡಿದೆ. ಈ ಸಲಹೆಯಲ್ಲಿ ರಾಜ್ಯದ ಜನರು ಮಿಜೋರಾಂಗೆ ಪ್ರಯಾಣಿಸದಂತೆ ಅದು ಕೇಳಿಕೊಂಡಿದೆ.

“ಈ ಘಟನೆಯ ನಂತರವೂ, ಕೆಲವು ಮಿಜೋ ನಾಗರಿಕ ಸಮಾಜ ಹಾಗೂ ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ನಿರಂತರವಾಗಿ ಅಸ್ಸಾಂ ಮತ್ತು ಅದರ ಜನರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿವೆ …” ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

“ಅನೇಕ ನಾಗರಿಕರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆಂದು ಅಸ್ಸಾಂ ಪೊಲೀಸರ ಬಳಿಯಿರುವ ವೀಡಿಯೊ ತುಣುಕಿನಿಂದ ತಿಳಿದುಬಂದಿದೆ. ಅದರಂತೆ, ಅಸ್ಸಾಂ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಈ ಮೂಲಕ ಪ್ರಯಾಣ ಸಲಹೆಯನ್ನು ನೀಡಲಾಗುತ್ತದೆ” ಎಂದು ಸಲಹೆಯು ಹೇಳಿದೆ.

ಮಿಜೋರಾಂನಲ್ಲಿ ಕೆಲಸ ಮಾಡುತ್ತಿರುವ ರಾಜ್ಯದ ಜನರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವಂತೆ ಅಸ್ಸಾಂ ಸರ್ಕಾರ ಸಲಹೆ ನೀಡಿದೆ. ಮಿಜೋರಾಂನಿಂದ ಅಸ್ಸಾಂಗೆ ಪ್ರವೇಶಿಸುವ ಪ್ರತಿಯೊಂದು ವಾಹನವನ್ನು ಸಂಪೂರ್ಣವಾಗಿ ಪರಿಶೀಲಿಸುವುದಾಗಿ ಸರ್ಕಾರ ಹೇಳಿದೆ.

“ಅಕ್ರಮ ಮಾದಕವಸ್ತುಗಳ ಕಳ್ಳಸಾಗಣೆ ಪರಿಶೀಲಿಸಲು, ಮಿಜೋರಾಂನಿಂದ ಅಸ್ಸಾಂಗೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಪರಿಶೀಲಿಸುವುದು ಅವಶ್ಯಕ. ವಾಹನಗಳನ್ನು ಅಸ್ಸಾಂ ಪೊಲೀಸರು ಸಂಪೂರ್ಣವಾಗಿ ಪರಿಶೀಲಿಸುತ್ತಾರೆ. ಸಬ್‌ ಇನ್ಸ್‌‌ಪೆಕ್ಟರ್‌‌ ಹುದ್ದೆಗಿಂತ ಕೆಳಗಿಲ್ಲದ ಅಧಿಕಾರಿಯೊಬ್ಬರು ವಾಹನಗಳನ್ನು ಪರಿಶೀಲಿಸಿ ವಾಹನದಲ್ಲಿ ಅಕ್ರಮ ದ್ರವ್ಯಗಳು ಇಲ್ಲ ಎಂದು ತಿಳಿದ ನಂತರವೇ ಬಿಡುಗಡೆ ಮಾಡಲಾಗುವುದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

ಈ ಮಧ್ಯೆ, ಅಸ್ಸಾಂ ಮೂಲದ ಸಂಘಟನೆ ಮಿಜೋರಾಂಗೆ ಹೇರಿದ ಆರ್ಥಿಕ ದಿಗ್ಬಂಧನ ಮುಂದುವರೆದಿದ್ದು, ಇದರಲ್ಲಿ ಹಸ್ತಕ್ಷೇಪ ಮಾಡುವಂತೆ ಮಿಜೋರಾಂ ಒಕ್ಕೂಟ ಸರ್ಕಾರವನ್ನು ಕೋರಿದೆ.

ಅಸ್ಸಾಂ ಸಿಎಂ ವಿರುದ್ದ ಕಿಡಿ ಕಾರಿದ ವಿದ್ಯಾರ್ಥಿ ನಾಯಕ

ಮಿಜೋ ಸ್ಟೂಡೆಂಟ್ಸ್ ಯೂನಿಯನ್ (ಎಂಎಸ್‌ಯು) ಅಧ್ಯಕ್ಷ ಜೆ. ಲಾಲ್ಮುವಾನ್‌ಜುವಲಾ, “ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಈಶಾನ್ಯ ರಾಜ್ಯಗಳ ಶಾಂತಿಗೆ ಭಂಗ ಮಾಡಿದ್ದಾರೆ. ಅವರು ರಾಜಕೀಯ ಜಗತ್ತಿಗೆ ಪ್ರವೇಶಿಸುವ ಮೊದಲು ಇಲ್ಲಿ ಶಾಂತಿ ಇತ್ತು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...