Homeಮುಖಪುಟಗಡಿ ಸಂಘರ್ಷ: ಮಿಜೋರಾಂಗೆ ಪ್ರಯಾಣಿಸದಂತೆ ರಾಜ್ಯಕ್ಕೆ ಸಲಹೆ ನೀಡಿದ ಅಸ್ಸಾಂ ಸರ್ಕಾರ

ಗಡಿ ಸಂಘರ್ಷ: ಮಿಜೋರಾಂಗೆ ಪ್ರಯಾಣಿಸದಂತೆ ರಾಜ್ಯಕ್ಕೆ ಸಲಹೆ ನೀಡಿದ ಅಸ್ಸಾಂ ಸರ್ಕಾರ

- Advertisement -
- Advertisement -

ಇತ್ತೀಚೆಗೆ ಅಸ್ಸಾಂ ಮತ್ತು ಮಿಜೋರಾಂ ಅಂತರ ರಾಜ್ಯ ಗಡಿಯಲ್ಲಿ ನಡೆದ ಸಂಘರ್ಷದಿಂದಾಗಿ ಆರು ಅಸ್ಸಾಂ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು ಮತ್ತು ಹಲವಾರು ಜನರು ಗಾಯಗೊಂಡಿದ್ದರು. ಇದಾಗಿಯು ಅಸ್ಸಾಂನ ಕ್ಯಾಚಾರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳ ಮಿಜೋರಾಂ ಗಡಿಯ ಬಳಿ ಇತ್ತೀಚಿನ ಕೆಲವು ಘರ್ಷಣೆಗಳನ್ನು ಸೂಚಿಸಿರುವ ಅಸ್ಸಾಂ ಸರ್ಕಾರ, ಗುರುವಾರದಂದು ‘ಪ್ರವಾಸ ಸಲಹೆ’ ನೀಡಿದೆ. ಈ ಸಲಹೆಯಲ್ಲಿ ರಾಜ್ಯದ ಜನರು ಮಿಜೋರಾಂಗೆ ಪ್ರಯಾಣಿಸದಂತೆ ಅದು ಕೇಳಿಕೊಂಡಿದೆ.

“ಈ ಘಟನೆಯ ನಂತರವೂ, ಕೆಲವು ಮಿಜೋ ನಾಗರಿಕ ಸಮಾಜ ಹಾಗೂ ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ನಿರಂತರವಾಗಿ ಅಸ್ಸಾಂ ಮತ್ತು ಅದರ ಜನರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿವೆ …” ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

“ಅನೇಕ ನಾಗರಿಕರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆಂದು ಅಸ್ಸಾಂ ಪೊಲೀಸರ ಬಳಿಯಿರುವ ವೀಡಿಯೊ ತುಣುಕಿನಿಂದ ತಿಳಿದುಬಂದಿದೆ. ಅದರಂತೆ, ಅಸ್ಸಾಂ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಈ ಮೂಲಕ ಪ್ರಯಾಣ ಸಲಹೆಯನ್ನು ನೀಡಲಾಗುತ್ತದೆ” ಎಂದು ಸಲಹೆಯು ಹೇಳಿದೆ.

ಮಿಜೋರಾಂನಲ್ಲಿ ಕೆಲಸ ಮಾಡುತ್ತಿರುವ ರಾಜ್ಯದ ಜನರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವಂತೆ ಅಸ್ಸಾಂ ಸರ್ಕಾರ ಸಲಹೆ ನೀಡಿದೆ. ಮಿಜೋರಾಂನಿಂದ ಅಸ್ಸಾಂಗೆ ಪ್ರವೇಶಿಸುವ ಪ್ರತಿಯೊಂದು ವಾಹನವನ್ನು ಸಂಪೂರ್ಣವಾಗಿ ಪರಿಶೀಲಿಸುವುದಾಗಿ ಸರ್ಕಾರ ಹೇಳಿದೆ.

“ಅಕ್ರಮ ಮಾದಕವಸ್ತುಗಳ ಕಳ್ಳಸಾಗಣೆ ಪರಿಶೀಲಿಸಲು, ಮಿಜೋರಾಂನಿಂದ ಅಸ್ಸಾಂಗೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಪರಿಶೀಲಿಸುವುದು ಅವಶ್ಯಕ. ವಾಹನಗಳನ್ನು ಅಸ್ಸಾಂ ಪೊಲೀಸರು ಸಂಪೂರ್ಣವಾಗಿ ಪರಿಶೀಲಿಸುತ್ತಾರೆ. ಸಬ್‌ ಇನ್ಸ್‌‌ಪೆಕ್ಟರ್‌‌ ಹುದ್ದೆಗಿಂತ ಕೆಳಗಿಲ್ಲದ ಅಧಿಕಾರಿಯೊಬ್ಬರು ವಾಹನಗಳನ್ನು ಪರಿಶೀಲಿಸಿ ವಾಹನದಲ್ಲಿ ಅಕ್ರಮ ದ್ರವ್ಯಗಳು ಇಲ್ಲ ಎಂದು ತಿಳಿದ ನಂತರವೇ ಬಿಡುಗಡೆ ಮಾಡಲಾಗುವುದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

ಈ ಮಧ್ಯೆ, ಅಸ್ಸಾಂ ಮೂಲದ ಸಂಘಟನೆ ಮಿಜೋರಾಂಗೆ ಹೇರಿದ ಆರ್ಥಿಕ ದಿಗ್ಬಂಧನ ಮುಂದುವರೆದಿದ್ದು, ಇದರಲ್ಲಿ ಹಸ್ತಕ್ಷೇಪ ಮಾಡುವಂತೆ ಮಿಜೋರಾಂ ಒಕ್ಕೂಟ ಸರ್ಕಾರವನ್ನು ಕೋರಿದೆ.

ಅಸ್ಸಾಂ ಸಿಎಂ ವಿರುದ್ದ ಕಿಡಿ ಕಾರಿದ ವಿದ್ಯಾರ್ಥಿ ನಾಯಕ

ಮಿಜೋ ಸ್ಟೂಡೆಂಟ್ಸ್ ಯೂನಿಯನ್ (ಎಂಎಸ್‌ಯು) ಅಧ್ಯಕ್ಷ ಜೆ. ಲಾಲ್ಮುವಾನ್‌ಜುವಲಾ, “ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಈಶಾನ್ಯ ರಾಜ್ಯಗಳ ಶಾಂತಿಗೆ ಭಂಗ ಮಾಡಿದ್ದಾರೆ. ಅವರು ರಾಜಕೀಯ ಜಗತ್ತಿಗೆ ಪ್ರವೇಶಿಸುವ ಮೊದಲು ಇಲ್ಲಿ ಶಾಂತಿ ಇತ್ತು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...