Homeಮುಖಪುಟಗಡಿ ಸಂಘರ್ಷ: ಮಿಜೋರಾಂಗೆ ಪ್ರಯಾಣಿಸದಂತೆ ರಾಜ್ಯಕ್ಕೆ ಸಲಹೆ ನೀಡಿದ ಅಸ್ಸಾಂ ಸರ್ಕಾರ

ಗಡಿ ಸಂಘರ್ಷ: ಮಿಜೋರಾಂಗೆ ಪ್ರಯಾಣಿಸದಂತೆ ರಾಜ್ಯಕ್ಕೆ ಸಲಹೆ ನೀಡಿದ ಅಸ್ಸಾಂ ಸರ್ಕಾರ

- Advertisement -
- Advertisement -

ಇತ್ತೀಚೆಗೆ ಅಸ್ಸಾಂ ಮತ್ತು ಮಿಜೋರಾಂ ಅಂತರ ರಾಜ್ಯ ಗಡಿಯಲ್ಲಿ ನಡೆದ ಸಂಘರ್ಷದಿಂದಾಗಿ ಆರು ಅಸ್ಸಾಂ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು ಮತ್ತು ಹಲವಾರು ಜನರು ಗಾಯಗೊಂಡಿದ್ದರು. ಇದಾಗಿಯು ಅಸ್ಸಾಂನ ಕ್ಯಾಚಾರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳ ಮಿಜೋರಾಂ ಗಡಿಯ ಬಳಿ ಇತ್ತೀಚಿನ ಕೆಲವು ಘರ್ಷಣೆಗಳನ್ನು ಸೂಚಿಸಿರುವ ಅಸ್ಸಾಂ ಸರ್ಕಾರ, ಗುರುವಾರದಂದು ‘ಪ್ರವಾಸ ಸಲಹೆ’ ನೀಡಿದೆ. ಈ ಸಲಹೆಯಲ್ಲಿ ರಾಜ್ಯದ ಜನರು ಮಿಜೋರಾಂಗೆ ಪ್ರಯಾಣಿಸದಂತೆ ಅದು ಕೇಳಿಕೊಂಡಿದೆ.

“ಈ ಘಟನೆಯ ನಂತರವೂ, ಕೆಲವು ಮಿಜೋ ನಾಗರಿಕ ಸಮಾಜ ಹಾಗೂ ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ನಿರಂತರವಾಗಿ ಅಸ್ಸಾಂ ಮತ್ತು ಅದರ ಜನರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿವೆ …” ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

“ಅನೇಕ ನಾಗರಿಕರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆಂದು ಅಸ್ಸಾಂ ಪೊಲೀಸರ ಬಳಿಯಿರುವ ವೀಡಿಯೊ ತುಣುಕಿನಿಂದ ತಿಳಿದುಬಂದಿದೆ. ಅದರಂತೆ, ಅಸ್ಸಾಂ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಈ ಮೂಲಕ ಪ್ರಯಾಣ ಸಲಹೆಯನ್ನು ನೀಡಲಾಗುತ್ತದೆ” ಎಂದು ಸಲಹೆಯು ಹೇಳಿದೆ.

ಮಿಜೋರಾಂನಲ್ಲಿ ಕೆಲಸ ಮಾಡುತ್ತಿರುವ ರಾಜ್ಯದ ಜನರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವಂತೆ ಅಸ್ಸಾಂ ಸರ್ಕಾರ ಸಲಹೆ ನೀಡಿದೆ. ಮಿಜೋರಾಂನಿಂದ ಅಸ್ಸಾಂಗೆ ಪ್ರವೇಶಿಸುವ ಪ್ರತಿಯೊಂದು ವಾಹನವನ್ನು ಸಂಪೂರ್ಣವಾಗಿ ಪರಿಶೀಲಿಸುವುದಾಗಿ ಸರ್ಕಾರ ಹೇಳಿದೆ.

“ಅಕ್ರಮ ಮಾದಕವಸ್ತುಗಳ ಕಳ್ಳಸಾಗಣೆ ಪರಿಶೀಲಿಸಲು, ಮಿಜೋರಾಂನಿಂದ ಅಸ್ಸಾಂಗೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಪರಿಶೀಲಿಸುವುದು ಅವಶ್ಯಕ. ವಾಹನಗಳನ್ನು ಅಸ್ಸಾಂ ಪೊಲೀಸರು ಸಂಪೂರ್ಣವಾಗಿ ಪರಿಶೀಲಿಸುತ್ತಾರೆ. ಸಬ್‌ ಇನ್ಸ್‌‌ಪೆಕ್ಟರ್‌‌ ಹುದ್ದೆಗಿಂತ ಕೆಳಗಿಲ್ಲದ ಅಧಿಕಾರಿಯೊಬ್ಬರು ವಾಹನಗಳನ್ನು ಪರಿಶೀಲಿಸಿ ವಾಹನದಲ್ಲಿ ಅಕ್ರಮ ದ್ರವ್ಯಗಳು ಇಲ್ಲ ಎಂದು ತಿಳಿದ ನಂತರವೇ ಬಿಡುಗಡೆ ಮಾಡಲಾಗುವುದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

ಈ ಮಧ್ಯೆ, ಅಸ್ಸಾಂ ಮೂಲದ ಸಂಘಟನೆ ಮಿಜೋರಾಂಗೆ ಹೇರಿದ ಆರ್ಥಿಕ ದಿಗ್ಬಂಧನ ಮುಂದುವರೆದಿದ್ದು, ಇದರಲ್ಲಿ ಹಸ್ತಕ್ಷೇಪ ಮಾಡುವಂತೆ ಮಿಜೋರಾಂ ಒಕ್ಕೂಟ ಸರ್ಕಾರವನ್ನು ಕೋರಿದೆ.

ಅಸ್ಸಾಂ ಸಿಎಂ ವಿರುದ್ದ ಕಿಡಿ ಕಾರಿದ ವಿದ್ಯಾರ್ಥಿ ನಾಯಕ

ಮಿಜೋ ಸ್ಟೂಡೆಂಟ್ಸ್ ಯೂನಿಯನ್ (ಎಂಎಸ್‌ಯು) ಅಧ್ಯಕ್ಷ ಜೆ. ಲಾಲ್ಮುವಾನ್‌ಜುವಲಾ, “ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಈಶಾನ್ಯ ರಾಜ್ಯಗಳ ಶಾಂತಿಗೆ ಭಂಗ ಮಾಡಿದ್ದಾರೆ. ಅವರು ರಾಜಕೀಯ ಜಗತ್ತಿಗೆ ಪ್ರವೇಶಿಸುವ ಮೊದಲು ಇಲ್ಲಿ ಶಾಂತಿ ಇತ್ತು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...