Homeಅಂತರಾಷ್ಟ್ರೀಯಗಡಿ ವಿವಾದ: ಟ್ರಂಪ್ ಮಧ್ಯಸ್ಥಿಕೆಯ ಪ್ರಸ್ತಾಪ ತಿರಸ್ಕರಿಸಿದ ಚೀನಾ

ಗಡಿ ವಿವಾದ: ಟ್ರಂಪ್ ಮಧ್ಯಸ್ಥಿಕೆಯ ಪ್ರಸ್ತಾಪ ತಿರಸ್ಕರಿಸಿದ ಚೀನಾ

ಚೀನಾ ಮತ್ತು ಭಾರತ ಸಮಸ್ಯೆಗಳನ್ನು ಸಂವಾದ ಹಾಗೂ ಸಮಾಲೋಚನೆಯ ಮೂಲಕ ಪರಿಹರಿಸಲು ಸಮರ್ಥವಾಗಿವೆ, ಮೂರನೇ ವ್ಯಕ್ತಿಯ ಅಗತ್ಯವಿಲ್ಲ ಎಂದು ಚೀನಾ ಹೇಳಿದೆ.

- Advertisement -
- Advertisement -

ಭಾರತ ಮತ್ತು ಚೀನಾ ಗಡಿ ವಿವಾದ ಸಮಸ್ಯೆಯನ್ನು ಪರಿಹರಿಸಲು ಮಧ್ಯಸ್ಥಿಕೆ ವಹಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಸ್ತಾಪವನ್ನು ಚೀನಾ ತಿರಸ್ಕರಿಸಿದೆ. “ಚೀನಾ ಮತ್ತು ಭಾರತ ಸಮಸ್ಯೆಗಳನ್ನು ಸಂವಾದ ಹಾಗೂ ಸಮಾಲೋಚನೆಯ ಮೂಲಕ ಪರಿಹರಿಸಲು ಸಮರ್ಥವಾಗಿವೆ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಸಮರ್ಥವಾಗಿ ಮಧ್ಯಸ್ಥಿಕೆ ವಹಿಸಲು ಅಮೆರಿಕವು ಸಿದ್ಧ ಎಂದು ಕಳೆದ ಬುಧವಾರ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದರು. ಅಲ್ಲದೆ ಅದನ್ನು ಇಂದು ಕೂಡಾ ಪುನರುಚ್ಛರಿಸಿದ್ದರು.

ಅಮೆರಿಕಾ ಅಧ್ಯಕ್ಷರ ಪ್ರಸ್ತಾಪಕ್ಕೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್, ಎರಡು ದೇಶಗಳ ಮಿಲಿಟರಿ ವಿವಾದ ಪರಿಹರಿಸಲು ಮೂರನೇ ವ್ಯಕ್ತಿಯ ಹಸ್ತಕ್ಷೇಪವನ್ನು ಉಭಯ ದೇಶಗಳು ಬಯಸುವುದಿಲ್ಲ ಎಂದು ಹೇಳಿದ್ದಾರೆ.

“ಚೀನಾ ಮತ್ತು ಭಾರತದ ನಡುವೆ ಅಸ್ತಿತ್ವದಲ್ಲಿರುವ ಗಡಿ ಸಂಬಂಧಿತ ಕಾರ್ಯವಿಧಾನಗಳು ಮತ್ತು ಸಂವಹನ ಮಾರ್ಗಗಳಿವೆ” ಎಂದು ಝಾವೋ ಸುದ್ದಿಗಾರರಿಗೆ ತಿಳಿಸಿದರು. “ಸಂಭಾಷಣೆ ಮತ್ತು ಸಮಾಲೋಚನೆಯ ಮೂಲಕ ನಮ್ಮ ನಡುವಿನ ಸಮಸ್ಯೆಗಳನ್ನು ಸರಿಯಾಗಿ ಪರಿಹರಿಸಲು ನಾವು ಸಮರ್ಥರಾಗಿದ್ದೇವೆ. ನಮಗೆ ಮೂರನೇ ವ್ಯಕ್ತಿಯ ಹಸ್ತಕ್ಷೇಪದ ಅಗತ್ಯವಿಲ್ಲ” ಎಂದು ಅವರು ಹೇಳಿದರು.

ಲಡಾಖ್ ಮತ್ತು ಸಿಕ್ಕಿಂನಲ್ಲಿನ ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೂರ್ವ ಲಡಾಖ್‌ನ ಲೈನ್‌ ಆಫ್‌ ಕಂಟ್ರೋಲ್‌ ಉದ್ದಕ್ಕೂ ಹಲವಾರು ಪ್ರದೇಶಗಳಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದಾರೆ. ಇದು 2017 ರಲ್ಲಿ ಡೋಕ್ಲಾಮ್ ಬಿಕ್ಕಟ್ಟಿನ ನಂತರ ಅತಿದೊಡ್ಡ ಮಿಲಿಟರಿ ಮುಖಾಮುಖಿಯಾಗಿದೆ ಎನ್ನಲಾಗಿದೆ.

ಗಡಿ ನಿರ್ವಹಣೆಯ ಬಗ್ಗೆ ಭಾರತ ಯಾವಾಗಲೂ ಅತ್ಯಂತ ಜವಾಬ್ದಾರಿಯುತ ನಡೆಯನ್ನು ಪ್ರದರ್ಶಿಸಿದೆ ಎಂದು ಪ್ರತಿಪಾದಿಸಿರುವ ಭಾರತೀಯ ವಿದೇಶಾಂಗ ಸಚಿವಾಲಯವು, ಭಾರತದ ಎಲ್ಲಾ ಚಟುವಟಿಕೆಗಳನ್ನು ಗಡಿಯ ಬದಿಯಲ್ಲಿ ನಡೆಸಲಾಗಿದೆ ಎಂದು ಹೇಳಿದೆ.

“ವಿದೇಶಾಂಗ ಸಚಿವಾಲಯವು ರಾಜತಾಂತ್ರಿಕ ಕಾರ್ಯವಿಧಾನಗಳ ಮೂಲಕ ನೇರವಾಗಿ ಚೀನಾದೊಂದಿಗೆ ಸಂಪರ್ಕದಲ್ಲಿದೆ” ಎಂದು ಭಾರತದ ವಿದೇಶಾಂಗ ಸಚಿವಾಲಯದ ಮೂಲಗಳು ಇಂದು ತಿಳಿಸಿವೆ.


ಓದಿ: ಸುಳ್ಳನ್ನು ’ಫ್ಯಾಕ್ಟ್ ಚೆಕ್’ ಮಾಡಿದ ಟ್ವಿಟ್ಟರ್‌: ಜಾಲತಾಣ ಮುಚ್ಚುವುದಾಗಿ ಟ್ರಂಪ್ ಬೆದರಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...