Homeನಿಜವೋ ಸುಳ್ಳೋಗಡಿ ವಿವಾದ: ವಾಟ್ಸಾಪ್‌ ಮೆಸೇಜನ್ನು ನಂಬಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ’ಟೈಮ್ಸ್ ನೌ’

ಗಡಿ ವಿವಾದ: ವಾಟ್ಸಾಪ್‌ ಮೆಸೇಜನ್ನು ನಂಬಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ’ಟೈಮ್ಸ್ ನೌ’

- Advertisement -
- Advertisement -

ಗಾಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ನಡೆದ ಹಿಂಸಾತ್ಮಕ ಮುಖಾಮುಖಿಯಲ್ಲಿಕನಿಷ್ಠ 30 ಚೀನೀ ಸೈನಿಕರು ಕೊಲ್ಲಲ್ಪಟ್ಟಿದ್ದಾರೆ ಎಂಬ ವಾಟ್ಸಾಪ್ ಫಾರ್ವರ್ಡ್ ಮೆಸೇಜಿನ ಸುದ್ದಿ ಮೂಲವನ್ನು ಇಟ್ಟುಕೊಂಡು ಇಂಗ್ಲಿಷ್ ಸುದ್ದಿ ಚಾನೆಲ್ “ಟೈಮ್ಸ್ ನೌ” ಸುದ್ದಿ ಮಾಡಿದೆ.

ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್ ಟೈಮ್ಸ್ ಕೊಲ್ಲಲ್ಪಟ್ಟ ಚೀನೀ ಸೈನಿಕರ ಹೆಸರು ಹಾಗೂ ಸಾವಿಗೀಡಾದ ಸೈನಿಕರನ್ನು ಹೇಳಿದೆ ಎಂದು ಈ ಸುದ್ದಿಯೂ ಉಲ್ಲೇಖಿಸಿದೆ.

ಆದರೆ ಗ್ಲೋಬಲ್ ಟೈಮ್ಸ್‌ ಪತ್ರಿಕೆಯ ಪ್ರಧಾನ ಸಂಪಾದಕ ಚೀನೀ ಸೇನೆಗೆ ಸಾವುನೋವುಗಳಾಗಿದೆ ಎಂದು ದೃಪಡಿಸಿದ್ದಾರಾದರೂ ಯಾವುದೆ ಹೆಸರು ಮತ್ತು ಸಾವುನೋವುಗಳ ಸಂಖ್ಯೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ.

ನಂತರ ಎಚ್ಚೆತ್ತ ಟೈಮ್ಸ್ ನೌ ಚಾನೆಲ್ ”ಬಹುಶಃ ಮಾಹಿತಿಯು ’ನಕಲಿ ಫಾರ್ವರ್ಡ್’ ಆಗಿರಬಹುದು ಎಂದು ಉಲ್ಲೇಖಿಸಿದೆ.

ಆಗಿದ್ದೇನು?

ವೈರಲಾದ ಸಂದೇಶದಲ್ಲಿ ಗ್ಲೋಬಲ್ ಟೈಮ್ಸ್ ಈ ಲೇಖನವನ್ನು ಬುಧವಾರ 0:57:25 ಕ್ಕೆ ಪ್ರಕಟಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.

“ಭಾರತದೊಂದಿಗಿನ ಚೀನಾದ ಗಡಿಯ ರಕ್ಷಣೆಯನ್ನು ನೋಡಿಕೊಳ್ಳುವ ವೆಸ್ಟರ್ನ್ ಥಿಯೇಟರ್ ಕಮಾಂಡ್‌ನ ವಕ್ತಾರರು ಭಾರತೀಯ ಸೈನ್ಯದಿಂದ ಕೊಲ್ಲಲ್ಪಟ್ಟ 30 ಚೀನೀ ಸೈನಿಕರ ಹೆಸರನ್ನು ಬಿಡುಗಡೆ ಮಾಡಿದ್ದಾರೆ” ಎಂದು ಸಂದೇಶದಲ್ಲಿ ಬರೆಯಲಾಗಿದೆ.

ಈ ಸಂದೇಶವನ್ನು ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ವೈರಲಾದ ಸಂದೇಶದಲ್ಲಿ ಇರುವಂತೆ ಗ್ಲೋಬಲ್ ಟೈಮ್ಸ್ ಪತ್ರಿಕೆಯೂ ಈ ರೀತಿಯ ಯಾವುದೇ  ಸುದ್ದಿಯನ್ನು ಮಾಡಲಿಲ್ಲ ಎಂದು ಪತ್ರಿಕೆಯ ವೆಬ್‌ಸೈಟ್‌ನಲ್ಲಿ ನಮಗೆ ನೋಡಬಹುದಾಗಿದೆ. ಅಲ್ಲದೆ ಈ ಪತ್ರಿಕೆಯ ಟ್ವಿಟ್ಟರ್ ಖಾತೆಯಲ್ಲೂ ಅಂತಹ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

ಗ್ಲೋಬಲ್ ಟೈಮ್ಸ್‌ನ ಪ್ರಧಾನ ಸಂಪಾದಕ ಹೂ ಕ್ಸಿಜಿನ್ ಜೂನ್ 16 ರ ಮಂಗಳವಾರ ಟ್ವೀಟ್ ಮಾಡಿ “ಈ ಘಟನೆಯಲ್ಲಿ ಸಂಭವಿಸಿದ ಸಾವುನೋವುಗಳ ಅಧಿಕೃತ ಸಂಖ್ಯೆಯನ್ನು ಚೀನಾ ಸರ್ಕಾರ ಬಿಡುಗಡೆ ಮಾಡಿಲ್ಲ” ಎಂದು ಉಲ್ಲೇಖಿಸಿದ್ದಾರೆ.

ಟ್ವಿಟ್ಟರ್ ಆರ್ಕೈವ್‌ನಲ್ಲೂ ಗ್ಲೋಬಲ್‌ ಟೈಮ್ಸ್‌ ಈ ಸುದ್ದಿ ಹಾಕಿರುವ ದಾಖಲೆಗಳು ಲಭ್ಯವಿಲ್ಲ. ಆದರೆ ಪ್ರತೀ ಖಾತೆಯ ಪ್ರತೀ ವಿಷಯವೂ ಈ ಆರ್ಕೈವ್‌ನಲ್ಲಿ ದಾಖಲಾಗಿ ಇರುವುದಿಲ್ಲ ಎಂಬುವುದನ್ನು ನಾವು ಇಲ್ಲಿ ನೆನಪಿಟ್ಟುಕೊಳ್ಳಬೇಕಾಗಿದೆ.

ಘಟನೆಯಲ್ಲಿ ಇಂತಿಷ್ಟು ಚೀನಾ ಸೈನಿಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೂಡಾ ಇತರ ಸುದ್ದಿ ಮೂಲದಿಂದಾಗಿದೆ, ಇದಕ್ಕೆ ಯಾವುದೇ ಯಾವುದೇ ಅಧಿಕೃತ ಅಂಕಿ ಅಂಶಗಳಿರುವ ಸುದ್ದಿ ಮೂಲಗಳಿಲ್ಲ.


ಓದಿ: ಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...