Homeಮುಖಪುಟಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

ಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

ಸುಮಾರು 200 ಅಸ್ಸಾಂ ಪೊಲೀಸರು ತಮ್ಮ ರಾಜ್ಯಕ್ಕೆ ಬಲವಂತವಾಗಿ ಪ್ರವೇಶಿಸಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ-ಮಿಜೋರಾಂ ಗೃಹ ಸಚಿವ

- Advertisement -
- Advertisement -

ಅಸ್ಸಾಂ- ಮಿಜೋರಾಂ ಈಶಾನ್ಯ ರಾಜ್ಯಗಳ ನಡುವಿನ ವಿವಾದಿತ ಗಡಿಯಲ್ಲಿ ಸೋಮವಾರ ನಡೆದ ಗಡಿ ಘರ್ಷಣೆಯ ಪಿತೂರಿಯಲ್ಲಿ ಮಿಜೋರಾಂನ ಆಡಳಿತ ಪಕ್ಷದ ಸಂಸತ್ ಸದಸ್ಯನ ಪಾತ್ರವಿದೆ ಎಂದಿರುವ ಅಸ್ಸಾಂ ಪೊಲೀಸರು. ಇದರ ಬಗ್ಗೆ ಮತ್ತಷ್ಟು ಪರಿಶೀಲನೆ ನಡೆಸುತ್ತಿದ್ದಾರೆ.

“ರಾಜ್ಯಸಭಾ ಸಂಸದ ಕೆ.ವನ್ಲಾಲ್ವೆನಾ ಅವರ ಮಾಧ್ಯಮ ಸಂದರ್ಶನ ಬೆಳಕಿಗೆ ಬಂಬ ಬಳಿಕ, ಸಂಘರ್ಷದ ಹಿಂದಿನ ಪಿತೂರಿಯಲ್ಲಿ ಅವರ ಪಾತ್ರವಿರುವುದು ತಿಳಿದೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಅಸ್ಸಾಂ ಪೊಲೀಸರ ತನಿಖಾ ತಂಡವು ದೆಹಲಿಗೆ ತೆರಳುತ್ತಿದೆ’ ಎಂದು ಬುಧವಾರ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

ಸಂದರ್ಶನದಲ್ಲಿ ಅಸ್ಸಾಂ ಪೊಲೀಸರು ಮತ್ತೆ ತಮ್ಮ ರಾಜ್ಯದ ಭೂಪ್ರದೇಶಕ್ಕೆ ಪ್ರವೇಶಿಸಿದರೆ ಎಲ್ಲರೂ ಕೊಲ್ಲಲ್ಪಡುತ್ತಾರೆ ಎಂದು ಸಂಸದರು ಬೆದರಿಕೆ ಹಾಕಿದ್ದಾರೆ ಎಂದು ಅಸ್ಸಾಂ ಪೋಲಿಸರು ಆರೋಪಿಸಿದ್ದಾರೆ. ಕೆ.ವನ್ಲಾಲ್ವೆನಾ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್‌ ಸಂಸದರಾಗಿದ್ದಾರೆ.

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

ಅಸ್ಸಾಂ ಪೊಲೀಸರು, ಸಂಸದರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮತ್ತು ಕೊಲೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ಅತಿಕ್ರಮಣ, ಮಾನವ ಜೀವಕ್ಕೆ ಅಪಾಯ, ಕೊಲೆ ಯತ್ನ ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿವಾದಿತ ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಸೋಮವಾರ ಉಲ್ಭಣಿಸಿದ ಹಿಂಸಾಚಾರದಲ್ಲಿ ಅಸ್ಸಾಂನ ಆರು ಪೊಲೀಸರು ಹತ್ಯೆಯಾಗಿದ್ದಾರೆ ಎಂದು ಸಿಎಂ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. ಸಂಘರ್ಷದಲ್ಲಿ ಭಾಗಿಯಾಗಿರುವವರ ಬಂಧನಕ್ಕೆ ಪೂರಕವಾದ ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಲಾಗಿದೆ.

ಘರ್ಷಣೆಗಳಿಂದ ಅಸ್ಸಾಂ ಕಡೆಯಿಂದ 41 ಜನರು ಗಾಯಗೊಂಡಿದ್ದರೆ, ಮಿಜೋರಾಂ ತನ್ನ ಕಡೆಯಿಂದ ಯಾವುದೇ ಗಾಯಗಳ ವಿವರಗಳನ್ನು ನೀಡಿಲ್ಲ. ಕೊಲಸಿಬ್ ಗಡಿಯನ್ನು ದಾಟಿದ ಅಸ್ಸಾಂ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನಗಳನ್ನು ಧ್ವಂಸಗೊಳಿಸಿ ಗುಂಡು ಹಾರಿಸಿದರು ಮಿಜೋರಾಂ ಪೊಲೀಸರು ಆರೋಪಿಸಿದ್ದಾರೆ. ಘರ್ಷಣೆ ಬಗ್ಗೆ ಉಭಯ ರಾಜ್ಯಗಳು ಪರಸ್ಪರ ದೂಷಿಸುತ್ತಿವೆ.

ಮಿಜೋರಾಂನ ಗೃಹ ಸಚಿವ ಲಾಲ್‌ಚಾಮ್ಲಿಯಾನಾ, ಸುಮಾರು 200 ಅಸ್ಸಾಂ ಪೊಲೀಸ್ ಸಿಬ್ಬಂದಿ ತಮ್ಮ ರಾಜ್ಯಕ್ಕೆ ಬಲವಂತವಾಗಿ ಪ್ರವೇಶಿಸಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಗಡಿ ವಿವಾದವೇನು?

ಮಿಜೋರಾಂನ ಮೂರು ಜಿಲ್ಲೆಗಳಾದ ಐಜಾಲ್, ಕೋಲಾಸಿಬ್ ಮತ್ತು ಮಾಮಿತ್ ಅಸ್ಸಾಂನ ಕ್ಯಾಚರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳೊಂದಿಗೆ 164.6 ಕಿ.ಮೀ ಉದ್ದದ ರಾಜ್ಯ ಗಡಿಯನ್ನು ಹಂಚಿಕೊಂಡಿವೆ. ಈ ಪ್ರದೇಶವು ಹಲವು ವರ್ಷಗಳಿಂದ ಘರ್ಷಣೆಯಲ್ಲಿ ಮುಳುಗಿದೆ. ಸ್ಥಳೀಯರು ಮತ್ತು ಭದ್ರತಾ ಪಡೆಗಳು ಒಳನುಸುಳುವಿಕೆ ಬಗ್ಗೆ ಪದೇ ಪದೇ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ. ಗಡಿ ಗುರುತಿಸುವಿಕೆಯನ್ನು ಎದುರಿಸಲು ಮಿಜೋರಾಂ ಸರ್ಕಾರ ಗಡಿ ಆಯೋಗವನ್ನು ರಚಿಸಿದೆ. ಅಸ್ಸಾಂ ರಾಜ್ಯವು ಮೇಘಾಲಯ ಮತ್ತು ಅರುಣಾಚಲ ಪ್ರದೇಶದೊಂದಿಗೆ ಗಡಿ ವಿವಾದಗಳನ್ನು ಹೊಂದಿದೆ.


ಇದನ್ನೂ ಓದಿ: ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...