Homeಮುಖಪುಟಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

ಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

ಸುಮಾರು 200 ಅಸ್ಸಾಂ ಪೊಲೀಸರು ತಮ್ಮ ರಾಜ್ಯಕ್ಕೆ ಬಲವಂತವಾಗಿ ಪ್ರವೇಶಿಸಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ-ಮಿಜೋರಾಂ ಗೃಹ ಸಚಿವ

- Advertisement -
- Advertisement -

ಅಸ್ಸಾಂ- ಮಿಜೋರಾಂ ಈಶಾನ್ಯ ರಾಜ್ಯಗಳ ನಡುವಿನ ವಿವಾದಿತ ಗಡಿಯಲ್ಲಿ ಸೋಮವಾರ ನಡೆದ ಗಡಿ ಘರ್ಷಣೆಯ ಪಿತೂರಿಯಲ್ಲಿ ಮಿಜೋರಾಂನ ಆಡಳಿತ ಪಕ್ಷದ ಸಂಸತ್ ಸದಸ್ಯನ ಪಾತ್ರವಿದೆ ಎಂದಿರುವ ಅಸ್ಸಾಂ ಪೊಲೀಸರು. ಇದರ ಬಗ್ಗೆ ಮತ್ತಷ್ಟು ಪರಿಶೀಲನೆ ನಡೆಸುತ್ತಿದ್ದಾರೆ.

“ರಾಜ್ಯಸಭಾ ಸಂಸದ ಕೆ.ವನ್ಲಾಲ್ವೆನಾ ಅವರ ಮಾಧ್ಯಮ ಸಂದರ್ಶನ ಬೆಳಕಿಗೆ ಬಂಬ ಬಳಿಕ, ಸಂಘರ್ಷದ ಹಿಂದಿನ ಪಿತೂರಿಯಲ್ಲಿ ಅವರ ಪಾತ್ರವಿರುವುದು ತಿಳಿದೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಅಸ್ಸಾಂ ಪೊಲೀಸರ ತನಿಖಾ ತಂಡವು ದೆಹಲಿಗೆ ತೆರಳುತ್ತಿದೆ’ ಎಂದು ಬುಧವಾರ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

ಸಂದರ್ಶನದಲ್ಲಿ ಅಸ್ಸಾಂ ಪೊಲೀಸರು ಮತ್ತೆ ತಮ್ಮ ರಾಜ್ಯದ ಭೂಪ್ರದೇಶಕ್ಕೆ ಪ್ರವೇಶಿಸಿದರೆ ಎಲ್ಲರೂ ಕೊಲ್ಲಲ್ಪಡುತ್ತಾರೆ ಎಂದು ಸಂಸದರು ಬೆದರಿಕೆ ಹಾಕಿದ್ದಾರೆ ಎಂದು ಅಸ್ಸಾಂ ಪೋಲಿಸರು ಆರೋಪಿಸಿದ್ದಾರೆ. ಕೆ.ವನ್ಲಾಲ್ವೆನಾ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್‌ ಸಂಸದರಾಗಿದ್ದಾರೆ.

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

ಅಸ್ಸಾಂ ಪೊಲೀಸರು, ಸಂಸದರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮತ್ತು ಕೊಲೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ಅತಿಕ್ರಮಣ, ಮಾನವ ಜೀವಕ್ಕೆ ಅಪಾಯ, ಕೊಲೆ ಯತ್ನ ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿವಾದಿತ ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಸೋಮವಾರ ಉಲ್ಭಣಿಸಿದ ಹಿಂಸಾಚಾರದಲ್ಲಿ ಅಸ್ಸಾಂನ ಆರು ಪೊಲೀಸರು ಹತ್ಯೆಯಾಗಿದ್ದಾರೆ ಎಂದು ಸಿಎಂ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. ಸಂಘರ್ಷದಲ್ಲಿ ಭಾಗಿಯಾಗಿರುವವರ ಬಂಧನಕ್ಕೆ ಪೂರಕವಾದ ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಲಾಗಿದೆ.

ಘರ್ಷಣೆಗಳಿಂದ ಅಸ್ಸಾಂ ಕಡೆಯಿಂದ 41 ಜನರು ಗಾಯಗೊಂಡಿದ್ದರೆ, ಮಿಜೋರಾಂ ತನ್ನ ಕಡೆಯಿಂದ ಯಾವುದೇ ಗಾಯಗಳ ವಿವರಗಳನ್ನು ನೀಡಿಲ್ಲ. ಕೊಲಸಿಬ್ ಗಡಿಯನ್ನು ದಾಟಿದ ಅಸ್ಸಾಂ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನಗಳನ್ನು ಧ್ವಂಸಗೊಳಿಸಿ ಗುಂಡು ಹಾರಿಸಿದರು ಮಿಜೋರಾಂ ಪೊಲೀಸರು ಆರೋಪಿಸಿದ್ದಾರೆ. ಘರ್ಷಣೆ ಬಗ್ಗೆ ಉಭಯ ರಾಜ್ಯಗಳು ಪರಸ್ಪರ ದೂಷಿಸುತ್ತಿವೆ.

ಮಿಜೋರಾಂನ ಗೃಹ ಸಚಿವ ಲಾಲ್‌ಚಾಮ್ಲಿಯಾನಾ, ಸುಮಾರು 200 ಅಸ್ಸಾಂ ಪೊಲೀಸ್ ಸಿಬ್ಬಂದಿ ತಮ್ಮ ರಾಜ್ಯಕ್ಕೆ ಬಲವಂತವಾಗಿ ಪ್ರವೇಶಿಸಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಗಡಿ ವಿವಾದವೇನು?

ಮಿಜೋರಾಂನ ಮೂರು ಜಿಲ್ಲೆಗಳಾದ ಐಜಾಲ್, ಕೋಲಾಸಿಬ್ ಮತ್ತು ಮಾಮಿತ್ ಅಸ್ಸಾಂನ ಕ್ಯಾಚರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳೊಂದಿಗೆ 164.6 ಕಿ.ಮೀ ಉದ್ದದ ರಾಜ್ಯ ಗಡಿಯನ್ನು ಹಂಚಿಕೊಂಡಿವೆ. ಈ ಪ್ರದೇಶವು ಹಲವು ವರ್ಷಗಳಿಂದ ಘರ್ಷಣೆಯಲ್ಲಿ ಮುಳುಗಿದೆ. ಸ್ಥಳೀಯರು ಮತ್ತು ಭದ್ರತಾ ಪಡೆಗಳು ಒಳನುಸುಳುವಿಕೆ ಬಗ್ಗೆ ಪದೇ ಪದೇ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ. ಗಡಿ ಗುರುತಿಸುವಿಕೆಯನ್ನು ಎದುರಿಸಲು ಮಿಜೋರಾಂ ಸರ್ಕಾರ ಗಡಿ ಆಯೋಗವನ್ನು ರಚಿಸಿದೆ. ಅಸ್ಸಾಂ ರಾಜ್ಯವು ಮೇಘಾಲಯ ಮತ್ತು ಅರುಣಾಚಲ ಪ್ರದೇಶದೊಂದಿಗೆ ಗಡಿ ವಿವಾದಗಳನ್ನು ಹೊಂದಿದೆ.


ಇದನ್ನೂ ಓದಿ: ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...