Homeಮುಖಪುಟಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

ಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

ಸುಮಾರು 200 ಅಸ್ಸಾಂ ಪೊಲೀಸರು ತಮ್ಮ ರಾಜ್ಯಕ್ಕೆ ಬಲವಂತವಾಗಿ ಪ್ರವೇಶಿಸಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ-ಮಿಜೋರಾಂ ಗೃಹ ಸಚಿವ

- Advertisement -
- Advertisement -

ಅಸ್ಸಾಂ- ಮಿಜೋರಾಂ ಈಶಾನ್ಯ ರಾಜ್ಯಗಳ ನಡುವಿನ ವಿವಾದಿತ ಗಡಿಯಲ್ಲಿ ಸೋಮವಾರ ನಡೆದ ಗಡಿ ಘರ್ಷಣೆಯ ಪಿತೂರಿಯಲ್ಲಿ ಮಿಜೋರಾಂನ ಆಡಳಿತ ಪಕ್ಷದ ಸಂಸತ್ ಸದಸ್ಯನ ಪಾತ್ರವಿದೆ ಎಂದಿರುವ ಅಸ್ಸಾಂ ಪೊಲೀಸರು. ಇದರ ಬಗ್ಗೆ ಮತ್ತಷ್ಟು ಪರಿಶೀಲನೆ ನಡೆಸುತ್ತಿದ್ದಾರೆ.

“ರಾಜ್ಯಸಭಾ ಸಂಸದ ಕೆ.ವನ್ಲಾಲ್ವೆನಾ ಅವರ ಮಾಧ್ಯಮ ಸಂದರ್ಶನ ಬೆಳಕಿಗೆ ಬಂಬ ಬಳಿಕ, ಸಂಘರ್ಷದ ಹಿಂದಿನ ಪಿತೂರಿಯಲ್ಲಿ ಅವರ ಪಾತ್ರವಿರುವುದು ತಿಳಿದೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಅಸ್ಸಾಂ ಪೊಲೀಸರ ತನಿಖಾ ತಂಡವು ದೆಹಲಿಗೆ ತೆರಳುತ್ತಿದೆ’ ಎಂದು ಬುಧವಾರ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

ಸಂದರ್ಶನದಲ್ಲಿ ಅಸ್ಸಾಂ ಪೊಲೀಸರು ಮತ್ತೆ ತಮ್ಮ ರಾಜ್ಯದ ಭೂಪ್ರದೇಶಕ್ಕೆ ಪ್ರವೇಶಿಸಿದರೆ ಎಲ್ಲರೂ ಕೊಲ್ಲಲ್ಪಡುತ್ತಾರೆ ಎಂದು ಸಂಸದರು ಬೆದರಿಕೆ ಹಾಕಿದ್ದಾರೆ ಎಂದು ಅಸ್ಸಾಂ ಪೋಲಿಸರು ಆರೋಪಿಸಿದ್ದಾರೆ. ಕೆ.ವನ್ಲಾಲ್ವೆನಾ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್‌ ಸಂಸದರಾಗಿದ್ದಾರೆ.

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

ಅಸ್ಸಾಂ ಪೊಲೀಸರು, ಸಂಸದರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮತ್ತು ಕೊಲೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ಅತಿಕ್ರಮಣ, ಮಾನವ ಜೀವಕ್ಕೆ ಅಪಾಯ, ಕೊಲೆ ಯತ್ನ ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿವಾದಿತ ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಸೋಮವಾರ ಉಲ್ಭಣಿಸಿದ ಹಿಂಸಾಚಾರದಲ್ಲಿ ಅಸ್ಸಾಂನ ಆರು ಪೊಲೀಸರು ಹತ್ಯೆಯಾಗಿದ್ದಾರೆ ಎಂದು ಸಿಎಂ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. ಸಂಘರ್ಷದಲ್ಲಿ ಭಾಗಿಯಾಗಿರುವವರ ಬಂಧನಕ್ಕೆ ಪೂರಕವಾದ ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಲಾಗಿದೆ.

ಘರ್ಷಣೆಗಳಿಂದ ಅಸ್ಸಾಂ ಕಡೆಯಿಂದ 41 ಜನರು ಗಾಯಗೊಂಡಿದ್ದರೆ, ಮಿಜೋರಾಂ ತನ್ನ ಕಡೆಯಿಂದ ಯಾವುದೇ ಗಾಯಗಳ ವಿವರಗಳನ್ನು ನೀಡಿಲ್ಲ. ಕೊಲಸಿಬ್ ಗಡಿಯನ್ನು ದಾಟಿದ ಅಸ್ಸಾಂ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನಗಳನ್ನು ಧ್ವಂಸಗೊಳಿಸಿ ಗುಂಡು ಹಾರಿಸಿದರು ಮಿಜೋರಾಂ ಪೊಲೀಸರು ಆರೋಪಿಸಿದ್ದಾರೆ. ಘರ್ಷಣೆ ಬಗ್ಗೆ ಉಭಯ ರಾಜ್ಯಗಳು ಪರಸ್ಪರ ದೂಷಿಸುತ್ತಿವೆ.

ಮಿಜೋರಾಂನ ಗೃಹ ಸಚಿವ ಲಾಲ್‌ಚಾಮ್ಲಿಯಾನಾ, ಸುಮಾರು 200 ಅಸ್ಸಾಂ ಪೊಲೀಸ್ ಸಿಬ್ಬಂದಿ ತಮ್ಮ ರಾಜ್ಯಕ್ಕೆ ಬಲವಂತವಾಗಿ ಪ್ರವೇಶಿಸಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಗಡಿ ವಿವಾದವೇನು?

ಮಿಜೋರಾಂನ ಮೂರು ಜಿಲ್ಲೆಗಳಾದ ಐಜಾಲ್, ಕೋಲಾಸಿಬ್ ಮತ್ತು ಮಾಮಿತ್ ಅಸ್ಸಾಂನ ಕ್ಯಾಚರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳೊಂದಿಗೆ 164.6 ಕಿ.ಮೀ ಉದ್ದದ ರಾಜ್ಯ ಗಡಿಯನ್ನು ಹಂಚಿಕೊಂಡಿವೆ. ಈ ಪ್ರದೇಶವು ಹಲವು ವರ್ಷಗಳಿಂದ ಘರ್ಷಣೆಯಲ್ಲಿ ಮುಳುಗಿದೆ. ಸ್ಥಳೀಯರು ಮತ್ತು ಭದ್ರತಾ ಪಡೆಗಳು ಒಳನುಸುಳುವಿಕೆ ಬಗ್ಗೆ ಪದೇ ಪದೇ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ. ಗಡಿ ಗುರುತಿಸುವಿಕೆಯನ್ನು ಎದುರಿಸಲು ಮಿಜೋರಾಂ ಸರ್ಕಾರ ಗಡಿ ಆಯೋಗವನ್ನು ರಚಿಸಿದೆ. ಅಸ್ಸಾಂ ರಾಜ್ಯವು ಮೇಘಾಲಯ ಮತ್ತು ಅರುಣಾಚಲ ಪ್ರದೇಶದೊಂದಿಗೆ ಗಡಿ ವಿವಾದಗಳನ್ನು ಹೊಂದಿದೆ.


ಇದನ್ನೂ ಓದಿ: ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...