Homeಮುಖಪುಟಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

ಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

ಸುಮಾರು 200 ಅಸ್ಸಾಂ ಪೊಲೀಸರು ತಮ್ಮ ರಾಜ್ಯಕ್ಕೆ ಬಲವಂತವಾಗಿ ಪ್ರವೇಶಿಸಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ-ಮಿಜೋರಾಂ ಗೃಹ ಸಚಿವ

- Advertisement -
- Advertisement -

ಅಸ್ಸಾಂ- ಮಿಜೋರಾಂ ಈಶಾನ್ಯ ರಾಜ್ಯಗಳ ನಡುವಿನ ವಿವಾದಿತ ಗಡಿಯಲ್ಲಿ ಸೋಮವಾರ ನಡೆದ ಗಡಿ ಘರ್ಷಣೆಯ ಪಿತೂರಿಯಲ್ಲಿ ಮಿಜೋರಾಂನ ಆಡಳಿತ ಪಕ್ಷದ ಸಂಸತ್ ಸದಸ್ಯನ ಪಾತ್ರವಿದೆ ಎಂದಿರುವ ಅಸ್ಸಾಂ ಪೊಲೀಸರು. ಇದರ ಬಗ್ಗೆ ಮತ್ತಷ್ಟು ಪರಿಶೀಲನೆ ನಡೆಸುತ್ತಿದ್ದಾರೆ.

“ರಾಜ್ಯಸಭಾ ಸಂಸದ ಕೆ.ವನ್ಲಾಲ್ವೆನಾ ಅವರ ಮಾಧ್ಯಮ ಸಂದರ್ಶನ ಬೆಳಕಿಗೆ ಬಂಬ ಬಳಿಕ, ಸಂಘರ್ಷದ ಹಿಂದಿನ ಪಿತೂರಿಯಲ್ಲಿ ಅವರ ಪಾತ್ರವಿರುವುದು ತಿಳಿದೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಅಸ್ಸಾಂ ಪೊಲೀಸರ ತನಿಖಾ ತಂಡವು ದೆಹಲಿಗೆ ತೆರಳುತ್ತಿದೆ’ ಎಂದು ಬುಧವಾರ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

ಸಂದರ್ಶನದಲ್ಲಿ ಅಸ್ಸಾಂ ಪೊಲೀಸರು ಮತ್ತೆ ತಮ್ಮ ರಾಜ್ಯದ ಭೂಪ್ರದೇಶಕ್ಕೆ ಪ್ರವೇಶಿಸಿದರೆ ಎಲ್ಲರೂ ಕೊಲ್ಲಲ್ಪಡುತ್ತಾರೆ ಎಂದು ಸಂಸದರು ಬೆದರಿಕೆ ಹಾಕಿದ್ದಾರೆ ಎಂದು ಅಸ್ಸಾಂ ಪೋಲಿಸರು ಆರೋಪಿಸಿದ್ದಾರೆ. ಕೆ.ವನ್ಲಾಲ್ವೆನಾ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್‌ ಸಂಸದರಾಗಿದ್ದಾರೆ.

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

ಅಸ್ಸಾಂ ಪೊಲೀಸರು, ಸಂಸದರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮತ್ತು ಕೊಲೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ಅತಿಕ್ರಮಣ, ಮಾನವ ಜೀವಕ್ಕೆ ಅಪಾಯ, ಕೊಲೆ ಯತ್ನ ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿವಾದಿತ ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಸೋಮವಾರ ಉಲ್ಭಣಿಸಿದ ಹಿಂಸಾಚಾರದಲ್ಲಿ ಅಸ್ಸಾಂನ ಆರು ಪೊಲೀಸರು ಹತ್ಯೆಯಾಗಿದ್ದಾರೆ ಎಂದು ಸಿಎಂ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. ಸಂಘರ್ಷದಲ್ಲಿ ಭಾಗಿಯಾಗಿರುವವರ ಬಂಧನಕ್ಕೆ ಪೂರಕವಾದ ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಲಾಗಿದೆ.

ಘರ್ಷಣೆಗಳಿಂದ ಅಸ್ಸಾಂ ಕಡೆಯಿಂದ 41 ಜನರು ಗಾಯಗೊಂಡಿದ್ದರೆ, ಮಿಜೋರಾಂ ತನ್ನ ಕಡೆಯಿಂದ ಯಾವುದೇ ಗಾಯಗಳ ವಿವರಗಳನ್ನು ನೀಡಿಲ್ಲ. ಕೊಲಸಿಬ್ ಗಡಿಯನ್ನು ದಾಟಿದ ಅಸ್ಸಾಂ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನಗಳನ್ನು ಧ್ವಂಸಗೊಳಿಸಿ ಗುಂಡು ಹಾರಿಸಿದರು ಮಿಜೋರಾಂ ಪೊಲೀಸರು ಆರೋಪಿಸಿದ್ದಾರೆ. ಘರ್ಷಣೆ ಬಗ್ಗೆ ಉಭಯ ರಾಜ್ಯಗಳು ಪರಸ್ಪರ ದೂಷಿಸುತ್ತಿವೆ.

ಮಿಜೋರಾಂನ ಗೃಹ ಸಚಿವ ಲಾಲ್‌ಚಾಮ್ಲಿಯಾನಾ, ಸುಮಾರು 200 ಅಸ್ಸಾಂ ಪೊಲೀಸ್ ಸಿಬ್ಬಂದಿ ತಮ್ಮ ರಾಜ್ಯಕ್ಕೆ ಬಲವಂತವಾಗಿ ಪ್ರವೇಶಿಸಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಗಡಿ ವಿವಾದವೇನು?

ಮಿಜೋರಾಂನ ಮೂರು ಜಿಲ್ಲೆಗಳಾದ ಐಜಾಲ್, ಕೋಲಾಸಿಬ್ ಮತ್ತು ಮಾಮಿತ್ ಅಸ್ಸಾಂನ ಕ್ಯಾಚರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳೊಂದಿಗೆ 164.6 ಕಿ.ಮೀ ಉದ್ದದ ರಾಜ್ಯ ಗಡಿಯನ್ನು ಹಂಚಿಕೊಂಡಿವೆ. ಈ ಪ್ರದೇಶವು ಹಲವು ವರ್ಷಗಳಿಂದ ಘರ್ಷಣೆಯಲ್ಲಿ ಮುಳುಗಿದೆ. ಸ್ಥಳೀಯರು ಮತ್ತು ಭದ್ರತಾ ಪಡೆಗಳು ಒಳನುಸುಳುವಿಕೆ ಬಗ್ಗೆ ಪದೇ ಪದೇ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ. ಗಡಿ ಗುರುತಿಸುವಿಕೆಯನ್ನು ಎದುರಿಸಲು ಮಿಜೋರಾಂ ಸರ್ಕಾರ ಗಡಿ ಆಯೋಗವನ್ನು ರಚಿಸಿದೆ. ಅಸ್ಸಾಂ ರಾಜ್ಯವು ಮೇಘಾಲಯ ಮತ್ತು ಅರುಣಾಚಲ ಪ್ರದೇಶದೊಂದಿಗೆ ಗಡಿ ವಿವಾದಗಳನ್ನು ಹೊಂದಿದೆ.


ಇದನ್ನೂ ಓದಿ: ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...