Homeಕವನಮತ್ತೆ ಹುಟ್ಟಿಬಾ ಅಣ್ಣ ಬಸವಣ್ಣ .......

ಮತ್ತೆ ಹುಟ್ಟಿಬಾ ಅಣ್ಣ ಬಸವಣ್ಣ …….

- Advertisement -
- Advertisement -

ಕತ್ತಲಾಗಿದೆ ಜಗವು
ಜ್ಞಾನದ ದೀವಿಗೆ ಹಿಡಿದು
ಮತ್ತೆ ಹುಟ್ಟಿ ಬಾ
ಅಣ್ಷ ಬಸವಣ್ಣ

ಅಕ್ಷಯ ತೃತೀಯ ಗಳಿಗೆ,
ಒಳ್ಳೆಯ ಗಳಿಗೆಯಾದುದೇ
ನಿನ್ನ ಜನನದಿಂದ,
ಈ ಮಿತಿಗೆ ಮಾಡುವ
ಕಾರ್ಯ ಶುಭವೆಂದು
ಬಡಿದಾಡುವ ಜನ,
ನಿನ್ನ ತತ್ವಗಳನೆಲ್ಲಾ
ಗಾಳಿಗೆ ತೂರಿಹರು,

ತಿಳಿಹೇಳಲು
ಮತ್ತೆ ಹುಟ್ಟಿ ಬಾ
ಅಣ್ಣ ಬಸವಣ್ಣ……

ಇಂದೊಂದು ದಿನ
ಸರಕಾರಿ ರಜೆ ಘೋಷಿಸಿ,
ನಿನ್ನ ಪಟಕೊಂದು
ಹೂವಿನ ಹಾರ ಹಾಕಿ,
ತರಾತುರಿಯ ಮೆರವಣಿಗೆಯಲಿ
ನಿನ್ನ ನೆಡೆದಾಡಿಸಿ,
ಬಾಯ್ತುಂಬಾ
ನಿನ್ನ ಹೊಗಳಿ ಉಂಡು
ಮಲಗುವವರಿಗೆ,

ತಿಳಿಹೇಳಲು
ಮತ್ತೆ ಹುಟ್ಟಿ ಬಾ
ಅಣ್ಣ ಬಸವಣ್ಣ……

ಸಭೆ-ಸಮಾರಂಭಗಳ
ವೇದಿಕೆಯಲಿ,
ಸಹಸ್ರಾರು ಜನರೆದುರಿಗೆ,
ಕಂಠಪಾಠ ಮಾಡಿದ
ನಾಲ್ಕು ವಚನಗಳ ವಾಚಿಸಿ,
ಮರಳಿ ಮಣ್ಣು ತಿನ್ನುವ
ಕೆಲಸ ಮಾಡುವವರ
ಕೆಲ ಜನರಿಗೆ,

ತಿಳಿಹೇಳಲು
ಮತ್ತೆ ಹುಟ್ಟಿ ಬಾ
ಅಣ್ಣ ಬಸವಣ್ಣ……

ನೀನೇ ಒಂದು ಧರ್ಮ
ನಿನ್ನ ಹೆಸರಿನಾ
ಧರ್ಮದಾ ನೆರಳಿನಲಿ,
ಅಧರ್ಮ ಮಾಡುವಾ
ಕೆಲವು ಕದನಗಳು
ಹಗಲಿರುಳು ನೆಡೆಯುತ್ತಿವೆ,

ತಿಳಿಹೇಳಲು
ಮತ್ತೆ ಹುಟ್ಟಿ ಬಾ
ಅಣ್ಣ ಬಸವಣ್ಣ……

ಆಚರಣೆ ಯಾವುದಾದರೇನು,
ವಿಚಾರ ವಿಲ್ಲದೇ ಫಲವೇನು,
ಮೌಢ್ಯಗಳ ದಿಕ್ಕರಿಸಿದ
ಎಲ್ಲರ ಭಾವಗಳ ಭಕುತಿಗೆ
ಮುಕುಟವಿಟ್ಟ ,
ನಿನ್ಮ ಭಾವಕೆ ಬೆಂಕಿ ಹಚ್ಚುವ
ಜನರಿಹರು,

ತಿಳಿಹೇಳಲು
ಮತ್ತೆ ಹುಟ್ಟಿ ಬಾ
ಅಣ್ಣ ಬಸವಣ್ಣ……

ನುಡಿ-ನೆಡೆಯ ಹೆಜ್ಜೆಗಳಾ
ಗುರುತು,
ನಿನ್ನ ವಚನದಾ ಗುಟ್ಟು,
ವಚನ ವಾಚನವ
ಮಾಡುವವರೆಲ್ಲರೂ,
ಪಾಲಿಸುವರಾ ಎಂದು,

ತಿಳಿಹೇಳಲು
ಮತ್ತೆ ಹುಟ್ಟಿ ಬಾ
ಅಣ್ಣ ಬಸವಣ್ಣ……

ಮಾಧ್ಯಮಗಳ ಬರಾಟೆಯಿಲ್ಲ,
ಸಾಮಾಜಿಕ ಜಾಲತಾಣದಾ
ಅಬ್ಬರವಿಲ್ಲ,
ಮೈಕು- ಮೋಟಾರು ಗಾಡಿಗಳ
ಗಲಾಟೆಯಿಲ್ಲದೇ,
ಹೇಗೆ ಸೇರಿಸಿದೆ ಎಣಕೆಯಿಲ್ಲದಾ
ಶರಣ ಗಣಗಳನು,
ಅದರ ಗುಟ್ಟು,

ತಿಳಿಹೇಳಲು
ಮತ್ತೆ ಹುಟ್ಟಿ ಬಾ
ಅಣ್ಣ ಬಸವಣ್ಣ……

ಜಾತಿ-ಧರ್ಮಗಳ ದೊಂಬಿಯಲಿ
ನಿತ್ಯವೂ ಮಾರಣ ಹೋಮ,
ಅಧಿಕಾರದಾ ಹಪಹಪಿಗೆ
ಅಂಧಕಾರ ಮಾಡಿಹರು ನಾಡನ್ನು,
ಅರಿವಿನಾ ದೀವಿಗೆ ಹಿಡಿದು
ನಮ್ಮನ್ನು ರಕ್ಷಿಸಿ,
ಫಾತುಕರ ಮನಕೆ

ತಿಳಿಹೇಳಲು
ಮತ್ತೆ ಹುಟ್ಟಿ ಬಾ
ಅಣ್ಣ ಬಸವಣ್ಣ……

  • ಶೈಲಜಾ ಹಿರೇಮಠ, ಗಂಗಾವತಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...