Homeಮುಖಪುಟವಿದೇಶಿಯರಿಗೆ ಜನಿಸಿದವರು ದೇಶಭಕ್ತನಾಗಲು ಸಾಧ್ಯವಿಲ್ಲ: ಪ್ರಗ್ಯಾ ಠಾಕೂರ್ ವಿವಾದಾತ್ಮಕ ಹೇಳಿಕೆ

ವಿದೇಶಿಯರಿಗೆ ಜನಿಸಿದವರು ದೇಶಭಕ್ತನಾಗಲು ಸಾಧ್ಯವಿಲ್ಲ: ಪ್ರಗ್ಯಾ ಠಾಕೂರ್ ವಿವಾದಾತ್ಮಕ ಹೇಳಿಕೆ

ಪ್ರಗ್ಯಾ ಠಾಕೂರ್ ಸಂಸದ ಸ್ಥಾನಕ್ಕೆ ಅವಮಾನವೆಸಗಿದ್ದಾರೆ. ಆಕೆ ಭಯೋತ್ಪಾದನೆ ಪ್ರಕರಣದಲ್ಲೂ ಭಾಗಿಯಾಗಿದ್ದಳು. ಈಗ ಆಕೆ ತನ್ನ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಿರುವಂತೆ ತೋರುತ್ತಿದೆ. ಬಿಜೆಪಿ ಅವಳಿಗೆ ಚಿಕಿತ್ಸೆ ಕೊಡಿಸಬೇಕು" ಎಂದು ಮಧ್ಯಪ್ರದೇಶದ ಕಾಂಗ್ರೆಸ್ ವಕ್ತಾರ ಜೆಪಿ ಧನೋಪಿಯಾ ಹೇಳಿದ್ದಾರೆ

- Advertisement -
- Advertisement -

ವಿದೇಶಿಯರಿಗೆ ಜನಿಸಿದ ವ್ಯಕ್ತಿಯು ದೇಶಭಕ್ತನಾಗಲು ಸಾಧ್ಯವಿಲ್ಲ ಎಂದು ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಹೆಸರಿಸದೆ ಅವಹೇಳನಕಾರಿಯಾಗಿ ಟೀಕಿಸಿದ್ದಾರೆ.

ಭೋಪಾಲ್‌ನ ಬಿಜೆಪಿ ಸಂಸದೆ ರಾಹುಲ್ ಗಾಂಧಿ ಮತ್ತು ಅವರ ತಾಯಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ದೇಶಪ್ರೇಮವನ್ನು ಪ್ರಶ್ನಿಸಿ ವಿವಾದವೆಬ್ಬಿಸಿದ್ದಾರೆ.

“ಚಾಣಕ್ಯ ಅವರು ಮಣ್ಣಿನ ಮಗನಿಂದ ಮಾತ್ರ ದೇಶವನ್ನು ರಕ್ಷಿಸಲು ಸಾಧ್ಯ ಎಂದು ಹೇಳಿದ್ದರು. ವಿದೇಶಿ ಮಹಿಳೆಗೆ ಜನಿಸಿದ ವ್ಯಕ್ತಿಯು ದೇಶಭಕ್ತನಾಗಲು ಸಾಧ್ಯವಿಲ್ಲ” ಎಂದು ಪ್ರಜ್ಞಾ ಠಾಕೂರ್ ಹೇಳಿದ್ದಾರೆ.

ನೀವು ಎರಡು ದೇಶಗಳ ಪೌರತ್ವವನ್ನು ಹೊಂದಿದ್ದರೆ, ನೀವು ದೇಶಭಕ್ತಿಯ ಯಾವುದೇ ಭಾವನೆಗಳನ್ನು ಹೇಗೆ ಹೊಂದಬಹುದು” ಎಂದು ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷವು ನೈತಿಕತೆ, ನೀತಿ ಮತ್ತು ದೇಶಭಕ್ತಿಯಿಂದ ದೂರವಿದೆ ಎಂದು ಅವರು ಹೇಳಿದ್ದಾರೆ.

ಲಡಾಖ್ ಗಡಿ ವಿವಾದದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಪ್ರಗ್ಯಾರವರ ಟೀಕೆಗಳು, ಅವಹೇಳನಗಳು ಹೊರಬಂದಿವೆ.

“ಪ್ರಗ್ಯಾ ಠಾಕೂರ್ ಸಂಸದ ಸ್ಥಾನಕ್ಕೆ ಅವಮಾನವೆಸಗಿದ್ದಾರೆ. ಆಕೆ ಭಯೋತ್ಪಾದನೆ ಪ್ರಕರಣದಲ್ಲೂ ಭಾಗಿಯಾಗಿದ್ದಳು. ಈಗ ಆಕೆ ತನ್ನ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಿರುವಂತೆ ತೋರುತ್ತಿದೆ. ಬಿಜೆಪಿ ಅವಳಿಗೆ ಚಿಕಿತ್ಸೆ ಕೊಡಿಸಬೇಕು” ಎಂದು ಮಧ್ಯಪ್ರದೇಶದ ಕಾಂಗ್ರೆಸ್ ವಕ್ತಾರ ಜೆಪಿ ಧನೋಪಿಯಾ ಹೇಳಿದ್ದಾರೆ.

ಶುಕ್ರವಾರ ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ “ಪ್ರಧಾನಿಗಳೆ, ನೀವು ಸತ್ಯವನ್ನು ಮಾತನಾಡಬೇಕು. ನೀವು ದೇಶಕ್ಕೆ ಸತ್ಯವನ್ನು ಹೇಳಬೇಕು. ಹಿಂಜರಿಯದಿರಿ. ಯಾರೂ ‘ಯಾವುದೇ ಭೂಮಿಯನ್ನು ತೆಗೆದುಕೊಳ್ಳಲಾಗಿಲ್ಲ’ ಎಂದು ನೀವು ಹೇಳಿದರೆ, ಅದು ಚೀನಾಕ್ಕೆ ಪ್ರಯೋಜನವನ್ನು ನೀಡುತ್ತದೆ. ನಾವು ಅವರೊಂದಿಗೆ ಒಟ್ಟಾಗಿ ಹೋರಾಡಬೇಕು ಮತ್ತು ಅವರನ್ನು ಹೊರಹಾಕಬೇಕು. ಆದ್ದರಿಂದ ನೀವು ಭಯಪಡದೆ ಸತ್ಯವನ್ನು ಮಾತನಾಡಬೇಕು. ‘ಹೌದು, ಚೀನಾ ನಮ್ಮ ಭೂಮಿಯನ್ನು ತೆಗೆದುಕೊಂಡಿದೆ ಮತ್ತು ನಾವು ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಹೇಳಿ. ಇಡೀ ದೇಶ ನಿಮ್ಮೊಂದಿಗೆ ನಿಂತಿದೆ.” ಎಂದು ಹೇಳಿದ್ದರು.


PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶಭಕ್ತಿಯ ಪಾಟವನ್ನು ಭಯೋತ್ಪಾದಕರಿಂದ ಕಲಿಯುವ ಅಗತ್ಯ ಇಲ್ಲ.

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...