Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ'- ಇದು ನಿಜವಾದ ಪ್ರಕಟಣೆಯಲ್ಲ

ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

- Advertisement -
- Advertisement -

‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂದು ಪತ್ರಿಕೆಯಲ್ಲಿ ಪ್ರಕಟಣೆ ಬಂದಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವಿಸ್ತ್ರತವಾಗಿ ಷೇರ್ ಆಗುತ್ತಿದೆ. ಈ ಪ್ರಕಟಣೆಯನ್ನು ಪ್ರಮುಖ ತೆಲುಗು ಸುದ್ದಿವಾಹಿನಿ TV9 ಸಹ ಪ್ರಸಾರಮಾಡಿದೆ. ಅದು ನಿಜವೇ ಎಂಬುದನ್ನು ಈ ಲೇಖನದ ಮೂಲಕ ನೋಡೋಣ.

ಇದೆ ಪತ್ರಿಕೆಯ ಕ್ಲಿಪ್ ಅನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಶಶಿ ತರೂರ್ ಟ್ವೀಟ್‌ಗೆ ಸಾಕಷ್ಟು ಜನ ಇದು ನಿಜವಾದ ಪತ್ರಿಕೆಯ ಕ್ಲಿಪ್ ಅಲ್ಲವೆಂದು, ಇದನ್ನು ಆನ್ಲೈನ್ ಆಪ್ಸ್ ಮೂಲಕ ಸೃಷ್ಟಿ ಮಾಡಿದ್ದಾರೆಂದು ಕಾಮೆಂಟ್ ಮಾಡಿದ್ದಾರೆ.

ಈ ಕಾಮೆಂಟ್ಸ್ ಆಧಾರದ ಮೇಲೆ FACTLY ಸಹ fodey.com ಎಂಬ ಒಂದು  ಗ್ರಾಫಿಕ್ಸ್ ವೆಬ್‌ಸೈಟ್‌ನಲ್ಲಿ ಹುಡುಕಾಡಿತು. ಅದು ಇಂತಹ ಒಂದು ಪತ್ರಿಕೆಯ ಕ್ಲಿಪ್ ಅನ್ನು ತಯಾರು ಮಾಡಿರುವುದು ನಿಜವಾದರೂ ಆ ಕ್ಲಿಪ್‌ನಲ್ಲಿ ‘ಕೋವಿಶೀಲ್ಡ್’ ಗೆ ಬದಲಾಗಿ ‘ಕೋವ್ಯಾಕ್ಸಿನ್’ ಎಂದು ಬರೆದಿರುವುದು ಕಂಡುಬಂದಿದೆ.

ಅಲ್ಲದೆ ಈ ವರ ಬೇಕಾಗಿದ್ದಾನೆ ಕ್ಲಿಪ್‌ ಪ್ರಕಟಣೆಯ ಪಕ್ಕದ ಪ್ಯಾರಾದಲ್ಲಿ ಪ್ರತಿ ಸಾಲಿನ ಮೊದಲ ಅಕ್ಷರಗಳು ಪೋಸ್ಟ್‌‌ನ ಕ್ಲಿಪ್‌ನಲ್ಲಿರುವ ಪ್ಯಾರಾದ ಮೊದಲ ಅಕ್ಷರಗಳು ಒಂದೆ ರೀತಿ ಇರುವುದನ್ನು ನೋಡಬಹದು. ಇದರ ಮೂಲಕ ವೈರಲ್ ಆದ ಕ್ಲಿಪ್ ಈ ವೆಬ್ಸೈಟ್ ಮೂಲಕ ಸೃಷ್ಟಿಯಾಗಿದೆ ಎಂದು ಅರ್ಥಮಾಡಿಕೊಳ್ಳಬಹುದು. ಈ ವೆಬ್‌ಸೈಟ್ ‌ನಲ್ಲಿ ಒಂದು ಸ್ಟಾಂಡರ್ಡ್ ಟೆಂಪ್ಲೇಟ್ ಇರುವುದರಿಂದ ಹೀಗೆ ಪಕ್ಕದ ಪ್ಯಾರಾದಲ್ಲಿಯೂ ಒಂದು ವಿಧವಾದ ಅಕ್ಷರಗಳು ಕಾಣಿಸುತ್ತವೆ. ಇವುಗಳೆಲ್ಲದರಿಂದ ವೈರಲ್ ಆದ ಕ್ಲಿಪ್ ನಿಜವಾದ ಪ್ರಕಟಣೆ ಅಲ್ಲವೆಂದು, ಕೇವಲ ಡಿಜಿಟಲ್ ಆಗಿ ಸೃಷ್ಟಿ ಮಾಡಿರುವುದೆಂದು ಅರ್ಥ ಮಾಡಿಕೊಳ್ಳಬಹುದು.

ಸಾವಿಯೋ ಫಿಗ್ಯೂರೆಡೋ ಎಂಬ ಪೇಸ್‌ಬುಕ್ ಬಳಕೆದಾರ, ಜನರನ್ನು ಕೊರೊನಾ ವ್ಯಾಕ್ಸಿನ್ ತೆಗೆದು ಕೊಳ್ಳಲು ಪ್ರೋತ್ಸಾಹಿಸುವುದಕ್ಕಾಗಿ ಆತನೆ ಹೀಗೆ ಆನ್ಲೈನ್‌ನಲ್ಲಿ ಒಂದು ಹಾಸ್ಯಭರಿತವಾದ ಪ್ರಕಟಣೆಯನ್ನು ತಯಾರು ಮಾಡಿದ್ದೇನೆಂದು, ಅದು ವೈರಲ್ ಆದ್ದರಿಂದ ತನಗೆ ಹೆಚ್ಚು ಕರೆಗಳು ಬರುತ್ತಿವೆಯೆಂದು ಫೇಸ್‌ಬುಕ್ ‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈರಲ್ ಆದ ಕ್ಲಿಪ್‌ನಲ್ಲಿ ಇರುವ ಮೊಬೈಲ್ ನಂಬರ್‌ ಅನ್ನು ಟ್ರೂಕಾಲರ್‌ನಲ್ಲಿ ಚೆಕ್ ಮಾಡಿದಾಗ ಈ ನಂಬರ್ ಸಾವಿಯೋ ಫಿಗ್ಯುರೆಡೋ ಎಂದು ಕಾಣಿಸುತ್ತಿದೆ. ಈ ಆಧಾರಗಳಿಂದ ಈ ವೈರಲ್ ಕ್ಲಿಪ್‌ನ್ನು ಸಾವಿಯೋ ಫಿಗ್ಯೂರೆಡೊ ತಯಾರು ಮಾಡಿರಬಹುದು ಎಂದು ಅರ್ಥವಾಗುತ್ತದೆ.

ಒಟ್ಟಿನಲ್ಲಿ ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂಬುದು ನಿಜವಾದ ಪ್ರಕಟನೆಯಲ್ಲ ಎಂದು ಸಾಬೀತಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...