Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ'- ಇದು ನಿಜವಾದ ಪ್ರಕಟಣೆಯಲ್ಲ

ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

- Advertisement -
- Advertisement -

‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂದು ಪತ್ರಿಕೆಯಲ್ಲಿ ಪ್ರಕಟಣೆ ಬಂದಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವಿಸ್ತ್ರತವಾಗಿ ಷೇರ್ ಆಗುತ್ತಿದೆ. ಈ ಪ್ರಕಟಣೆಯನ್ನು ಪ್ರಮುಖ ತೆಲುಗು ಸುದ್ದಿವಾಹಿನಿ TV9 ಸಹ ಪ್ರಸಾರಮಾಡಿದೆ. ಅದು ನಿಜವೇ ಎಂಬುದನ್ನು ಈ ಲೇಖನದ ಮೂಲಕ ನೋಡೋಣ.

ಇದೆ ಪತ್ರಿಕೆಯ ಕ್ಲಿಪ್ ಅನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಶಶಿ ತರೂರ್ ಟ್ವೀಟ್‌ಗೆ ಸಾಕಷ್ಟು ಜನ ಇದು ನಿಜವಾದ ಪತ್ರಿಕೆಯ ಕ್ಲಿಪ್ ಅಲ್ಲವೆಂದು, ಇದನ್ನು ಆನ್ಲೈನ್ ಆಪ್ಸ್ ಮೂಲಕ ಸೃಷ್ಟಿ ಮಾಡಿದ್ದಾರೆಂದು ಕಾಮೆಂಟ್ ಮಾಡಿದ್ದಾರೆ.

ಈ ಕಾಮೆಂಟ್ಸ್ ಆಧಾರದ ಮೇಲೆ FACTLY ಸಹ fodey.com ಎಂಬ ಒಂದು  ಗ್ರಾಫಿಕ್ಸ್ ವೆಬ್‌ಸೈಟ್‌ನಲ್ಲಿ ಹುಡುಕಾಡಿತು. ಅದು ಇಂತಹ ಒಂದು ಪತ್ರಿಕೆಯ ಕ್ಲಿಪ್ ಅನ್ನು ತಯಾರು ಮಾಡಿರುವುದು ನಿಜವಾದರೂ ಆ ಕ್ಲಿಪ್‌ನಲ್ಲಿ ‘ಕೋವಿಶೀಲ್ಡ್’ ಗೆ ಬದಲಾಗಿ ‘ಕೋವ್ಯಾಕ್ಸಿನ್’ ಎಂದು ಬರೆದಿರುವುದು ಕಂಡುಬಂದಿದೆ.

ಅಲ್ಲದೆ ಈ ವರ ಬೇಕಾಗಿದ್ದಾನೆ ಕ್ಲಿಪ್‌ ಪ್ರಕಟಣೆಯ ಪಕ್ಕದ ಪ್ಯಾರಾದಲ್ಲಿ ಪ್ರತಿ ಸಾಲಿನ ಮೊದಲ ಅಕ್ಷರಗಳು ಪೋಸ್ಟ್‌‌ನ ಕ್ಲಿಪ್‌ನಲ್ಲಿರುವ ಪ್ಯಾರಾದ ಮೊದಲ ಅಕ್ಷರಗಳು ಒಂದೆ ರೀತಿ ಇರುವುದನ್ನು ನೋಡಬಹದು. ಇದರ ಮೂಲಕ ವೈರಲ್ ಆದ ಕ್ಲಿಪ್ ಈ ವೆಬ್ಸೈಟ್ ಮೂಲಕ ಸೃಷ್ಟಿಯಾಗಿದೆ ಎಂದು ಅರ್ಥಮಾಡಿಕೊಳ್ಳಬಹುದು. ಈ ವೆಬ್‌ಸೈಟ್ ‌ನಲ್ಲಿ ಒಂದು ಸ್ಟಾಂಡರ್ಡ್ ಟೆಂಪ್ಲೇಟ್ ಇರುವುದರಿಂದ ಹೀಗೆ ಪಕ್ಕದ ಪ್ಯಾರಾದಲ್ಲಿಯೂ ಒಂದು ವಿಧವಾದ ಅಕ್ಷರಗಳು ಕಾಣಿಸುತ್ತವೆ. ಇವುಗಳೆಲ್ಲದರಿಂದ ವೈರಲ್ ಆದ ಕ್ಲಿಪ್ ನಿಜವಾದ ಪ್ರಕಟಣೆ ಅಲ್ಲವೆಂದು, ಕೇವಲ ಡಿಜಿಟಲ್ ಆಗಿ ಸೃಷ್ಟಿ ಮಾಡಿರುವುದೆಂದು ಅರ್ಥ ಮಾಡಿಕೊಳ್ಳಬಹುದು.

ಸಾವಿಯೋ ಫಿಗ್ಯೂರೆಡೋ ಎಂಬ ಪೇಸ್‌ಬುಕ್ ಬಳಕೆದಾರ, ಜನರನ್ನು ಕೊರೊನಾ ವ್ಯಾಕ್ಸಿನ್ ತೆಗೆದು ಕೊಳ್ಳಲು ಪ್ರೋತ್ಸಾಹಿಸುವುದಕ್ಕಾಗಿ ಆತನೆ ಹೀಗೆ ಆನ್ಲೈನ್‌ನಲ್ಲಿ ಒಂದು ಹಾಸ್ಯಭರಿತವಾದ ಪ್ರಕಟಣೆಯನ್ನು ತಯಾರು ಮಾಡಿದ್ದೇನೆಂದು, ಅದು ವೈರಲ್ ಆದ್ದರಿಂದ ತನಗೆ ಹೆಚ್ಚು ಕರೆಗಳು ಬರುತ್ತಿವೆಯೆಂದು ಫೇಸ್‌ಬುಕ್ ‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈರಲ್ ಆದ ಕ್ಲಿಪ್‌ನಲ್ಲಿ ಇರುವ ಮೊಬೈಲ್ ನಂಬರ್‌ ಅನ್ನು ಟ್ರೂಕಾಲರ್‌ನಲ್ಲಿ ಚೆಕ್ ಮಾಡಿದಾಗ ಈ ನಂಬರ್ ಸಾವಿಯೋ ಫಿಗ್ಯುರೆಡೋ ಎಂದು ಕಾಣಿಸುತ್ತಿದೆ. ಈ ಆಧಾರಗಳಿಂದ ಈ ವೈರಲ್ ಕ್ಲಿಪ್‌ನ್ನು ಸಾವಿಯೋ ಫಿಗ್ಯೂರೆಡೊ ತಯಾರು ಮಾಡಿರಬಹುದು ಎಂದು ಅರ್ಥವಾಗುತ್ತದೆ.

ಒಟ್ಟಿನಲ್ಲಿ ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂಬುದು ನಿಜವಾದ ಪ್ರಕಟನೆಯಲ್ಲ ಎಂದು ಸಾಬೀತಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...