Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ'- ಇದು ನಿಜವಾದ ಪ್ರಕಟಣೆಯಲ್ಲ

ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

- Advertisement -
- Advertisement -

‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂದು ಪತ್ರಿಕೆಯಲ್ಲಿ ಪ್ರಕಟಣೆ ಬಂದಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವಿಸ್ತ್ರತವಾಗಿ ಷೇರ್ ಆಗುತ್ತಿದೆ. ಈ ಪ್ರಕಟಣೆಯನ್ನು ಪ್ರಮುಖ ತೆಲುಗು ಸುದ್ದಿವಾಹಿನಿ TV9 ಸಹ ಪ್ರಸಾರಮಾಡಿದೆ. ಅದು ನಿಜವೇ ಎಂಬುದನ್ನು ಈ ಲೇಖನದ ಮೂಲಕ ನೋಡೋಣ.

ಇದೆ ಪತ್ರಿಕೆಯ ಕ್ಲಿಪ್ ಅನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಶಶಿ ತರೂರ್ ಟ್ವೀಟ್‌ಗೆ ಸಾಕಷ್ಟು ಜನ ಇದು ನಿಜವಾದ ಪತ್ರಿಕೆಯ ಕ್ಲಿಪ್ ಅಲ್ಲವೆಂದು, ಇದನ್ನು ಆನ್ಲೈನ್ ಆಪ್ಸ್ ಮೂಲಕ ಸೃಷ್ಟಿ ಮಾಡಿದ್ದಾರೆಂದು ಕಾಮೆಂಟ್ ಮಾಡಿದ್ದಾರೆ.

ಈ ಕಾಮೆಂಟ್ಸ್ ಆಧಾರದ ಮೇಲೆ FACTLY ಸಹ fodey.com ಎಂಬ ಒಂದು  ಗ್ರಾಫಿಕ್ಸ್ ವೆಬ್‌ಸೈಟ್‌ನಲ್ಲಿ ಹುಡುಕಾಡಿತು. ಅದು ಇಂತಹ ಒಂದು ಪತ್ರಿಕೆಯ ಕ್ಲಿಪ್ ಅನ್ನು ತಯಾರು ಮಾಡಿರುವುದು ನಿಜವಾದರೂ ಆ ಕ್ಲಿಪ್‌ನಲ್ಲಿ ‘ಕೋವಿಶೀಲ್ಡ್’ ಗೆ ಬದಲಾಗಿ ‘ಕೋವ್ಯಾಕ್ಸಿನ್’ ಎಂದು ಬರೆದಿರುವುದು ಕಂಡುಬಂದಿದೆ.

ಅಲ್ಲದೆ ಈ ವರ ಬೇಕಾಗಿದ್ದಾನೆ ಕ್ಲಿಪ್‌ ಪ್ರಕಟಣೆಯ ಪಕ್ಕದ ಪ್ಯಾರಾದಲ್ಲಿ ಪ್ರತಿ ಸಾಲಿನ ಮೊದಲ ಅಕ್ಷರಗಳು ಪೋಸ್ಟ್‌‌ನ ಕ್ಲಿಪ್‌ನಲ್ಲಿರುವ ಪ್ಯಾರಾದ ಮೊದಲ ಅಕ್ಷರಗಳು ಒಂದೆ ರೀತಿ ಇರುವುದನ್ನು ನೋಡಬಹದು. ಇದರ ಮೂಲಕ ವೈರಲ್ ಆದ ಕ್ಲಿಪ್ ಈ ವೆಬ್ಸೈಟ್ ಮೂಲಕ ಸೃಷ್ಟಿಯಾಗಿದೆ ಎಂದು ಅರ್ಥಮಾಡಿಕೊಳ್ಳಬಹುದು. ಈ ವೆಬ್‌ಸೈಟ್ ‌ನಲ್ಲಿ ಒಂದು ಸ್ಟಾಂಡರ್ಡ್ ಟೆಂಪ್ಲೇಟ್ ಇರುವುದರಿಂದ ಹೀಗೆ ಪಕ್ಕದ ಪ್ಯಾರಾದಲ್ಲಿಯೂ ಒಂದು ವಿಧವಾದ ಅಕ್ಷರಗಳು ಕಾಣಿಸುತ್ತವೆ. ಇವುಗಳೆಲ್ಲದರಿಂದ ವೈರಲ್ ಆದ ಕ್ಲಿಪ್ ನಿಜವಾದ ಪ್ರಕಟಣೆ ಅಲ್ಲವೆಂದು, ಕೇವಲ ಡಿಜಿಟಲ್ ಆಗಿ ಸೃಷ್ಟಿ ಮಾಡಿರುವುದೆಂದು ಅರ್ಥ ಮಾಡಿಕೊಳ್ಳಬಹುದು.

ಸಾವಿಯೋ ಫಿಗ್ಯೂರೆಡೋ ಎಂಬ ಪೇಸ್‌ಬುಕ್ ಬಳಕೆದಾರ, ಜನರನ್ನು ಕೊರೊನಾ ವ್ಯಾಕ್ಸಿನ್ ತೆಗೆದು ಕೊಳ್ಳಲು ಪ್ರೋತ್ಸಾಹಿಸುವುದಕ್ಕಾಗಿ ಆತನೆ ಹೀಗೆ ಆನ್ಲೈನ್‌ನಲ್ಲಿ ಒಂದು ಹಾಸ್ಯಭರಿತವಾದ ಪ್ರಕಟಣೆಯನ್ನು ತಯಾರು ಮಾಡಿದ್ದೇನೆಂದು, ಅದು ವೈರಲ್ ಆದ್ದರಿಂದ ತನಗೆ ಹೆಚ್ಚು ಕರೆಗಳು ಬರುತ್ತಿವೆಯೆಂದು ಫೇಸ್‌ಬುಕ್ ‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈರಲ್ ಆದ ಕ್ಲಿಪ್‌ನಲ್ಲಿ ಇರುವ ಮೊಬೈಲ್ ನಂಬರ್‌ ಅನ್ನು ಟ್ರೂಕಾಲರ್‌ನಲ್ಲಿ ಚೆಕ್ ಮಾಡಿದಾಗ ಈ ನಂಬರ್ ಸಾವಿಯೋ ಫಿಗ್ಯುರೆಡೋ ಎಂದು ಕಾಣಿಸುತ್ತಿದೆ. ಈ ಆಧಾರಗಳಿಂದ ಈ ವೈರಲ್ ಕ್ಲಿಪ್‌ನ್ನು ಸಾವಿಯೋ ಫಿಗ್ಯೂರೆಡೊ ತಯಾರು ಮಾಡಿರಬಹುದು ಎಂದು ಅರ್ಥವಾಗುತ್ತದೆ.

ಒಟ್ಟಿನಲ್ಲಿ ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂಬುದು ನಿಜವಾದ ಪ್ರಕಟನೆಯಲ್ಲ ಎಂದು ಸಾಬೀತಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...