Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ'- ಇದು ನಿಜವಾದ ಪ್ರಕಟಣೆಯಲ್ಲ

ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

- Advertisement -
- Advertisement -

‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂದು ಪತ್ರಿಕೆಯಲ್ಲಿ ಪ್ರಕಟಣೆ ಬಂದಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವಿಸ್ತ್ರತವಾಗಿ ಷೇರ್ ಆಗುತ್ತಿದೆ. ಈ ಪ್ರಕಟಣೆಯನ್ನು ಪ್ರಮುಖ ತೆಲುಗು ಸುದ್ದಿವಾಹಿನಿ TV9 ಸಹ ಪ್ರಸಾರಮಾಡಿದೆ. ಅದು ನಿಜವೇ ಎಂಬುದನ್ನು ಈ ಲೇಖನದ ಮೂಲಕ ನೋಡೋಣ.

ಇದೆ ಪತ್ರಿಕೆಯ ಕ್ಲಿಪ್ ಅನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಶಶಿ ತರೂರ್ ಟ್ವೀಟ್‌ಗೆ ಸಾಕಷ್ಟು ಜನ ಇದು ನಿಜವಾದ ಪತ್ರಿಕೆಯ ಕ್ಲಿಪ್ ಅಲ್ಲವೆಂದು, ಇದನ್ನು ಆನ್ಲೈನ್ ಆಪ್ಸ್ ಮೂಲಕ ಸೃಷ್ಟಿ ಮಾಡಿದ್ದಾರೆಂದು ಕಾಮೆಂಟ್ ಮಾಡಿದ್ದಾರೆ.

ಈ ಕಾಮೆಂಟ್ಸ್ ಆಧಾರದ ಮೇಲೆ FACTLY ಸಹ fodey.com ಎಂಬ ಒಂದು  ಗ್ರಾಫಿಕ್ಸ್ ವೆಬ್‌ಸೈಟ್‌ನಲ್ಲಿ ಹುಡುಕಾಡಿತು. ಅದು ಇಂತಹ ಒಂದು ಪತ್ರಿಕೆಯ ಕ್ಲಿಪ್ ಅನ್ನು ತಯಾರು ಮಾಡಿರುವುದು ನಿಜವಾದರೂ ಆ ಕ್ಲಿಪ್‌ನಲ್ಲಿ ‘ಕೋವಿಶೀಲ್ಡ್’ ಗೆ ಬದಲಾಗಿ ‘ಕೋವ್ಯಾಕ್ಸಿನ್’ ಎಂದು ಬರೆದಿರುವುದು ಕಂಡುಬಂದಿದೆ.

ಅಲ್ಲದೆ ಈ ವರ ಬೇಕಾಗಿದ್ದಾನೆ ಕ್ಲಿಪ್‌ ಪ್ರಕಟಣೆಯ ಪಕ್ಕದ ಪ್ಯಾರಾದಲ್ಲಿ ಪ್ರತಿ ಸಾಲಿನ ಮೊದಲ ಅಕ್ಷರಗಳು ಪೋಸ್ಟ್‌‌ನ ಕ್ಲಿಪ್‌ನಲ್ಲಿರುವ ಪ್ಯಾರಾದ ಮೊದಲ ಅಕ್ಷರಗಳು ಒಂದೆ ರೀತಿ ಇರುವುದನ್ನು ನೋಡಬಹದು. ಇದರ ಮೂಲಕ ವೈರಲ್ ಆದ ಕ್ಲಿಪ್ ಈ ವೆಬ್ಸೈಟ್ ಮೂಲಕ ಸೃಷ್ಟಿಯಾಗಿದೆ ಎಂದು ಅರ್ಥಮಾಡಿಕೊಳ್ಳಬಹುದು. ಈ ವೆಬ್‌ಸೈಟ್ ‌ನಲ್ಲಿ ಒಂದು ಸ್ಟಾಂಡರ್ಡ್ ಟೆಂಪ್ಲೇಟ್ ಇರುವುದರಿಂದ ಹೀಗೆ ಪಕ್ಕದ ಪ್ಯಾರಾದಲ್ಲಿಯೂ ಒಂದು ವಿಧವಾದ ಅಕ್ಷರಗಳು ಕಾಣಿಸುತ್ತವೆ. ಇವುಗಳೆಲ್ಲದರಿಂದ ವೈರಲ್ ಆದ ಕ್ಲಿಪ್ ನಿಜವಾದ ಪ್ರಕಟಣೆ ಅಲ್ಲವೆಂದು, ಕೇವಲ ಡಿಜಿಟಲ್ ಆಗಿ ಸೃಷ್ಟಿ ಮಾಡಿರುವುದೆಂದು ಅರ್ಥ ಮಾಡಿಕೊಳ್ಳಬಹುದು.

ಸಾವಿಯೋ ಫಿಗ್ಯೂರೆಡೋ ಎಂಬ ಪೇಸ್‌ಬುಕ್ ಬಳಕೆದಾರ, ಜನರನ್ನು ಕೊರೊನಾ ವ್ಯಾಕ್ಸಿನ್ ತೆಗೆದು ಕೊಳ್ಳಲು ಪ್ರೋತ್ಸಾಹಿಸುವುದಕ್ಕಾಗಿ ಆತನೆ ಹೀಗೆ ಆನ್ಲೈನ್‌ನಲ್ಲಿ ಒಂದು ಹಾಸ್ಯಭರಿತವಾದ ಪ್ರಕಟಣೆಯನ್ನು ತಯಾರು ಮಾಡಿದ್ದೇನೆಂದು, ಅದು ವೈರಲ್ ಆದ್ದರಿಂದ ತನಗೆ ಹೆಚ್ಚು ಕರೆಗಳು ಬರುತ್ತಿವೆಯೆಂದು ಫೇಸ್‌ಬುಕ್ ‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈರಲ್ ಆದ ಕ್ಲಿಪ್‌ನಲ್ಲಿ ಇರುವ ಮೊಬೈಲ್ ನಂಬರ್‌ ಅನ್ನು ಟ್ರೂಕಾಲರ್‌ನಲ್ಲಿ ಚೆಕ್ ಮಾಡಿದಾಗ ಈ ನಂಬರ್ ಸಾವಿಯೋ ಫಿಗ್ಯುರೆಡೋ ಎಂದು ಕಾಣಿಸುತ್ತಿದೆ. ಈ ಆಧಾರಗಳಿಂದ ಈ ವೈರಲ್ ಕ್ಲಿಪ್‌ನ್ನು ಸಾವಿಯೋ ಫಿಗ್ಯೂರೆಡೊ ತಯಾರು ಮಾಡಿರಬಹುದು ಎಂದು ಅರ್ಥವಾಗುತ್ತದೆ.

ಒಟ್ಟಿನಲ್ಲಿ ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂಬುದು ನಿಜವಾದ ಪ್ರಕಟನೆಯಲ್ಲ ಎಂದು ಸಾಬೀತಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...