Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ'- ಇದು ನಿಜವಾದ ಪ್ರಕಟಣೆಯಲ್ಲ

ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

- Advertisement -
- Advertisement -

‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂದು ಪತ್ರಿಕೆಯಲ್ಲಿ ಪ್ರಕಟಣೆ ಬಂದಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವಿಸ್ತ್ರತವಾಗಿ ಷೇರ್ ಆಗುತ್ತಿದೆ. ಈ ಪ್ರಕಟಣೆಯನ್ನು ಪ್ರಮುಖ ತೆಲುಗು ಸುದ್ದಿವಾಹಿನಿ TV9 ಸಹ ಪ್ರಸಾರಮಾಡಿದೆ. ಅದು ನಿಜವೇ ಎಂಬುದನ್ನು ಈ ಲೇಖನದ ಮೂಲಕ ನೋಡೋಣ.

ಇದೆ ಪತ್ರಿಕೆಯ ಕ್ಲಿಪ್ ಅನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಶಶಿ ತರೂರ್ ಟ್ವೀಟ್‌ಗೆ ಸಾಕಷ್ಟು ಜನ ಇದು ನಿಜವಾದ ಪತ್ರಿಕೆಯ ಕ್ಲಿಪ್ ಅಲ್ಲವೆಂದು, ಇದನ್ನು ಆನ್ಲೈನ್ ಆಪ್ಸ್ ಮೂಲಕ ಸೃಷ್ಟಿ ಮಾಡಿದ್ದಾರೆಂದು ಕಾಮೆಂಟ್ ಮಾಡಿದ್ದಾರೆ.

ಈ ಕಾಮೆಂಟ್ಸ್ ಆಧಾರದ ಮೇಲೆ FACTLY ಸಹ fodey.com ಎಂಬ ಒಂದು  ಗ್ರಾಫಿಕ್ಸ್ ವೆಬ್‌ಸೈಟ್‌ನಲ್ಲಿ ಹುಡುಕಾಡಿತು. ಅದು ಇಂತಹ ಒಂದು ಪತ್ರಿಕೆಯ ಕ್ಲಿಪ್ ಅನ್ನು ತಯಾರು ಮಾಡಿರುವುದು ನಿಜವಾದರೂ ಆ ಕ್ಲಿಪ್‌ನಲ್ಲಿ ‘ಕೋವಿಶೀಲ್ಡ್’ ಗೆ ಬದಲಾಗಿ ‘ಕೋವ್ಯಾಕ್ಸಿನ್’ ಎಂದು ಬರೆದಿರುವುದು ಕಂಡುಬಂದಿದೆ.

ಅಲ್ಲದೆ ಈ ವರ ಬೇಕಾಗಿದ್ದಾನೆ ಕ್ಲಿಪ್‌ ಪ್ರಕಟಣೆಯ ಪಕ್ಕದ ಪ್ಯಾರಾದಲ್ಲಿ ಪ್ರತಿ ಸಾಲಿನ ಮೊದಲ ಅಕ್ಷರಗಳು ಪೋಸ್ಟ್‌‌ನ ಕ್ಲಿಪ್‌ನಲ್ಲಿರುವ ಪ್ಯಾರಾದ ಮೊದಲ ಅಕ್ಷರಗಳು ಒಂದೆ ರೀತಿ ಇರುವುದನ್ನು ನೋಡಬಹದು. ಇದರ ಮೂಲಕ ವೈರಲ್ ಆದ ಕ್ಲಿಪ್ ಈ ವೆಬ್ಸೈಟ್ ಮೂಲಕ ಸೃಷ್ಟಿಯಾಗಿದೆ ಎಂದು ಅರ್ಥಮಾಡಿಕೊಳ್ಳಬಹುದು. ಈ ವೆಬ್‌ಸೈಟ್ ‌ನಲ್ಲಿ ಒಂದು ಸ್ಟಾಂಡರ್ಡ್ ಟೆಂಪ್ಲೇಟ್ ಇರುವುದರಿಂದ ಹೀಗೆ ಪಕ್ಕದ ಪ್ಯಾರಾದಲ್ಲಿಯೂ ಒಂದು ವಿಧವಾದ ಅಕ್ಷರಗಳು ಕಾಣಿಸುತ್ತವೆ. ಇವುಗಳೆಲ್ಲದರಿಂದ ವೈರಲ್ ಆದ ಕ್ಲಿಪ್ ನಿಜವಾದ ಪ್ರಕಟಣೆ ಅಲ್ಲವೆಂದು, ಕೇವಲ ಡಿಜಿಟಲ್ ಆಗಿ ಸೃಷ್ಟಿ ಮಾಡಿರುವುದೆಂದು ಅರ್ಥ ಮಾಡಿಕೊಳ್ಳಬಹುದು.

ಸಾವಿಯೋ ಫಿಗ್ಯೂರೆಡೋ ಎಂಬ ಪೇಸ್‌ಬುಕ್ ಬಳಕೆದಾರ, ಜನರನ್ನು ಕೊರೊನಾ ವ್ಯಾಕ್ಸಿನ್ ತೆಗೆದು ಕೊಳ್ಳಲು ಪ್ರೋತ್ಸಾಹಿಸುವುದಕ್ಕಾಗಿ ಆತನೆ ಹೀಗೆ ಆನ್ಲೈನ್‌ನಲ್ಲಿ ಒಂದು ಹಾಸ್ಯಭರಿತವಾದ ಪ್ರಕಟಣೆಯನ್ನು ತಯಾರು ಮಾಡಿದ್ದೇನೆಂದು, ಅದು ವೈರಲ್ ಆದ್ದರಿಂದ ತನಗೆ ಹೆಚ್ಚು ಕರೆಗಳು ಬರುತ್ತಿವೆಯೆಂದು ಫೇಸ್‌ಬುಕ್ ‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈರಲ್ ಆದ ಕ್ಲಿಪ್‌ನಲ್ಲಿ ಇರುವ ಮೊಬೈಲ್ ನಂಬರ್‌ ಅನ್ನು ಟ್ರೂಕಾಲರ್‌ನಲ್ಲಿ ಚೆಕ್ ಮಾಡಿದಾಗ ಈ ನಂಬರ್ ಸಾವಿಯೋ ಫಿಗ್ಯುರೆಡೋ ಎಂದು ಕಾಣಿಸುತ್ತಿದೆ. ಈ ಆಧಾರಗಳಿಂದ ಈ ವೈರಲ್ ಕ್ಲಿಪ್‌ನ್ನು ಸಾವಿಯೋ ಫಿಗ್ಯೂರೆಡೊ ತಯಾರು ಮಾಡಿರಬಹುದು ಎಂದು ಅರ್ಥವಾಗುತ್ತದೆ.

ಒಟ್ಟಿನಲ್ಲಿ ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂಬುದು ನಿಜವಾದ ಪ್ರಕಟನೆಯಲ್ಲ ಎಂದು ಸಾಬೀತಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...