Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ'- ಇದು ನಿಜವಾದ ಪ್ರಕಟಣೆಯಲ್ಲ

ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

- Advertisement -
- Advertisement -

‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂದು ಪತ್ರಿಕೆಯಲ್ಲಿ ಪ್ರಕಟಣೆ ಬಂದಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವಿಸ್ತ್ರತವಾಗಿ ಷೇರ್ ಆಗುತ್ತಿದೆ. ಈ ಪ್ರಕಟಣೆಯನ್ನು ಪ್ರಮುಖ ತೆಲುಗು ಸುದ್ದಿವಾಹಿನಿ TV9 ಸಹ ಪ್ರಸಾರಮಾಡಿದೆ. ಅದು ನಿಜವೇ ಎಂಬುದನ್ನು ಈ ಲೇಖನದ ಮೂಲಕ ನೋಡೋಣ.

ಇದೆ ಪತ್ರಿಕೆಯ ಕ್ಲಿಪ್ ಅನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಶಶಿ ತರೂರ್ ಟ್ವೀಟ್‌ಗೆ ಸಾಕಷ್ಟು ಜನ ಇದು ನಿಜವಾದ ಪತ್ರಿಕೆಯ ಕ್ಲಿಪ್ ಅಲ್ಲವೆಂದು, ಇದನ್ನು ಆನ್ಲೈನ್ ಆಪ್ಸ್ ಮೂಲಕ ಸೃಷ್ಟಿ ಮಾಡಿದ್ದಾರೆಂದು ಕಾಮೆಂಟ್ ಮಾಡಿದ್ದಾರೆ.

ಈ ಕಾಮೆಂಟ್ಸ್ ಆಧಾರದ ಮೇಲೆ FACTLY ಸಹ fodey.com ಎಂಬ ಒಂದು  ಗ್ರಾಫಿಕ್ಸ್ ವೆಬ್‌ಸೈಟ್‌ನಲ್ಲಿ ಹುಡುಕಾಡಿತು. ಅದು ಇಂತಹ ಒಂದು ಪತ್ರಿಕೆಯ ಕ್ಲಿಪ್ ಅನ್ನು ತಯಾರು ಮಾಡಿರುವುದು ನಿಜವಾದರೂ ಆ ಕ್ಲಿಪ್‌ನಲ್ಲಿ ‘ಕೋವಿಶೀಲ್ಡ್’ ಗೆ ಬದಲಾಗಿ ‘ಕೋವ್ಯಾಕ್ಸಿನ್’ ಎಂದು ಬರೆದಿರುವುದು ಕಂಡುಬಂದಿದೆ.

ಅಲ್ಲದೆ ಈ ವರ ಬೇಕಾಗಿದ್ದಾನೆ ಕ್ಲಿಪ್‌ ಪ್ರಕಟಣೆಯ ಪಕ್ಕದ ಪ್ಯಾರಾದಲ್ಲಿ ಪ್ರತಿ ಸಾಲಿನ ಮೊದಲ ಅಕ್ಷರಗಳು ಪೋಸ್ಟ್‌‌ನ ಕ್ಲಿಪ್‌ನಲ್ಲಿರುವ ಪ್ಯಾರಾದ ಮೊದಲ ಅಕ್ಷರಗಳು ಒಂದೆ ರೀತಿ ಇರುವುದನ್ನು ನೋಡಬಹದು. ಇದರ ಮೂಲಕ ವೈರಲ್ ಆದ ಕ್ಲಿಪ್ ಈ ವೆಬ್ಸೈಟ್ ಮೂಲಕ ಸೃಷ್ಟಿಯಾಗಿದೆ ಎಂದು ಅರ್ಥಮಾಡಿಕೊಳ್ಳಬಹುದು. ಈ ವೆಬ್‌ಸೈಟ್ ‌ನಲ್ಲಿ ಒಂದು ಸ್ಟಾಂಡರ್ಡ್ ಟೆಂಪ್ಲೇಟ್ ಇರುವುದರಿಂದ ಹೀಗೆ ಪಕ್ಕದ ಪ್ಯಾರಾದಲ್ಲಿಯೂ ಒಂದು ವಿಧವಾದ ಅಕ್ಷರಗಳು ಕಾಣಿಸುತ್ತವೆ. ಇವುಗಳೆಲ್ಲದರಿಂದ ವೈರಲ್ ಆದ ಕ್ಲಿಪ್ ನಿಜವಾದ ಪ್ರಕಟಣೆ ಅಲ್ಲವೆಂದು, ಕೇವಲ ಡಿಜಿಟಲ್ ಆಗಿ ಸೃಷ್ಟಿ ಮಾಡಿರುವುದೆಂದು ಅರ್ಥ ಮಾಡಿಕೊಳ್ಳಬಹುದು.

ಸಾವಿಯೋ ಫಿಗ್ಯೂರೆಡೋ ಎಂಬ ಪೇಸ್‌ಬುಕ್ ಬಳಕೆದಾರ, ಜನರನ್ನು ಕೊರೊನಾ ವ್ಯಾಕ್ಸಿನ್ ತೆಗೆದು ಕೊಳ್ಳಲು ಪ್ರೋತ್ಸಾಹಿಸುವುದಕ್ಕಾಗಿ ಆತನೆ ಹೀಗೆ ಆನ್ಲೈನ್‌ನಲ್ಲಿ ಒಂದು ಹಾಸ್ಯಭರಿತವಾದ ಪ್ರಕಟಣೆಯನ್ನು ತಯಾರು ಮಾಡಿದ್ದೇನೆಂದು, ಅದು ವೈರಲ್ ಆದ್ದರಿಂದ ತನಗೆ ಹೆಚ್ಚು ಕರೆಗಳು ಬರುತ್ತಿವೆಯೆಂದು ಫೇಸ್‌ಬುಕ್ ‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈರಲ್ ಆದ ಕ್ಲಿಪ್‌ನಲ್ಲಿ ಇರುವ ಮೊಬೈಲ್ ನಂಬರ್‌ ಅನ್ನು ಟ್ರೂಕಾಲರ್‌ನಲ್ಲಿ ಚೆಕ್ ಮಾಡಿದಾಗ ಈ ನಂಬರ್ ಸಾವಿಯೋ ಫಿಗ್ಯುರೆಡೋ ಎಂದು ಕಾಣಿಸುತ್ತಿದೆ. ಈ ಆಧಾರಗಳಿಂದ ಈ ವೈರಲ್ ಕ್ಲಿಪ್‌ನ್ನು ಸಾವಿಯೋ ಫಿಗ್ಯೂರೆಡೊ ತಯಾರು ಮಾಡಿರಬಹುದು ಎಂದು ಅರ್ಥವಾಗುತ್ತದೆ.

ಒಟ್ಟಿನಲ್ಲಿ ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂಬುದು ನಿಜವಾದ ಪ್ರಕಟನೆಯಲ್ಲ ಎಂದು ಸಾಬೀತಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...