Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ'- ಇದು ನಿಜವಾದ ಪ್ರಕಟಣೆಯಲ್ಲ

ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

- Advertisement -
- Advertisement -

‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂದು ಪತ್ರಿಕೆಯಲ್ಲಿ ಪ್ರಕಟಣೆ ಬಂದಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವಿಸ್ತ್ರತವಾಗಿ ಷೇರ್ ಆಗುತ್ತಿದೆ. ಈ ಪ್ರಕಟಣೆಯನ್ನು ಪ್ರಮುಖ ತೆಲುಗು ಸುದ್ದಿವಾಹಿನಿ TV9 ಸಹ ಪ್ರಸಾರಮಾಡಿದೆ. ಅದು ನಿಜವೇ ಎಂಬುದನ್ನು ಈ ಲೇಖನದ ಮೂಲಕ ನೋಡೋಣ.

ಇದೆ ಪತ್ರಿಕೆಯ ಕ್ಲಿಪ್ ಅನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಶಶಿ ತರೂರ್ ಟ್ವೀಟ್‌ಗೆ ಸಾಕಷ್ಟು ಜನ ಇದು ನಿಜವಾದ ಪತ್ರಿಕೆಯ ಕ್ಲಿಪ್ ಅಲ್ಲವೆಂದು, ಇದನ್ನು ಆನ್ಲೈನ್ ಆಪ್ಸ್ ಮೂಲಕ ಸೃಷ್ಟಿ ಮಾಡಿದ್ದಾರೆಂದು ಕಾಮೆಂಟ್ ಮಾಡಿದ್ದಾರೆ.

ಈ ಕಾಮೆಂಟ್ಸ್ ಆಧಾರದ ಮೇಲೆ FACTLY ಸಹ fodey.com ಎಂಬ ಒಂದು  ಗ್ರಾಫಿಕ್ಸ್ ವೆಬ್‌ಸೈಟ್‌ನಲ್ಲಿ ಹುಡುಕಾಡಿತು. ಅದು ಇಂತಹ ಒಂದು ಪತ್ರಿಕೆಯ ಕ್ಲಿಪ್ ಅನ್ನು ತಯಾರು ಮಾಡಿರುವುದು ನಿಜವಾದರೂ ಆ ಕ್ಲಿಪ್‌ನಲ್ಲಿ ‘ಕೋವಿಶೀಲ್ಡ್’ ಗೆ ಬದಲಾಗಿ ‘ಕೋವ್ಯಾಕ್ಸಿನ್’ ಎಂದು ಬರೆದಿರುವುದು ಕಂಡುಬಂದಿದೆ.

ಅಲ್ಲದೆ ಈ ವರ ಬೇಕಾಗಿದ್ದಾನೆ ಕ್ಲಿಪ್‌ ಪ್ರಕಟಣೆಯ ಪಕ್ಕದ ಪ್ಯಾರಾದಲ್ಲಿ ಪ್ರತಿ ಸಾಲಿನ ಮೊದಲ ಅಕ್ಷರಗಳು ಪೋಸ್ಟ್‌‌ನ ಕ್ಲಿಪ್‌ನಲ್ಲಿರುವ ಪ್ಯಾರಾದ ಮೊದಲ ಅಕ್ಷರಗಳು ಒಂದೆ ರೀತಿ ಇರುವುದನ್ನು ನೋಡಬಹದು. ಇದರ ಮೂಲಕ ವೈರಲ್ ಆದ ಕ್ಲಿಪ್ ಈ ವೆಬ್ಸೈಟ್ ಮೂಲಕ ಸೃಷ್ಟಿಯಾಗಿದೆ ಎಂದು ಅರ್ಥಮಾಡಿಕೊಳ್ಳಬಹುದು. ಈ ವೆಬ್‌ಸೈಟ್ ‌ನಲ್ಲಿ ಒಂದು ಸ್ಟಾಂಡರ್ಡ್ ಟೆಂಪ್ಲೇಟ್ ಇರುವುದರಿಂದ ಹೀಗೆ ಪಕ್ಕದ ಪ್ಯಾರಾದಲ್ಲಿಯೂ ಒಂದು ವಿಧವಾದ ಅಕ್ಷರಗಳು ಕಾಣಿಸುತ್ತವೆ. ಇವುಗಳೆಲ್ಲದರಿಂದ ವೈರಲ್ ಆದ ಕ್ಲಿಪ್ ನಿಜವಾದ ಪ್ರಕಟಣೆ ಅಲ್ಲವೆಂದು, ಕೇವಲ ಡಿಜಿಟಲ್ ಆಗಿ ಸೃಷ್ಟಿ ಮಾಡಿರುವುದೆಂದು ಅರ್ಥ ಮಾಡಿಕೊಳ್ಳಬಹುದು.

ಸಾವಿಯೋ ಫಿಗ್ಯೂರೆಡೋ ಎಂಬ ಪೇಸ್‌ಬುಕ್ ಬಳಕೆದಾರ, ಜನರನ್ನು ಕೊರೊನಾ ವ್ಯಾಕ್ಸಿನ್ ತೆಗೆದು ಕೊಳ್ಳಲು ಪ್ರೋತ್ಸಾಹಿಸುವುದಕ್ಕಾಗಿ ಆತನೆ ಹೀಗೆ ಆನ್ಲೈನ್‌ನಲ್ಲಿ ಒಂದು ಹಾಸ್ಯಭರಿತವಾದ ಪ್ರಕಟಣೆಯನ್ನು ತಯಾರು ಮಾಡಿದ್ದೇನೆಂದು, ಅದು ವೈರಲ್ ಆದ್ದರಿಂದ ತನಗೆ ಹೆಚ್ಚು ಕರೆಗಳು ಬರುತ್ತಿವೆಯೆಂದು ಫೇಸ್‌ಬುಕ್ ‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈರಲ್ ಆದ ಕ್ಲಿಪ್‌ನಲ್ಲಿ ಇರುವ ಮೊಬೈಲ್ ನಂಬರ್‌ ಅನ್ನು ಟ್ರೂಕಾಲರ್‌ನಲ್ಲಿ ಚೆಕ್ ಮಾಡಿದಾಗ ಈ ನಂಬರ್ ಸಾವಿಯೋ ಫಿಗ್ಯುರೆಡೋ ಎಂದು ಕಾಣಿಸುತ್ತಿದೆ. ಈ ಆಧಾರಗಳಿಂದ ಈ ವೈರಲ್ ಕ್ಲಿಪ್‌ನ್ನು ಸಾವಿಯೋ ಫಿಗ್ಯೂರೆಡೊ ತಯಾರು ಮಾಡಿರಬಹುದು ಎಂದು ಅರ್ಥವಾಗುತ್ತದೆ.

ಒಟ್ಟಿನಲ್ಲಿ ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂಬುದು ನಿಜವಾದ ಪ್ರಕಟನೆಯಲ್ಲ ಎಂದು ಸಾಬೀತಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...