Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ'- ಇದು ನಿಜವಾದ ಪ್ರಕಟಣೆಯಲ್ಲ

ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

- Advertisement -
- Advertisement -

‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂದು ಪತ್ರಿಕೆಯಲ್ಲಿ ಪ್ರಕಟಣೆ ಬಂದಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವಿಸ್ತ್ರತವಾಗಿ ಷೇರ್ ಆಗುತ್ತಿದೆ. ಈ ಪ್ರಕಟಣೆಯನ್ನು ಪ್ರಮುಖ ತೆಲುಗು ಸುದ್ದಿವಾಹಿನಿ TV9 ಸಹ ಪ್ರಸಾರಮಾಡಿದೆ. ಅದು ನಿಜವೇ ಎಂಬುದನ್ನು ಈ ಲೇಖನದ ಮೂಲಕ ನೋಡೋಣ.

ಇದೆ ಪತ್ರಿಕೆಯ ಕ್ಲಿಪ್ ಅನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಶಶಿ ತರೂರ್ ಟ್ವೀಟ್‌ಗೆ ಸಾಕಷ್ಟು ಜನ ಇದು ನಿಜವಾದ ಪತ್ರಿಕೆಯ ಕ್ಲಿಪ್ ಅಲ್ಲವೆಂದು, ಇದನ್ನು ಆನ್ಲೈನ್ ಆಪ್ಸ್ ಮೂಲಕ ಸೃಷ್ಟಿ ಮಾಡಿದ್ದಾರೆಂದು ಕಾಮೆಂಟ್ ಮಾಡಿದ್ದಾರೆ.

ಈ ಕಾಮೆಂಟ್ಸ್ ಆಧಾರದ ಮೇಲೆ FACTLY ಸಹ fodey.com ಎಂಬ ಒಂದು  ಗ್ರಾಫಿಕ್ಸ್ ವೆಬ್‌ಸೈಟ್‌ನಲ್ಲಿ ಹುಡುಕಾಡಿತು. ಅದು ಇಂತಹ ಒಂದು ಪತ್ರಿಕೆಯ ಕ್ಲಿಪ್ ಅನ್ನು ತಯಾರು ಮಾಡಿರುವುದು ನಿಜವಾದರೂ ಆ ಕ್ಲಿಪ್‌ನಲ್ಲಿ ‘ಕೋವಿಶೀಲ್ಡ್’ ಗೆ ಬದಲಾಗಿ ‘ಕೋವ್ಯಾಕ್ಸಿನ್’ ಎಂದು ಬರೆದಿರುವುದು ಕಂಡುಬಂದಿದೆ.

ಅಲ್ಲದೆ ಈ ವರ ಬೇಕಾಗಿದ್ದಾನೆ ಕ್ಲಿಪ್‌ ಪ್ರಕಟಣೆಯ ಪಕ್ಕದ ಪ್ಯಾರಾದಲ್ಲಿ ಪ್ರತಿ ಸಾಲಿನ ಮೊದಲ ಅಕ್ಷರಗಳು ಪೋಸ್ಟ್‌‌ನ ಕ್ಲಿಪ್‌ನಲ್ಲಿರುವ ಪ್ಯಾರಾದ ಮೊದಲ ಅಕ್ಷರಗಳು ಒಂದೆ ರೀತಿ ಇರುವುದನ್ನು ನೋಡಬಹದು. ಇದರ ಮೂಲಕ ವೈರಲ್ ಆದ ಕ್ಲಿಪ್ ಈ ವೆಬ್ಸೈಟ್ ಮೂಲಕ ಸೃಷ್ಟಿಯಾಗಿದೆ ಎಂದು ಅರ್ಥಮಾಡಿಕೊಳ್ಳಬಹುದು. ಈ ವೆಬ್‌ಸೈಟ್ ‌ನಲ್ಲಿ ಒಂದು ಸ್ಟಾಂಡರ್ಡ್ ಟೆಂಪ್ಲೇಟ್ ಇರುವುದರಿಂದ ಹೀಗೆ ಪಕ್ಕದ ಪ್ಯಾರಾದಲ್ಲಿಯೂ ಒಂದು ವಿಧವಾದ ಅಕ್ಷರಗಳು ಕಾಣಿಸುತ್ತವೆ. ಇವುಗಳೆಲ್ಲದರಿಂದ ವೈರಲ್ ಆದ ಕ್ಲಿಪ್ ನಿಜವಾದ ಪ್ರಕಟಣೆ ಅಲ್ಲವೆಂದು, ಕೇವಲ ಡಿಜಿಟಲ್ ಆಗಿ ಸೃಷ್ಟಿ ಮಾಡಿರುವುದೆಂದು ಅರ್ಥ ಮಾಡಿಕೊಳ್ಳಬಹುದು.

ಸಾವಿಯೋ ಫಿಗ್ಯೂರೆಡೋ ಎಂಬ ಪೇಸ್‌ಬುಕ್ ಬಳಕೆದಾರ, ಜನರನ್ನು ಕೊರೊನಾ ವ್ಯಾಕ್ಸಿನ್ ತೆಗೆದು ಕೊಳ್ಳಲು ಪ್ರೋತ್ಸಾಹಿಸುವುದಕ್ಕಾಗಿ ಆತನೆ ಹೀಗೆ ಆನ್ಲೈನ್‌ನಲ್ಲಿ ಒಂದು ಹಾಸ್ಯಭರಿತವಾದ ಪ್ರಕಟಣೆಯನ್ನು ತಯಾರು ಮಾಡಿದ್ದೇನೆಂದು, ಅದು ವೈರಲ್ ಆದ್ದರಿಂದ ತನಗೆ ಹೆಚ್ಚು ಕರೆಗಳು ಬರುತ್ತಿವೆಯೆಂದು ಫೇಸ್‌ಬುಕ್ ‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈರಲ್ ಆದ ಕ್ಲಿಪ್‌ನಲ್ಲಿ ಇರುವ ಮೊಬೈಲ್ ನಂಬರ್‌ ಅನ್ನು ಟ್ರೂಕಾಲರ್‌ನಲ್ಲಿ ಚೆಕ್ ಮಾಡಿದಾಗ ಈ ನಂಬರ್ ಸಾವಿಯೋ ಫಿಗ್ಯುರೆಡೋ ಎಂದು ಕಾಣಿಸುತ್ತಿದೆ. ಈ ಆಧಾರಗಳಿಂದ ಈ ವೈರಲ್ ಕ್ಲಿಪ್‌ನ್ನು ಸಾವಿಯೋ ಫಿಗ್ಯೂರೆಡೊ ತಯಾರು ಮಾಡಿರಬಹುದು ಎಂದು ಅರ್ಥವಾಗುತ್ತದೆ.

ಒಟ್ಟಿನಲ್ಲಿ ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂಬುದು ನಿಜವಾದ ಪ್ರಕಟನೆಯಲ್ಲ ಎಂದು ಸಾಬೀತಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...