Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ'- ಇದು ನಿಜವಾದ ಪ್ರಕಟಣೆಯಲ್ಲ

ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

- Advertisement -
- Advertisement -

‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂದು ಪತ್ರಿಕೆಯಲ್ಲಿ ಪ್ರಕಟಣೆ ಬಂದಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವಿಸ್ತ್ರತವಾಗಿ ಷೇರ್ ಆಗುತ್ತಿದೆ. ಈ ಪ್ರಕಟಣೆಯನ್ನು ಪ್ರಮುಖ ತೆಲುಗು ಸುದ್ದಿವಾಹಿನಿ TV9 ಸಹ ಪ್ರಸಾರಮಾಡಿದೆ. ಅದು ನಿಜವೇ ಎಂಬುದನ್ನು ಈ ಲೇಖನದ ಮೂಲಕ ನೋಡೋಣ.

ಇದೆ ಪತ್ರಿಕೆಯ ಕ್ಲಿಪ್ ಅನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಶಶಿ ತರೂರ್ ಟ್ವೀಟ್‌ಗೆ ಸಾಕಷ್ಟು ಜನ ಇದು ನಿಜವಾದ ಪತ್ರಿಕೆಯ ಕ್ಲಿಪ್ ಅಲ್ಲವೆಂದು, ಇದನ್ನು ಆನ್ಲೈನ್ ಆಪ್ಸ್ ಮೂಲಕ ಸೃಷ್ಟಿ ಮಾಡಿದ್ದಾರೆಂದು ಕಾಮೆಂಟ್ ಮಾಡಿದ್ದಾರೆ.

ಈ ಕಾಮೆಂಟ್ಸ್ ಆಧಾರದ ಮೇಲೆ FACTLY ಸಹ fodey.com ಎಂಬ ಒಂದು  ಗ್ರಾಫಿಕ್ಸ್ ವೆಬ್‌ಸೈಟ್‌ನಲ್ಲಿ ಹುಡುಕಾಡಿತು. ಅದು ಇಂತಹ ಒಂದು ಪತ್ರಿಕೆಯ ಕ್ಲಿಪ್ ಅನ್ನು ತಯಾರು ಮಾಡಿರುವುದು ನಿಜವಾದರೂ ಆ ಕ್ಲಿಪ್‌ನಲ್ಲಿ ‘ಕೋವಿಶೀಲ್ಡ್’ ಗೆ ಬದಲಾಗಿ ‘ಕೋವ್ಯಾಕ್ಸಿನ್’ ಎಂದು ಬರೆದಿರುವುದು ಕಂಡುಬಂದಿದೆ.

ಅಲ್ಲದೆ ಈ ವರ ಬೇಕಾಗಿದ್ದಾನೆ ಕ್ಲಿಪ್‌ ಪ್ರಕಟಣೆಯ ಪಕ್ಕದ ಪ್ಯಾರಾದಲ್ಲಿ ಪ್ರತಿ ಸಾಲಿನ ಮೊದಲ ಅಕ್ಷರಗಳು ಪೋಸ್ಟ್‌‌ನ ಕ್ಲಿಪ್‌ನಲ್ಲಿರುವ ಪ್ಯಾರಾದ ಮೊದಲ ಅಕ್ಷರಗಳು ಒಂದೆ ರೀತಿ ಇರುವುದನ್ನು ನೋಡಬಹದು. ಇದರ ಮೂಲಕ ವೈರಲ್ ಆದ ಕ್ಲಿಪ್ ಈ ವೆಬ್ಸೈಟ್ ಮೂಲಕ ಸೃಷ್ಟಿಯಾಗಿದೆ ಎಂದು ಅರ್ಥಮಾಡಿಕೊಳ್ಳಬಹುದು. ಈ ವೆಬ್‌ಸೈಟ್ ‌ನಲ್ಲಿ ಒಂದು ಸ್ಟಾಂಡರ್ಡ್ ಟೆಂಪ್ಲೇಟ್ ಇರುವುದರಿಂದ ಹೀಗೆ ಪಕ್ಕದ ಪ್ಯಾರಾದಲ್ಲಿಯೂ ಒಂದು ವಿಧವಾದ ಅಕ್ಷರಗಳು ಕಾಣಿಸುತ್ತವೆ. ಇವುಗಳೆಲ್ಲದರಿಂದ ವೈರಲ್ ಆದ ಕ್ಲಿಪ್ ನಿಜವಾದ ಪ್ರಕಟಣೆ ಅಲ್ಲವೆಂದು, ಕೇವಲ ಡಿಜಿಟಲ್ ಆಗಿ ಸೃಷ್ಟಿ ಮಾಡಿರುವುದೆಂದು ಅರ್ಥ ಮಾಡಿಕೊಳ್ಳಬಹುದು.

ಸಾವಿಯೋ ಫಿಗ್ಯೂರೆಡೋ ಎಂಬ ಪೇಸ್‌ಬುಕ್ ಬಳಕೆದಾರ, ಜನರನ್ನು ಕೊರೊನಾ ವ್ಯಾಕ್ಸಿನ್ ತೆಗೆದು ಕೊಳ್ಳಲು ಪ್ರೋತ್ಸಾಹಿಸುವುದಕ್ಕಾಗಿ ಆತನೆ ಹೀಗೆ ಆನ್ಲೈನ್‌ನಲ್ಲಿ ಒಂದು ಹಾಸ್ಯಭರಿತವಾದ ಪ್ರಕಟಣೆಯನ್ನು ತಯಾರು ಮಾಡಿದ್ದೇನೆಂದು, ಅದು ವೈರಲ್ ಆದ್ದರಿಂದ ತನಗೆ ಹೆಚ್ಚು ಕರೆಗಳು ಬರುತ್ತಿವೆಯೆಂದು ಫೇಸ್‌ಬುಕ್ ‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈರಲ್ ಆದ ಕ್ಲಿಪ್‌ನಲ್ಲಿ ಇರುವ ಮೊಬೈಲ್ ನಂಬರ್‌ ಅನ್ನು ಟ್ರೂಕಾಲರ್‌ನಲ್ಲಿ ಚೆಕ್ ಮಾಡಿದಾಗ ಈ ನಂಬರ್ ಸಾವಿಯೋ ಫಿಗ್ಯುರೆಡೋ ಎಂದು ಕಾಣಿಸುತ್ತಿದೆ. ಈ ಆಧಾರಗಳಿಂದ ಈ ವೈರಲ್ ಕ್ಲಿಪ್‌ನ್ನು ಸಾವಿಯೋ ಫಿಗ್ಯೂರೆಡೊ ತಯಾರು ಮಾಡಿರಬಹುದು ಎಂದು ಅರ್ಥವಾಗುತ್ತದೆ.

ಒಟ್ಟಿನಲ್ಲಿ ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂಬುದು ನಿಜವಾದ ಪ್ರಕಟನೆಯಲ್ಲ ಎಂದು ಸಾಬೀತಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....