Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ'- ಇದು ನಿಜವಾದ ಪ್ರಕಟಣೆಯಲ್ಲ

ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

- Advertisement -
- Advertisement -

‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂದು ಪತ್ರಿಕೆಯಲ್ಲಿ ಪ್ರಕಟಣೆ ಬಂದಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವಿಸ್ತ್ರತವಾಗಿ ಷೇರ್ ಆಗುತ್ತಿದೆ. ಈ ಪ್ರಕಟಣೆಯನ್ನು ಪ್ರಮುಖ ತೆಲುಗು ಸುದ್ದಿವಾಹಿನಿ TV9 ಸಹ ಪ್ರಸಾರಮಾಡಿದೆ. ಅದು ನಿಜವೇ ಎಂಬುದನ್ನು ಈ ಲೇಖನದ ಮೂಲಕ ನೋಡೋಣ.

ಇದೆ ಪತ್ರಿಕೆಯ ಕ್ಲಿಪ್ ಅನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಶಶಿ ತರೂರ್ ಟ್ವೀಟ್‌ಗೆ ಸಾಕಷ್ಟು ಜನ ಇದು ನಿಜವಾದ ಪತ್ರಿಕೆಯ ಕ್ಲಿಪ್ ಅಲ್ಲವೆಂದು, ಇದನ್ನು ಆನ್ಲೈನ್ ಆಪ್ಸ್ ಮೂಲಕ ಸೃಷ್ಟಿ ಮಾಡಿದ್ದಾರೆಂದು ಕಾಮೆಂಟ್ ಮಾಡಿದ್ದಾರೆ.

ಈ ಕಾಮೆಂಟ್ಸ್ ಆಧಾರದ ಮೇಲೆ FACTLY ಸಹ fodey.com ಎಂಬ ಒಂದು  ಗ್ರಾಫಿಕ್ಸ್ ವೆಬ್‌ಸೈಟ್‌ನಲ್ಲಿ ಹುಡುಕಾಡಿತು. ಅದು ಇಂತಹ ಒಂದು ಪತ್ರಿಕೆಯ ಕ್ಲಿಪ್ ಅನ್ನು ತಯಾರು ಮಾಡಿರುವುದು ನಿಜವಾದರೂ ಆ ಕ್ಲಿಪ್‌ನಲ್ಲಿ ‘ಕೋವಿಶೀಲ್ಡ್’ ಗೆ ಬದಲಾಗಿ ‘ಕೋವ್ಯಾಕ್ಸಿನ್’ ಎಂದು ಬರೆದಿರುವುದು ಕಂಡುಬಂದಿದೆ.

ಅಲ್ಲದೆ ಈ ವರ ಬೇಕಾಗಿದ್ದಾನೆ ಕ್ಲಿಪ್‌ ಪ್ರಕಟಣೆಯ ಪಕ್ಕದ ಪ್ಯಾರಾದಲ್ಲಿ ಪ್ರತಿ ಸಾಲಿನ ಮೊದಲ ಅಕ್ಷರಗಳು ಪೋಸ್ಟ್‌‌ನ ಕ್ಲಿಪ್‌ನಲ್ಲಿರುವ ಪ್ಯಾರಾದ ಮೊದಲ ಅಕ್ಷರಗಳು ಒಂದೆ ರೀತಿ ಇರುವುದನ್ನು ನೋಡಬಹದು. ಇದರ ಮೂಲಕ ವೈರಲ್ ಆದ ಕ್ಲಿಪ್ ಈ ವೆಬ್ಸೈಟ್ ಮೂಲಕ ಸೃಷ್ಟಿಯಾಗಿದೆ ಎಂದು ಅರ್ಥಮಾಡಿಕೊಳ್ಳಬಹುದು. ಈ ವೆಬ್‌ಸೈಟ್ ‌ನಲ್ಲಿ ಒಂದು ಸ್ಟಾಂಡರ್ಡ್ ಟೆಂಪ್ಲೇಟ್ ಇರುವುದರಿಂದ ಹೀಗೆ ಪಕ್ಕದ ಪ್ಯಾರಾದಲ್ಲಿಯೂ ಒಂದು ವಿಧವಾದ ಅಕ್ಷರಗಳು ಕಾಣಿಸುತ್ತವೆ. ಇವುಗಳೆಲ್ಲದರಿಂದ ವೈರಲ್ ಆದ ಕ್ಲಿಪ್ ನಿಜವಾದ ಪ್ರಕಟಣೆ ಅಲ್ಲವೆಂದು, ಕೇವಲ ಡಿಜಿಟಲ್ ಆಗಿ ಸೃಷ್ಟಿ ಮಾಡಿರುವುದೆಂದು ಅರ್ಥ ಮಾಡಿಕೊಳ್ಳಬಹುದು.

ಸಾವಿಯೋ ಫಿಗ್ಯೂರೆಡೋ ಎಂಬ ಪೇಸ್‌ಬುಕ್ ಬಳಕೆದಾರ, ಜನರನ್ನು ಕೊರೊನಾ ವ್ಯಾಕ್ಸಿನ್ ತೆಗೆದು ಕೊಳ್ಳಲು ಪ್ರೋತ್ಸಾಹಿಸುವುದಕ್ಕಾಗಿ ಆತನೆ ಹೀಗೆ ಆನ್ಲೈನ್‌ನಲ್ಲಿ ಒಂದು ಹಾಸ್ಯಭರಿತವಾದ ಪ್ರಕಟಣೆಯನ್ನು ತಯಾರು ಮಾಡಿದ್ದೇನೆಂದು, ಅದು ವೈರಲ್ ಆದ್ದರಿಂದ ತನಗೆ ಹೆಚ್ಚು ಕರೆಗಳು ಬರುತ್ತಿವೆಯೆಂದು ಫೇಸ್‌ಬುಕ್ ‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈರಲ್ ಆದ ಕ್ಲಿಪ್‌ನಲ್ಲಿ ಇರುವ ಮೊಬೈಲ್ ನಂಬರ್‌ ಅನ್ನು ಟ್ರೂಕಾಲರ್‌ನಲ್ಲಿ ಚೆಕ್ ಮಾಡಿದಾಗ ಈ ನಂಬರ್ ಸಾವಿಯೋ ಫಿಗ್ಯುರೆಡೋ ಎಂದು ಕಾಣಿಸುತ್ತಿದೆ. ಈ ಆಧಾರಗಳಿಂದ ಈ ವೈರಲ್ ಕ್ಲಿಪ್‌ನ್ನು ಸಾವಿಯೋ ಫಿಗ್ಯೂರೆಡೊ ತಯಾರು ಮಾಡಿರಬಹುದು ಎಂದು ಅರ್ಥವಾಗುತ್ತದೆ.

ಒಟ್ಟಿನಲ್ಲಿ ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’ ಎಂಬುದು ನಿಜವಾದ ಪ್ರಕಟನೆಯಲ್ಲ ಎಂದು ಸಾಬೀತಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...